Connect with us

LATEST NEWS

ಬೆಂಗಳೂರು ಕಾಲ್ತುಳಿತ ಪ್ರಕರಣ; ಮೃ*ತ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಪರಿಹಾರದ ಚೆಕ್ ಹಸ್ತಾಂತರಿಸಿದ ಜಿಲ್ಲಾಡಳಿತ

Published

on

ಉಡುಪಿ: ಬೆಂಗಳೂರು ಆರ್​ಸಿಬಿ ಸಂಭ್ರಮಾಚರಣೆಯಲ್ಲಿ ಜೀವ ಕಳೆದುಕೊಂಡ ಚಿನ್ಮಯಿ ಶೆಟ್ಟಿ ಕುಟುಂಬಕ್ಕೆ ಸರ್ಕಾರ ಪರಿಹಾರದ ಚೆಕ್ ಹಸ್ತಾಂತರ ಮಾಡಿದೆ.

ಜಿಲ್ಲಾಧಿಕಾರಿಗಳು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕುಚ್ಚೂರು ರಸ್ತೆಯಲ್ಲಿರುವ ನಿವಾಸಕ್ಕೆ ತೆರಳಿ ಪರಿಹಾರ ನೀಡಿದ್ದಾರೆ.

ಸರ್ಕಾರದ ಪರಿಹಾರ ಸ್ವೀಕರಿಸಿ ಮಾತನಾಡಿದ ಚಿನ್ಮಯಿ ಶೆಟ್ಟಿ ತಂದೆ ಕರುಣಾಕರ ಶೆಟ್ಟಿ “ನಾವು ಮಗಳನ್ನು ಕಳೆದುಕೊಂಡಿದ್ದೇವೆ. ಈ ನೋವು ನಮಗೆ ನಿರಂತರ. ಇದು ಮರೆಯಲು ಸಾಧ್ಯವಿಲ್ಲದ ಘಟನೆ. ದುರ್ಘಟನೆಗೆ ಸರ್ಕಾರವೇ ಹೊಣೆ. ಪ್ರಕರಣವನ್ನು ಸಿಬಿಐ ಮೂಲಕ ತನಿಖೆ ಮಾಡಿಸಿ. 11 ಸಾವುಗಳು ಹೇಗೆ ಸಂಭವಿಸಿತು ಅನ್ನೋದು ಬೆಳಕಿಗೆ ಬರಲಿ. ಆರ್‌ಸಿಬಿ ಕೇವಲ ಒಂದು ಫ್ರಾಂಚೈಸಿ. ಇಷ್ಟೊಂದು ಸಂಭ್ರಮದ ಅಗತ್ಯ ಇತ್ತಾ? ಅದು ಕೂಡ ವಿಧಾನಸೌಧದ ಮುಂದೆ ಯಾಕೆ ಮಾಡಿದರು? ಈ ಹಿಂದೆ ಚೆನ್ನೈ, ಮುಂಬೈ ಗೆದ್ದಾಗ ಹೇಗೆ ಮಾಡಿರಲಿಲ್ಲ. ಮೃತ ಕುಟುಂಬಕ್ಕೆ ಒಂದು ಸರ್ಕಾರಿ ಉದ್ಯೋಗ ಕೊಡಿಸಿ. ನನ್ನ ಮಗಳು ಕ್ರಿಕೆಟ್ ಅಭಿಮಾನಿಯಾಗಿರಲಿಲ್ಲ. ಸ್ನೇಹಿತರ ಜೊತೆಗೆ ಹೋಗಿದ್ದಳು. ಇಂಥ ಜನ ಸೇರುವಲ್ಲಿ ಮಕ್ಕಳು ಹೋಗಬಾರದು” ಎನ್ನುತ್ತ ಭಾವುಕರಾಗಿದ್ದಾರೆ.

READ IN ENGLISH : https://www.nammakudlaenglish.com/bengaluru-tragedy-case-district-administration-hands-over-compensation-check-to-the-family-of-deceased-chinmayi-shetty/

ಇದನ್ನೂ ಓದಿ: ಕಾಲ್ತು*ಳಿತ ಪ್ರಕರಣ : ಜೂ.12ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ದು:ಖಿತ ಕುಟುಂಬಕ್ಕೆ ಸಾಂತ್ವನ ಹೇಳಿ ಮಾತನಾಡಿರುವ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ, “ಸರ್ಕಾರದ ಆದೇಶದಂತೆ 25 ಲಕ್ಷ ರೂಪಾಯಿ ಪರಿಹಾರ ನೀಡಿದ್ದೇವೆ. ಸರ್ಕಾರ ಈ ಕುಟುಂಬದ ಜೊತೆ ಇರಲಿದೆ. ಮುಂದೆಯೂ ಜಿಲ್ಲಾಡಳಿತ ಅಗತ್ಯ ನೆರವು ನೀಡಲು ಬದ್ಧವಾಗಿದೆ. ಕುಟುಂಬಕ್ಕೆ ಈ ದುಃಖ ಬರಿಸುವ ಶಕ್ತಿ ನೀಡಲಿ” ಎಂದು ಹೇಳಿದರು.

LATEST NEWS

IND vs ENG: ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ಲೆಯಿಂಗ್ 11 ಪ್ರಕಟ

Published

on

ಮಂಗಳೂರು/ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಎರಡು ತಂಡಗಳು ಈಗಾಗಲೇ ಪ್ಲೇಯಿಂಗ್​ ಇಲೆವೆನ್ ಘೋಷಿಸಿದೆ.


ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಎರಡನೇ ಪಂದ್ಯದಲ್ಲಿ ವಿಶ್ರಾಂತಿಯಲ್ಲಿದ್ದ ವೇಗಿ ಬುಮ್ರಾ ತಂಡಕ್ಕೆ ವಾಪಸ್ಸಾಗಿದ್ದು, ಪ್ರಸಿದ್ದ್ ಕೃಷ್ಣ ಅವರು ಜಾಗ ಬಿಟ್ಟಿದ್ದಾರೆ. ಕನ್ನಡಿಗ ಕರುಣ್ ನಾಯರ್‌ಗೆ ಈ ಬಾರಿಯೂ ಅವಕಾಶ ದೊರೆತಿದ್ದು, ಸವಾಲಿನ ಪಿಚ್‌ನಲ್ಲಿ ರನ್‌ ಮಳೆ ಸುರಿಸಬೇಕಾದ ಒತ್ತಡದಲ್ಲಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜೋಶ್ ಟಂಗ್ ಬದಲಿಗೆ ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಆಗಮಿಸಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳು
ಇಂಗ್ಲೆಂಡ್ : ಜಾಕ್ ಕ್ರಾಲಿ, ಬೆನ್ ಡಕೆಟ್, ಓಲೀ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್, ಕ್ರಿಸ್ ವೋಕ್ಸ್, ಡನ್ ಕಾರ್, ಜೋಫ್ರಾ ಆರ್ಚರ್, ಶೋಯಿಬ್ ಬಶೀರ್.

ಭಾರತ :ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್, ರವೀಂದ್ರ ಜಡೇಜ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

Continue Reading

DAKSHINA KANNADA

‘ಎಲ್ಲಾ ಆದ ಮೇಲೆ ಶಾಂತಿಸಭೆ’: ಸಂಸದ ಕೋಟ

Published

on

ಉಡುಪಿ: ಚರ್ಚೆ, ವಾದ-ವಿವಾದ, ಪ್ರಕರಣಗಳು ಆದ ಬಳಿಕ ಶಾಂತಿ ಸಭೆ ಇಷ್ಟು ದಿನಗಳ ನಂತರವಾ.. ಎಂಬ ಚರ್ಚೆ ಸಮಾಜದಲ್ಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇವತ್ತು ಎಲ್ಲಾ ಶಾಂತಿ ಸಭೆಗಳು, ಪೊಲೀಸ್ ಕ್ರಮಗಳು ಹಾಗೂ ಪೊಲೀಸ್ ಫೋರ್ಸ್‌ಗಳು ಎಲ್ಲವೂ ಕೂಡ ಈ ಸಮಾಜದ ಮುಖ್ಯ ವಾಹಿನಿಯಿಂದ ಬದುಕುತ್ತಿರುವಂತಹ ಹಿಂದೂಗಳ ಮೇಲೆ ಗಧಾ-ಪ್ರಹಾರ ಮಾಡಲು ರೂಪಿಸಿದ್ದಾರೆಯೇ ಎಂಬ ಭಾವನೆ ಮೂಡುತ್ತಿದೆ. ಇಂದು ಯಾವ ರೀತಿಯ ವಾತಾವರಣ ಇದೆ ಎಂದರೆ ಯಾರೇ ಒಬ್ಬ ಕಾರ್ಯಕರ್ತ ಅದು ಬಿಜೆಪಿ ಕಾರ್ಯಕರ್ತನೋ, ಹಿಂದೂತ್ವದ ಬಗ್ಗೆ ಮಾತನಾಡುವ ಸಾಮಾನ್ಯ ಕಾರ್ಯಕರ್ತ ಆಗಿರಬಹುದು, ಅವನ ಬದುಕಿನ ಹಕ್ಕನ್ನೇ ಮೊಟಕುಗೊಳಿಸುವಂತಹ ಪ್ರಯತ್ನಗಳು, ರೌಡಿಶೀಟರ್ ಹಾಕುವಂತಹ ಕೆಲಸಗಳು ನಡೆಯುತ್ತಿವೆ. ಪರಮೇಶ್ವರ್ ಅವರು ತಿಳುವಳಿಕೆ ಇರುವಂತಹ ಮಂತ್ರಿ. ಒಂದು ಸಮಾಜವನ್ನು ಒಡೆಯುವ, ಸಮಾಜದ ಮೇಲೆ ಗಧಾಪ್ರಹಾರ ಮಾಡುವ, ಸಮಾಜದ ಮೇಲೆ ದೌರ್ಜನ್ಯ ಮಾಡುವ ಕೆಲಸಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

WATCH VIDEO

Continue Reading

DAKSHINA KANNADA

ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡ್ಲ್‌ ಈಸ್ಟ್- 2025; ತುಳುನಾಡಿನ ಮಹಿಳೆಯರಿಗಾಗಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

Published

on

ಉಡುಪಿ: ಘೋಷನ್ ಇವೆಂಟ್ಸ್ ಮೀಡಿಯಾ ಮತ್ತು ಪ್ರಿಯಾ ಫ್ಯಾಶನ್ ದುಬೈ ಇದರ ಆಶ್ರಯದಲ್ಲಿ ತುಂಬೆ ಮೆಡಿ ಸಿಟಿ ಅಜ್ಮನ್ ಇದರ ಸಹಯೋಗದಲ್ಲಿ “ಮಿಸ್ ಆ್ಯಂಡ್ ಮಿಸಸ್ ಮಂಗಳೂರು ದಿವಾ ಮಿಡಲ್ ಈಸ್ಟ್- 2025” ಅಂತಾರಾಷ್ಟ್ರೀಯ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ನವೆಂಬರ್ ತಿಂಗಳಲ್ಲಿ ದುಬೈನಲ್ಲಿ ಆಯೋಜಿಸಲಾಗಿದೆ.


ಈ ಸ್ಪರ್ಧೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದೆ. ಘೋಷನ್ ಇವೆಂಟ್ಸ್ ಮೀಡಿಯಾದ ದೆಚಮ್ಮ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ತುಳುನಾಡಿನ ಮಹಿಳೆಯರಿಗೆ ವೇದಿಕೆ‌ ಒದಗಿಸುವ ನಿಟ್ಟಿನಲ್ಲಿ ಈ ಸೌಂದರ್ಯ ಪ್ರದರ್ಶನ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಸ್ಪರ್ಧೆ ಎರಡು ವಿಭಾಗಗಳಲ್ಲಿ ನಡೆಯಲಿದೆ. “ಮಿಸ್ ಮಂಗಳೂರು ದಿವಾ” ಸ್ಪರ್ಧೆಯಲ್ಲಿ 18ರಿಂದ 35ವರ್ಷದೊಳಗಿನ ಅವಿವಾಹಿತ ಮಹಿಳೆಯರು ಭಾಗವಹಿಸ ಬಹುದು. ಮಿಸಸ್ ಮಂಗಳೂರು ದಿವಾ ಸ್ಪರ್ಧೆಯಲ್ಲಿ ಎಲ್ಲ ವಯೋಮಿತಿಯ ವಿವಾಹಿತ ಮಹಿಳೆಯರು ಪಾಲ್ಗೊಳ್ಳಬಹುದು ಎಂದರು. ಆಗಸ್ಟ್ ಅಂತ್ಯಕ್ಕೆ ನೋಂದಣಿ ಪ್ರಕ್ರಿಯೆ ಅಂತ್ಯಗೊಳ್ಳಲಿದೆ. ಆ ಬಳಿಕ ಮಂಗಳೂರಿನಲ್ಲಿ ಅಡಿಷನ್ ನಡೆಯಲಿದ್ದು, ಅಲ್ಲಿ ಆಯ್ಕೆಯಾಗುವ ಸ್ಪರ್ಧಿಗಳು ನವೆಂಬರ್ ತಿಂಗಳು ದುಬೈನಲ್ಲಿ ನಡೆಯಲಿರುವ ಫೈನಲ್ ಸ್ಪರ್ಧೆಯಲ್ಲಿ ಪ್ರದರ್ಶನ ನೀಡಲಿದ್ದಾರೆ.

ಫೈನಲ್ ಗೆ ಆಯ್ಕೆಯಾಗುವ ಸ್ಪರ್ಧಿಗಳಿಗೆ ವಿಸಾ, ವಿಮಾನ ಟಿಕೆಟ್, ಮೂರು ದಿನಗಳ ವಾಸ್ತವ್ಯವನ್ನು ಒದಗಿಸಲಾಗುವುದು. ಅಲ್ಲದೆ, ಊಟ, ಪ್ರಯಾಣ, ಫೋಟೋ ಶೂಟ್‌, ರ್ಯಾಂಪ್ ವಾಕ್ ತರಬೇತಿ, ಮೇಕಪ್ ಹಾಗೂ ಕಾಸ್ಟ್ಯೂಮ್ ಅನ್ನು ಉಚಿತವಾಗಿ ಆಯೋಜಕರು ಒದಗಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ತಲೆ ಸಿಮಿಯಾ ರೋಗಿಗಳಿಗೆ ನ್ಯೂಟ್ರಿಶಿಯನ್‌ ಬಾರ್‌ ಕೊಡುಗೆ ನೀಡಿದ ಎಂಆರ್‌ಪಿಎಲ್‌

ಘೋಷನ್ ಇವೆಂಟ್ಸ್ ಮೀಡಿಯಾದ ಸಬಿತಾ ಕರ್ಲೋ ಮಾತನಾಡಿ, ಫೈನಲ್ ನಲ್ಲಿ ಮೂರು ಸುತ್ತುಗಳಲ್ಲಿ ಸ್ಪರ್ಧೆ ನಡೆಯಲಿದೆ. ಮೊದಲ ಸುತ್ತಿನಲ್ಲಿ ಸಾಂಪ್ರದಾಯಿಕ ವಸ್ತ್ರ ಧರಿಸಿ ಪ್ರದರ್ಶನ ನೀಡಬೇಕು. ಎರಡನೇ ಸುತ್ತಿನಲ್ಲಿ ಫಿಜನ್ ಹಾಗೂ ಮೂರನೇ ಸುತ್ತಿನಲ್ಲಿ ಗೌನ್ ಧರಿಸಿ ವಾಕ್ ಮಾಡಬೇಕು. ಮೂರನೇ ಸುತ್ತಿನ ಬಳಿಕ ಪ್ರಶ್ನಾವಳಿ ಸುತ್ತು ನಡೆಯಲಿದೆ. ಟಾಪ್ ಮೂವರು ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿಯನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಪ್ರಿಯಾ ಫ್ಯಾಶನ್ ಮಾಲಕಿ ಪ್ರಿಯಾ ಫೆರ್ನಾಂಡಿಸ್, ಮಿಸ್ಟರ್ ಯುಎಇ ವಿನ್ನರ್ ಗೌತಮ್ ಬಂಗೇರ, ವಿಷ್ಣುವರ್ಧನ್ ಭಟ್ ಇದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page