Connect with us

LATEST NEWS

ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Published

on

ಪುತ್ತೂರು: ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಸರಕಾರಿ ಪ್ರೌಢ ಶಾಲೆ ಮಣಿಕ್ಕರ ಇವರ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟವು ಆ.10ರಂದು ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ನಡೆಯಿತು.

ಬಾಲಕರ ವಿಭಾಗದಲ್ಲಿ ಪುತ್ತೂರು ಪಾಂಗ್ಲಾಯಿ ಬೆಥನಿ ಆಂಗ್ಲ ಮಾದ್ಯಮ ಪ್ರೌಢ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಉತ್ತಮ ಅಟ್ಯಾಕರ್ ಆಗಿ ಬೆಥನಿ ಶಾಲೆಯ ಹನಿನ್, ಉತ್ತಮ ಪಾಸರ್ ಆಗಿ ಬೆಥನಿಯ ಮಹಮ್ಮದ್ ಶಾನ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ತಂಡದ ಆಟಗಾರರಾದ ಲೂತ್, ಹನೀನ್, ಸವಾದ್, ರಿಫಾನ್, ಶಾಹಜದ್, ಶಿಝನ್, ಶಾನ್, ಗಗನ್ ದೀಪ್, ಆಕಾಂಕ್ಷ್, ಪ್ರತಮ್, ಇಶಾನ್, ಜೈಸನ್ ಮುಂತಾದವರು ಉತ್ತಮ ಪ್ರದರ್ಶನ ನೀಡಿದರು.

ಉಪ್ಪಿನಂಗಡಿ: ಹೊಸ ಬಸ್ ನಿಲ್ದಾಣದ ಬಳಿ ನೇತ್ರಾವತಿ ನದಿ ದಡದಲ್ಲಿ ಮೊಸಳೆ ಪ್ರತ್ಯಕ್ಷ

ಈ ತಂಡಕ್ಕೆ ಶಾಲಾ ದೈಹಿಕ ಶಿಕ್ಷಕರಾದ ಹರೀಶ್, ನಿರಂಜನ್ ಮತ್ತುಅಕ್ಷಯ್ ರವರು ತರಬೇತಿ ನೀಡಿದ್ದಾರೆ. ಶಾಲಾ ಶಿಕ್ಷಕಿ ಭಗಿನಿ ಸುನೀತಾ ಮತ್ತು ಫ್ಲೋರಿನ್ ಡಿಸೋಜಾರವರು ವ್ಯವಸ್ಥಾಪಕಿಯಾಗಿ ಸಹಕರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಶಾಂತಿ ಅಗ್ನೇಸ್ ಬಿ.ಎಸ್ ರವರು ತಂಡಕ್ಕೆ ಶುಭ ಹಾರೈಸಿದರು, ಭಗಿನಿ ರೀಮಾರವರು ಹಾಜರಿದ್ದರು.

BELTHANGADY

ಬೆಳ್ತಂಗಡಿ: ಕಾರು ಓವರ್ ಟೇಕ್ ಮಾಡುವ ವೇಳೆ ಅಪಘಾತ, ಬೈಕ್ ಸವಾರ ಸಾವು

Published

on

ಬೆಳ್ತಂಗಡಿ: ಕಾರು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದ ಬೈಕ್ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿಯ ಕಲ್ಲಗುಡ್ಡೆ ನಿವಾಸಿ 42 ವರ್ಷ ಪ್ರಾಯದ ಸಯ್ಯದ್ ಪಾಶ ಮೃತ ದುರ್ಧೈವಿಯಾಗಿದ್ದಾರೆ. ಬೆಳ್ತಂಗಡಿಯ ಚರ್ಚ್ ರಸ್ತೆಯ ಕಲ್ಕುಣಿ ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಸಯ್ಯದ್ ಪಾಶ ಅವರು ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನ ನಡೆದಿತ್ತಾದ್ರೂ ಅವರು ಇಹಲೋಕ ತ್ಯಜಿಸಿದ್ದಾರೆ. ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದ ಕಾರಣ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

kerala

ಇಂದಿನಿಂದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇಗುಲದ ಬ್ರಹ್ಮಕಲಶೋತ್ಸವ ಆರಂಭ

Published

on

ಕಾಸರಗೋಡು:  ಉತ್ತರ ಕೇರಳದ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿವೆ. ಕುಂಬಳೆ ಸೀಮೆಯ ದೇಗುಲದ ಬ್ರಹ್ಮಕಲಶದಲ್ಲಿ ಎ. 7ರ ವರೆಗೆ ಪ್ರತಿ ದಿನವೂ ವಿವಿಧ ವೈದಿಕ, ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಇಂದು ಬೆಳಗ್ಗೆ 8 ರಿಂದ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿ ದೇರೇಬೈಲು, ಕ್ಷೇತ್ರ ತಂತ್ರಿವರ್ಯರು ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ವಾಸ್ತು ಶಿಲ್ಪಿ ಕೃಷ್ಣಪ್ರಸಾದ ಮುನಿಯಂಗಳ ಅವರಿಗೆ ಶಿಲ್ಪಿ ಮರ್ಯಾದೆ, ಪ್ರಾಸಾದ ಪರಿಗ್ರಹ, ಸಾಮೂಹಿಕ ಶ್ರೀ ದೇವತಾ ಪ್ರಾರ್ಥನೆ, ತೋರಣ ಪ್ರತಿಷ್ಠೆ, ಶ್ರೀ ದೇವರ ಉಗ್ರಾಣ ಮುಹೂರ್ತ, ಅನ್ನಸಂತರ್ಪಣೆಯ ಉಗ್ರಾಣ ಮುಹೂರ್ತ, ಆಚಾರ್ಯಾದಿ ಋತ್ವಿಗರಣೆ, ಬ್ರಹ್ಮಕೂರ್ಚ ಹೋಮ, ಕಂಕಣ ಬಂಧ, ಅಥರ್ವಶೀರ್ಷ ಮಹಾ ಗಣಪತಿ ಯಾಗ ನಡೆಯಲಿದೆ. ಬೆಳಗ್ಗೆ 9.30 ಮತ್ತು ಸಂಜೆ 4.30ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಸಂಜೆ 5 ರಿಂದ ಸಪ್ತಶುದ್ಧಿ, ರಾಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಾಸ್ತುಬಲಿ, ಮೃತ್ತಿಕಾಹರಣ, ಅಂಕುರಾರೋಹಣ ನಡೆದಿದೆ.

 

ಇದನ್ನೂ ಓದಿ : ಕಾಸರಗೋಡು: ಕೊನೆಯ ಹಂತದಲ್ಲಿದೆ ಮಧೂರು ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಿದ್ಧತೆ

ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ :

ಬ್ರಹ್ಮಕಲಶೋತ್ಸವಕ್ಕೆ ಆಗಮಿಸುವ ಭಕ್ತರ ವಾಹನಗಳ ಪಾರ್ಕಿಂಗ್ ಗಾಗಿ ಮಧೂರು ಬಯಲು, ಕೊಲ್ಯ ಏರಿಕ್ಕಳ ಬಯಲು, ಚೇನಕ್ಕೋಡು ಬಯಲುಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿಐಪಿ ವಾಹನಗಳಿಗೆ ಪಾಸ್ ನೀಡಲಾಗುತ್ತಿದೆ. ಬಸ್ ಸೌಕರ್ಯ ಪರಕ್ಕಿಲ ತನಕ ಮಾತ್ರ ಇದ್ದು, ಅಲ್ಲಿಂದ ಮುಂದೆ ನಡೆದುಕೊಂಡು ಹೋಗಬಹುದು. ನಡೆದು ಬರಲು ಅಶಕ್ತರಾದವರಿಗೆ ವಿಶೇಷ ವಾಹನ ಸೌಕರ್ಯ ಕಲ್ಪಿಸುವ ಆಲೋಚನೆ ಇದೆ. 1. ಕಾಸರಗೋಡು ಭಾಗದಿಂದ ಬರುವವರು ಮಧೂರು ಬಯಲಿನಲ್ಲಿ ಪಾರ್ಕಿಂಗ್ ಮಾಡಬೇಕು. 2. ಪುತ್ತೂರು, ವಿಟ್ಲ, ಬದಿಯಡ್ಕ, ಪೆರ್ಲ, ನೀರ್ಚಾಲು ಪ್ರದೇಶದಿಂದ ಬರುವವರು ಕೊಲ್ಯ ಏರಿಕ್ಕಳ ಬಯಲಿನಲ್ಲಿ 3. ಮಂಗಳೂರು, ಸುಳ್ಯ, ಕಾಂಞಂಗಾಡ್ ಮೊದಲಾದ ಪ್ರದೇಶಗಳಿಂದ ಬರುವವರಿಗೆ ಚೇನಕ್ಕೋಡ್‌ನಲ್ಲಿ ಪಾರ್ಕಿಂಗ್.

Continue Reading

DAKSHINA KANNADA

ಪುತ್ತೂರು: ರೈಲಿನಿಂದ ಜಾರಿ 25 ಅಡಿ ಆಳಕ್ಕೆ ಬಿದ್ದ ಯುವಕ

Published

on

ಪುತ್ತೂರು: ರೈಲಿನಿಂದ ಜಾರಿ ಯುವಕನೊಬ್ಬ 25 ಅಡಿ ಆಳಕ್ಕೆ ಬಿದ್ದು ಬಳಿಕ ಪವಾಡ ಸದೃಶವಾಗಿ ಬದುಕುಳಿದ ಘಟನೆ ಕಡಬದ ಸವಣೂರು ಎಂಬಲ್ಲಿ ನಡೆದಿದೆ.

ಉದಯ್ ಕುಮಾರ್ ರೈಲಿನಿಂದ ಬಿದ್ದ ಯುವಕ. ಈತ ಮಂಗಳೂರಿನಿಂದ ಬೆಂಗಳೂರು ಕಡೆಗೆ ರೈಲಿನಲ್ಲಿ ಹೊರಟಿದ್ದನು. ಆದರೆ ಬಾಗಿಲ ಬಳಿ ನಿಂತಿದ್ದರಿಂದ ಆಕಸ್ಮತ್‌ ಆಗಿ ರೈಲಿನಿಂದ 25 ಅಡಿ ಆಳಕ್ಕೆ ಜಾರಿ ಮೋರಿ ಬಳಿ ಬಿದ್ದಿದ್ದ. ರಾತ್ರಿ ವೇಳೆ ಈತ ಬಿದ್ದಿದ್ದರಿಂದ ಸಹ ಪ್ರಯಾಣಿಕರಿಗೆ ಮಾತ್ರ ತಿಳಿದಿತ್ತು.

ನಂತರ ರೈಲು ಮುಂದಿನ ನಿಲ್ದಾಣ ತಲುಪಿದಾಗ ರೈಲ್ವೇ ಮಾಸ್ಟರ್ಗೆ ವಿಷಯವನ್ನು ತಿಳಿಸಿದರು. ಆದರೆ ಯುವಕ ಎಲ್ಲಿ ಬಿದ್ದ ಎಂಬುದಾಗಿ ಯಾರಿಗೂ ತಿಳಿದಿರಲಿಲ್ಲ. ರಾತ್ರಿಯಾದ್ದರಿಂದ ಹುಡುಕಲು ಸಹ ಸಾಧ್ಯವಾಗಲಿಲ್ಲ.

ಆದರೆ ಮರುದಿನ ಬೆಳಗ್ಗೆ ಯುವಕ ಮೋರಿಯ ಬಳಿ ನರಳಾಡುವುದನ್ನು ಸ್ಥಳೀಯರು ಗಮನಿಸಿ ಕೂಡಲೇ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಮುಖ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಹೀಗೆ 15 ಗಂಟೆಯ ಬಳಿಕ ಈತ ಪತ್ತೆಯಾಗಿರುವುದು ವಿಶೇಷವೇ ಸರಿ.

Continue Reading
Advertisement

Trending

Copyright © 2025 Namma Kudla News

You cannot copy content of this page