Connect with us

ಟೀಮ್ ಇಂಡಿಯಾ ಆಟಗಾರರಿಗೆ ಬಿಗ್ ಶಾಕ್; ಕಟ್ಟುನಿಟ್ಟಿನ ಕ್ರಮಕೈಗೊಂಡ ಬಿಸಿಸಿಐ

Published

on

ಮಂಗಳೂರು/ಮುಂಬೈ : ನ್ಯೂಝಿಲೆಂಡ್ ವಿರುದ್ದ ಹೀನಾಯ ಸೋಲು, ಆಸ್ಟ್ರೇಲಿಯಾ ವಿರುದ್ದದ ಶೋಚನೀಯ ಸೋಲುಗಳ ಬಳಿಕ ಬಿಸಿಸಿಐ ಎಚ್ಚೆತ್ತುಕೊಂಡಿದೆ.

ಕೆಲ ದಿನಗಳ ಹಿಂದೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಬಿಸಿಸಿಐ ಪರಿಶೀಲನಾ ಸಭೆ ನಡೆಸಿದೆ. ಈ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಆಸ್ಟ್ರೇಲಿಯಾ ಪ್ರವಾಸದ ನಂತರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಟೀಂ ಇಂಡಿಯಾ ಆಟಗಾರರ ಮೇಲೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸಿದೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಪಂದ್ಯವಾಳಿಗಳ ಸಂದರ್ಭಗಳಲ್ಲಿ ಆಟಗಾರರೊಂದಿಗೆ ಕುಟುಂಬ ವರ್ಗದವರಿಗೆ ಎರಡು ವಾರಗಳವರೆಗೆ ಮಾತ್ರ ಇರಲು ಅವಕಾಶವಿರುತ್ತದೆ. ಅಂದರೆ ಒಂದುವರೆ ತಿಂಗಳ ಪ್ರವಾಸದ ಅವಧಿಯಲ್ಲಿ ಆಟಗಾರರ ಪತ್ನಿಯರು ಅಥವಾ ಗೆಳತಿಯರು 2 ವಾರಗಳವರೆಗೆ ಮಾತ್ರ ಆಟಗಾರರೊಂದಿಗೆ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಪಂದ್ಯಾವಳಿಗಳ ಸಮಯದಲ್ಲಿ ಆಟಗಾರರು ಕುಟುಂಬದ ಜೊತೆ ಸಮಯ ಕಳೆಯುವುದನ್ನು ಬಿಸಿಸಿಐ ನಿರ್ಬಂಧಿಸಲಿದೆ.

ಅಲ್ಲದೆ ತಂಡದ ಬಸ್ ಗಳಲ್ಲಿ ಆಟಗಾರರು ಒಟ್ಟಿಗೆ ಪ್ರಯಾಣಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಟಗಾರರು ಹೆಚ್ಚುವರಿ ಲಗೇಜ್ ಗೆ ಹಣ ನೀಡುವಂತೆಯೂ ಕೇಳಲಾಗಿದೆ.

ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತ ತಂಡ 1-3 ಅಂತರದಲ್ಲಿ ಸೋಲನ್ನಪ್ಪಿತ್ತು. ಇದಕ್ಕೆ ಆಸ್ಟ್ರೇಲಿಯಾದ ಮಾಧ್ಯಮಗಳು, ಟೀಮ್ ಇಂಡಿಯಾ ಆಟಗಾರರ ಡ್ರೆಸ್ಸಿಂಗ್ ರೂಮ್ ನಲ್ಲಿ ಆಟಗಾರರ ಮನಸ್ಥಿತಿಯೂ ಆಫ್ ಆಗಿದೆ. ಇದರಿಂದ ರವಿಚಂದ್ರನ್ ಅಶ್ವಿನ್ ನಿವೃತ್ತಿ ತೆಗೆದುಕೊಂಡರು ಎಂದು ಅತಿರೇಕದ ವಿಶ್ಲೇಷಣೆ ಕೊಟ್ಟಿದ್ದವು. ಇದು ಬಿಸಿಸಿಐಗೆ ತೀವ್ರ ಮುಜುಗರ ಉಂಟುಮಾಡಿತ್ತು.

ಆಸ್ಟ್ರೇಲಿಯಾ ಪ್ರವಾಸದ ಸಮಯದಲ್ಲಿ ವಿರಾಟ್ ಕೊಹ್ಲಿ ಮತ್ತು ಜಸ್ ಪ್ರೀತ್ ಬುಮ್ರಾ ತಮ್ಮ ಕುಟುಂಬದ ಜೊತೆ ಆಸ್ಟ್ರೇಲಿಯಾ ಪ್ರಮುಖ ನಗರಗಳಲ್ಲಿ ಸುತ್ತಾಡಿದ್ದಾರೆ ಮತ್ತು ಉಳಿದ ಆಟಗಾರರು, ಸಹ ಆಟಗಾರರೊಂದಿಗೆ ಪ್ರಯಾಣಿಸಿದ್ದರು. ಅಲ್ಲದೆ ಭಾರತ ತಂಡವು ಪರ್ತ್ ನಲ್ಲಿ ತಮ್ಮ ಐತಿಹಾಸಿಕ ಗೆಲುವನ್ನು ಕೂಡ ಒಟ್ಟಿಗೆ ಆಚರಿಸಲಿಲ್ಲ ಎಂದು ವರದಿಯಾಗಿತ್ತು.

ಇದನ್ನೂ ಓದಿ: ಉಕ್ರೇನ್ ಯುದ್ದದಲ್ಲಿ ರಷ್ಯಾ ಪರ ಹೋರಾಡುತ್ತಿದ್ದ ಕೇರಳದ ವ್ಯಕ್ತಿ ಸಾವು

ಬಿಸಿಸಿಐ ಕೈಗೊಂಡ ನಿಯಮಗಳು
1) ಪಂದ್ಯಾವಳಿಯು 45 ದಿನಗಳು ಅಥವಾ ಅದಕ್ಕಿಂತ ಹೆಚ್ಚಿದ್ದರೆ ಆಟಗಾರರ ಕುಟುಂಬಗಳು 14 ದಿನಗಳವರೆಗೆ ಮತ್ತು ಕಡಿಮೆ ದಿನಗಳ ಪಂದ್ಯಾವಳಿಗಳಲ್ಲಿ 7 ದಿನಗಳವರೆಗೆ ಮಾತ್ರ ಆಟಗಾರರೊಂದಿಗೆ ಉಳಿಯಲು ಅನುಮತಿ ನೀಡಲಾಗಿದೆ.

2) ಎಲ್ಲಾ ಆಟಗಾರರು ತಂಡದ ಬಸ್ಸ್ ನಲ್ಲೇ ಪ್ರಯಾಣಿಸಬೇಕು.

3) ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅವರ ವೈಯಕ್ತಿಕ ಮ್ಯಾನೇಜರ್ ವಿಐಪಿ ಗ್ಯಾಲರಿಯಲ್ಲಿ ಕುಳಿತುಕೊಳ್ಳಲು ಅಥವಾ ತಂಡದ ಬಸ್ಸ್ ನಲ್ಲಿ ಪ್ರಯಾಣಿಸಲು ಅವಕಾಶವಿಲ್ಲ. ಅಲ್ಲದೆ ಆಟಗಾರರು ಉಳಿದುಕೊಳ್ಳುವ ಹೋಟೆಲ್ ಗಳಲ್ಲಿ ಇರುವಂತಿಲ್ಲ. ಅವರು ಬೇರೆ ಹೋಟೆಲ್ ನಲ್ಲಿ ಉಳಿಯಬೇಕಾಗುತ್ತದೆ.

4) ಆಟಗಾರರ ಲಗೇಜ್ 150 ಕೆಜಿ ಮೀರಿದರೆ, ಬಿಸಿಸಿಐ ಹೆಚ್ಚುವರಿ ಶುಲ್ಕವನ್ನು ಭರಿಸುವುದಿಲ್ಲ, ಬದಲಾಗಿ ಆಟಗಾರರೇ ಅದನ್ನು ಪಾವತಿಸಬೇಕಾಗುತ್ತದೆ.
ಈ ಮೂಲಕ ಆಟಗಾರರನ್ನು ಜವಾಬ್ದಾರಿಯುತ ಸ್ಥಾನದಲ್ಲಿರಿಸಲು ಇಂತಹ ಕಠಿಣ ಕ್ರಮಕೈಗೊಳ್ಳಲು ಬಿಸಿಸಿಐ ಮುಂದಾಗಿದ್ದು, ಈ ಮೂಲಕ ವಿಶ್ವ ಕ್ರಿಕೆಟ್ ನಲ್ಲಿ ಭಾರತ ತಂಡದ ಪ್ರಾಬಲ್ಯವನ್ನು ಕಾಪಾಡಿಕೊಳ್ಳಲು ಚಿಂತಿಸಲಾಗಿದೆ.

 

Advertisement
Click to comment

Leave a Reply

Your email address will not be published. Required fields are marked *

LATEST NEWS

2 ಮಕ್ಕಳ ತಾಯಿ ವಾರದಲ್ಲಿ 5 ದಿನ ವಿಮಾನದಲ್ಲಿ ಪ್ರಯಾಣ

Published

on

ಮಂಗಳೂರು/ಕೌಲಾಲಂಪುರ : ಕೆಲಸ ಎಂಬುದು ಮನುಷ್ಯನ ಜೀವನದಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಕೆಲವರಿಗೆ ಕೆಲಸದ ಜೊತೆ ಕುಟುಂಬಕ್ಕೆ ಸಮಯ ಕೊಡುವುದಕ್ಕೆ ಆಗುವುದಿಲ್ಲ. ಆದರೆ ಇನ್ನು ಕೆಲವರು ಎರಡನ್ನೂ ಸಮತೋಲನವಾಗಿ ನಿಭಾಯಿಸಿಕೊಂಡು ಹೋಗುತ್ತಾರೆ.

ಇದೇ ರೀತಿ “ವರ್ಕ್ ಲೈಫ್ ಬ್ಯಾಲೆನ್ಸ್‌’ಗಾಗಿ 2 ಮಕ್ಕಳ ತಾಯಿ ವಾರದಲ್ಲಿ 5 ದಿನಗಳು ವಿಮಾನದಲ್ಲಿ ಪ್ರಯಾಣಿಸುವ ಮೂಲಕ ಕೆಲಸದ ಜತೆಗೆ, ಮಕ್ಕಳಿಗೂ ಸಮಯ ನೀಡುತ್ತಿದ್ದಾರೆ.

ಭಾರತೀಯ ಮೂಲದ ರೇಚಲ್ ಕೌರ್ ಮಲೇಷ್ಯಾದ ಕೌಲಾಲಂಪುರದಲ್ಲಿರುವ ಏರ್ ಏಷ್ಯಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಕುಟುಂಬವು ಪೆನಾಂಗ್‌ನಲ್ಲಿ ವಾಸಿಸುತ್ತಿದೆ. ರೇಚಲ್‌ಗೆ ಇಬ್ಬರು ಮಕ್ಕಳಿದ್ದು, ಅವರೊಂದಿಗೆ ಸಮಯ ಕಳೆಯಲು ಪ್ರತಿ ದಿನ ಬೆಳಗ್ಗೆ 4 ಗಂಟೆಗೆ ಎದ್ದು, 5.55ಕ್ಕೆ ವಿಮಾನದಲ್ಲಿ 398 ಕಿ.ಮೀ. ಪ್ರಯಾಣಿಸಿ ಕಚೇರಿಗೆ ತಲುಪುತ್ತಾರೆ.

ಬಳಿಕ ಸಂಜೆ ವಿಮಾನದಲ್ಲಿ ಹೊರಟು 8 ಗಂಟೆಗೆ ಮನೆ ತಲುಪಿ ಮಕ್ಕಳೊಂದಿಗೆ ಸಮಯ ಕಳೆಯುತ್ತಾರೆ. ಹೀಗೆ ಒಟ್ಟು 796 ಕಿ.ಮೀ. ದೂರ ಪ್ರಯಾಣಿಸುತ್ತಿರುತ್ತಾರೆ.

ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ

ಕೌರ್ ವಾರದಲ್ಲಿ 5 ದಿನಗಳು ವಿಮಾನದಲ್ಲಿ ಪ್ರಯಾಣಿಸುತ್ತಿದ್ದರೂ ಖರ್ಚು ಕಡಿಮೆಯಂತೆ. ಈ ಹಿಂದೆ ಟಿಕೆಟ್ ಮತ್ತು ಇತರ ವೆಚ್ಚಕ್ಕಾಗಿ 41,000 ರೂ. ವೆಚ್ಚ ಮಾಡುತ್ತಿದ್ದೆ. ಈಗ ಅದು 21,000 ರೂ.ಗೆ ಇಳಿಕೆಯಾಗಿದೆ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಕೌಲಾಲಂಪುರದಲ್ಲೇ ಬಾಡಿಗೆ ಮನೆ ಪಡೆದಿದ್ದ ರೇಚಲ್ ವಾರಕ್ಕೊಮ್ಮೆ ಕುಟುಂಬವನ್ನು ಭೇಟಿಯಾಗುತ್ತಿದ್ದರು.

ಇದು ಸಾಮಾನ್ಯವಾದ ವಿಷಯವಲ್ಲ, ಸಮಯವನ್ನು ವ್ಯರ್ಥ ಮಾಡದೇ ಮಕ್ಕಳಿಗಾಗಿ ರೇಚಲ್ ಕೌರ್ ವಾರದಲ್ಲಿ 5 ದಿನ ವಿಮಾನದಲ್ಲಿ ಪ್ರಯಾಣ ಮಾಡುತ್ತಾರೆ.

 

 

Continue Reading

LATEST NEWS

ಮಹಿಳೆಯರಿಗೆ ಇನ್ನು ಮುಂದೆ ವರ್ಕ್​ ಫ್ರಂ ಹೋಂ; ಸರ್ಕಾರದಿಂದ ಹೊಸ ನಿಯಮ ಜಾರಿ

Published

on

ಆಂಧ್ರಪ್ರದೇಶ: ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ತರಲು ಆಂಧ್ರಪ್ರದೇಶ ಸರ್ಕಾರವು ಮುಂದಾಗಿದೆ. ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಈ ಕುರಿತು ಮಾಹಿತಿ ನೀಡಿದ್ದಾರೆ.

ಕೋವಿಡ್ 19 ಸಮಯದಲ್ಲಿ ಕೆಲಸದ ಸಂಸ್ಕೃತಿ ಬದಲಾಗಿದೆ. ತಂತ್ರಜ್ಞಾನದ ಲಭ್ಯತೆಯು ಮನೆಯಿಂದಲೇ ಕೆಲಸ ಮಾಡುವ ಪರಿಕಲ್ಪನೆಯನ್ನು ಉತ್ತೇಜಿಸಿದೆ. ಅದರಲ್ಲೂ ಐಟಿ ವಲಯದಲ್ಲಿ ಕೆಲಸ ಮಾಡುವ ಮಹಿಳೆಯರಿಗಾಗಿ ವರ್ಕ್​ ಫ್ರಂ ಹೋಂ ನೀತಿಯನ್ನು ಜಾರಿಗೆ ಮುಂದಾಗಿದೆ.

ಆಂಧ್ರಪ್ರದೇಶ ಐಟಿ ಮತ್ತು ಜಿಸಿಸಿ ನೀತಿ 4.0 ಅಡಿಯಲ್ಲಿ, ಸರ್ಕಾರವು ಪ್ರತಿ ನಗರ, ಪಟ್ಟಣ ಮತ್ತು ಮಂಡಲಗಳಲ್ಲಿ ಐಟಿ ಕಚೇರಿಗಳನ್ನು ಸ್ಥಾಪಿಸಲು ಡೆವಲಪರ್‌ಗಳನ್ನು ಪ್ರೋತ್ಸಾಹಿಸುತ್ತಿದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಲು ಐಟಿ ಮತ್ತು ಜಿಸಿಸಿ ಸಂಸ್ಥೆಗಳಿಗೆ ಇದು ಬೆಂಬಲವನ್ನು ನೀಡುತ್ತಿದೆ. ಈ ಉಪಕ್ರಮವು ವಿಶೇಷವಾಗಿ ಮಹಿಳಾ ವೃತ್ತಿಪರರ ಉದ್ಯೋಗಿಗಳ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಅವರು ಹೊಂದಿಕೊಳ್ಳುವ ರಿಮೋಟ್ ಅಥವಾ ಹೈಬ್ರಿಡ್ ಕೆಲಸದ ಆಯ್ಕೆಗಳಿಂದ ಪ್ರಯೋಜನ ಪಡೆಯುತ್ತಾರೆ.

ಇನ್ನು ಇದೇ ವೇಳೆ ಆಂಧ್ರ ಪ್ರದೇಶ ಸರ್ಕಾರವು ರಾಜ್ಯದಲ್ಲಿ ವರ್ಕ್​ ಫ್ರಮ್​ ಆಫೀಸ್ ಯೋಜನೆಯ ಕಾರಣದಿಂದ ಕೆಲಸದಿಂದ ಹೊರಗುಳಿದಿರುವ ಅಥವಾ ಕಡಿಮೆ ಸಂಬಳ ಪಡೆಯುತ್ತಿರುವ ಮಹಿಳೆಯರಿಗೆ ಸಹಾಯ ಮಾಡುವುದ್ದಕ್ಕಾಗಿ ಪ್ರಾಯೋಗಿಕ ಉದ್ಯೋಗ-ಆಧಾರಿತ ಕೌಶಲ್ಯವನ್ನು ನಿಮ್ಮ ಮನೆ ಬಾಗಿಲಿಗೆ ತರಲು ಯೋಜನೆ ರೂಪಿಸಲಾಗುತ್ತಿದೆ ಎನ್ನಲಾಗಿದೆ.

Continue Reading

LATEST NEWS

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ

Published

on

ಮಂಗಳೂರು/ಮುಂಬೈ : ಚಾಂಪಿಯನ್ಸ್ ಟ್ರೋಫಿಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ.

ಭಾರತ ತಂಡದ ಬೆನ್ನೆಲುಬು ಜಸ್‌ಪ್ರಿತ್ ಬುಮ್ರಾ ಚಾಂಪಿಯನ್ಸ್ ಟ್ರೋಫಿಯನ್ನು ಆಡುವುದಿಲ್ಲ ಎಂದು ಬಿಸಿಸಿಐ ಅಧಿಕೃತವಾಗಿ ಹೇಳಿದೆ.

ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ವೇಳೆ ಜಸ್​ಪ್ರೀತ್ ಬುಮ್ರಾ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದರು. ಹೀಗಾಗಿ ಕೊನೆಯ ಇನಿಂಗ್ಸ್​ನಲ್ಲಿ ಅವರು ಬೌಲಿಂಗ್ ಮಾಡಿರಲಿಲ್ಲ. ಅಲ್ಲದೆ ಇದೇ ನೋವಿನ ಕಾರಣ ಅವರು ಮುಂಬರುವ ಚಾಂಪಿಯನ್ಸ್ ಟ್ರೋಫಿಯಿಂದಲೂ ಹೊರಗುಳಿದಿದ್ದಾರೆ. ಹೀಗಾಗಿ ಈ ಬಾರಿಯ ಐಸಿಸಿ ಟೂರ್ನಿಯಲ್ಲಿ ಬುಮ್ರಾ ಕಾಣಿಸಿಕೊಳ್ಳುವುದಿಲ್ಲ.

ಇದನ್ನೂ ಓದಿ: ಉ*ಗ್ರರ ಟಾರ್ಗೆಟ್ ಆದ ಪ್ರಧಾನಿ ಮೋದಿ..! ವಿಮಾನದ ಮೇಲೆ ದಾ*ಳಿಯ ಬೆದರಿಕೆ..!

ಚಾಂಪಿಯನ್ಸ್ ಟ್ರೋಫಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿವೆ. ಅದಕ್ಕೂ ಮುನ್ನವೇ ಟೀಮ್ ಇಂಡಿಯಾಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಫಿಟ್​ನೆಸ್ ಸಮಸ್ಯೆಯ ಕಾರಣ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದಾರೆ.

ಬೆನ್ನು ನೋವಿನ ಸಮಸ್ಯೆಯ ಕಾರಣ ಬುಮ್ರಾ ಇಂಗ್ಲೆಂಡ್ ವಿರುದ್ದದ ಸರಣಿಯಿಂದ ಹೊರಗುಳಿದಿದ್ದರು. ಇದಾಗ್ಯೂ ಅವರು ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರು ಸಂಪೂರ್ಣ ಫಿಟ್‌ನೆಸ್ ಸಾಧಿಸಲು ಕನಿಷ್ಠ ಮೂರು ವಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಬುಮ್ರಾ ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದಿದ್ದಾರೆ.

ಇತ್ತ ಜಸ್‌ಪ್ರೀತ್ ಬುಮ್ರಾ ಅಲಭ್ಯರಾಗಿರುವ ಕಾರಣ ಅವರ ಸ್ಥಾನದಲ್ಲಿ ಹರ್ಷಿತ್ ರಾಣಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ವರುಣ್ ಇನ್-ಯಶಸ್ವಿ ಔಟ್

ಚಾಂಪಿಯನ್ಸ್  ಟ್ರೋಫಿಗಾಗಿ 15 ಸದಸ್ಯರ ತಂಡದಲ್ಲಿ ಹೆಚ್ಚುವರಿ ಆರಂಭಿಕನಾಗಿ ಸ್ಥಾನ ಪಡೆದಿದ್ದ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಅವರನ್ನು ತಂಡದಿಂದ ಕೈ ಬಿಡಲಾಗಿದೆ. ಅವರ ಬದಲಿಗೆ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಈ ಮೂಲಕ ಟೀಂ ಇಂಡಿಯಾ ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಇದೀಗ ಅಂತಿಮ ಪಟ್ಟಿಯನ್ನು ಐಸಿಸಿಗೆ ಸಲ್ಲಿಸಿದೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಶುಭ್‌ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ಮೊಹ್ಮದ್ ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page