Connect with us

bangalore

ಬಿಗ್ ಬಾಸ್ ಕನ್ನಡ ಸೀಸನ್ ಹತ್ತರ ಡೇಟ್ ಫಿಕ್ಸ್…

Published

on

ಬೆಂಗಳೂರು : ಕೊನೆಗೂ ಕನ್ನಡ ಕಿರುತೆರೆಯ ವೀಕ್ಷಕರು ಕಾಯುತ್ತಿದ್ದ ಕನ್ನಡದ ಬಿಗ್ ಬಾಸ್ ಸೀಸನ್ 10 ಶೋ ಕುರಿತ ಬಿಗ್ ಅಪ್ ಡೇಟ್ ಸಿಕ್ಕಿದ್ದು, ಅಕ್ಟೋಬರ್ 7 ಮತ್ತು 8 ರಂದು ಎರಡು ದಿನಗಳ ಕಾಲ ಪ್ರವೇಶದ ಸಂಚಿಕೆಗಳು ಪ್ರಸಾರವಾಗಲಿದೆ.

ಕಿಚ್ಚ ಸುದೀಪ್ ನಿರಂತರವಾಗಿ ಹೋಸ್ಟ್ ಮಾಡಿಕೊಂಡು ಬಂದಿರುವ ಬಿಗ್ ಬಾಸ್ ಕನ್ನಡ ರಿಲಯಾಲಿಟಿ ಶೋ ಈ ಬಾರಿ ಸಾಕಷ್ಟು ಕುತೂಹಲವನ್ನು ಉಂಟು ಮಾಡಿದೆ.

ಸಿನೆಮಾ, ರಾಜಕೀಯ, ಸೋಷಿಯಲ್ ಮೀಡಿಯಾಗಳಲ್ಲಿ ಸದ್ದು ಮಾಡಿ ಸುದ್ದಿಯಾದವರನ್ನು ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನೋಡ್ಬೋದು ಎಂಬ ಮಾತುಗಳು ಕೇಳಿ ಬರುತ್ತಿದೆ.

ಕೆಜಿಎಫ್ ಖ್ಯಾತಿಯ ರೂಪ ರಾಯಪ್ಪ,ನಾಗಿಣಿ ಸೀರಿಯಲ್ ಮೂಲಕ ಜನಪ್ರಿಯತೆ ಪಡೆದ ಸೀರಿಯಲ್ ನಟಿ ನಮ್ರತಾ ಗೌಡ, ರೀಲ್ಸ್ ಮಾಡುತ್ತಾ ಜನಪ್ರಿಯತೆ ಪಡೆದ ಭೂಮಿ ಬಸವರಾಜ್ ಸೇರಿದಂತೆ, ಬುಲೆಟ್ಪ್ರಕಾಶ್ ಪುತ್ರ ರಕ್ಷಕ್,

ಲಕ್ಷ್ಮಣ ಧಾರವಾಹಿ ನಟಿ ಸುಕೃತ ನಾಗ್, ಗೀತಾ ಸೀರಿಯಲ್ ನ ಪ್ರಮುಖ ಪಾತ್ರಧಾರಿ ಭವ್ಯಾ ಗೌಡ, ಹಾಗೇ ಸೋಷಿಯಲ್ ಮೀಡಿಯಾದಲ್ಲಿ ಬ್ರೇಕಪ್ ಸುದ್ದಿ ಹರಿದಾಡಿಸಿ ಸುದ್ದಿಯಾದ ವರುಣ್ -ವರ್ಷಾ ಹೆಸರು ಕೂಡ ಬಿಗ್ ಬಾಸ್ ರೇಸ್ ನಲ್ಲಿದೆ.


ಇದೀಗ ಅಧಿಕೃತವಾಗಿ ವಾಹಿನಿ ಪ್ರೋಮೋ ವೊಂದನ್ನು ರಿಲೀಸ್ ಮಾಡಿದ್ದು, ಬಿಗ್ ಬಾಸ್ 10ರ ಶೋಗೆ ಕ್ಷಣಗಣನೆ ಶುರುವಾಗಿದೆ.

ಅ.7 ಮತ್ತು 8 ರಂದು ಎರಡು ದಿನಗಳ ಕಾಲ ಪ್ರವೇಶದ ಸಂಚಿಕೆಗಳು ಪ್ರಸಾರವಾಗಲಿದ್ದು, ಅ. 9ರಿಂದ ಬಿಗ್ ಬಾಸ್ ಮನೆಯಲ್ಲಿ ನಿಜವಾದ ಆಟ ಶುರುವಾಗಲಿದೆ.

bangalore

ಜನಿವಾರಕ್ಕೆ ಕತ್ತರಿ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು : ಸಿಎಂ ಸಿದ್ಧರಾಮಯ್ಯ

Published

on

ಬೆಂಗಳೂರು : ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಜನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಸಿ.ಎಂ.ಸಿದ್ಧರಾಮಯ್ಯ ಮಾತನಾಡಿದ್ದಾರೆ. “ಸಿಇಟಿ ಪರೀಕ್ಷೆ ವೇಳೆ ಬೀದರ್, ಶಿವಮೊಗ್ಗ, ಸಾಗರ, ಧಾರವಾಡಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಜನಿವಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು :

“ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಳ್ಳಬೇಕು. ಜನಿವಾರವನ್ನು ಕೇವಲ ಬ್ರಾಹ್ಮಣ ಸಮಾಜದವರಷ್ಟೇ ಹಾಕುವುದಿಲ್ಲ. ಬೇರೆ ಬೇರೆ ಸಮುದಾಯಗಳು ಪವಿತ್ರ ದಾರವನ್ನು ಧರಿಸುತ್ತಿದ್ದಾರೆ. ಆ ಎಲ್ಲ ಸಮುದಾಯಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಜನಿವಾರ ಪ್ರಕರಣಕ್ಕೆ ಶಾಶ್ವತ ಪರಿಹಾರ :

ಸಿಇಟಿಯಲ್ಲಿ ನಡೆದ ಜನಿವಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಸರಕಾರ, ಈ ಸಂಬಂಧ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ನಿರ್ಧರಿಸಿದೆ. ಇಂಥ ಘಟನೆ ಪುನರಾವರ್ತನೆ ಆಗದಿರಲು ಶಾಶ್ವತ ಪರಿಹಾರ ಕಂಡು ಕೊಳ್ಳಲು ಈಗ ಸರಕಾರ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ಉದ್ದೇಶಿಸಿದೆ.

Continue Reading

bangalore

ಓಡಿ ಹೋಗಿ ಮದುವೆ ..! ವಶೀಕರಣ ಆರೋಪ ..! ಖ್ಯಾತ ಗಾಯಕಿ ಪೃಥ್ವಿ ಭಟ್ ತಂದೆ ಹೇಳಿದ್ದೇನು ..?

Published

on

ಬೆಂಗಳೂರು : ಕನ್ನಡ ಸಿನಿಮಾಗಳು, ಸಾಕಷ್ಟು ಸ್ಟೇಜ್ ಶೋಗಳಲ್ಲಿ ಹಾಡಿರುವ, ಜೀ ಕನ್ನಡ ಸರಿಗಮಪ ಖ್ಯಾತಿಯ ಗಾಯಕಿ ಪೃಥ್ವಿ ಭಟ್ ಮನೆ ಬಿಟ್ಟು ಓಡಿಹೋಗಿ ಮದುವೆಯಾಗಿದ್ದಾರೆ ಎಂದು ಪೃಥ್ವಿಯ ಹೆತ್ತವರು ಗಂಭೀರ ಆರೋಪ ಮಾಡಿದ್ದಾರೆ.

ಮೂಲತಃ ರಾಜ್ಯದ ಗಡಿನಾಡು ಕಾಸರಗೋಡು ಮೂಲದವಳಾದ ಪೃಥ್ವಿ ಭಟ್ ಇದೀಗ ಓಡಿಹೋಗಿ ದಿಢೀರ್ ಮದುವೆಯಾಗಿದ್ದಾರೆ. ಗಾಯಕಿ ಪೃಥ್ವಿ ಭಟ್, ಅಭಿಷೇಕ್ ಎನ್ನುವ ಯುವಕನೊಂದಿಗೆ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾರೆ. ಮಗಳ ಮದುವೆ ವಿಚಾರ ತಿಳಿದು ಪೋಷಕರು ಆಘಾತಗೊಂಡಿದ್ದಾರೆ.

ಈ ಹಿಂದದೆ ಪೃಥ್ವಿಯ ಪ್ರೀತಿಯ ವಿಚಾರ ಮನೆಯಲ್ಲಿ ಎಲ್ಲರಿಗೂ ತಿಳಿದು ಗಲಾಟೆಯಾಗಿತ್ತು. ಆ ವೇಳೆ ಆಕೆ “ಅಭೀಷೇಕ್‌ನನ್ನು ಮದುವೆಯಾಗುವುದಿಲ್ಲ ಎಂದು ದೇವರ ಮುಂದೆ ನಿಂತು ಪ್ರಮಾಣ ಮಾಡಿದ್ದ ಮಗಳು, ಇದ್ದಕ್ಕಿದ್ದಂತೆ ಮನೆ ಬಿಟ್ಟು ಓಡಿ ಹೋಗಿದ್ದಾಳೆ. ನನ್ನ ಮಗಳ ಮೇಲೆ ವಶೀಕರಣ ವಿದ್ಯೆ ಪ್ರಯೋಗಿಸಲಾಗಿದೆ. ಇದರ ಹಿಂದೆ ಜೀ ಕನ್ನಡ ರಿಯಾಲಿಟಿ ಜ್ಯೂರಿ ನರಹರಿ ದೀಕ್ಷಿತ್ ಕೈವಾಡವಿದೆ” ಎಂದು ಪೃಥ್ವಿ ಭಟ್ ತಂದೆ ಆರೋಪ ಮಾಡಿದ್ದಾರೆ.

ಮಾರ್ಚ್ 27 ರಂದು ಪೃಥ್ವಿ ಹಾಗೂ ಅಭಿಷೇಕ್ ವಿವಾಹವಾಗಿದೆ. ಮದುವೆಯಾಗಿ 20 ದಿನಗಳಾಗಿದೆ. ಮದುವೆಯಾದ ದಿನ ಪೊಲೀಸರು ಮನೆಯವರಿಗೆ ಕಾಲ್ ಮಾಡಿ ವಿಚಾರಿಸಿದಾಗ ‘ಪರಥ್ವಿ ಮನೆಗೆ ಬರುವುದು ಬೇಡ, ಬಂದರೆ ಗಲಾಟೆಯಾಗುವುದು ಕಂಡಿತ . ಹಾಗಾಗಿ ಅವಳು ಮನೆಗೆ ಬರದೆ ಇರುವುದೇ ಒಳ್ಳೆಯದು’ ಎಂದಿದ್ದಾರೆ. ಆದರೆ ಅದರ ಬಳಿಕವೂ ಆಕೆ ಪುನಃ ಕಾಲ್ ಮಾಡಿ ಕ್ಷಮಿಸುವಂತೆ ಕೋರಿದ್ದಾಳೆ. ಆವಾಗ ತಂದೆ ‘ಮದುವೆಯಾಗಿ 20 ದಿನ ನಮ್ಮ ನೆನಪಿರಲಿಲ್ಲ. ಈಗ ನಮ್ಮ ನೆನಪಾದರೆ ಬರುವುದೂ ಬೇಡ. ಹೀಗೆಲ್ಲಾ ಮಾಡುವ ಮೊದಲೇ ಯೋಚಿಸಬೇಕಿತ್ತು’ ಎಂದಿದ್ದಾರೆ. ಇದೀಗ ಈ ಸುದ್ಧಿ ಫುಲ್ ವೈರಲ್ ಆಗುತ್ತಿದೆ.

Continue Reading

bangalore

ಪಂಜಾಬ್ ಕಿಂಗ್ಸ್ ವಿರುದ್ಧ ಅಮೋಘ ಪ್ರದರ್ಶನ; ಸೇಡು ತೀರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು

Published

on

IPL 2025 : ರಾಜ್ಯ ರಾಜಧಾನಿಯಲ್ಲಿ ವಿಪರೀತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಿನ್ನೆಯ ಐಪಿಎಲ್‌ ಕೇವಲ 14 ಓವರ್‌ಗಳಿಗೆ ಸೀಮಿತವಾಗಿತ್ತು. ಈ ಹಿಂದಿನ ಪಂದ್ಯದಲ್ಲಿ 5 ವಿಕೆಟ್‌ಗಳ ಸೋಲು ಅನುಭವಿಸಿದ್ದ ಆರ್‌ಸಿಬಿ ನಿನ್ನೆ (ಏ.20) ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿ ಸೇಡು ತೀರಿಸಿಕೊಂಡಿದೆ.

ಪಂಜಾಬ್ ಕಿಂಗ್ಸ್‌ ಮೊದಲ ಬ್ಯಾಟಿಂಗ್ :

ಟಾಸ್ ಗೆದ್ದ ಆರ್‌ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಪ್ರಿಯಾಂಶ್ ಆರ್ಯ 22, ಪ್ರಭಸಿಮ್ರನ್ 33, ಜೋಶ್ ಇಂಗ್ಲಿಸ್ 29, ಶಶಾಂಕ್ ಸಿಂಗ್ ಔಟಾಗದೆ 31 ಮತ್ತು ಮಾರ್ಕೊ ಜಾನ್ಸೆನ್ ಔಟಾಗದೆ 25 ರನ್ ಕೊಡುಗೆಯಿಂದ 6 ವಿಕೆಟ್ ಗೆ 157 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆರ್ ಸಿಬಿ 18.5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ 7 ವಿಕೆಟ್ ಗಳ ಜಯಭೇರಿ ಬಾರಿಸಿತು.

ಗುರಿ ಬೆನ್ನಟ್ಟಿದ ಆರ್‌ಸಿಬಿ :

ಗುರಿ ಬೆನ್ನಟ್ಟಿದ ಆರ್ ಸಿಬಿ ಆರಂಭಿಕ ಆಘಾತ ಅನುಭವಿಸಿತು. ಫಿಲಿಪ್ ಸಾಲ್ಟ್ ಒಂದು ರನ್ ಗೆ ನಿರ್ಗಮಿಸಿದರು. ಕೊಹ್ಲಿ ಸಮಯೋಚಿತ ಆಟದ ನೆರವಿನಿಂದ ಗೆಲುವಿನ ದಡ ಸೇರಿಸಿದರು. ಅಮೋಘ ಆಟವಾಡಿದ ದೇವದತ್ ಪಡಿಕ್ಕಲ್ 61(35ಬಾಲ್) ರನ್ ಗಳಿಸಿ ಔಟಾದರು. ನಾಯಕ ರಜತ್ ಪಾಟಿದಾರ್ 12 ರನ್ ಗೆ ಔಟಾದರು. ಸಮಯೋಚಿತ ಆಟವಾಡಿದ ಕೊಹ್ಲಿ 73 ರನ್ (54ಎಸೆತ) ಗಳಿಸಿ ಅಜೇಯರಾಗಿ ಉಳಿದರು.

ಆರ್‌ಸಿಬಿ ಹಾಗೂ ಪಂಜಾಬ್ ಸ್ಥಾನ :

ಆರ್ ಸಿಬಿ ಬೌಲಿಂಗ್ ನಲ್ಲಿ ಕೃನಾಲ್ ಪಾಂಡ್ಯ 25 ಕ್ಕೆ 2 ವಿಕೆಟ್ ಮತ್ತು ಸುಯಾಶ್ ಶರ್ಮ 26 ಕ್ಕೆ 2 ವಿಕೆಟ್ ಕಿತ್ತು ಮಿಂಚಿದರು. ರೊಮಾರಿಯೋ ಶೆಫರ್ಡ್18 ಕ್ಕೆ 1 ವಿಕೆಟ್ ಪಡೆದರು. ಆರ್‌ಸಿಬಿಗೆ ಇದು 8ನೇ ಪಂದ್ಯದಲ್ಲಿ 5 ನೇ ಗೆಲುವು, ಪಂಜಾಬ್ ಗೆ 8 ನೇ ಪಂದ್ಯದಲ್ಲಿ 3 ನೇ ಸೋಲು. ಅಂಕಪಟ್ಟಿಯಲ್ಲಿ ಅರ್‌ಸಿಬಿ 3 ನೇ ಸ್ಥಾನದಲ್ಲಿದೆ. ಪಂಜಾಬ್ 4 ನೇ ಸ್ಥಾನದಲ್ಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page