Connect with us

BIG BOSS

BBK 12: ಫೈನಲಿಸ್ಟ್ ಆಗಲು ಮನೆಯವರ ಸಪೋರ್ಟ್ ಇದ್ರು ಕಾವ್ಯಗೆ ಕೈಕೊಟ್ಟ ಅದೃಷ್ಟ!

Published

on

ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ ಬಾಸ್ ಮಿಡ್‌ ಸೀಸನ್ ಫಿನಾಲೆ ನಡೆಯಲಿದ್ದು, ಹೀಗಾಗಿ ಸ್ಪರ್ಧಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಬಿಗ್ ಬಾಸ್ ಮೀಡ್ ಸೀಸನ್ ಫಿನಾಲೆ ಫೈನಲಿಸ್ಟ್ ಆಗಬೇಕೆಂದು ಸ್ಪರ್ಧಿಗಳ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಈ ನಡುವೆ ಫೈನಲಿಸ್ಟ್ ಆಗಲು ತಮಗೆ ಸಿಕ್ಕ ಕೊನೆಯ ಅವಕಾಶವನ್ನ ಕಾವ್ಯ ಅವರು ಕಳೆದುಕೊಂಡಿದ್ದಾರೆ.

ಹೌದು, ‘ಬಿಗ್‌ಬಾಸ್ ಕನ್ನಡ ಸೀಸನ್ 12’ ಕಾರ್ಯಕ್ರಮದಲ್ಲಿ ಈ ವಾರಾಂತ್ಯದಲ್ಲಿ ಮಿಡ್ ಸೀಸನ್ ಫಿನಾಲೆ ನಡೆಯಲಿದೆ. ಈಗಾಗಲೇ ಫೈನಲಿಸ್ಟ್‌ಗಳಾಗಿ ಕಾಕ್ರೋಚ್ ಸುಧಿ, ಅಶ್ವಿನಿ ಗೌಡ, ಸ್ಪಂದನಾ ಸೋಮಣ್ಣ, ಮಾಳು ನಿಪನಾಳ ಆಯ್ಕೆ ಆಗಿದ್ದಾರೆ. ಈ ವಾರದಿಂದ ಒಂಟಿ-ಜಂಟಿ ಕಾನ್ಸೆಪ್ಟ್ ಸಹ ಬ್ರೇಕ್ ಆಗಿದ್ದು, ಎಲ್ಲರೂ ಫೈನಲಿಸ್ಟ್ ಆಗಲು ರೇಸ್‌ಗೆ ಇಳಿದಿದ್ದಾರೆ.

ಈ ವಾರ ನಡೆಯಲಿರುವ ಬಿಗ್‌ಬಾಸ್‌ನ ಮೊದಲ ಗ್ರ್ಯಾಂಡ್‌ ಫಿನಾಲೆಗೆ ಇನ್ನೋರ್ವ ಫೈನಲಿಸ್ಟ್‌ನ್ನು ಸೆಲೆಕ್ಟ್‌ ಮಾಡೋ ಟಾಸ್ಕ್‌ಗಳು ಆರಂಭವಾಗಿವೆ. ರಾಶಿಕಾ ಹಾಗೂ ಕಾವ್ಯ ಇಲ್ಲಿ ಕಂಟೆಂಡರ್‌ಗಳಾಗಿದ್ದು, ಕಾವ್ಯಗೆ ಮನೆಯಲ್ಲಿ ಎಲ್ಲರ ಸಪೋರ್ಟ್‌ ಇದ್ರೂ ಆಟದಿಂದಲೇ ಔಟ್‌ ಆಗಿದ್ದಾರೆ. ಕಾವ್ಯಾ ಔಟ್ ಆಗಿದ್ದು ಏಕೆ ಎಂಬುದೇ ಇಂಟರೆಸ್ಟಿಂಗ್‌ ಆಗಿದೆ.

ಇದನ್ನೂ ಓದಿ: ‘ನನ್ನ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗುತ್ತದೆ…’ ಎರಡನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ರಘು ದೀಕ್ಷಿತ್ ಹೇಳಿದ್ದೇನು?

ಟಾಸ್ಕ್‌ ನಿಯಮದ ಪ್ರಕಾರ, ಹಲಗೆಗಳ ಮೇಲೆ ನಡೆಯುತ್ತಾ ಎದುರಾಳಿ ಆಟಗಾರ ಇಟ್ಟಿರುವ ಡಿಸ್ಕ್‌ ಅನ್ನು ತಿರುಗಿಸುತ್ತಾ ತಮ್ಮ ಬಣ್ಣದ ಅಧಿಕ ಡಿಸ್ಕ್‌ಗಳನ್ನು ಮೇಲ್ಬದಿಯಲ್ಲಿ ಇರುವಂತೆ ನೋಡಿಕೊಳ್ಳಬೇಕಿತ್ತು. ಈ ಟಾಸ್ಕ್‌ನಲ್ಲಿ ಎಲ್ಲರೂ ಕಾವ್ಯ ಶೈವಗೆ ಸಪೋರ್ಟ್ ಮಾಡಿದರು ಅದೃಷ್ಟ ಕೈಹಿಡಿಯಲಿಲ್ಲ.

ಬಿಗ್ ಬಾಸ್‌ ಕೊಟ್ಟ ನಿಯಮಗಳನ್ನು ಮೀರಿ ಕಾವ್ಯ ತಮ್ಮ ಕೈಯಲ್ಲಿ ಡಿಸ್ಕ್‌ಗಳನ್ನ ಕಲೆಕ್ಟ್ ಮಾಡಿದ್ದಾರೆ. ‘ಕಾವ್ಯ ತಮಗೆ ಇಷ್ಟ ಬಂದ ಹಾಗೆ ಆಟವಾಡಿದ್ದಾರೆ. ನಿಮ್ಮನ್ನ ಮೂವ್ ಮಾಡೋಕೆ ಬಿಡಲ್ಲ’ ಅಂತ ಕಾವ್ಯಗೆ ಉಸ್ತುವಾರಿ ಧ್ರುವಂತ್ ಹೇಳಿದ್ದಾರೆ. ಅಲ್ಲಿಗೆ, ಫೈನಲ್ ಆಟದಿಂದ ಕಾವ್ಯ ಆಚೆ ಉಲಿದುಕೊಂಡಿದ್ದಾರೆ. ಈ ಬಗೆಗಿನ ಪ್ರೋಮೋವನ್ನ ಕಲರ್ಸ್ ಕನ್ನಡ ಹಂಚಿಕೊಂಡಿದೆ.

BIG BOSS

ನಿಶ್ಚಿತಾರ್ಥ ಮಾಡಿಕೊಂಡ BBK11ರ ಸ್ಪರ್ಧಿ ಉಗ್ರಂ ಮಂಜು

Published

on

ಬಿಗ್‌ ಬಾಸ್‌ ಕನ್ನಡ ಸೀಸನ್ 11ರ ಸ್ಪರ್ಧಿ, ನಟ ಉಗ್ರಂ ಮಂಜು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಮೂಲಕ ಮಂಜು ಬದುಕಿನಲ್ಲಿ ಹೊಸ ಅಧ್ಯಾಯವೊಂದು ತೆರೆದುಕೊಂಡಿದೆ.

ಮ್ಯಾಕ್ಸ್ ಮಂಜು ಅವರು ಸಂಧ್ಯಾ ಖುಷಿ ಎನ್ನುವವರ ಜೊತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಸಂಬಂಧ ಫೋಟೋಗಳನ್ನು ಇಬ್ಬರೂ ತಮ್ಮ ತಮ್ಮ ಇನ್‌ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಇಬ್ಬರೂ ತಮ್ಮ ತಮ್ಮ ಇನ್‌ಸ್ಟಾದಲ್ಲಿ ಶೇರ್ ಮಾಡಿಕೊಂಡಿದ್ದು, ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ… ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ, ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ… ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ, ಹೊಸ ಬಂಧದ ಆರಂಭ… ನಿಶ್ಚಿತಾರ್ಥದ ಸುಂದರ ಕ್ಷಣ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದೇವೆ’ ಬರೆದುಕೊಂಡಿದ್ದಾರೆ.

ಮ್ಯಾಕ್ಸ್​ ಮಂಜು ಅವರು ಬಿಗ್ ಬಾಸ್ ಸೀಸನ್​ 11ರಲ್ಲಿ ಸ್ಪರ್ಧಿಯಾಗಿದ್ದರು. ಕೊನೆವರೆಗೂ ಪೈಪೋಟಿ ಕೊಟ್ಟಿದ್ದರು. ಬಿಗ್ ಬಾಸ್​ನಲ್ಲಿ ಮಗ ಮದುವೆ ಬಗ್ಗೆ ತಂದೆ ಪ್ರಸ್ತಾಪ ಮಾಡಿದ್ದರು. ಅದರಂತೆ ಮ್ಯಾಕ್ಸ್ ಮಂಜು ಅವರ ನಿಶ್ಚಿತಾರ್ಥ ಆಗಿದ್ದು ಇನ್ನೇನು ವಿವಾಹ ಸಂಭ್ರಮವೊಂದು ಬಾಕಿ ಇದೆ.

ಇದನ್ನೂ ಓದಿ: 20 ವರ್ಷದ ಯುವತಿ ವಿರುದ್ದ ಕೇಸ್ ದಾಖಲಿಸಿದ ಖ್ಯಾತ ನಟಿ ಅನುಪಮಾ ಪರಮೇಶ್ವರನ್‌; ಪೋಸ್ಟ್‌ನಲ್ಲೇನಿದೆ?

ಹುಡುಗಿ ಯಾರು?
ಉಗ್ರಂ ಮಂಜು ಕೈಹಿಡಿಯಲಿರುವ ಸಂಧ್ಯಾ ಖುಷಿ ಅವರು ಸ್ಪರ್ಷ್ ಆಸ್ಪತ್ರೆಯಲ್ಲಿ ಟ್ರಾನ್ಸ್‌ಪ್ಲ್ಯಾಂಟ್ ಕೋರ್ಡಿನೇಟರ್ ಆಗಿ ವೃತ್ತಿ ಮಾಡುತ್ತಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿಯೂ ಬಹಳ ಸಕ್ರಿಯವಾಗಿರುವ ಸಂಧ್ಯಾ ಅವರು ತಮ್ಮ ಹಲವಾರು ವಿಡಿಯೋಗಳು ಮತ್ತು ಚಿತ್ರಗಳನ್ನು ಅಪ್‌ಲೋಡ್ ಮಾಡಿದ್ದಾರೆ.

Continue Reading

BIG BOSS

ರಕ್ಷಿತಾ ಚಪ್ಪಲಿ ತೋರಿಸಿದ್ದು ನಿಜಾನಾ? ಸುದೀಪ್ ಬಿಚ್ಚಿಟ್ರು ಅಸಲಿ ಸತ್ಯ!

Published

on

BBK 12 : ವಾರಾಂತ್ಯ ಬಂತೆಂದರೆ ಎಲ್ಲರೂ ಕಿಚ್ಚನ ಆಗಮನಕ್ಕಾಗಿ ಕಾಯುತ್ತಿರುತ್ತಾರೆ. ಈ ಬಾರಿ ಎಂದಿನಂತೆ ಕಿಚ್ಚ ವೀಕೆಂಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ, ಅವರು ವಾರದ ಪಂಚಾಯಿತಿ ನಡೆಸಲು ಬರುತ್ತಿದ್ದಂತೆ ಗರಂ ಆಗಿದ್ದರು. ರಕ್ಷಿತಾ ಶೆಟ್ಟಿ ಕಲಾವಿದರಿಗೆ ಚಪ್ಪಲಿ ತೋರಿಸಿದ್ದಾರೆಂಬ ಅಶ್ವಿನಿ ಗೌಡ ಆರೋಪಕ್ಕೆ ತಕ್ಕ ಉತ್ತರ ಕೊಟ್ಟಿದ್ದಾರೆ.

ರಕ್ಷಿತಾ.. ನಾಟಕ ಅಂತ ಹೇಳಿಕೊಂಡು ನೀನು ಚಪ್ಪಲಿ ತೋರಿಸಿದ್ದೀಯಾ ಅಂದರೆ ಯಾರಿಗೆ ನೀನು ಅವಮಾನ ಮಾಡುತ್ತಾ ಇದ್ದೀಯಾ? ಎಂದು ಕಿಚ್ಚ ಸುದೀಪ್ ಮುಂದೆಯೇ ಅಶ್ವಿನಿ ಗೌಡ ಆರೋಪ ಮಾಡಿದ್ದಾರೆ.

ಆಗ ಸುದೀಪ್, ಕಲಾವಿದರಿಗೆ ಚಪ್ಪಲಿ ತೋರಿಸಿದ್ರಾ? ನಾನು ತಪ್ಪು ಹೇಳಿಕೆ ಕೊಟ್ಟಾಗ ಏನಾಗುತ್ತೆ ಯಾರ್ ಯಾರೋ ಕಲಾವಿದರಿಗೆ ಹೇಳಿದ್ದರಂತೆ, ಕಲಾವಿದರಿಗೆ ಹೇಳಿದ್ದರಂತೆ ಅಂತಾರೆ. ಯಾಕೆ ಮೇಡಂ ವೇದಿಕೆ ಮೇಲೆ ನಿಂತಿರುವ ನಾನು ಒಬ್ಬ ಕಲಾವಿದ ಅಲ್ವಾ? ಕರ್ನಾಟದಲ್ಲಿ ಇರುವ ಪ್ರತಿಯೊಬ್ಬ ಕಲಾವಿದರಿಗೆ ನಾನು ಉತ್ತರ ಕೊಡಬೇಕಾಗಿತ್ತು. ಇದೊಂದು ತಪ್ಪು ಗ್ರಹಿಕೆ ಎಂದಿದ್ದಾರೆ.

ಅಸಲಿಗೆ ಆಗಿದ್ದೇನು?

ಕಳೆದ ಸಂಚಿಕೆಯಲ್ಲಿ ಅಶ್ವಿನಿ ಗೌಡ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಜಗಳ ನಡೆದಿತ್ತು. ಈ  ವೇಳೆ ಅಶ್ವಿನಿ ಗೌಡ ರಕ್ಷಿತಾ ಮೇಲೆ ಗಂಭೀರ ಆರೋಪ ಮಾಡಿದ್ದರು. ರಕ್ಷಿತಾ ಕಲಾವಿದರಿಗೆ ಅವಮಾನ ಮಾಡಿದರು. ನಾಲ್ಕೈದು ಬಾರಿ ಚಪ್ಪಲಿ ತೋರಿಸಿ ಮಾತನಾಡಿದ್ರು ಎಂದು ಆರೋಪಿಸಿದ್ದರು.

ಇದನ್ನೂ ಓದಿ : BBK12: ಗ್ರೂಪಿಸಂ ಮಾಡಿ ಗಿಲ್ಲಿಗೆ ಕಳಪೆ ಪಟ್ಟ; ಕಿಚ್ಚನ ಕ್ಲಾಸ್?

ಇದೀಗ ಇದೇ ವಿಚಾರವಾಗಿ ಸುದೀಪ್ ಅವರು ವಾರದ ಪಂಚಾಯಿತಿಯಲ್ಲಿ ಪ್ರಶ್ನಿಸಿದ್ದಾರೆ. ಇದೊಂದು ತಪ್ಪು ಗ್ರಹಿಕೆ ಎಂದು ರಕ್ಷಿತಾ ಮೇಲಿನ ಆರೋಪಕ್ಕೆ ತೆರೆ ಎಳೆದಿದ್ದಾರೆ.

Continue Reading

BIG BOSS

ವ್ಯಕ್ತಿತ್ವದ ಪರೀಕ್ಷೆಯಲ್ಲಿ ಗೆಲ್ಲೋದು ಯಾರು? ಯಾರಿಗೆ ಗೇಟ್‌ ಪಾಸ್?

Published

on

BBK12 : ಬಿಗ್ ಬಾಸ್ ಕನ್ನಡ ಸೀಸನ್‌ 12 ಶೋನಲ್ಲಿ ವಾರಾಂತ್ಯ ಬಂತು ಅಂದ್ರೆ ಕುತೂಹಲ ಹೆಚ್ಚು. ಕಿಚ್ಚ ಯಾರಿಗೆ ಕ್ಲಾಸ್ ತಗೋತ್ತಾರೆ? ಕಿಚ್ಚನ ಚಪ್ಪಾಳೆ ಯಾರಿಗೆ? ಯಾರು ದೊಡ್ಮನೆಯಿಂದ ಹೊರ ಹೋಗ್ತಾರೆ ಅನ್ನೋ ಪ್ರಶ್ನೆಗೆ ಉತ್ತರ ಸಿಗುತ್ತೆ. ಹಾಗಾಗಿ ಕಿಚ್ಚನ ಬರುವಿಕೆಗಾಗಿ ಬಿಗ್ ಬಾಸ್ ವೀಕ್ಷಕರು ಕಾಯುತ್ತಿರುತ್ತಾರೆ.

ಅಂದಹಾಗೆ,  ಈ ಬಾರಿ ಎಲ್ಲಾ ಸ್ಪರ್ಧಿಗಳನ್ನು ಕಿಚ್ಚ ಸುದೀಪ್‌ ನಾಮಿನೇಟ್‌ ಮಾಡಿದ್ದರು. ಈ ವಾರ ವ್ಯಕ್ತಿತ್ವದ ಆಟ, ಫಿಸಿಕಲ್‌ ಟಾಸ್ಕ್‌ ಇರೋದಿಲ್ಲ ಎಂದು ಹೇಳಿದ್ದರು. ಹಾಗಾಗಿ ಯಾರು ಬಚಾವಾಗ್ತಾರೆ ಅನ್ನೋ ಕುತೂಹಲ ಹೆಚ್ಚು.

ಕಲರ್ಸ್‌ ಕನ್ನಡ ಪ್ರೊಮೋ ಒಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕಿಚ್ಚ ಸುದೀಪ್ ವಾರದ ಪಂಚಾಯಿತಿ ನಡೆಸಲು ವೇದಿಕೆಗೆ ಎಂಟ್ರಿ ಕೊಟ್ಟಿರೋದನ್ನು ಕಾಣಬಹುದು. ತಾಳ್ಮೆ ನಮಗೆ ಕಲಿಸುವುದು ಪಾಠ ಒಂದು ಕಡೆಯಾದರೆ, ಬದುಕು ದಿನನಿತ್ಯ ಕಲಿಸುವ ಪಾಠಗಳೇ ಬೇರೆ ತರ ಆಗಿರುತ್ತವೆ.

ಬಿಗ್‌ಬಾಸ್‌ನಲ್ಲಿ ಪರೀಕ್ಷೆ ಎಲ್ಲರಿಗೂ ಒಂದೆ. ಆದರೇ, ಪಠ್ಯಕ್ರಮ ಎಲ್ಲ ವ್ಯಕ್ತಿತ್ವಗಳಿಗೆ ಸರಿಯಾಗಿ ಬದಲಾಗುತ್ತಾ ಹೋಗುತ್ತದೆ. ವ್ಯಕ್ತಿತ್ವದ ಪರೀಕ್ಷೆಯಲ್ಲಿ ಪಾಸ್ ಆದೋರು ಯಾರು? ಪಾಸ್ ಆಗದವರು ಯಾರು? ಎಂದು ಅವರು ಹೇಳಿದ್ದಾರೆ.

ಈ ಬಾರಿ ಲೆಟರ್‌ ಟಾಸ್ಕ್‌ ಇತ್ತು. ಎಲ್ಲ ಸ್ಪರ್ಧಿಗಳಿಗೂ ಮನೆಯವರಿಂದ ಪತ್ರ ಬಂದಿತ್ತು. ಈ ಪತ್ರ ಪಡೆಯಲು ಎಮೋಶನ್ ಟಾಸ್ಕ್ ಇತ್ತು. ಯಾರಿಗೆ ಪತ್ರ ಸಿಕ್ಕಿದೆಯೋ ಅವರಿಗೆ ಇಮ್ಯೂನಿಟಿ ಸಿಕ್ಕಿದೆ. ಅಭಿಷೇಕ್‌, ಜಾಹ್ನವಿ, ಕಾವ್ಯ ಶೈವ, ಮಾಳು ನಿಪನಾಳ, ರಿಷಾ ಗೌಡ ಅವರಿಗೆ ಪತ್ರ ಸಿಕ್ಕಿದ್ದು,  ಅವರು ಒಂದು ವಾರ ಸೇಫ್‌ ಆಗಿದ್ದಾರೆ.

ಇದನ್ನೂ ಓದಿ : BBK12: ಗ್ರೂಪಿಸಂ ಮಾಡಿ ಗಿಲ್ಲಿಗೆ ಕಳಪೆ ಪಟ್ಟ; ಕಿಚ್ಚನ ಕ್ಲಾಸ್?

ಪತ್ರ ಸಿಗದ ಅಶ್ವಿನಿ ಗೌಡ, ರಕ್ಷಿತಾ, ಗಿಲ್ಲಿ ನಟ, ಧನುಷ್, ಕಾಕ್ರೋಚ್ ಸುಧಿ, ಸ್ಪಂದನಾ, ಧ್ರುವಂತ್, ಸೂರಜ್, ಚಂದ್ರಪ್ರಭ ಹಾಗೂ ರಾಶಿಕಾ ಬಿಗ್‌ಬಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page