Connect with us

BIG BOSS

ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?

Published

on

ಮಂಗಳೂರು/ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 11’ ಫಿನಾಲೆ ಸಮೀಪಿಸಿದೆ. ಈ ಬಾರಿ ಇಬ್ಬರು ಸ್ಪರ್ಧಿಗಳು ವಿನ್ನರ್ ಆಗಲಿದ್ದಾರಾ ಎಂಬ ಅನುಮಾನವೊಂದು ವೀಕ್ಷಕರನ್ನು ಕಾಡುತ್ತಿದೆ. ಇದಕ್ಕೆ ಕಾರಣವೂ ಇದೆ.

ಗ್ರ್ಯಾಂಡ್ ಫಿನಾಲೆಗೆ ಹತ್ತಿರ ಇರುವಾಗಲೇ ಗೌತಮಿ ಜಾಧವ್ ಮತ್ತು ಧನರಾಜ್ ಆಚಾರ್ ಆಚೆ ಬಂದಿದ್ದಾರೆ. ಹೀಗಾಗಿ ಫಿನಾಲೆ ವಾರಕ್ಕೆ 6 ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದ 17 ಸ್ಪರ್ಧಿಗಳ ಪೈಕಿ ಹನುಮಂತ, ಮೋಕ್ಷಿತಾ ಪೈ, ತ್ರಿವಿಕ್ರಮ್, ಭವ್ಯಾ ಗೌಡ, ರಜತ್ ಹಾಗೂ ಉಗ್ರಂ ಮಂಜು ಗ್ರ್ಯಾಂಡ್‌ ಫಿನಾಲೆ ವಾರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಆರು ಮಂದಿ ಸ್ಪರ್ಧಿಗಳಲ್ಲಿ ಈ ಬಾರಿ ಇಬ್ಬರು ಸ್ಪರ್ಧಿಗಳು ವಿನ್ನರ್ ಆಗಲಿದ್ದಾರಾ ಎಂಬ ಅನುಮಾನವೂ ಶುರುವಾಗಿದೆ. ಇದಕ್ಕೆ ಒಂದಿಷ್ಟು ಕಾರಣಗಳನ್ನು ನೋಡುವುದಾದರೆ, ಬಿಗ್ ಬಾಸ್ ಸೀಸನ್ 11 ಅನ್ನು ವಿಶ್ಲೇಷಣೆ ಮಾಡಿದಾಗ ಕೆಲವೊಂದಿಷ್ಟು ಸುಳಿವುಗಳು ಸಿಗುತ್ತವೆ. ಬಿಗ್ ಬಾಸ್ ಸೀಸನ್ 11ರ ಆರಂಭದಲ್ಲೇ ಬಿಟ್ಟ ಪ್ರೋಮೋದಲ್ಲಿ ಈ ಬಾರಿ ಎಲ್ಲವೂ ಎರಡೆರಡು ಇರಲಿವೆ ಎನ್ನುವ ಸಂಗತಿಯನ್ನು ತಿಳಿಸಿದ್ದರು.

ಈ ಮಾದರಿಯಲ್ಲಿ ನೋಡುವುದಾದರೆ, ಬಿಗ್ ಬಾಸ್ ಸೀಸನ್ 11ರ ಆರಂಭದಲ್ಲಿ ಯಾವ ಸೀಸನ್‌ಗಳಲ್ಲೂ ಇಲ್ಲದ ಸ್ವರ್ಗ ಮತ್ತು ನರಕ ಎಂಬ ಎರಡು ಎರಡು ಮನೆಗಳನ್ನು ಮಾಡಲಾಗಿತ್ತು. ಎರಡರಲ್ಲೂ ಸ್ಪರ್ಧಿಗಳನ್ನು ಹಾಕಲಾಗಿತ್ತು. ಇಬ್ಬರಿಗೂ ಟಾಸ್ಕ್‌ಗಳನ್ನು ಮತ್ತು ಮನೆಯ ಕೆಲಸಗಳಲ್ಲಿಯೂ ವ್ಯತ್ಯಾಸವಿತ್ತು.

ಆರಂಭದಲ್ಲಿ ಬಿಗ್ ಬಾಸ್ ಎರಡು ಮನೆಗಳಿಂದ ಶುರುವಾದ ಕಾರಣ ಈ ಸಲ ವಿನ್ನರ್ ಕೂಡ ಇಬ್ಬರು ಆಗಬಹುದೆಂಬ ಅನುಮಾನ ಹೆಚ್ಚಾಗಿತ್ತು. ಸ್ವರ್ಗ ವಾಸಿಗಳಲ್ಲಿ ಒಬ್ಬರನ್ನು ಮತ್ತು ನರಕ ವಾಸಿಗಳಲ್ಲಿ ಒಬ್ಬರನ್ನು ಸೇರಿ ಇಬ್ಬರು ಸ್ಪರ್ಧಿಗಳನ್ನು ವಿನ್ನರ್ ಮಾಡಬಹುದೆಂಬ ಅನುಮಾನ ಮೂಡಿತ್ತು.

ಆ ಪ್ರಕಾರ ನೋಡುವುದಾದರೆ, ಬಿಗ್ ಬಾಸ್ ಕನ್ನಡ ಸೀಸನ್ 11ರ ನರಕವಾಸಿಗಳಲ್ಲಿ ಮೋಕ್ಷಿತಾ ಪೈ ಒಬ್ಬರೇ ಈಗ ಫಿನಾಲೆ ಹಂತಕ್ಕೆ ತಲುಪಿದ್ದಾರೆ. ಉಗ್ರಂ ಮಂಜು, ತ್ರಿವಿಕ್ರಮ್ ಮತ್ತು ಭವ್ಯಾ ಫಿನಾಲೆ ಹಂತದಲ್ಲಿದ್ದಾರೆ. ಇನ್ನುಳಿದ ಹನುಮಂತ ಮತ್ತು ರಜತ್ ವೈಲ್ಡ್ ಕಾರ್ಡ್ ಎಂಟ್ರಿಗಳಾಗಿದ್ದಾರೆ.

ಬಿಗ್ ಬಾಸ್ ಸೀಸನ್ 3 ರಲ್ಲಿ ನಟಿ ಶೃತಿ ಹೊರತು ಪಡಿಸಿದರೆ ಬೇರೆ ಯಾವ ಸೀಸನ್‌ನಲ್ಲೂ ಮಹಿಳಾ ಸ್ಪರ್ಧಿಗಳು ವಿನ್ನರ್ ಆಗಿರಲಿಲ್ಲ. ಹೀಗಾಗಿ ಈ ಬಾರಿ ನರಕವಾಸಿಗಳಲ್ಲಿ ಫಿನಾಲೆ ಹಂತಕ್ಕೆ ಬಂದ ಒನ್ ಆಂಡ್ ಓನ್ಲಿ ಸ್ಪರ್ಧಿ ಮೋಕ್ಷಿತಾ ಅವರಿಗೆ ಗೆಲುವಿನ ಸಿಹಿ ಸಿಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗ್ತಿದೆ.

ಇದನ್ನೂ ಓದಿ: ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ

ಇನ್ನು ಬಿಗ್ ಬಾಸ್ ವೀಕ್ಷಕರ ಪ್ರಕಾರ ಸ್ವರ್ಗವಾಸಿಗಳಲ್ಲಿ ಉಗ್ರಂ ಮಂಜು, ತ್ರಿವಿಕ್ರಮ್ ಮತ್ತು ಭವ್ಯಾ ಈ ಮೂವರಲ್ಲಿ ಮಂಜು ಅವರನ್ನು ವಿನ್ನರ್ ಮಾಡಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಬಿಗ್ ಬಾಸ್ ಸೀಸನ್ 11 ರಲ್ಲಿ ಉಗ್ರಂ ಮಂಜು ಕ್ಯಾಪ್ಟನ್ ಆದ ವೇಳೆ ರಾಜನ ಟಾಸ್ಕ್ ಒಂದನ್ನು ನೀಡಲಾಗಿತ್ತು. ಅಲ್ಲಿ ಮಂಜು ರಾಜನಾಗಿದ್ದರು. ಇವರಿಗೆ ತಂಗಿಯಾಗಿದ್ದ ಮೋಕ್ಷಿತಾ ಯುವರಾಣಿಯಾಗಿದ್ದರು. ಈ ಟಾಸ್ಕ್ ಮೂಲಕ ಇವರಿಬ್ಬರು ವಿನ್ನರ್ ಎಂಬ ಸುಳಿವನ್ನು ಮೊದಲೇ ನೀಡಿದ್ದರಾ ಎಂಬ ಡೌಟ್ ವೀಕ್ಷಕರ ಮನದಲ್ಲಿ ಮೂಡಿದೆಯಂತೆ.

ಈ ಕಾರಣದಿಂದ ಮೋಕ್ಷಿತಾ ಮತ್ತು ಮಂಜು ಇಬ್ಬರೂ ಬಿಗ್ ಬಾಸ್ ವಿನ್ನರ್ ಆಗಬಹುದು ಅಥವಾ ಉಗ್ರಂ ಮಂಜು ವಿನ್ನರ್ ಆಗಿ ಮೋಕ್ಷಿತಾ ರನ್ನರ್ ಆಗಬಹುದು ಇಲ್ಲವೇ ಮೋಕ್ಷಿತಾ ವಿನ್ನರ್ ಆಗಿ ಮಂಜು ರನ್ನರ್ ಆಗಬಹುದು ಎಂಬ ಸುದ್ದಿ ವೈರಲ್ ಆಗುತ್ತಿದೆ.

ಬಿಗ್ ಬಾಸ್ ಟ್ರೋಫಿ ನೀಡಿದ ಸುಳಿವೇನು ?
ಈ ಬಾರಿಯ ಬಿಗ್ ಬಾಸ್ ಟ್ರೋಫಿ ಕೂಡ ತುಂಬಾ ಡಿಫರೆಂಟ್ ಆಗಿದೆ. ಪ್ರತಿ ಬಾರಿ ಕಣ್ಣನ್ನು ಹೊಂದಿರುತ್ತಿದ್ದ ಬಿಗ್ ಬಾಸ್ ಟ್ರೋಫಿ ಈ ಬಾರಿ ಎರಡು ರೆಕ್ಕೆಗಳನ್ನು ಹೊಂದಿದೆ. ಎರಡು ರೆಕ್ಕೆಗಳ ನಡುವೆ ಬಿಗ್ ಬಾಸ್ ಕನ್ನಡ ಸೀಸನ್ 11 ವಿನ್ನರ್ ಎಂದು ಬರೆದಿದ್ದು, ಇದು ಡಬಲ್ ವಿನ್ನರ್ ಸುಳಿವಿರಬಹುದು ಎನ್ನಲಾಗ್ತಿದೆ.

ಈ ಎಲ್ಲಾ ವೈರಲ್ ಸಂಗತಿಗಳು ಬಿಗ್ ಬಾಸ್ ವೀಕ್ಷಕರಲ್ಲಿ ಮೂಡಿರುವ ಅನುಮಾನವಾಗಿದೆ. ಈ ಎಲ್ಲ ಪ್ರಶ್ನೆಗಳಿಗೂ ಉತ್ತರ ಬಿಗ್ ಬಾಸ್ ಕನ್ನಡ ಸೀಸನ್ 11ರ ಗ್ರ್ಯಾಂಡ್ ಫಿನಾಲೆಯಲ್ಲಿ ಸಿಗಲಿದೆ.

 

BIG BOSS

ಬಿಗ್‌ಬಾಸ್‌ ಸೀಸನ್-11 ರಲ್ಲಿ ಅತೀ ಕಡಿಮೆ ಸಂಬಳ ಪಡೆದ ಸ್ಪರ್ಧಿ ಇವರೇ ನೋಡಿ..!

Published

on

ಬಿಗ್‌ಬಾಸ್ ಮನೆಯಿಂದ ಹೊರಗೆ ಬಂದ ಕೂಡಲೇ ಅವರ ಹೆಸರು ಇನ್ನಷ್ಟು ಪ್ರಸಿದ್ಧಿಯಾಗುತ್ತದೆ. ದಿನಕ್ಕೊಂದು ಹೊಸ ಹೊಸ ಆಫರ್‌ಗಳು ಬರುತ್ತಲೇ ಇರುತ್ತದೆ. ಹೀಗಾಗಿ ಅದೆಷ್ಟೋ ಜನರು ಬಿಗ್‌ಬಾಸ್ ಮನೆಗೆ ನನಗೂ ಹೋಗಲು ಅವಕಾಶ ಸಿಗುತ್ತಿದ್ದರೆ ಒಳ್ಳೆಯದಿತ್ತು ಎಂದು ಬಯಸುತ್ತಾರೆ.

ಇನ್ನು ಬಿಗ್‌ಬಾಸ್ ಮನೆಗೆ ಹೋದವರಿಗೆ ಮೊದಲೇ ಪೇಮೆಂಟ್ ವಿಷಯವನ್ನು ಹೇಳುತ್ತಾರೆ. ಈ ಮೊದಲೇ ಹೆಸರು ಗಳಿಸಿದವರಿಗೆ ಸ್ವಲ್ಪ ಜಾಸ್ತಿ ಹಣವಿರುತ್ತದೆ. ಪ್ರತಿವಾರಕ್ಕೆ ಇಂತಿಷ್ಟು ಸಂಭಾವನೆ ಎಂದು ಅವರಿಗೆ ಸಿಗುತ್ತದೆ. ಅಲ್ಲದೇ ಬಿಗ್‌ಬಾಸ್ ಗೆದ್ದರೆ 50 ಲಕ್ಷ ಹಣವಿರುತ್ತದೆ. ಇದೀಗ ಬಿಗ್‌ಬಾಸ್‌ನಲ್ಲಿ ಅತೀ ಕಡಿಮೆ ಸಂಬಳ ಪಡೆದ ಸ್ಪರ್ಧಿ ಯಾರು ಗೊತ್ತಾ..?

 

ಹೌದು, ಬಿಗ್‌ಬಾಸ್‌ನಲ್ಲಿ ಅತೀ ಕಡಿಮೆ ಸಂಭಾವನೆ ಪಡೆದವರು ಪುತ್ತೂರಿನ ಧನ್‌ರಾಜ್ ಆಚಾರ್ಯ. ಒಂದು ವಾರಕ್ಕೆ 30 ಸಾವಿರ ಸಂಭಾವನೆ ಸಿಗುತ್ತಿತ್ತು. ಬಿಗ್‌ಬಾಸ್ ಮನೆಯಲ್ಲಿ ಧನರಾಜ್ ಅವರು ಕೊನೆಯವರೆಗೂ ಇದ್ದರು. ಗ್ರ್ಯಾಂಡ್ ಫಿನಾಲೆಗೆ ಹೋಗುವ ಮೊದಲು ಎಲಿಮಿನೇಟ್ ಆದರು.

ಅಲ್ಲದೇ ಬಿಗ್‌ಬಾಸ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದಿದ್ದು ಸತ್ಯ ಧಾರಾವಾಹಿಯ ಗೌತಮಿ ಜಾದವ್ ಎಂದು ತಿಳಿದುಬಂದಿದೆ. ಬಿಗ್ ಬಾಸ್‌ ಮನೆಯಲ್ಲಿ ಹನುಮಂತ ಲಮಾಣಿ ಮತ್ತು ಧನರಾಜ್ ಆಚಾರ್ ಅವರ ಸ್ನೇಹ ಎಂಥದ್ದು ಎಲ್ಲರಿಗೂ ತಿಳಿದಿದೆ. ಇಬ್ಬರು ಕೂಡ ಜೀವಕ್ಕೆ ಜೀವದಂತೆ ಇದ್ದರು. ಹಾಗೆಯೇ ತನ್ನ ಕಾಮಿಡಿ ಮಾತುಗಳ ಮೂಲಕ ಧನ್‌ರಾಜ್ ವೀಕ್ಷಕರನ್ನು ಮನೋರಂಜಿಸುತ್ತಿದ್ದರು.

Continue Reading

BIG BOSS

ಹನುಮಂತನಿಗೆ SSLC ಅಲ್ಲಿ ಸಿಕ್ಕಿರೋ ಅಂಕ ಎಷ್ಟು ಗೊತ್ತಾ..?

Published

on

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11 ರ ಟೈಟಲ್ ಗೆದ್ದ ಹನುಮಂತ ಇದೀಗ ಕನ್ನಡಿಗರ ಮನೆಮಾತಾಗಿದ್ದಾನೆ. ಈ ಮೊದಲು ಹಲವು ರಿಯಾಲಿಟಿ ಶೋಗಳ ಮೂಲಕ ಗುರುತಿಸಿಕೊಂಡಿದ್ದರು. ಬಳಿಕ ಅವರಿಗೆ ‘ಬಿಗ್ ಬಾಸ್’ ಸಾಕಷ್ಟು ಜನಪ್ರಿಯತೆ ತಂದುಕೊಟ್ಟಿತು. ಅವರ ಸರಳತೆ, ನೇರ ನಡೆ-ನುಡಿಗೆ, ಮತ್ತೆ ಮನಸ್ಸಿಗೆ ನಾಡಿನ ಜನ ಫಿದಾ ಆಗಿದ್ದಾರೆ. ಈ ರಿಯಾಲಿಟಿ ಶೋ ಬಳಿಕ ಅವರ ಜನಪ್ರಿಯತೆ ಹೆಚ್ಚಾಗಿದೆ.

ಬಿಗ್‌ಬಾಸ್ ಬಳಿಕ ಹನುಮಂತ ಅವರಿಗೆ ಸಾಕಷ್ಟು ರಿಯಾಲಿಟಿ ಶೋಗಳ ಆಫರ್ ಬಂದಿದೆ. ಅಲ್ಲದೇ ಸಿನಿಮಾದಲ್ಲೂ ಆಫರ್ ಬಂದಿರುವುದು ವಿಶೇಷವೇ ಸರಿ. ಆದರೆ ಸಿನಿಮಾಗಳಿಗೆ ಮಾತ್ರ ಹನುಮಂತ ಡೊಂಟ್ ಕೇರ್ ಎಂದಿದ್ದಾನೆ. ಎಲ್ಲ ಬೆಳವಣಿಗೆಗಳ ನಡುವೆಯೂ ಹನುಮಂತು ಅವರ ವಿದ್ಯಾಭ್ಯಾಸ ಏನು ಎಂಬುದು ಚರ್ಚೆಯಾಗುತ್ತಿದೆ.

ಇವರ ಸಾಧನೆ ಅಂತಿಂತದ್ದಲ್ಲ. ಸಾಧನೆ ಹಿಂದೆ ಪರಿಶ್ರಮವೂ ಇದೆ. ಅಲ್ಲದೇ ಅವರ ಕಲಿಕೆಯ ಬಗ್ಗೆಯೂ ಸಾಕಷ್ಟು ಜನರು ಕೇಳಿಕೊಂಡಿದ್ದಾರೆ. ಹನುಮಂತ ಏನು ಓದಿದ್ದಾರೆ ಎಂದು ನೋಡುವುದಾದರೆ ಅವರು ಎಸ್ ಎಸ್ ಎಲ್ ಸಿ ಮಾಡಿದ್ದಾರೆ. ಹಾಗಿದ್ರೆ ಹನುಮಂತ ಎಸ್ ಎಸ್ ಎಲ್ ಸಿ ಯಲ್ಲಿ ಪಡೆದ ಅಂಕ ಎಷ್ಟು? ಇಲ್ಲಿದೆ ನೋಡಿ.

ಹಾವೇರಿಯ ಚಿಲ್ಲೂರು ಬಡ್ನಿ ಶಾಲೆಯಲ್ಲಿ ಹನುಮಂತು ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸವನ್ನು ಮಾಡಿದ್ದಾರೆ. 2020-21ನೇ ಸಾಲಿನಲ್ಲಿ ನಡೆದ SSLC ಪರೀಕ್ಷೆಯಲ್ಲಿ 625 ಅಂಕಕ್ಕೆ 532 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರಂತೆ.

ಈತನ ಓದು, ಕಲಿಕೆ ಹಾಗೂ ಗುಣದ ಬಗ್ಗೆ ಶಾಲಾ ಶಿಕ್ಷಕರು ಹೊಗಳುತ್ತಿದ್ದಾರೆ. ಹನುಮಂತನ ಬಗ್ಗೆ ಶಿಕ್ಷಕರಿಗೂ ಹೆಮ್ಮೆ ಇದೆ. ಇದೀಗ ಹನುಮಂತ ಎಸ್‌ಎಸ್‌ಎಲ್‌ಸಿಯಲ್ಲಿ ತೆಗೆದುಕೊಂಡ ಮಾರ್ಕ್ಸ್‌ ನೋಡಿ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.

Continue Reading

BIG BOSS

ಬಿಗ್‌ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಅವರ ಆರೋಗ್ಯ ವಿಚಾರಿಸಲು ಬಂದ ಚೈತ್ರಾ ಕುಂದಾಪುರ

Published

on

ಬೆಂಗಳೂರು: ಬಿಗ್‌ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ಸೇರಿದ್ದಾರೆ. ಇವರನ್ನು ನೋಡಲು ಅನೇಕರು ಧಾವಿಸುತ್ತಿದ್ದಾರೆ. ಹಾಗೆಯೇ ನಿನ್ನೆಯ ದಿ ಬಿಗ್‌ಬಾಸ್ ಚೈತ್ರಾ ಕುಂದಾಪುರ ಆಸ್ಪತ್ರೆಯಲ್ಲಿ ಗೋಲ್ಡ್ ಸುರೇಶ್ ಅವರನ್ನು ಭೇಟಿಯಾಗಿ ಆರೋಗ್ಯವನ್ನು ವಿಚಾರಿಸಿ ಅವರ ತಲೆ ಸವರಿ ಸಮಾಧಾನದ ಮಾತನ್ನು ಹೇಳಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸುರೇಶ್ ಆಸ್ಪತ್ರೆ ಬೆಡ್ ನಲ್ಲಿರುವ ವಿಡಿಯೋ ಹಾಗೂ ಫೋಟೋ ವೈರಲ್ ಆಗಿತ್ತು. ಈಗ ಚೈತ್ರ ಜೊತೆ ಮಾತನಾಡ್ತಿರುವ ವಿಡಿಯೋ ವೈರಲ್ ಆಗಿದೆ. ಇದನ್ನು ನೋಡಿದ ಫ್ಯಾನ್ಸ್, ಬೇಗ ಹುಷಾರಾಗಿ ಬನ್ನಿ ಅಂತ ಕಮೆಂಟ್ ಹಾಕಿದ್ದಾರೆ. ಅಲ್ಲದೆ ಚೈತ್ರ, ತಾಯಿಯ ಹೃದಯ ಹೊಂದಿದ್ದಾರೆಂದು ಬರೆದಿದ್ದಾರೆ.

ಸದ್ಯ ಗೋಲ್ಡ್ ಸುರೇಶ್ ಅವರು ಕಾಲು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇದ್ದಾಗಲೇ ಅವರ ಕಾಲಿಗೆ ಪೆಟ್ಟಾಗಿತ್ತು. ಹಾಗಾಗಿ ಅವರಿಗೆ ಕೆಲವು ಬಿಗ್‌ಬಾಸ್ ಟಾಸ್ಕ್‌ಗಳನ್ನು ಆಡಲು ಸಾಧ್ಯವಾಗಲಿಲ್ಲ. ಕಾಲು ನೋವು ಹೆಚ್ಚಾಗಿದ್ದರಿಂದ ಸುರೇಶ್ ಅವರಿಗೆ ಸರ್ಜರಿ ಅಗತ್ಯ ಇದೆ ಎಂದು ವೈದ್ಯರು ಸೂಚಿಸಿದ್ದಾರೆ.

ಡಾಕ್ಟರ್ ಸಲಹೆ ಮೇರೆಗೆ ಗೋಲ್ಡ್ ಸುರೇಶ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲಾಗಿದೆ. ಎರಡು ದಿನಗಳ ಬಳಿಕ ಅವರು ಡಿಸ್ಚಾರ್ಜ್​ ಆಗಿ ಮನೆಗೆ ಮರಳುವ ನಿರೀಕ್ಷೆ ಇದೆ.

Continue Reading
Advertisement

Trending

Copyright © 2025 Namma Kudla News

You cannot copy content of this page