Connect with us

LATEST NEWS

ಗುಜರಾತ್‌ ಕರಾವಳಿಯಲ್ಲಿ ಬಿಪರ್‌ಜಾಯ್ ರುದ್ರನರ್ತನ : ಸೌರಾಷ್ಟ್ರ ಕಚ್‌ ನಲ್ಲಿ ಹೈ ಆಲರ್ಟ್‌- ರೈಲು ಸಂಚಾರ ಸ್ಥಗಿತ..!

Published

on

ಬಿಪರ್‌ಜಾಯ್ ಚಂಡಮಾರುತವು ಗುರುವಾರ ಮಧ್ಯಾಹ್ನ ಕಚ್‌ ಜಿಲ್ಲೆಯ ಜಖೌ ಬಂದರಿನ ಬಳಿ ತೀವ್ರ ಸ್ವರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೌರಾಷ್ಟ್ರ : ಬಿಪರ್‌ಜಾಯ್ ಚಂಡಮಾರುತವು ಗುರುವಾರ ಮಧ್ಯಾಹ್ನ ಕಚ್‌ ಜಿಲ್ಲೆಯ ಜಖೌ ಬಂದರಿನ ಬಳಿ ತೀವ್ರ ಸ್ವರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದರಿಂದ ಭಾರೀ ಮಳೆ ಹಾಗೂ ಬಿರುಗಾಳಿ ಏಳುವ ಸಾಧ್ಯತೆ ಇದೆ. ಈಗಾಗಲೇ ಕರಾವಳಿ ತೀರದ ಜನರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು (ಜೂನ್‌ 13) ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್‌ ಕರಾವಳಿಗೆ ಆರೆಂಟ್‌ ಅಲರ್ಟ್‌ ಘೋಷಿಸಿದೆ.

ಜೂನ್‌ 15ರ ಸಂಜೆಯ ವೇಳೆಗೆ ಬಿಪರ್‌ಜಾಯ್ ಚಂಡಮಾರುತವು ಜಖೌ ಬಂದರನ್ನು ದಾಟಲಿದೆ ಎಂದು ಐಎಂಡಿ ವರದಿ ತಿಳಿಸಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು (ಜೂನ್‌ 13) ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್‌ ಕರಾವಳಿಗೆ ಆರೆಂಟ್‌ ಅಲರ್ಟ್‌ ಘೋಷಿಸಿದೆ.

ಜೂನ್‌ 15ರ ಸಂಜೆಯ ವೇಳೆಗೆ ಬಿಪರ್‌ಜಾಯ್ ಚಂಡಮಾರುತವು ಜಖೌ ಬಂದರನ್ನು ದಾಟಲಿದೆ ಎಂದು ಐಎಂಡಿ ವರದಿ ತಿಳಿಸಿದೆ.

ಸೌರಾಷ್ಟ್ರ, ಕಚ್‌ ಕರಾವಳಿ ತೀರಗಳಾದ ಪೋರಬಂದರ್‌, ದ್ವಾರಕಾ, ಜಖೌ ಬಂದರು ಪ್ರದೇಶಗಳಲ್ಲಿ ಚಂಡಮಾರುತದ ಪರಿಣಾಮದಿಂದ ಭಾರಿ ಬಿರುಗಾಳಿ ಏಳಲಿದೆ ಎಂದು ಅಂದಾಜಿಸಲಾಗಿದೆ.

ಗಾಳಿಯ ವೇಗವೂ 300ಕಿಲೋಮೀಟರ್‌ಗೂ ಹೆಚ್ಚಿರಲಿದೆ ಎಂದು ಹೇಳಲಾಗುತ್ತಿದೆ.

ಸೌರಾಷ್ಟ್ರ, ಕಚ್‌ ಕರಾವಳಿ ತೀರಗಳಾದ ಪೋರಬಂದರ್‌, ದ್ವಾರಕಾ, ಜಖೌ ಬಂದರು ಪ್ರದೇಶಗಳಲ್ಲಿ ಚಂಡಮಾರುತದ ಪರಿಣಾಮದಿಂದ ಭಾರಿ ಬಿರುಗಾಳಿ ಏಳಲಿದೆ ಎಂದು ಅಂದಾಜಿಸಲಾಗಿದೆ.

ಚಂಡಮಾರುತದ ಅಪಾಯದ ಬಗ್ಗೆ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಜೊತೆ ಫೋನ್‌ ಮೂಲಕ ಮಾತುಕತೆ ನಡೆಸಿರುವ ಪ್ರಧಾನಿ ಮೋದಿ ರಾಜ್ಯಕ್ಕೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

ಪಶ್ಚಿಮ ರೈಲ್ವೇ ಗುಜರಾತ್‌ನ ಕರಾವಳಿ ಪ್ರದೇಶಗಳಿಗೆ ತೆರಳುವ 50ಕ್ಕೂ ಹೆಚ್ಚು ರೈಲುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಮತ್ತು ಮುಂದಿನ ಮೂರು ದಿನಗಳಲ್ಲಿ ಹಲವು ರೈಲುಗಳನ್ನು ರದ್ದುಗೊಳಿಸುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಪಶ್ಚಿಮ ರೈಲ್ವೇ ಗುಜರಾತ್‌ನ ಕರಾವಳಿ ಪ್ರದೇಶಗಳಿಗೆ ತೆರಳುವ 50ಕ್ಕೂ ಹೆಚ್ಚು ರೈಲುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಮತ್ತು ಮುಂದಿನ ಮೂರು ದಿನಗಳಲ್ಲಿ ಹಲವು ರೈಲುಗಳನ್ನು ರದ್ದುಗೊಳಿಸುವ ಸಾಧ್ಯತೆ ಇದೆ.

ಗುಜರಾತ್ ಕರಾವಳಿಯ ಗಾಂಧಿಧಾಮ್, ವೆರಾವಲ್, ಓಖಾ, ಪೋರಬಂದರ್‌ಗೆ ಹೋಗುವ 56 ರೈಲುಗಳನ್ನು ಅಹಮದಾಬಾದ್, ರಾಜ್‌ಕೋಟ್ ಮತ್ತು ಸುರೇಂದ್ರನಗರದಲ್ಲಿ ಅಲ್ಪಾವಧಿಗೆ ನಿಲ್ಲಿಸಲಾಗಿದೆ.

ಜೂನ್ 13 ರಿಂದ ಜೂನ್ 15 ರ ನಡುವೆ ಸುಮಾರು 95 ರೈಲುಗಳನ್ನು ರದ್ದುಗೊಳಿಸಲು ಪ್ರಸ್ತಾಪಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದಿನಿಂದಲೇ (ಜೂನ್‌ 13) ಗುಜರಾತ್‌ ಕರಾವಳಿ ಭಾಗದ ಸುಮಾರು 10 ಕಿಲೋಮೀಟರ್ ವ್ಯಾಪ್ತಿಯ ಜನರನ್ನು ಸ್ಥಳಾಂತರಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಮಂಗಳವಾರದಿಂದ ಎರಡು ಹಂತಗಳಲ್ಲಿ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗುವುದು, ಸಮುದ್ರ ತೀರದಿಂದ 5 ಕಿಲೋಮೀಟರ್‌ ಅಂತರದ ಒಳಗೆ ವಾಸಿಸುತ್ತಿರುವ ಜನರನ್ನು ಮೊದಲು ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

LATEST NEWS

ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

Published

on

ಮಂಗಳೂರು/ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

2022ರ ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಹತೆ ಪಡೆಯಲು ದಾಖಲೆಗಳನ್ನು ನಕಲಿ ಮಾಡಿದ ಆರೋಪ ಹೊತ್ತಿರುವ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು, ವಂಚನೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಖೇಡ್ಕರ್ ಅವರಿಗೆ ನಿರ್ದೇಶನ ನೀಡಿದೆ. ಆದಾಗ್ಯೂ, ದೆಹಲಿ ಪೊಲೀಸರ ವಕೀಲರು ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ತೀವ್ರವಾಗಿ ವಿರೋಧಿಸಿದರು. ತನಿಖೆಯಲ್ಲಿ ಅವರು ಸಹಕರಿಸದಿರುವುದು ಮತ್ತು ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದರು.

ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ..!
ಇದನ್ನು ಆಲಿಸಿದ ಪೀಠ ಖೇಡ್ಕರ್ ಅಂತದ್ದೇನು ಗಂಭೀರ ಅಪರಾಧ ಮಾಡಿದ್ದಾರೆ “ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ ಅಥವಾ ಭಯೋತ್ಪಾದಕಿ ಅಲ್ಲ. ಆಕೆ ಕೊಲೆ ಮಾಡಿಲ್ಲ. ಆಕೆ ಎನ್‌ಡಿಪಿಎಸ್ ಅಪರಾಧಿಯೂ ಅಲ್ಲ. ನಿಮಗೆ ಒಂದು ವ್ಯವಸ್ಥೆ ಅಥವಾ ಸಾಫ್ಟ್‌ವೇರ್ ಇರಬೇಕು. ನೀವು ತನಿಖೆಯನ್ನು ಪೂರ್ಣಗೊಳಿಸಿ. ಆಕೆ ಎಲ್ಲವನ್ನೂ ಕಳೆದುಕೊಂಡಿದ್ದಾಳೆ ಇನ್ನು ಎಲ್ಲಿಯೂ ಆಕೆಗೆ ಸಿಗುವುದಿಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿದೆ. “ಪ್ರಕರಣದ ವಾಸ್ತವಾಂಶ ಮತ್ತು ಸನ್ನಿವೇಶಗಳನ್ನು ಪರಿಗಣಿಸಿ, ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತ ಪ್ರಕರಣ ಇದು ಎಂದು ಪೀಠ ಹೇಳಿದೆ.

ಇದನ್ನೂ ಓದಿ: ಕನ್ನಡ ಮಾತನಾಡುವುದಿಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ರಾತ್ರೋರಾತ್ರಿ ಎತ್ತಂಗಡಿ

2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿದೆ.

 

 

 

Continue Reading

LATEST NEWS

ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

Published

on

ಚಿಕ್ಕಮಗಳೂರು: ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಮ್ಯಾಪ್ ದಾರಿ ತೋರಿಸುತ್ತದೆ ಎಂದು ಅದು ಹೇಳಿದ ದಾರಿಯಲ್ಲಿ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ.

ಇಂತಹದ್ದೇ ಘಟನೆ ಒಂದು ಚಿಕ್ಕಮಗಳೂರಿನ ಆಲ್ದೂರು ಬಳಿ ಬೆಳಕಿಗೆ ಬಂದಿದೆ. ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ್ದಾರೆ.

ಹೌದು.. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.

ಇದನ್ನೂ ಓದಿ: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಪ್ರವಾಸಿಗರ ಪರದಾಟ ನೋಡಿ, ಸ್ಥಳೀಯರು ಟ್ರ್ಯಾಕ್ಟರ್‌ಗೆ ಟಿಟಿಯನ್ನು ಕಟ್ಟಿ, ರಸ್ತೆಯ ಬಳಿ ತಂದು ಬಿಟ್ಟಿದ್ದಾರೆ. ಬಳಿಕ ಸ್ಥಳಿಯರಿಂದ ರಸ್ತೆಯ ಬಗ್ಗೆ ಮಾಹಿತಿ ಪಡೆದು, ಗೂಗಲ್ ಮ್ಯಾಪ್ ಆಫ್ ಮಾಡಿ ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page