Connect with us

DAKSHINA KANNADA

ಮಂಗಳೂರು: ‘ಬ್ಲಡ್ ಡೋನರ್ಸ್’ ಇದರ 350ನೇ ರಕ್ತದಾನ ಶಿಬಿರಕ್ಕೆ ಚಾಲನೆ

Published

on

ಉಳ್ಳಾಲ: ಬ್ಲಡ್ ಡೋನರ್ಸ್ ಮಂಗಳೂರು (ರಿ) ಇದರ ವತಿಯಿಂದ ರೆಡ್ ಕ್ರಾಸ್ ರಕ್ತನಿಧಿ ಕೇಂದ್ರ ಮಂಗಳೂರು, ಫಾದರ್ ಮುಲ್ಲರ್ ರಕ್ತನಿಧಿ ಕೇಂದ್ರ ಮಂಗಳೂರು, ಯೆನೆಪೋಯಾ ಮೆಡಿಕಲ್ ಕಾಲೇಜು ರಕ್ತನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ “ಸಾಧನೆಯ ಹಾದಿಯಲ್ಲಿ ಬಿ.ಡಿ.ಎಂ ಹೆಜ್ಜೆ “ಕರಾವಳಿಯ ಚರಿತ್ರೆಯ ಪುಟಗಳಿಗೆ ಮತ್ತೊಂದು ಗರಿ” ಎಂಬ ಧ್ಯೇಯದೊಂದಿಗೆ  350 ನೇ ಬೃಹತ್ ರಕ್ತದಾನ ಶಿಬಿರ ಮತ್ತು ಸನ್ಮಾನ ಕಾರ್ಯಕ್ರಮ ನಾಟೆಕಲ್ ಆರ್ ಕೆ ಸಿ ವಂಡರ್ ಸಿಟಿಯಲ್ಲಿ ನಡೆಯಿತು.


ವಿಧಾನ ಪರಿಷತ್ ಸದಸ್ಯ‌ ಬಿ.ಎಂ ಫಾರೂಖ್ ಮುಖ್ಯ ಅತಿಥಿಯಾಗಿ‌ ಭಾಗವಹಿಸಿ‌ ಮಾತನಾಡಿ‌ ಕೋವಿಡ್ ನಿಂದಾಗಿ ರಕ್ತದಾನ ಶಿಬಿರಗಳು ನಡೆಸಲು ಸಾಧ್ಯವಾಗದ ಕಾರಣದಿಂದಾಗಿ ಜಿಲ್ಲೆಯಾದ್ಯಂತ ಶೇ.100 ರಕ್ತದ ಕೊರತೆಯಾಗಿತ್ತು.

2020ರ ಸಮೀಕ್ಷೆ ಪ್ರಕಾರ ದೇಶದಲ್ಲಿ 15ಸಾವಿರ  ಯೂನಿಟ್ ರಕ್ತದ ಬೇಡಿಕೆಯಿದೆ. ದಾನಿಗಳಿಂದ 11ಸಾವಿರ ಯೂನಿಟ್ ರಕ್ತ‌ ಮಾತ್ರ ಸಂಗ್ರಹವಾಗಿದೆ. ಒಟ್ಟು 4 ಸಾವಿರ ಯೂನಿಟ್ ರಕ್ತದ ಕೊರತೆ ಇದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕಾದ ಯುವ ಜನತೆ  ರಕ್ತದಾನ ಮಾಡುವ ಮೂಲಕ  ಹಾಗೂ ರಕ್ತದಾನದ ಜಾಗೃತಿಯನ್ನು ಮೂಡಿಸುವ ಮೂಲಕ ರಕ್ತದ ಕೊರತೆಯನ್ನು ನೀಗಿಸಬೇಕಿದೆ ಎಂದರು.

ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ‌ ಶಿಬಿರದಲ್ಲಿ ರಕ್ತದಾನ ಮಾಡಿ ಮಾತನಾಡಿ, ಕಳೆದ ಒಂಭತ್ತು ವರ್ಷಗಳಿಂದ ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆ ಜಾತಿಧರ್ಮ ನೋಡದೆ ನಿರಂತರವಾಗಿ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ರಕ್ತ ಒದಗಿಸುವ ಜೊತೆಗೆ ಸಮಾಜ ಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿರುವುದು ಶ್ಲಾಘನಿಯ ಎಂದರು.

ಬ್ಲಡ್ ಡೋನರ್ಸ್ ಉಳ್ಳಾಲ  ಮಂಗಳೂರು ಇದರ ಮಹಿಳಾ ವಿಭಾಗದ ಅಧ್ಯಕ್ಷೆ ಆಯಿಷಾ ಯು.ಕೆ ಉಳ್ಳಾಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ರಕ್ತದ ಅವಶ್ಯಕತೆ ಬಿದ್ದಾಗ  ಅತ್ಯುತ್ತಮವಾಗಿ  ಕಾರ್ಯನಿರ್ವಹಿಸುವವರಿಗೆ ಹಾಗೂ ನಿರಂತರವಾಗಿ ರಕ್ತದಾನ ಮಾಡುವವರನ್ನು ಗೌರವಿಸಲಾಯಿತು.

ಬೆಳ್ಮ‌ ಗ್ರಾ.ಪಂ ಅಧ್ಯಕ್ಷ ಬಿ.ಎಂ ಅಬ್ದುಲ್ ಸತ್ತಾರ್, ಕೆಪಿಸಿಸಿ ಪ್ರ.ಕಾರ್ಯದರ್ಶಿ ಇನಾಯತ್ ಆಲಿ‌ ಮುಲ್ಕಿ,  ಯೆನೆಪೋಯ ವಿಶ್ವ ವಿದ್ಯಾಲಯದ ಕಾರ್ಯಕ್ರಮ ಸಂಯೋಜಕಿ ಡಾ. ಅಶ್ವಿನಿ, ನಾಟೆಕಲ್ ಆರ್‌ ಕೆಸಿ ಸಂಸ್ಥೆಯ ನಿರ್ದೇಶಕ ಅಬ್ದುಲ್‌ ಅಝೀಝ್, ಬ್ಲಡ್ ಡೋನರ್ಸ್ ಮಂಗಳೂರು‌ ಇದರ ಅಧ್ಯಕ್ಷ ಸಿದ್ದೀಕ್ ಮಂಜೇಶ್ವರ, ಉಪಾಧ್ಯಕ್ಷ ಅಶ್ರಫ್‌ ಉಪ್ಪಿನಗಂಡಿ, ಜೊತೆ ಕಾರ್ಯದರ್ಶಿ ಸಾಹುಲ್ ಹಮೀದ್ ಕಾಶಿಪಣ್ನ, ತಾ.ಪಂ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು,‌‌ ಕಾಸರಗೋಡು ಪಂಚಾಯತ್ ಮಾಜಿ ಸದಸ್ಯ ಹರ್ಷಾದ್ ವರ್ಕಾಡಿ,

ಜಿ.ಪಂ ಮಾಜಿ ಸದಸ್ಯ ಮುಸ್ತಾಫ ಪಾವೂರು, ಕೋಟೆಕಾರು ಪಟ್ಟಣ ಪಂಚಾಯತ್ ಮಾಜಿ ಸದಸ್ಯ ಡಿ.ಎಂ  ಮುಹಮ್ಮದ್,  ಉದ್ಯಮಿ ಕೆ.ಟಿಂಬರ್ ಅಬೂಬಕ್ಕರ್, ನಾಸೀರ್ ಸಾಮಣಿಗೆ, ಕಥೋಲಿಕ್ ಸಭಾ ಉಳ್ಳಾಲ ವಲಯ ಮಾಜಿ ಅಧ್ಯಕ್ಷ ಆಲ್ವಿನ್ ಡಿಸೋಜಾ, ಮದನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ  ಇಸ್ಮಾಯಿಲ್‌ ಮಾಸ್ಟರ್, ಝಕರಿಯ್ಯಾ‌ ಮಲಾರ್, ಹಮೀದ್ ಮಾರಿಪಳ್ಳ, ಹಕೀಂ ಮಾರಿಪಳ್ಳ, ಸುಹೇಲ್ ಕಂದಕ್, ರವೂಫ್ ಸಿ.ಎಂ,‌ ಸಿದ್ದೀಕ್ ಉಚ್ಚಿಲ, ಮುನೀರ್ ಚೆಂಬುಗುಡ್ಡೆ, ಅಪ್ತಾಬ್ ಕುಳಾಯಿ, ಲತೀಫ್ ಉಪಸ್ಥಿತರಿದ್ದರು.

ಈ ಸಂದರ್ಭ ದಾನಿಗಳಿಂದ 358 ಯುನಿಟ್ ರಕ್ತ ಸಂಗ್ರಹಿಸಲಾಯಿತು.

DAKSHINA KANNADA

ಮಂಗಳೂರು : ಕೂಳೂರು ಸೇತುವೆ ಬಳಿ ದರ್ಪ ; ಪೊಲೀಸರಿಂದ ಸ್ಪಷ್ಟನೆ

Published

on

ಮಂಗಳೂರು : ಮಾ.21ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಕೂಳೂರು ಸೇತುವೆ ಬಳಿ ದರ್ಪ ಮೆರೆದ ಸಂಚಾರ ಪೊಲೀಸರು” ಎಂಬ ವೀಡಿಯೊ 2024ರ ಡಿ.23ರಂದು ಕುದುರೆಮುಖ ಜಂಕ್ಷನ್‌ ನಲ್ಲಿ ನಡೆದಿತ್ತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಕುರಿತು ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದೆ.

ಪಾನಮತ್ತನಾದ ಓರ್ವ ವ್ಯಕ್ತಿ ಕುದುರೆಮುಖ ಜಂಕ್ಷನ್ ನಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿದ್ದು, ಸಾರ್ವಜನಿಕರ ಸಹಾಯದೊಂದಿಗೆ ಪೊಲೀಸರು ಆ ವ್ಯಕ್ತಿಯನ್ನು ಬದಿಗೆ ಕಳುಹಿಸಿದರೂ ಆತ ಮತ್ತೆ ಪದೇ ಪದೇ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ ಸಮಯ ತುಂಬಾ ಕುಡಿದಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದು ಆತನಿಗೆ ಮೂಗಿನಲ್ಲಿ ರಕ್ತ ಬಂದಿರುತ್ತದೆ.

ಈ ವೇಳೆ ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಆ ವ್ಯಕ್ತಿಯನ್ನು ಮೇಲಕ್ಕೆತ್ತಿ ಉಪಚರಿಸಿ ಆಸ್ಪತ್ರೆಗೆ ಸಾಗಿಸಲು ವಾಹನದ ಬಳಿ ಕರೆದುಕೊಂಡು ಬರುತ್ತಿರುವಾಗ ಯಾರೋ ಸಾರ್ವಜನಿಕರು ತಪ್ಪಾಗಿ ತಿಳಿದುಕೊಂಡು ವೀಡಿಯೊ ಮಾಡಿ ವೈರಲ್‌ ಮಾಡಿದ್ದಾರೆ ಎಂದು ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

DAKSHINA KANNADA

ಸದನದಲ್ಲಿ ಗದ್ದಲ; 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು!

Published

on

ಮಂಗಳೂರು/ ಬೆಂಗಳೂರು :  ಇಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿರುವ  ಬಜೆಟ್ ಅಂಗೀಕಾರಗೊಂಡಿದೆ. ಈ ವೇಳೆ ವಿಪಕ್ಷ ಸದಸ್ಯರು ಬಜೆಟ್ ನಲ್ಲಿ ಸೇರಿಸಿರುವ ಕೆಲವೊಂದು ವಿಚಾರಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲಿ ಹನಿಟ್ರ್ಯಾಪ್ ವಿಚಾರವೂ ಸದ್ದು ಮಾಡಿದ್ದು, ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಿಟ್ಟ ನಾಲ್ಕು ಶೇಕಡ ಮೀಸಲಾತಿ ರದ್ದು ಮಾಡುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಅಲ್ಲದೇ, ಸ್ಪೀಕರ್ ಪೀಠಕ್ಕೇರಿದ ವಿಪಕ್ಷ ಸದಸ್ಯರು
ಖಾದರ್ ಮೇಲೆ ಪೇಪರ್‌ಗಳನ್ನು ಹರಿದು ಹಾಕಿ ಗಲಾಟೆ ಮಾಡಿದ್ದರು. ಮಧ್ಯಾಹ್ನ ಭೋಜನ ವಿರಾಮದ ಬಳಿಕವೂ ಇದು ಮುಂದುವರಿದಿತ್ತು.

ಹೀಗಾಗಿ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆ ಕರಾವಳಿಯ ಮೂವರು ಸೇರಿದಂತೆ ಒಟ್ಟು 18 ಬಿಜೆಪಿ ಶಾಸಕರನ್ನು 6 ತಿಂಗಳ ವರೆಗೆ ಅಮಾನತುಗೊಳಿಸಿ ಸ್ಪೀಕರ್ ಖಾದರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಗದ್ದಲದ ನಡುವೆ ಅಂಗೀಕಾರವಾದ ಬಜೆಟ್; ಮುಸ್ಲಿಂ ಮೀಸಲಾತಿ ರದ್ಧಿಗೆ ಆಗ್ರಹಿಸಿ ಸ್ಪೀಕರ್ ಪೀಠಕ್ಕೇರಿದ ವಿಪಕ್ಷ ಸದಸ್ಯರು

ಯಾರೆಲ್ಲ ಅಮಾನತು?

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮೂಡುಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ದೊಡ್ಡಣ್ಣ ಗೌಡ ಪಾಟೀಲ್, ಸಿ ಕೆ ರಾಮಮೂರ್ತಿ, ಅಶ್ವತ್ಥ ನಾರಾಯಣ, ಎಸ್ ಆರ್ ವಿಶ್ವನಾಥ್, ಬೈರತಿ ಬಸವರಾಜ, ಎಂ ಆರ್ ಪಾಟೀಲ್, ಚನ್ನಬಸಪ್ಪ, ಬಿ.ಸುರೇಶ್ ಗೌಡ, ಶರಣು ಸಲಗಾರ್, ಶೈಲೇಂದ್ರ ಬೆಲ್ದಾಳೆ, ಹರೀಶ್ ಬಿಪಿ, ಮುನಿರತ್ನ, ಬಸವರಾಜ ಮತ್ತಿಮೋಡ್, ಧೀರಜ್ ಮುನಿರಾಜು, ಡಾ. ಚಂದ್ರು ಲಮಾಣಿ.

Continue Reading

DAKSHINA KANNADA

ನಕಲಿ ಪತ್ರಕರ್ತರ ಹಾವಳಿ; ಮನವಿ ಸಲ್ಲಿಸಿದ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಮಪಮ್ ಅಗರ್ವಾಲ್ ಅವರಿಗೆ ಶುಕ್ರವಾರ ಮನವಿ ಪತ್ರ ಸಲ್ಲಿಸಿದರು.


ಜಿಲ್ಲೆಯಲ್ಲಿ ನಕಲಿ ಪತ್ರಕರ್ತರ ಹಾವಳಿ ಜಾಸ್ತಿಯಾಗಿದ್ದು, ಕೆಲವರು ಪ್ರತಿಷ್ಠಿತ ಮಾಧ್ಯಮ ಸಂಸ್ಥೆಗಳ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್ ತಯಾರಿಸಿ ಬಳಸುತ್ತಿದ್ದಾರೆ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಸಲಿ ಪತ್ರಕರ್ತರಿಗೂ ಇವರನ್ನು ಪತ್ತೆ ಮಾಡುವುದು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತವರಿಂದ ಪತ್ರಕರ್ತರ ಹೆಸರಿಗೆ ಮಸಿ ಬಳಿಯುವ ಕೃತ್ಯಗಳು ನಡೆಯುತ್ತಿದೆ ಅನ್ನೋದನ್ನು ಅಲ್ಲಗಳೆಯುವಂತಿಲ್ಲ.

ನಿನ್ನೆ ನಗರದ ರಾಷ್ಟ್ರಕವಿ ಗೋವಿಂದ ಪೈ ವೃತ್ತದ ಬಳಿ ನಡೆದ ಸರಣಿ ಅಪಘಾತ ಮಾಡಿದ ಕಾರಿನಲ್ಲಿ ನಕಲಿ ಐಡಿಯೊಂದು ಪತ್ತೆಯಾಗಿದೆ. ಅಪಘಾತವಾದ ತಕ್ಷಣವೇ ಕಾರಿನಿಂದ ಇಳಿದಿದ್ದ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರಿನಲ್ಲಿದ್ದ ಆತನ ಐಡಿ ಕಾರ್ಡ್ ಮೂಲಕ ಆತನ ಹೆಸರು ರಾಜಶೇಖರ್ ಎಂದು ಗುರುತಿಸಲಾಗಿದ್ದು, ಪ್ರತಿಷ್ಠಿತ ಮುದ್ರಣ ಸಂಸ್ಥೆಯಲ್ಲಿ ಉಪ ಸಂಪಾದಕ ಎಂದು ಐಡಿಯಲ್ಲಿ ನಮೂದಿಸಲಾಗಿದೆ.

ಆದ್ರೆ ಆ ಮುದ್ರಣ ಸಂಸ್ಥೆಯಲ್ಲಿ ಅಂತಹ ಹೆಸರಿನವರು ಯಾರೂ ಕೂಡಾ ಇಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಪತ್ರಕರ್ತರ ಹೆಸರು ದುರ್ಬಳಕೆ ತಡೆಯುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಮಪಮ್ ಅಗರ್ವಾಲ್ ಅವರನ್ನು ಭೇಟಿಯಾದ ಜಿಲ್ಲಾ ಪತ್ರಕರ್ತರ ಸಂಘದ ನಿಯೋಗ, ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ ತಡೆ ಮತ್ತು ಪತ್ರಕರ್ತರು ಸುಲಲಿತವಾಗಿ ಕರ್ತವ್ಯ ನಿರ್ವಹಿಸಲು ಭದ್ರತೆ ಖಾತ್ರಿಪಡಿಸುವಂತೆ ಮನವಿ ಸಲ್ಲಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page