Connect with us

LATEST NEWS

ಫ್ರೀ ಮೋಮೋಸ್‌ಗಾಗಿ ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕೊಟ್ಟ ಬಾಲಕ; ಆಮೇಲೇನಾಯ್ತು?

Published

on

ಮಂಗಳೂರು/ಉ.ಪ್ರ : ಮೋಮೋಸ್ ತಿನ್ನುವ ಆಸೆಗೆ ಬಾಲಕನೋರ್ವ ಮನೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ್ದಾನೆ. 85 ಲಕ್ಷ ರೂ. ಬೆಲೆ ಬಾಳುವ ಆಭರಣಗಳನ್ನು ಬೀದಿ ಬದಿ ವ್ಯಾಪಾರಿಗಳಿಗೆ ಕೊಟ್ಟಿದ್ದಾನೆ. ಈ ಘಟನೆ ನಡೆದಿರೋದು  ಉತ್ತರಪ್ರದೇಶದಲ್ಲಿ .

ವಾರಣಾಸಿಯ ದೇಗುಲದಲ್ಲಿ ವಿಮಲೇಶ್ ಮಿಶ್ರಾ ಎಂಬವರು ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಮಗ 7 ನೇ ತರಗತಿಯಲ್ಲಿ ಓದುತ್ತಿದ್ದ. ಆತನಿಗೆ ಮೋಮೋಸ್ ಅಂದ್ರೆ ಪಂಚಪ್ರಾಣ. ಇದನ್ನೇ ಖದೀಮರು ಬಂಡವಾಳವನ್ನಾಗಿಸಿಕೊಂಡಿದ್ದಾರೆ.  ಆತನಿಂದ 85 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣಗಳನ್ನು ಲಪಟಾಯಿಸಿದ್ದಾರೆ.

ಫ್ರೀ ಮೋಮೋಸ್‌ಗಾಗಿ ಚಿನ್ನ ಕೊಟ್ಟ  :

ದಿಯೋರಿಯಾ ನಗರದಲ್ಲಿ ಮೋಮೋಸ್ ಅಂಗಡಿಯೊಂದನ್ನು ಇಟ್ಟುಕೊಂಡಿದ್ದ ಮೂವರು ವ್ಯಾಪಾರಿಗಳು ನಿತ್ಯ ಬಾಲಕನ ಅಭ್ಯಾಸವನ್ನು ಗಮನಿಸುತ್ತಿದ್ದು, ಬಾಲಕನಿಗೆ ಮೋಮೋಸ್ ಆಮಿಷವೊಡ್ಡಿದ್ದಾರೆ. ಮನೆಯಲ್ಲಿರುವ ಎಲ್ಲಾ ಚಿನ್ನಾಭರಣ ತಂದುಕೊಟ್ಟರೆ, ಎಷ್ಟು ಬೇಕೋ ಅಷ್ಟು ಮೋಮೋಸ್ ಕೊಡುತ್ತೇವೆ ಎಂದಿದ್ದಾರೆ. ಇದನ್ನ ನಂಬಿದ ಬಾಲಕ ಮನೆಯ ಲಾಕರ್‌ನಲ್ಲಿದ್ದ ಚಿನ್ನವನ್ನು ಕದ್ದು ಹಂತ ಹಂತವಾಗಿ ವ್ಯಾಪಾರಿಗಳಿಗೆ ಕೊಟ್ಟಿದ್ದಾನೆ.  ವಿಮಲೇಶ್ ಕಬೋರ್ಡ್ ತೆರೆದಾಗ ಈ ವಿಚಾರ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ತಾಯಿ ಜೊತೆ ಓಡಿ ಹೋಗಿದ್ದಕ್ಕೆ 10 ವರ್ಷದ ನಂತರ ಸೇಡು: ವ್ಯಕ್ತಿಯ ಬರ್ಬರ ಹತ್ಯೆ

ಗಾಬರಿಗೊಂಡ ಮನೆಮಂದಿ ಬಾಲಕನನ್ನು ಪ್ರಶ್ನಿಸಿದಾಗ, ನಂಗೆ ಫ್ರೀಯಾಗಿ ಮೋಮೋಸ್ ಕೊಡುತ್ತೇನೆ ಅಂದ್ರು. ಹಾಗಾಗಿ ಚಿನ್ನವನ್ನು ಅಂಗಡಿಯವರಿಗೆ ಕೊಟ್ಟೆ ಎಂದು ಬಾಲಕ ಬಾಯಿಬಿಟ್ಟಿದ್ದಾನೆ. ಮನೆಯವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನಾಪತ್ತೆಯಾಗಿರುವ ಮೂವರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

DAKSHINA KANNADA

ಬಂಟ್ವಾಳ : ಹುಲ್ಲಿನಿಂದಾವೃತ ಜಾಗದಲ್ಲಿ ಆಕಸ್ಮಿಕ ಬೆಂ*ಕಿ

Published

on

ಬಂಟ್ವಾಳ : ಹುಲ್ಲಿನಿಂದಾವೃತವಾದ ಬಿ.ಸಿ.ರೋಡಿನ ಕೈಕಂಬದಲ್ಲಿರುವ ಖಾಸಗಿ  ಜಾಗವೊಂದರಲ್ಲಿ ಅ*ಗ್ನಿ ಆಕಸ್ಮಿಕ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ವ್ಯಾಪಿಸಿತು.

ಹುಲ್ಲಿನಿಂದಾವೃತ ಜಾಗದಲ್ಲಿ ಬೆಂ*ಕಿ ಕಾಣಿಸಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ. ಕೂಡಲೇ ಸ್ಥಳೀಯರು ಬಂಟ್ವಾಳದ ಅ*ಗ್ನಿಶಾಮಕದಳಕ್ಕೆ ಕರೆ ಮಾಡಿದ್ದು, ಈ ವೇಳೆ ಬಂಟ್ವಾಳದಲ್ಲಿದ್ದ ಏಕೈಕ ಅ*ಗ್ನಿಶಾಮಕ ವಾಹನ ಮಂಚಿಗೆ ಕರೆಯೊಂದರ ಮೇಲೆ ತೆರಳಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನಿಂದ ವಾಹನ ಆಗಮಿಸಿದ್ದು, ಅಷ್ಟರಲ್ಲಾಗಲೇ ಸ್ಥಳೀಯರು ನಂದಿಸುವ ಕಾರ್ಯ ಆರಂಭಿಸಿದ್ದರು.

ಈ ಜಾಗದ ಹಿಂಭಾಗ ಸಂಚಯಗಿರಿ ಬಡಾವಣೆ ಇದ್ದು, ಇಲ್ಲಿಯೂ ಕೆಲ ಭಾಗಕ್ಕೆ ಬೆಂ*ಕಿ ವ್ಯಾಪಿಸಿತ್ತು. ಗ್ರಾಮ ಆಡಳಿತಾಧಿಕಾರಿ ಯಶ್ವಿತಾ, ಸಿಬ್ಬಂದಿ ಸದಾಶಿವ ಕೈಕಂಬ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಜಾಗ ಖರೀದಿಸಿ ಖಾಲಿ ಬಿಟ್ಟುಬಿಡುವವರು ಜಾಗದಲ್ಲಿ ಹುಲ್ಲು ಬೆಳೆದು ಸಮೀಪದವರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ, ಅಗ್ನಿ ಆಕಸ್ಮಿಕದ ಸಂದರ್ಭ ಸ್ಥಳೀಯರು ಹರಸಾಹಸಪಡಬೇಕಾಗುತ್ತದೆ. ಈ ಕುರಿತು ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಈ ಸಂದರ್ಭ ಒತ್ತಾಯಿಸಿದರು.

Continue Reading

LATEST NEWS

ಮಗನೇ ಹೋದ ಮೇಲೆ ಕಾರು ಯಾಕೆ? 6 ಕೋಟಿಯ BMW ಸಮಾಧಿ ಮಾಡಿದ ತಂದೆ!

Published

on

ಮಾಸ್ಕೋ: ಮಗನ ಅಗಲಿಕೆಯ ದುಃಖವನ್ನು ತಾಳಲಾರದೆ, ಅಹಮದಾಬಾದ್‌ನ ತಂದೆಯೊಬ್ಬರು ಮಗನ ನೆನಪಿಗಾಗಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ BMW ಕಾರನ್ನು ಸಮಾಧಿ ಮಾಡಿದ್ದಾರೆ.


ತಂದೆಯು ಮಗನ ಹುಟ್ಟುಹಬ್ಬದ ಅಂಗವಾಗಿ ಈ ಐಷಾರಾಮಿ BMW ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಕಾರು ಖರೀದಿಸಿದ ಕೆಲವೇ ದಿನಗಳಲ್ಲಿ ಮಗ ಅಕಾಲಿಕ ಮರಣಕ್ಕೀಡಾದನು. ಇದರ ಪರಿಣಾಮ ಮಗ ಸಮಾಧಿ ಪಕ್ಕದಲ್ಲೇ ಹೊಸ BMW ಕಾರನ್ನು ಸಮಾಧಿ ಮಾಡಿದ ವೀಡಿಯೋ ವೈರಲ್‌ ಆಗುತ್ತಿದೆ.

ಮಗನೇ ಇಲ್ಲದ ಮೇಲೆ ಈ ಕಾರು ಏಕೆ ಎಂದು ನೊಂದ ತಂದೆ, ಅದನ್ನು ಗುಂಡಿ ತೋಡಿ ಸಮಾಧಿ ಮಾಡುವ ನಿರ್ಧಾರ ಮಾಡಿದರು. ಜೆಸಿಬಿ ಮೂಲಕ ಗುಂಡಿ ತೋಡಿ, ಬೆಲೆಬಾಳುವ ಕಾರನ್ನು ಮಗನ ಸಮಾಧಿಯ ಪಕ್ಕದಲ್ಲೇ ಹೂಳುತ್ತಿರುವ ವೀಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಪತ್ನಿ ತವರು ಮನೆಯಿಂದ ಬಂದಿಲ್ಲ ಎಂದು ಮಾವನನ್ನೇ ಕೊಂದ ಅಳಿಯ!

ಈ ಘಟನೆಗೆ ಸಂಬಂಧಿಸಿದಂತೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಇದು ತಂದೆಯ ಪ್ರೀತಿಯ ಸಂಕೇತ ಎಂದರೆ, ಮತ್ತೆ ಕೆಲವರು ಹಣವನ್ನು ದಾನ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.

Continue Reading

LATEST NEWS

ಕಾರಿನಲ್ಲಿ ಪತ್ತೆಯಾಯ್ತು ಪ್ರೇಮಿಗಳ ಶ*ವ!

Published

on

ಉತ್ತರ ಪ್ರದೇಶ/ಮಂಗಳೂರು : ಪ್ರೇಮಿಗಳ ದಿನದಂದೇ ದುರಂ*ತವೊಂದು ನಡೆದಿದೆ. ಕಾರಿನಲ್ಲಿ ಪ್ರೇಮಿಗಳ ಶ*ವ ಪತ್ತೆಯಾಗಿದೆ. ಈ ಘಟನೆ ನಡೆದಿರೋದು  ಉತ್ತರ ಪ್ರದೇಶದ ನೋಯ್ಡಾದಲ್ಲಿ. ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ನಿಲ್ಲಿಸಿದ್ದ ಕಾರಿನಲ್ಲಿ ಇಬ್ಬರ ಮೃ*ತದೇಹಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ತನಿಖೆ ನಡೆಸಿದ್ದು, ಇಬ್ಬರೂ ಗುಂಡು ಹಾ*ರಿಸಿಕೊಂಡು ಮೃ*ತಪಟ್ಟಿರುವುದು ದೃಢವಾಗಿದೆ.

ಇಬ್ಬರಿಗೂ ಗುಂ*ಡೇಟಿನ ಗಾ*ಯಗಳಾಗಿದ್ದು, ಮೃ*ತ ಯುವಕನ ಕೈಯಲ್ಲಿ ಪಿಸ್ತೂಲ್ ಪತ್ತೆಯಾಗಿದೆ. ಯುವಕ ಮೊದಲು ಯುವತಿಗೆ ಗುಂ* ಡು ಹಾ*ರಿಸಿ, ನಂತರ ತನ್ನ ಮೇಲೆಯೇ ಗುಂಡು ಹಾರಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಅಜ್ಜಿ ತಿಥಿಗೆ ಆಮೆ ಸಾರು ಮಾಡಲು ಹೋಗಿ ಸಿಕ್ಕಿ ಬಿದ್ದ ಖದೀಮರು

ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದ್ದು, ವಿಧಿವಿಜ್ಞಾನ ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

 

 

Continue Reading
Advertisement

Trending

Copyright © 2025 Namma Kudla News

You cannot copy content of this page