Connect with us

DAKSHINA KANNADA

ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Published

on

ಬಜಪೆ: ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯದಲ್ಲಿ ಸಂಘ, ಸಂಸ್ಥೆಗಳ ಸೇವೆ, ಒಂದೂವರೆ ವರ್ಷದಿಂದ ನಿರಂತರ ಭಜನ ಸೇವೆಯನ್ನು ಮಾಡುತ್ತಿರುವ ಭಜನ ಮಂಡಳಿಗಳ ಸೇವೆ ಶ್ಲಾಘನೀಯ. ದೇಗುಲಕ್ಕೆ ಬರುವ ಭಕ್ತರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸಲು ಹೆಚ್ಚು ಪ್ರಾಮುಖ್ಯತೆಯನ್ನು ನೀಡಬೇಕಾಗಿದೆ. ಮಹಿಳಾ ಸೇವಾ ಸಂಸ್ಥೆಗಳು ಇನ್ನೂ ಹೆಚ್ಚು ಭಾಗವಹಿಸಬೇಕಾಗಿದೆ. ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಗಳು ಭರದಿಂದ ಸಾಗುತ್ತಿದೆ ಎಂದು ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿ ಏತಮೊಗರು ದೊಡ್ಡಮನೆ ಹೇಳಿದರು.

ಅವರು ರವಿವಾರ ನಡೆದ ಮಾ.9 ರಿಂದ ಆರಂಭವಾಗುವ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಮಗ್ರ ಕಾರ್ಯದ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದರು. ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಸಲಹೆಗಾರ ರಮನಾಥ್ ಅತ್ತಾರ್ ಹೊರೆಕಾಣಿಕೆಯ ಬಗ್ಗೆ ಮಾಹಿತಿ ನೀಡಿದರು.

ಸಂಘಟನ ಕಾರ್ಯದರ್ಶಿ ಭುಜಂಗ ಕುಲಾಲ್ ವಿವಿಧ ಸಮಿತಿಯ ಜವಾಬ್ದಾರಿಯ ಹಾಗೂ ಕಾರ್ಯಗಳ ಬಗ್ಗೆ ಮಾಹಿತಿ ನೀಡಿ, ಸಮಿತಿಗಳು ಒಟ್ಟು ಸೇರಿ ಅವರ ಕಾರ್ಯಗಳ ಬಗ್ಗೆ ಸಭೆ ನಡೆಸಿ, ಮಾಹಿತಿಗಳನ್ನು ನೀಡಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ವಸಂತ ಕೆ. ಆಮಂತ್ರಣ ಪತ್ರಿಕೆಯನ್ನು ಬೈಲು ಮಾಗಣೆಯಲ್ಲದೇ ಪರಿಸರದ 30 ಗ್ರಾಮಗಳಿಗೆ ತಲುಪಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಶೇ.75 ಕಾರ್ಯರೂಪಕ್ಕೆ ಬಂದಿದೆ. ಹಿರಿಯರು ಹೆಚ್ಚಿನ ಗಮನ ನೀಡಿ, ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.

ದೇಗುಲದ ರಕ್ಷಕ ಮನೆತನದ ಅಶ್ವಿನಿ ಬಲ್ಲಾಳ್, ರಂಗನಾಥ ಹೆಗ್ಡೆ ಅದ್ಯಪಾಡಿಗುತ್ತು, ಬಾಲಕೃಷ್ಣ ರೈ ಕೊಳಂಬೆಗುತ್ತು, ಜೀರ್ಣೋದ್ಧಾರ ಸಮಿತಿಯ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರಿಪ್ರಸಾದ್ ರೈ ಬೆಳ್ಳಿಪಾಡಿ, ಶೆಡ್ಡೆ ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ವೇಣುಗೋಪಾಲ ಮೂಡುಶೆಡ್ಡೆ ಗುತ್ತು, ಶಿವರಾಮ್ ಮಲ್ಲಿ ಮೂಡುಶೆಡ್ಡೆ, ರಾಜೀವ ಶೆಟ್ಟಿ ಸಲ್ಲಾಜೆ, ಯತಿರಾಜ್ ಆಳ್ವ, ಭುಜಂಗ ಶೆಟ್ಟಿ ಜಪ್ಪುಗುಡ್ಡೆಗುತ್ತು, ರಾಜೀವ ಶೆಟ್ಟಿ ಸಲ್ಲಾಜೆ, ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

ಸತೀಶ್ ಶೆಟ್ಟಿ ಕಂದಾವರ ಕಾರ್ಯಕ್ರಮ ನಿರೂಪಿಸಿದರು. ಸುಕೇಶ್ ಮಾಣೈ ವಂದಿಸಿದರು.

DAKSHINA KANNADA

2024-25ರ ಆರ್ಥಿಕ ವರ್ಷದಲ್ಲಿ ಎಂಆರ್‌ಪಿಎಲ್‌ಗೆ 371 ಕೋಟಿ ರೂ. ಲಾಭ

Published

on

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೊ ಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್‌) ಕಂಪನಿಯು 2024-25ನೇ ಹಣಕಾಸು ವರ್ಷದ ತ್ರೈಮಾಸಿಕ ಲಾಭದ ಪ್ರಮಾಣ ಶೇ.20ರಷ್ಟು ಏರಿಕೆ ಕಂಡಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಸಂಸ್ಥೆ 371 ಕೋಟಿ ರೂ. ಲಾಭ ಗಳಿಸಿದೆ.

ಶನಿವಾರ ನಡೆದ ಕಂಪನಿಯ ಆಡಳಿತ ಮಂಡಳಿಯ ಸಭೆಯಲ್ಲಿ ನಾಲ್ಕನೇ ತ್ರೈಮಾಸಿಕದ ವರದಿಗೆ ಅನುಮೋದನೆ ನೀಡಲಾಯಿತು.

ಸಂಸ್ಕರಣಾಗಾರದ ಕಾರ್ಯಾಚರಣೆಯಿಂದ ನಿವ್ವಳ ಆದಾಯವು ಶೇ.12.5ರಷ್ಟು ಏರಿಕೆಯಾಗಿ 24,596ಕ್ಕೆ ತಲುಪಿದೆ. 2025ನೇ ಹಣಕಾಸು ವರ್ಷದಲ್ಲಿ ಪ್ರತಿ ಬ್ಯಾರೆಲ್‌ಗೆ 4.45 ಡಾಲರ್ ಒಟ್ಟು ಸಂಸ್ಕರಣಾ ಲಾಭಾಂಶ ಗಳಿಸಿದೆ. ಕಳೆದ ವರ್ಷ ಇದು ಪ್ರತಿ ಬ್ಯಾರೆಲ್ ಕಚ್ಛಾ ತೈಲಕ್ಕೆ 10.36 ಡಾಲರ್ ಕಡಿಮೆಯಾಗಿತ್ತು.

ಇದನ್ನೂ ಓದಿ: ಎಂಆರ್‌ಪಿಎಲ್‌ 2ನೇ ತ್ತೈಮಾಸಿಕ ಅವಧಿ ಫಲಿತಾಂಶ; ನಷ್ಟ ಎಷ್ಟು ಗೊತ್ತಾ ?

ಅಲ್ಲದೆ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ (ONGC) ಅಂಗಸಂಸ್ಥೆಯಾಗಿರುವ ಈ ಸಂಸ್ಥೆಯು, ನಾಲ್ಕನೇ ತ್ರೈಮಾಸಿಕದಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲವನ್ನು ಇಂಧನವಾಗಿ ಪರಿವರ್ತಿಸುವ ಮೂಲಕ 6.23 ಡಾಲರ್ ಗಳಿಸಿದೆ. ಕಳೆದ ವರ್ಷ ಪ್ರತಿ ಬ್ಯಾರಲ್‌ಗೆ 11.35 ಡಾಲರ್ ಆಗಿತ್ತು.

ಪ್ರಸಕ್ತ ವರ್ಷದಲ್ಲಿ ಹೊಸದಾಗಿ 66 ಪೆಟ್ರೋಲ್ ಪಂಪ್‌ಗಳನ್ನು ಸ್ಥಾಪಿಸಲಾಗಿದ್ದು, ಒಟ್ಟು ಈ ಸಂಸ್ಥೆಯ ಪೆಟ್ರೋಲ್ ಪಂಪ್‌ಗಳ ಸಂಖ್ಯೆ 167ಕ್ಕೆ ತಲುಪಿದೆ.

Continue Reading

DAKSHINA KANNADA

ಮನೆಗೆ ನುಗ್ಗಿ ತಲ್ವಾರ್ ಹಿಡಿದು ಬೆ*ದರಿಕೆ ಆರೋಪ; ಹಸಂತಡ್ಕ ವಿರುದ್ಧ FIR

Published

on

ಮಂಗಳೂರು : ವಿಶ್ವ ಹಿಂದೂ ಪರಿಷತ್ ರಾಜ್ಯ ನಾಯಕ ಮುರಳಿ ಕೃಷ್ಣ ಹಸಂತಡ್ಕ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಎಫ್‌ ಐ ಆರ್ ದಾಖಲಾಗಿದೆ. ಹಿಂದೂ ಮಹಿಳೆಯೊಬ್ಬರು ಒಂಟಿಯಾಗಿದ್ದ ಸಂದರ್ಭದಲ್ಲಿ ತ*ಲ್ವಾರು ಹಿಡಿದು ಮನೆಗೆ ನುಗ್ಗಿ ಬೆ*ದರಿಕೆ ಹಾಕಿದ ವಿಚಾರವಾಗಿ ಈ ಎಫ್ ಐ ಆರ್ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಹರೀಶ್ ಎಂಬವರು ನೀಡಿದ ದೂರಿನಂತೆ ನ್ಯಾಯಾಲಯದ ಆದೇಶ ಪ್ರಕಾರವಾಗಿ ವಿಟ್ಲ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ. ಏಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ಮನೆಗೆ ಪ್ರವೇಶ ಮಾಡಿ ಬೆದರಿಕೆ ಹಾಕಿದ್ದೂ ಅಲ್ಲದೆ ಏಪ್ರಿಲ್ 19 ರಂದು ಕೂಡ ದಂಪತಿಗೆ ತಲ್ವಾರ್ ಹಿಡಿದು ಬೆದರಿಕೆ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ : ಹೆಬ್ರಿ : ಕಾಲು ಜಾರಿ ನದಿಗೆ ಬಿದ್ದು ಯುವಕ ಸಾ*ವು

ವ್ಯವಹಾರದ ವಿಚಾರವಾಗಿ ಈ ಪ್ರಕರಣ ನಡೆದಿದ್ದು, ಸಾರಡ್ಕ ಪೆಟ್ರೋಲ್ ಪಂಪ್ ಬಿಟ್ಟು ಕೊಡುವ ವಿಚಾರವಾಗಿ ಹಸಂತಡ್ಕ ಈ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹರೀಶ್ ಪತ್ನಿ ಶ್ರೀದೇವಿ ಹಾಗೂ ಮುರಳೀಕೃಷ್ಣ ಹಸಂತಡ್ಕ ಸಾರಡ್ಕದ ಪೆಟ್ರೋಲ್ ಪಂಪ್‌ ನಲ್ಲಿ ಪಾಲುದಾರಿಕೆ ಹೊಂದಿದ್ದು, ಪಾಲುದಾರಿಕೆ ಬಿಟ್ಟುಕೊಡುವ ವಿಚಾರವಾಗಿ ಈ ಪ್ರಕರಣ ನಡೆದಿದೆ ಎನ್ನಲಾಗಿದೆ.

 

Continue Reading

DAKSHINA KANNADA

ಬೆಳ್ಳಿ ಪರದೆ ಮೇಲೆ ರಾರಾಜಿಸಿದ ಯಕ್ಷಗಾನ ; ‘ವೀರ ಚಂದ್ರಹಾಸ’ ನ ಅಬ್ಬರಕ್ಕೆ ಎಲ್ಲರೂ ಫಿದಾ ..!

Published

on

ಉಡುಪಿ : ಕರಾವಳಿಯ ಗಂಡುಗಲೆ ಯಕ್ಷಗಾನ .. ಈ ಕಲೆ ಸಿನಿ ಪರದೆಗೆ ಎಂಟ್ರಿ ಕೊಟ್ರೆ ಹೇಗಿರುತ್ತೆ ಅಲ್ವಾ ..? ಅಬ್ಬಾ ..! ಊಹೆಯೇ ಎಷ್ಟೊಂದು ಸುಂದರವಾಗಿದೆ. ಆದರೆ ಇದೀಗ ಈ ಊಹೆ ವಾಸ್ತವಕ್ಕೆ ತಿರುಗಿದೆ. ಹೌದು ..! ಸಿನೆಮಾ ರಂಗದ ಇತಿಹಾಸದಲ್ಲಿಯೇ ಮೊದಲ ಬಾರಿಗೆ  ಕರಾವಳಿ ಕರ್ನಾಟಕದ ಹೆಮ್ಮೆಯ ಯಕ್ಷಗಾನ ಕಲೆ ಬೆಳ್ಳಿತೆರೆಯಲ್ಲಿ ಮೂಡಿ ಬಂದಿದೆ. ಅದು ಯಾವ ಸಿನಿಮಾ ಗೊತ್ತಾ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

 “ಬಾಹುಬಲಿಯನ್ನು ಮೀರಿಸುವ ಎಲ್ಲಾ ಲಕ್ಷಣ ಈ ಸಿನೆಮಾ ಹೊಂದಿದ್ದು, ಕೇವಲ ಯಕ್ಷಗಾನ ಮಾತ್ರವಲ್ಲದೆ ಕಲಾವಿದರ ಬದುಕು ಕೂಡಾ ಅನಾವರಣ ಮಾಡಲಾಗಿದೆ. 1500 ಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಯಕ್ಷಗಾನ ಕಲೆಯನ್ನು ವಿಜ್ರಂಭಣೆಯಿಂದ ವಿಶ್ವದ ಮುಂದೆ ಮೆರೆಸುವ ಒಂದು ಪ್ರಯತ್ನ ಇದಾಗಿದೆ. ಖ್ಯಾತ ನಟ ಶಿವರಾಜ್ ಕುಮಾರ್ ಸೇರಿದಂತೆ 900 ಕಲಾವಿದರು ಸಿನೆಮಾದಲ್ಲಿ ನಟಿಸಿದ್ದಾರೆ” ಎಂದು ನಿರ್ದೆಶಕ ರವಿ ಬಸ್ರೂರು ಹೇಳಿದ್ದಾರೆ.

‘ವೀರ ಚಂದ್ರಹಾಸ’ ಎಂಬ ನಾಮದೊಂದಿಗೆ ಏ.18 ರಂದು ಯಕ್ಷಗಾನ ಆಧಾರಿತ ಸಿನಿಮಾ ಬೆಳ್ಳಿ ಪರದೆಯಲ್ಲಿ ಮೂಡಿ ಬಂದಿದೆ. ಹನ್ನೆರಡು ವರ್ಷಗಳಿಂದ ಯಕ್ಷಗಾನವನ್ನು ಬೆಳ್ಳಿತೆರೆಗೆ ತರಬೇಕು ಎಂಬ ರವಿ ಬಸ್ರೂರು ಅವರ ಪ್ರಯತ್ನ ಕೊನೆಗೂ ಈಡೇರಿದೆ. “ಅದ್ಭುತ ಜ್ಞಾನ ಭಂಡಾರ ಹೊಂದಿರುವ ಯಕ್ಷಗಾನವನ್ನು ಬೆಳ್ಳಿ ಪರದೆ ಮೇಲೆ ಒಂದು ಸಿನೆಮಾವಾಗಿ ವೀಕ್ಷಿಸದ ನಮ್ಮ ಹೆಮ್ಮೆಯ ಕಲೆ ಎಂಬ ದೃಷ್ಟಿಕೋನದಲ್ಲೇ ವೀಕ್ಷಿಸಬೇಕು” ಎಂದು ನಿರ್ದೆಶಕರು ಮನವಿ ಮಾಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page