Connect with us

BANTWAL

ಬಂಟ್ವಾಳ ಬಿಜೆಪಿ ಕಾರ್ಯಕರ್ತನ ಕೊಲೆ ಯತ್ನ ಪ್ರಕರಣ : ಮೂವರು ಆರೋಪಿಗಳ ಬಂಧನ

Published

on


ಬಂಟ್ವಾಳ ಬಿಜೆಪಿ ಕಾರ್ಯಕರ್ತನ ಕೊಲೆ ಯತ್ನ ಪ್ರಕರಣ : ಮೂವರು ಆರೋಪಿಗಳ ಬಂಧನ

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿನ ಫೋಟೋಗ್ರಾಫರ್ ಹಾಗೂ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ನಿನ್ನೆ ರಾತ್ರಿ ನಡೆದ ಮಾರಣಾಂತಿಕ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನೋರ್ವ ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಬಂಧಿತ ಆರೋಪಿಗಳನ್ನು ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್ (19), ಅಬ್ದುಲ್ ರೆಹಮಾನ್ (22) ಮತ್ತು ಮಹಮ್ಮದ್ ಸೈಪುದ್ದೀನ್ (22) ಎಂದು ಗುರುತ್ತಿಸಲಾಗಿದೆ.

ಮತ್ತೋರ್ವ ಆರೋಪಿ ಸವಾದ ನ ಬಂದನಕ್ಕೆ ಕಾರ್ಯಾಚರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಫ‌ರಂಗಿಪೇಟೆಯಲ್ಲಿ ನಿನ್ನೆ ರಾತ್ರಿ 7.45ರ ಸುಮಾರಿಗೆ ಈ ಘಟನೆ ನಡೆದಿತ್ತು.

ಪುದು ಗ್ರಾಮದ ಕೊಟ್ಟಿಂಜ ನಿವಾಸಿ ದಿನೇಶ್‌ ಶೆಟ್ಟಿ ಎಂಬವರ ಸ್ಟುಡಿಯೋಕ್ಕೆ ಫೊಟೊ ತೆಗೆಸುವ ನೆಪದಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸ್ಟುಡಿಯೋಗೆ ನುಗ್ಗಿ ಅವರ ಮೇಲೆ ಚೂರಿಯಿಂದ ಮಾರಣಾಂತಿಕ ಹಲ್ಲೆ ನಡೆಸಿತ್ತು.

ನಾಲ್ಕು ಮಂದಿಯ ತಂಡ ದಾಳಿ ನಡೆಸಿದ್ದು, ಕತ್ತಿಯಿಂದ ದಿನೇಶ್ ಶೆಟ್ಟಿಯವರ ತಲೆಗೆ, ಬಲ ಕೈಗೆ ಹಾಗೂ ಕಿಬ್ಬೊಟ್ಟೆಗೆ ಇರಿದಿದ್ದರು.

ಆ ವೇಳೆಯಲ್ಲಿ ಅಲ್ಲಿದ್ದ ಶೇಖರ ಪೂಜಾರಿ ರವರು ಹಲ್ಲೆಯಾಗುವುದನ್ನು ತಪ್ಪಿಸಲು ಅಲ್ಲೇ ಇದ್ದ ಸ್ಟೀಲ್ ಕುರ್ಚಿಯಿಂದ ದುಷ್ಕರ್ಮಿಗಳ ಮೇಲೆ ಪ್ರತಿದಾಳಿ ಮಾಡಿದ್ದಾರೆ. ಈ ವೇಳೆ ಆರೋಪಿಗಳು ದಿನೇಶರನ್ನು ಪರಾರಿಯಾಗಿದ್ದರು.

ಈ ಮಧ್ಯೆ ತೀವ್ರ ಹಲ್ಲೆಗೊಳಗಾದ ದಿನೇಶ್ ಕೊಟ್ಟಿಂಜಗೆ ಮಂಗಳೂರು ಖಾಸಾಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.

ದಿನೇಶ್ ಅವರ ಹೊಟ್ಟೆ ಕೈಗೆ ಮತ್ತು ತಲೆಗೆ ತೀವ್ರ ತೆರನಾದ ಗಾಯಗಳಾಗಿವೆ,.

ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಮಾತುಕತೆ ನಡೆಸಿ ಸೂಕ್ತ ಚಿಕಿತ್ಸೆ ಸಿಗುವಂತೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ.

ಬಳಿಕ ಉನ್ನತ ಪೊಲೀಸ್ ಅಧಿಕಾರಿಗಳೊಡನೆ ಮಾತನಾಡಿ ಈ ದುರ್ಘಟನೆಗೆ ಕಾರಣರಾದ ಹಲ್ಲೆಕೋರರನ್ನು ತಕ್ಷಣ ಬಂಧಿಸುವಂತೆ ಸೂಚಿಸಿದ್ದಾರೆ.

ರಾಜ್ಯದ ಗೃಹಸಚಿವರಾದ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಡಾ.ಭರತ್ ಶೆಟ್ಟಿಯವರು ದಕ್ಷಿಣ ಕನ್ನಡದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡಲು ಮತೀಯ ಶಕ್ತಿಗಳು ಪ್ರಯತ್ನಿಸುತ್ತಿದ್ದು, ಪೊಲೀಸ್ ಇಲಾಖೆಗೆ ಸೂಕ್ತ ಕ್ರಮ ಕೈಗೊಳ್ಳಲು ಆದೇಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಆಸ್ಪತ್ರೆಗೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ, ಜಿಲ್ಲಾ ಉಪಾಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್, ಮಂಗಳೂರು ವಿಧಾನಸಭಾ ಕ್ಷೇತ್ರದ ಭಾಜಪಾ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್, ಬಿಜೆಪಿ ಮುಖಂಡ ಸತೀಶ್ ಕುಂಪಲ ಹಾಗೂ ಅನೇಕ ಕಾರ್ಯಕರ್ತರು ಭೇಟಿ ನೀಡಿದರು.

BANTWAL

ಬಂಟ್ವಾಳದ ಯುವಕ ಚೆನ್ನರಾಯಪಟ್ಟಣದಲ್ಲಿ ರೈಲಿನಿಂದ ಬಿದ್ದು ಸಾವು

Published

on

ಬಂಟ್ವಾಳ: ಬಂಟ್ವಾಳ ಮೂಲದ ಯುವಕನೋರ್ವ ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಪುಣಚ ಗ್ರಾಮದ ದೇವಿನಗರ ನಿವಾಸಿ 25 ವರ್ಷ ಪ್ರಾಯದ ನಿಶಿತ್ ನಾಯ್ಕ್ ಮೃತ ಯುವಕನಾಗಿರುತ್ತಾನೆ.


ನಿಶಿತ್ ಅವರು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಮುಗಿಸಿ ಬೆಂಗಳೂರಿನ ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಊರಿಗೆ ರೈಲಿನಲ್ಲಿ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ, ಹಣ ಪಡೆದು ಪರಾರಿಯಾಗುತ್ತಿದ್ದ ಆರೋಪಿಗಳ ಬಂಧನ

ನಿಶಿತ್ ಅವರು ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರರಾಗಿಯೂ ಗುರುತಿಸಿಕೊಂಡಿದ್ದರು. ಮನೆಗೆ ಬರಲು ಸೋಮವಾರ ರಾತ್ರಿ ಬೆಂಗಳೂರಿನಿಂದ ಟ್ರೈನ್ ಹಿಡಿದಿದ್ದರು. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಅವರು ಮುಂಜಾನೆ ಸುಮಾರು 2.30ರ ಹೊತ್ತಿಗೆ ರೈಲಿನಿಂದ ಎಸೆಯಲ್ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Continue Reading

BANTWAL

ವಿಟ್ಲ: ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಮಹಿಳೆ

Published

on

ವಿಟ್ಲ: ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ. 68 ವರ್ಷದ ವಿಟ್ಲ ಮುಳ್ಳೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ ಮೃತ ಮಹಿಳೆ.


ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬೈಕ್ ಸವಾರ ಪುತ್ತೂರು ಮೂಲದವರು ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್ ಸುಮಾರು 50 ಮೀಟರ್ ದೂರ ಬಿದ್ದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉಳ್ಳಾಲ: ಎಮ್ ಡಿಎಮ್ ಎ ಮಾರಾಟ ಪ್ರಕರಣ: ಆರೋಪಿ ಬಂಧನ

ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನನ್ನು ಯಾರೂ ಮುಟ್ಟದೆ ಇದ್ದ ಸಂದರ್ಭ ಕಾಶಿಮಠ ನಿವಾಸಿ ಪ್ರತಾಪ್ ಅವರು ಮಾನವೀಯತೆ ಮೆರೆದಿದ್ದು, ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ. ಮೃತ ಸೀತಾ ಶೆಟ್ಟಿ ಅವರು ಪುತ್ರ ರೂಪೇಶ್ ಹಾಗೂ ಪುತ್ರಿ ರೂಪಿತಾರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Continue Reading

BANTWAL

ಇಂದಿನಿಂದ ಫೆ. 10ರ ತನಕ ಸಸಿಹಿತ್ಲು ಸಾರಂತಾಯ ದೈವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ

Published

on

ಮೂಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವಕ್ಕೆ ಕ್ಷೇತ್ರ ಸಜ್ಜಾಗಿ ನಿಂತಿದೆ.


ಇಂದಿನಿಂದ ಮೊದಲ್ಗೊಂಡು ಫೆಬ್ರವರಿ 10 ರ ತನಕ ನಿರಂತರ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಸಿ. ಬಿ. ಕರ್ಕೇರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಸುಮಾರು 3.5 ಕೋಟಿ ರೂಪಾಯಿ ವೆಚ್ಚದಲ್ಲಿ ದೈವಸ್ಥಾನ ಭವ್ಯ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದೆ. ಶ್ರೀ ಉಳ್ಳಾಯ ಮತ್ತು ಪರಿವಾರ ಶಕ್ತಿಗಳಿಗೆ ಪ್ರಧಾನಗೊಂಡ ಕಾಂತಾಬಾರೆ ಬೂದಾಬಾರೆ ಮತ್ತು ಮಾಯಂದಾಲ್ ದೈವಕ್ಕೆ ಪ್ರತ್ಯೇಕ ಗುಡಿ ನಿರ್ಮಿಸಲಾಗಿದ್ದು, ದೈವಸ್ಥಾನದ ಪ್ರಧಾನ ಗೋಪುರವನ್ನು ನವೀಕರಿಸಲಾಗಿದೆ.

ಇದನ್ನೂ ಓದಿ: ಫೆ.7-8 ರಂದು ಈಶ್ವರ ಮಲ್ಪೆ ತಂಡದಿಂದ ಉಚಿತ ಶ್ರವಣ ತಪಾಸಣಾ ಶಿಬಿರ

ಹಳೆಯಂಗಡಿಯ ವೇದಮೂರ್ತಿ ಎಚ್. ರಂಗನಾಥ ಭಟ್ ನೇತೃತ್ವದಲ್ಲಿ ಏಳು ದಿನಗಳ ಕಾಲ ನಿರಂತರ ವೈದಿಕ ವಿಧಿ ವಿಧಾನಗಳು ನಡೆಯಲಿವೆ. ಬ್ರಹ್ಮಕಲಶೋತ್ಸವ ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದರು. ಸುದ್ದಿಗೋಷ್ಟಿಯಲ್ಲಿ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದ ಗೌರವ ಸಲಹೆಗಾರ ಚಂದ್ರಶೇಖರ ನಾನಿಲ್, ಮುಂಬೈ ಸಮಿತಿಯ ಅಧ್ಯಕ್ಷ ಸತೀಶ್ ಎನ್ ಕೋಟ್ಯಾನ್ ಮತ್ತಿತರರು ಇದ್ದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page