Connect with us

DAKSHINA KANNADA

 ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್​ಡೌನ್ ಮುಂದುವರಿಕೆ : ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಸಿಎಂ..!

Published

on

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್​ಡೌನ್ ಮುಂದುವರಿಕೆ ಮಾಡಿ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿದರು.

ಜೂನ್ 14ರವರೆಗೆ ಯಥಾವತ್ತಾಗಿ ಲಾಕ್​ಡೌನ್ ಜಾರಿಯಲ್ಲಿರಲಿದೆ. ಹೋಟೆಲ್​ಗಳಿಗೆ ಪಾರ್ಸೆಲ್​ಗೆ ಮಾತ್ರ ಅವಕಾಶ ಜೂನ್ 14ರವರೆಗೆ ಲಾಕ್​ಡೌನ್​ ನಿಯಮಗಳಲ್ಲಿ ಬದಲಾವಣೆ ಇಲ್ಲ. ಹೋಟೆಲ್​ಗಳು ಸಂಜೆಯವರೆಗೂ ತೆರೆಯಬಹುದು.

ಆದರೆ ಹೋಟೆಲ್​ಗಳಲ್ಲಿ ಪಾರ್ಸೆಲ್​ಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅವರು ತಿಳಿಸಿದರು. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ಮೀನುಗಾರರಿಕೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ.

ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​, ತಲಾ 3000 ದಂತೆ ಮಗ್ಗಗಳ ಕಾರ್ಮಿಕರಿಗೆ ಪರಿಹಾರ, ಚಲನಚಿತ್ರ, ದೂರದರ್ಶನ ಕಲಾವಿದರಿಗೆ ತಲಾ ₹3000, ಮೀನುಗಾರರಿಗೆ ತಲಾ 3000 ರೂ, ಅರ್ಚಕರು, ಅಡುಗೆ ಕೆಲಸಗಾರರಿಗೆ ತಲಾ ₹3000, ಆಶಾ ಕಾರ್ಯಕರ್ತೆಯರಿಗೂ ತಲಾ ತಲಾ ₹3000, ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ತಲಾ ₹2000,ಪ್ರಾಥಮಿಕ ಅನುದಾನರಹಿತ ಶಿಕ್ಷಕರಿಗೆ ತಲಾ 5000 ರೂ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದರು.

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಪ್ರಭುದೇವ

Published

on

ಕಡಬ : ಇತ್ತೀಚೆಗೆ ಕರಾವಳಿಯ ದೇಗುಲಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇಂದು (ಮಾ.15) ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪತ್ನಿ ಹಾಗೂ ಕುಟುಂಬ ವರ್ಗದವರ ಜೊತೆಗೂಡಿ ಆಗಮಿಸಿದ್ದ ಪ್ರಭುದೇವ ಮಹಾಭಿಷೇಕ ಪೂಜೆಯನ್ನು ನೆರವೇರಿಸಿ, ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ : “ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

ಈ ಸಂದರ್ಭ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ  ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

“ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

Published

on

ಮಂಗಳೂರು: ಕರ್ನಾಟಕದ ಜಾದೂ ಕಲಾವಿದ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಗೆ ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

ಈ ಪ್ರಶಸ್ತಿಯು ಭಾರತದ ಅಗ್ರಗಣ್ಯ ಜಾದೂಗಾರ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ-ವಿದೇಶದ ಹತ್ತು ಜಾದೂ ಸಾಧಕರಿಗೆ ಪ್ರಶಸ್ತಿಯನ್ನು ನೀಡಿದೆ. ವಿಶಾಖಪಟ್ಟಣದ ಲೋಕಸಭಾ ಸದಸ್ಯ ಭರತ್ ಮುತ್ತುಕುಮುಲಿ ಅವರು ಕುದ್ರೋಳಿ ಗಣೇಶ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್, ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೋಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ಧಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ ಎಂದರು.

ಕುದ್ರೋಳಿ ಗಣೇಶ್ ಅವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು, ದೇಶದಾದ್ಯಂತ ಹಾಗೂ ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ.

Continue Reading

DAKSHINA KANNADA

ಅಕ್ರಮ ಗೋ ಸಾಗಾಟ; ಸ್ಕೂಟರ್ ಬಿಟ್ಟು ಆರೋಪಿ ಪರಾರಿ

Published

on

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಇಂದು (ಮಾ.15) ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ.

ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್‌ನಲ್ಲಿದ್ದ 100ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸ್ಕೂಟ‌ರ್ ಸವಾರ ಗಾಡಿ ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಬಳಿಕ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page