Connect with us

LATEST NEWS

ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರ ಕೈಚಳಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Published

on

ಪಡುಬಿದ್ರಿ: ಪಡುಬಿದ್ರಿ ಕಾಮತ್ ಪೆಟ್ರೋಲ್ ಬಂಕ್ ಬಳಿಯ ಮನೆಯೊಂದಕ್ಕೆ ಮುಂದಿನ ಬಾಗಿಲು ಮುರಿದು ನುಗ್ಗಿದ ಕಳ್ಳರು ಚಿನ್ನದ ಸರ ಸಹಿತ ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿ ಕದ್ದು ಪರಾರಿಯಾಗಿದ್ದು, ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.


ಗಣೇಶ್ ಶೆಟ್ಟಿ ಕುಟುಂಬ ಭಾನುವಾರ ಮಧ್ಯಾಹ್ನ ಮನೆಗೆ ಬೀಗ ಹಾಕಿ ಮಂಗಳೂರಿನ ಸಂಬಂಧಿಗಳ ಮನೆಗೆ ಹೋಗಿದ್ದು, ರಾತ್ರಿ ಸುಮಾರು 9:30ರ ಸುಮಾರಿಗೆ ಮರಳಿದಾಗ ಮನೆಯ ಮುಂಭಾಗದ ಬಾಗಿಲು ತೆರೆದಿದ್ದು ಒಳಗೆ ಹೋದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಕಪಾಟಿನಲ್ಲಿದ್ದ ಎಂಟು ಗ್ರಾಂ. ತೂಕದ ಚಿನ್ನದ ಸರ ಹಾಗೂ ಒಂದು ಲಕ್ಷದ ಇಪ್ಪತ್ತು ಸಾವಿರ ರೂಪಾಯಿ ನಾಪತ್ತೆಯಾಗಿದೆ.

ಕಳ್ಳತನದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆ
ಸಿಸಿ ಕ್ಯಾಮಾರದಲ್ಲಿ ಹಚ್ಚಾದ ದಾಖಲೆ ಪರಿಶೀಲನೆ ನಡೆಸಿದಾಗ ರಾತ್ರಿ ಎಂಟುವರೆ ಸುಮಾರಿ ಕಳ್ಳರಿಬ್ಬರು ಮುಖವನ್ನು ಬಟ್ಟೆಯಲ್ಲಿ ಮುಚ್ಚಿಕೊಂಡು ಬಂದು ಎರಡು ಉಕ್ಕಿನ ಸಲಾಖೆಯ ಮೂಲಕ ಬಾಗಿಲ ಚಿಲಕವನ್ನು ಮುರಿದು ಒಳನುಗ್ಗಿದ ದೃಶ್ಯ ಹಚ್ಚಾಗಿದೆ.

ಚಲನ-ವಲನ ಗಮನಿಸುತ್ತಿದ್ದವರ ಕೃತ್ಯ!
ಮನೆಯಲ್ಲಿ ಯಾರೂ ಇಲ್ಲದೇ ಇರುವುದನ್ನು ದೃಢಪಡಿಸಿಕೊಂಡೇ ಈ ಕೃತ್ಯ ನಡೆಸಿರುವುದು ಕಳ್ಳರ ನಡವಳಿಕೆಯಿಂದ ತಿಳಿಯಬಹುದಾಗಿದೆ. ಯಾವುದೇ ಅಂಜಿಕೆ- ಹೆದರಿಕೆ ಇಲ್ಲದೆ, ತಾವು ಇಟ್ಟಿರುವ ವಸ್ತುಗಳನ್ನು ಪಡೆಯಲು ಬಂದವರಂತೆ ಬಂದಿರುವುದು ಸಂಶಯಕ್ಕೆ ಪುಷ್ಠಿ ನೀಡಿದೆ.

ಐದು ಪವಾನ್ ಚಿನ್ನದ ಸರ ಉಳಿಯಿತು!
ಕಳ್ಳತನವಾದ ಚಿನ್ನದೊಂದಿಗೆ ಮನೆ ಮಾಲೀಕ ಗಣೇಶ್ ಶೆಟ್ಟಿಯವರ ಐದು ಪವಾನ್ ತೂಕದ ಚಿನ್ನದ ಸರವೂ ಇತ್ತು. ಮಂಗಳೂರಿಗೆ ಹೊರಟು ಅಂಗಳಕ್ಕೆ ಬಂದ ಅವರಿಗೆ ಏನನ್ನಿಸಿತ್ತೋ ಏನೋ ಮನೆಯೊಳಗೆ ಹೋದವರೆ ತನ್ನ ಚಿನ್ನದ ಸರವನ್ನು ಧರಿಸಿಕೊಂಡು ಹೋಗಿದ್ದರಿಂದ ಅದೃಷ್ಟವಶಾತ್ ಅದು ಉಳಿಯಿತು ಎಂದು ಗಣೇಶ್ ಶೆಟ್ಟಿಯವರು ಹೇಳಿದ್ದಾರೆ.

ಇಂಟರ್ ನೆಟ್ ಸಂಪರ್ಕ ಕಡಿತ
ಮಂಗಳೂರಿನ ಮನೆಯಲ್ಲಿದ್ದುಕೊಂಡೇ ತನ್ನ ಮನೆಯ ಸಿಸಿ ಕ್ಯಾಮರಾವನ್ನು ಗಮನಿಸುತ್ತಿದ್ದರು. ಸುಮಾರು ಎಂಟು ಇಪ್ಪತ್ತರ ಸುಮಾರಿಗೆ ಇಂಟರ್ ನೆಟ್ ಸಂಪರ್ಕ ಕಡಿತಗೊಂಡಿದೆ. ಆ ಬಳಿಕ ಕೆಲವೇ ಹೊತ್ತಿನಲ್ಲಿ ಕಳ್ಳತನ ನಡೆದಿದ್ದು, ಕಳ್ಳರ ಅದೃಷ್ಟವೋ ಎಂಬಂತೆ ಬೀಸಿದ ಗಾಳಿಗೆ ಮರದ ರೆಂಬೆಯೊಂದು ಕೇಬಲ್ ಮೇಲೆ ಬಿದ್ದು ಕೇಬಲ್ ತುಂಡಾದ ಪರಿಣಾಮ ಇಂಟರ್ ನೆಟ್ ಸಂಪರ್ಕ ಕಡಿತಗೊಂಡಿದೆ. ಇಂಟರ್ ನೆಟ್ ಸಂಪರ್ಕ ಇರುತ್ತಿದ್ದರೆ ಪ್ರಕರಣದ ಚಿತ್ರಣವೇ ಬದಲಾಗುತ್ತಿತ್ತು ಎನ್ನುತ್ತಾರೆ ಮನೆಮಂದಿ.

ಸರ್ಕಲ್ ಇನ್ಸ್ ಪೆಕ್ಟರ್ ಕ್ರೈಂ ತಂಡದಿಂದ ತನಿಖೆ
ಕಳ್ಳತನ ನಡೆದ ವಿಚಾರ ತಿಳಿದು ಕಾಪು ಸರ್ಕಲ್ ಇನ್ಸ್‌ ಪೆಕ್ಟರ್ ರವರ ಕ್ರೈಂ ತಂಡ ಸ್ಥಳಕ್ಕಾಗಮಿಸಿ ತನಿಖೆ ಕೈಗೆತ್ತಿಕೊಂಡಿದ್ದು, ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಕೆಲವೊಂದು ಪುರಾವೆಗಳನ್ನು ದಾಖಲಿಸಿಕೊಂಡಿದ್ದಾರೆ.

ಸಿಸಿ ಕ್ಯಾಮಾರದಲ್ಲಿ ಸೆರೆಯಾದ ಕಳ್ಳರು

 

 

 

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

bengaluru

ವಿಶೇಷ ಚೇತನ ಯುವತಿಯನ್ನೂ ಬಿಡದ ಕಾಮುಕ, ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

Published

on

ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಮದುವೆಗೆ ಎಂದು ಸಂತ್ರಸ್ತೆ ಕುಟುಂಬಸ್ಥರು ತೆರಳಿದ್ದು, ವಿಶೇಷ ಚೇತನ ಯುವತಿಯನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ.

ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಈ ವೇಳೆ ಮಗಳನ್ನು ನೋಡಿಕೊಂಡು ಹೋಗೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ. ಹೀಗಾಗಿ ಕಾಲಿನಿಂದ ಒದ್ದು ಆಕೆ ಬಾಗಿಲನ್ನು ತೆರೆದಿದ್ದು, ಮಗಳ ಸ್ಥಿತಿ ಕಂಡು ಶಾಕ್​ ಆಗಿದ್ದಾಳೆ.

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಆರೋಪಿ ಮುಂದಾಗಿದ್ದನು. ಘಟನೆ ಬಳಿಕ ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page