Connect with us

BELTHANGADY

ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್; 13 ಮಂದಿಗೆ ಗಾಯ

Published

on

ಧರ್ಮಸ್ಥಳ: ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಇದರಿಂದಾಗಿ ಹಲವು ಪ್ರಯಾಣಿಕರಿಗೆ ಗಾಯಗಳಾದ ಘಟನೆ ನಡೆದಿದೆ.

ಬಸ್ ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಅಡ್ಡಹೊಳೆ ಶಿರಾಡಿ ಪೆಟ್ರೋಲ್ ಬಂಕ್ ಬಳಿ ಟೈರ್ ಸ್ಫೋಟಗೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಬಸ್‌ನಲ್ಲಿದ್ದ 13 ಮಂದಿಗೆ ಗಾಯಗಳಾಗಿದ್ದು, ಮೂವರನ್ನು ಉಜಿರೆಯ ಆಸ್ಪತ್ರೆಗೆ ಹಾಗೂ ಉಳಿದವರನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

BELTHANGADY

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಷು ಜಾತ್ರಾಮಹೋತ್ಸವ

Published

on

ಬೆಳ್ತಂಗಡಿ: ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗಗಳಲ್ಲಿ ವಿಷು ಹಬ್ಬವನ್ನು ಹೊಸ ವರ್ಷದ ಆಚರಣೆಯಾಗಿ ಆಚರಿಸಲಾಗುತ್ತದೆ. ವಿಷುವತ್ ಸಂಕ್ರಾಂತಿಯನ್ನು ಸೂಚಿಸುವ ಈ ಹಬ್ಬದಲ್ಲಿ ವಿಷುಕಣಿ ಪ್ರಮುಖ ಆಚರಣೆಯಾಗಿದೆ. ಶ್ರೀಕೃಷ್ಣನ ವಿಜಯೋತ್ಸವವನ್ನೂ ಇದು ಸೂಚಿಸುತ್ತದೆ.

ಅಂತೆಯೇ ಹೊಸ ವರ್ಷ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಎ.13 ರಂದು ಮೇಷ ಸಂಕ್ರಮಣದಂದು ವಿಷು ಜಾತ್ರಾಮಹೋತ್ಸವದ ಧ್ವಜಾರೋಹಣ ನೆರವೇರಿದ್ದು, ಎ.14 ರಂದು ಭಕ್ತರಿಗೆ ಅಕ್ಕಿ ಧವಸ ಧಾನ್ಯ ವಿತರಣಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ನೆರವೇರಿತು.

ಸಾಲು ಸಾಲು ರಜೆ ಇದ್ದ ಕಾರಣ ಕ್ಷೇತ್ರಕ್ಕೆ ನಾಡಿನಾದ್ಯಂತ ಭಕ್ತರು ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಎ.14 ರಂದು ಸುಮಾರು 8000 ಕ್ಕೂ ಅಧಿಕ ಮಂದಿ ಭಕ್ತರಿಗೆ ಕ್ಷೇತ್ರದ ಉಗ್ರಾಣದಿಂದ ಅಕ್ಕಿ, ಧವಸ ಧಾನ್ಯ, ಎಣ್ಣೆ ಸಹಿತ ಪಡಿತರಗಳನ್ನು ವಿತರಣೆ ಮಾಡಲಾಯಿತು. ಸಂಜೆ ಧರ್ಮ ದೈವಳಿಗೆ ನೇಮ ನೆರವೇರಿತು.

ದೇವರ ದರ್ಶನಕ್ಕೆ ಸಮಸ್ಯೆಯಾಗದಂತೆ ಈಗಾಗಲೆ ಕ್ಯೂ ಕಾಂಪ್ಲೆಕ್ಸ್ ವ್ಯವಸ್ಥೆಯನ್ನು ಮಾಡಿರುವುದರಿಂದ ಭಕ್ತರಿಗೆ ಅನುಕೂಲ ಕಲ್ಪಿಸಲಾಗಿದೆ. ಭಕ್ತರಿಂದ ದೇವಸ್ಥಾನ, ಅನ್ನಪ್ಪಬೆಟ್ಟ, ಬಾಹುಬಲಿ ವಸ್ತುಸಂಗ್ರಹಾಲಯ ಎಲ್ಲೆಡೆವೂ ಜನ ಕಂಡುಬಂದಿತ್ತು. ಸೋಮವಾರ ಹೆಗ್ಗಡೆಯವರ ಭೇಟಿ ಸಮಯವಾದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಶೀರ್ವಾದ ಪಡೆದರು.

ಇನ್ನು ವಿಷು ಜಾತ್ರಾ ಮಹೋತ್ಸವದ ಪ್ರಯುಕ್ತ 15 ರಂದು ಅಣ್ಣಪ್ಪ ದೈವಗಳ ನೇಮ, 16 ರಂದು ಉತ್ಸವ, 17 ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ,18 ರಂದು ಕಂಚಿಮಾರುಕಟ್ಟೆ ಉತ್ಸವ, 19 ರಂದು ಲಲಿತೋದ್ಯಾನವನ ಕಟ್ಟೆ ಉತ್ಸವ, 20 ರಂದು ಕೆರೆಕಟ್ಟೆ ಉತ್ಸವ, 21 ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ ಉತ್ಸವ, 22 ರಂದು ಶ್ರೀ ಮಂಜುನಾಥ ಸ್ವಾಮಿಯ ಶ್ರೀ ಮನ್ಮಹಾರಥೋತ್ಸವ, 23 ರಂದು ನೇತ್ರಾವತಿಯಲ್ಲಿ ಅವಭೃತ ಸ್ನಾನ ಹಾಗೂ ಧ್ವಜಾವರೋಹಣದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.

Continue Reading

BELTHANGADY

ಬೆಳ್ತಂಗಡಿ: ಬೈಕ್ ಮತ್ತು ಟಿಪ್ಪರ್ ಮಧ್ಯೆ ಅಪಘಾತ; ಬೈಕ್ ಸವಾರ ಮೃತ್ಯು

Published

on

ಬೆಳ್ತಂಗಡಿ: ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ಪಣೆಜಾಲಿನ ರತ್ನಗಿರಿ ಎಂಬಲ್ಲಿ ನಡೆದಿದೆ.

ಉಪೇಂದ್ರ (29) ಸಾವನ್ನಪ್ಪಿದ ಯುವಕ. ಈತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ನಿವಾಸಿಯಾಗಿದ್ದಾನೆ. ಸಹಸವಾರ ಪುತ್ತೂರು ತಾಲೂಕಿನ ಕಾಣಿಯೂರು ಮೋಹನ್(29) ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಿಬ್ಬರು ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ರಜೆ ಇದ್ದ ಕಾರಣ ಮೋಹನ್ ರನ್ನು ಉಪ್ಪಿನಂಗಡಿಗೆ ಬಿಟ್ಟು ಬರಲು ಉಪೇಂದ್ರ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತ ರಭಸಕ್ಕೆ ಉಪೇಂದ್ರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಬೆಳ್ತಂಗಡಿ ಸಂಚಾರ ಸಬ್ ಇನ್ ಸ್ಪೆಕ್ಟರ್ ಮತ್ತು ತಂಡ ಘಟನಾ ಸ್ಥಳಕ್ಕೆ ಹಾಗೂ ಬೆಳ್ತಂಗಡಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

Continue Reading

BELTHANGADY

ಕೊಳೆತ ಸ್ಥಿತಿಯಲ್ಲಿ ಚಿರತೆಯ ಶವ ಪತ್ತೆ; ಕಾಲುಗಳನ್ನು ಕತ್ತರಿಸಿರುವ ದುಷ್ಕರ್ಮಿಗಳು

Published

on

ಬೆಳ್ತಂಗಡಿ : ಚಿರತೆಯ ಮೃತದೇಹ ಸಹಿತ ಮೂಳೆಗಳು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಬೆಳ್ತಂಗಡಿ ವನ್ಯಜೀವಿ ವಿಭಾಗದ ಸವಣಾಲು ಗ್ರಾಮದ ಇತ್ತಿಲಪೇಲ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.ಚಿರತೆ ಯಾವ ಕಾರಣದಿಂದ ಮೃತಪಟ್ಟಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿದು ಬರಬೇಕಷ್ಟೇ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ಫೋಟೋದಲ್ಲಿ ಚಿರತೆಯ ಮೃತದೇಹ ನಾಲ್ಕು ಕಾಲುಗಳನ್ನು ತುಂಡರಿಸಿದ ರೀತಿಯಲ್ಲಿ ಕಂಡು ಬರುತ್ತಿದೆ.

ಸವಣಾಲು ಗ್ರಾಮದ ಅಲ್ಲಲ್ಲಿ ಚಿರತೆಗಳು ಸಾಮಾನ್ಯವಾಗಿ ಆಗಾಗ ಕಂಡು ಬರುತ್ತವೆ. ಕಳೆದ ಸಪ್ಟೆಂಬರ್‌ನಲ್ಲಿ ಇಲ್ಲಿನ ಗುರಿಕಂಡ ಪ್ರದೇಶದಲ್ಲಿ ಚಿರತೆಯೊಂದು ಇಲಾಖೆಯ ಬೋನಿಗೆ ಬಿದ್ದಿತ್ತು. ಇದನ್ನು ಇಲಾಖೆ ವಶಪಡಿಸಿಕೊಂಡಿತ್ತು. ಇದಾದ ಬಳಿಕ ಕೆಲವೇ ದಿನಗಳಲ್ಲಿ ಮತ್ತೆ ಆ ಪರಿಸರದಲ್ಲಿ ಚಿರತೆ ಓಡಾಟ ಕಂಡುಬಂದಿದ್ದು, ಪ್ರದೇಶದಲ್ಲಿ ಒಂದಕ್ಕಿಂತ ಹೆಚ್ಚಿನ ಚಿರತೆಗಳು ಇರುವ ಬಗ್ಗೆ ದೃಢಪಟ್ಟಿತ್ತು. ಪ್ರಸ್ತುತ ಮೃತ ಚಿರತೆಯ ದೇಹ ಪತ್ತೆಯಾಗಿರುವ ಕುರಿತು ವನ್ಯಜೀವಿ ವಿಭಾಗದ ಆರ್‌ಎಫ್‌ಒ ಶರ್ಮಿಷ್ಠಾಗೆ ಮೊದಲು ಮಾಹಿತಿ ಬಂದಿತ್ತು. ಕಾರ್ಕಳ ವನ್ಯಜೀವಿ ವಿಭಾಗದ ಹಿರಿಯ ಅಧಿಕಾರಿಗಳು ಹಾಗೂ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

“ಸವಣಾಲು ಅರಣ್ಯ ಪ್ರದೇಶದಲ್ಲಿ ಚಿರತೆಯ ಮೂಳೆಗಳು ಪತ್ತೆಯಾಗಿರುವುದು ದೃಢಪಟ್ಟಿದೆ. ಮೂಳೆಗಳನ್ನು ಹೆಚ್ಚಿನ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಇದರ ವರದಿಯ ಆಧಾರದಲ್ಲಿ ತನಿಖೆ ಮುಂದುವರಿಯಲಿದೆ. ಸಾಮಾಜಿಕ ಜಾಲತಾಣದಲ್ಲಿ ಚಿತ್ರ ಹಬ್ಬಿದ್ದರಿಂದ, ಚಿತ್ರವನ್ನು ಯಾವಾಗ ಯಾರು ತೆಗೆದದ್ದು ಎಂಬ ವಿಚಾರದಲ್ಲಿ ತನಿಖೆ ನಡೆಯಲಿದೆ” ಎಂದು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿಭಾಗದ ಡಿಎಫ್ ಒ ಶಿವರಾಮ ಬಾಬು ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page