Connect with us

DAKSHINA KANNADA

ಮಾದಕವಸ್ತು ಮಿಶ್ರಿತ ಚಾಕೊಲೆಟ್‌ ಪತ್ತೆ ಪ್ರಕರಣ- ಎಫ್ ಎಸ್ ಎಲ್ ವರದಿ ಆಧರಿಸಿ ಕ್ರಮ; ಕಮಿಷನರ್‌

Published

on

ಮಂಗಳೂರು ನಗರದ ರಥಬೀದಿ ಮತ್ತು ಫಳ್ನೀರ್‌ ನ ಅಂಗಡಿಗಳಲ್ಲಿ ಪತ್ತೆಯಾಗಿರುವ ಮಾದಕ ವಸ್ತು ಮಿಶ್ರಿತ ಚಾಕೊಲೆಟ್‌ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಅದರ ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಅವರು ತಿಳಿಸಿದ್ದಾರೆ.

ಮಂಗಳೂರು: ಮಂಗಳೂರು ನಗರದ ರಥಬೀದಿ ಮತ್ತು ಫಳ್ನೀರ್‌ ನ ಅಂಗಡಿಗಳಲ್ಲಿ ಪತ್ತೆಯಾಗಿರುವ ಮಾದಕ ವಸ್ತು ಮಿಶ್ರಿತ ಚಾಕೊಲೆಟ್‌ಗಳನ್ನು ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಅದರ ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಕುಲದೀಪ್‌ ಕುಮಾರ್‌ ಆರ್‌. ಜೈನ್‌ ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಾರ್ವಜನಿಕರ ದೂರಿನ ಮೇರೆಗೆ ಮತ್ತು ಖಚಿತ ಮಾಹಿತಿ ಹಿನ್ನಲೆಯಲ್ಲಿ ಎರಡು ಅಂಗಡಿಗಳ ಮೇಲೆ ದಾಳಿ ನಡೆಸಿ 108 ಕಿಲೋ ಗ್ರಾಂ ತೂಕದ ಮಾದಕ ವಸ್ತು ಮಿಶ್ರಿತ ಚಾಕೊಲೆಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಚಾಕೊಲೆಟ್‌ಗಳಲ್ಲಿ ಮಾದಕ ಪದಾರ್ಥ ಇರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಆದರೆ ಅದರಲ್ಲಿ ಮಾದಕ ಪದಾರ್ಥ ಎಷ್ಟು ಪ್ರಮಾಣದಲ್ಲಿ ಇದೆ ಮತ್ತು ಅದನ್ನು ಸೇವಿಸಿದರೆ ದೇಹದ ಮೇಲೆ ಉಂಟಾಗುವ ಪರಿಣಾಮಗಳೇನು ಎಂಬುದನ್ನು ತಿಳಿಯಲು ಎಫ್‌.ಎಸ್‌.ಎಲ್‌. ಪರೀಕ್ಷೆಗಾಗಿ ಕಳುಹಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಅನುಮತಿಸಿರುವ ಭಾಂಗ್‌ ಎಂಬ ಪದಾರ್ಥವನ್ನು ಚಾಕೊಲೇಟ್‌ ನಲ್ಲಿ ಬೆರಕೆ ಮಾಡಲಾಗಿದೆ ಎಂಬುದಾಗಿ ಅಂಗಡಿಯವರು ಹೇಳುತ್ತಾರೆ.

ಅದರೆ ಭಾಂಗ್‌ ಅಥವಾ ಇತರ ಯಾವುದೇ ಪದಾರ್ಥವನ್ನು ಚಾಕೊಲೇಟ್‌ ಗೆ ಬೆರಕೆ ಮಾಡುವುದು ಅಪರಾಧ.

ಹಾಗಾಗಿ ಕೇಸು ದಾಖಲಿಸಲಾಗಿದೆ ಎಂದು ವಿವರಿಸಿದರು.

ರಥಬೀದಿ ಮತ್ತು ಫ‌ಳ್ನೀರ್‌ನಲ್ಲಿ ಮಾದಕ ವಸ್ತು ಮಿಶ್ರಿತ ಚಾಕೊಲೆಟ್ ಮಾರಾಟ ಮಾಡುತ್ತಿದ್ದ ಬಗ್ಗೆ ಇಬ್ಬರು ಅರೋಪಿಗಳನ್ನು ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಲಾಗಿದೆ.

ಆ ಬಳಿಕ ಮಂಗಳೂರು ನಗರದ ಬಂದರು, ರಥಬೀದಿ ಸೇರಿದಂತೆ ಸುತ್ತಮುತ್ತಲ ಪ್ರದೇಶದ 60ಕ್ಕೂ ಅಧಿಕ ಅಂಗಡಿಯಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ ಎಂದರು.

DAKSHINA KANNADA

ಕೋಳಿ ಸಾಗಾಟದ ಟೆಂಪೋ ಪ*ಲ್ಟಿ; ಸ*ತ್ತ ಕೋಳಿಗಳಿಗಾಗಿ ಮುಗಿಬಿದ್ದ ಸಾರ್ವಜನಿಕರು

Published

on

ಬಂಟ್ವಾಳ: ಕೋಳಿ ಸಾಗಾಟದ ಟೆಂಪೋ ಪ*ಲ್ಟಿಯಾಗಿ ನೂರಾರು ಕೋಳಿಗಳು ಸಾ*ವನ್ನಪ್ಪಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕನ್ಯಾನದ ಕುಳಾಲು ಎಂಬಲ್ಲಿ ಘಟನೆ ನಡೆದಿದೆ.

ಕಡಿದಾದ ರಸ್ತೆಯಲ್ಲಿ ಇನ್ನೊಂದು‌ ವಾಹನಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಪಿಕಪ್ ಪ*ಲ್ಟಿಯಾಗಿದೆ.  ಪಿಕಪ್ ಟೆಂಪೋ ಚಾಲಕ‌ ಅದೃಷ್ಟವಶಾತ್ ಅ*ಪಾಯದಿಂದ ಪಾರಾಗಿದ್ದಾನೆ.

ಈ ವೇಳೆ ಸ*ತ್ತ ಕೋಳಿಗಳನ್ನು ಮನೆಗೆ ಕೊಂಡೊಯ್ಯಲು ಸಾರ್ವಜನಿಕರು ಮುಗಿಬಿದ್ದಿದ್ದಾರೆ.  ಈ ಘಟನೆಯಿಂದ ಕೋಳಿ‌ಪ್ರಿಯರಿಗೆ ಪುಕ್ಕಟೆಯಾಗಿ ಕೋಳಿಗಳು ದೊರೆದಂತಾಗಿದೆ.

Continue Reading

DAKSHINA KANNADA

ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಚಾಲನೆ

Published

on

ಮಂಗಳೂರು : ಮಂಗಳೂರು ನಗರದ ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ 15 ನೇ ವರ್ಷದ ಹೊನಲು ಬೆಳಕಿನ ಜಯ ವಿಜಯ ಜೋಡುಕರೆ ಕಂಬಳಕ್ಕೆ ಇಂದು ಬೆಳಗ್ಗೆ ಚಾಲನೆ ದೊರೆತಿದೆ.

ದಿವಂಗತ ಜೆ. ಜಯಗಂಗಾಧರ ಶೆಟ್ಟಿ ಮನ್ಕುತೋಟಗುತ್ತು ಮತ್ತು ನಾಡಾಜೆಗುತ್ತು ಸ್ಮರಣಾರ್ಥ ನಡೆಯುವ ಕಂಬಳದ ಉದ್ಘಾಟನೆ ಬೆಳಗ್ಗೆ ನೆರವೇರಿತು. ಕರಾವಳಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಗಣೇಶ್ ರಾವ್ ಅಧ್ಯಕ್ಷತೆಯಲ್ಲಿ ದೇರೆಬೈಲ್ ವಿಠಲದಾಸ ತಂತ್ರಿ ಅವರು 15 ನೇ ವರ್ಷದ ಜಯ ವಿಜಯ ಜೋಡುಕರೆ ಕಂಬಳವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಗೌರವ ಅಧ್ಯಕ್ಷ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ನಡೆಯುವ ಕಂಬಳಕ್ಕೆ ಪಾಲಿಕೆಯಿಂದ  ಆರ್ಥಿಕ ನೆರವು ನೀಡಲಾಗುತ್ತಿದೆ. ಕಂಬಳ ಸಂಸ್ಕೃತಿಯನ್ನು ಉಳಿಸಿ ಬೆಳೆಸ ಬೇಕು. ತನ್ನಿಂದ ಸಾಧ್ಯವಿರುವ ಎಲ್ಲಾ ಸಹಕಾರ ನೀಡುತ್ತೇನೆ ಎಂದರು.

ಪೊಲೀಸ್ ಅಧಿಕಾರಿ ಟಿ.ಡಿ. ನಾಗರಾಜ್, ಜಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಮತ್ತಿತರ ವಿವಿಧ ಕ್ಷೇತ್ರಗಳ ಪ್ರಮುಖರು ಅತಿಥಿಗಳಾಗಿ ಉಪಸ್ಥಿತರಿದ್ದರು. ಜಯ ವಿಜಯ ಜೋಡುಕರೆ ಕಂಬಳ ಸಮಿತಿಯ ಅಧ್ಯಕ್ಷ ಜೆ. ಅನಿಲ್ ಶೆಟ್ಟಿ ಮನ್ಕುತೋಟ, ಮಾರ್ಗದರ್ಶಕ ಸುಧಾಕರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜೆ. ಉಮೇಶ್ ಅತಿಕಾರಿ, ಕೋಶಾಧಿಕಾರಿ ಜೆ. ಬಾಲಕೃಷ್ಣ ಶೆಟ್ಟಿ, ಪ್ರಕಾಶ್ ಮೇಲಂಟ, ಶೇಖರ ಕಿಲ್ಲೆ ಪಡುಹಿತ್ಲು, ಗುರುರಾಜ್ ಶೆಟ್ಟಿ ಮತ್ತು ಇತರ ಪದಾಧಿಕಾರಿಗಳು ಮತ್ತು ಸದಸ್ಯರು ಇದ್ದರು. ಮನೋಜ್ ಶೆಟ್ಟಿ ವಂದಿಸಿದರು. ಅಭಿಷೇಕ್ ಕಾರ್ಯಕ್ರಮ ನಿರ್ವಹಿಸಿದರು.

Continue Reading

DAKSHINA KANNADA

ಮಂಗಳೂರು: ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್‌ಗೆ “ಸೌತ್ ಇಂಡಿಯಾ ಯಂಗ್ ಚೆಫ್ ಆಫ್ ದಿ ಇಯರ್” ಪ್ರಶಸ್ತಿ

Published

on

ಮಂಗಳೂರು: ಭಾರತದ ಅತ್ಯುತ್ತಮ ಆಹಾರ ಮತ್ತು ಪಾನೀಯಗಳನ್ನು ಗುರುತಿಸುವ *ಫುಡ್ “ಕನೋಸರ್ಸ್ ಇಂಡಿಯಾ ಅವಾರ್ಡ್ಸ್ (FCIA)* ನ ಏಳನೇ ಆವೃತ್ತಿಯಲ್ಲಿ ಮಂಗಳೂರಿನ ಮಾಸ್ಟರ್ ಚೆಫ್ *ಮಹಮ್ಮದ್ ಆಶಿಕ್* ಅವರಿಗೆ *’ಸೌತ್ ಇಂಡಿಯಾ ಯಂಗ್ ಚೆಫ್ ಆಫ್ ದಿ ಇಯರ್’* ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಬೆಂಗಳೂರಿನ *ತಾಜ್ ಯಶವಂತಪುರ ಹೋಟೆಲ್* ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಬಂದ ಅತ್ಯುತ್ತಮ ಶೆಫ್ಗಳು, ರೆಸ್ಟೋರೆಂಟ್ಗಳು ಮತ್ತು ಫುಡ್ ಬ್ರಾಂಡ್ಗಳು ಪಾಲ್ಗೊಂಡಿದ್ದರು. ಮಂಗಳೂರಿನ ಪ್ರತಿಭೆ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಈ ಪ್ರಶಸ್ತಿ ಪಡೆಯುವ ಮೂಲಕ ಜಿಲ್ಲೆಯ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೊಮ್ಮೆ ಹೆಗ್ಗಳಿಸಿದ್ದಾರೆ.

ಪ್ರಶಸ್ತಿ ಪಡೆದ ನಂತರ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಅವರು ಮಾತನಾಡುತ್ತಾ, “ಈ ಪ್ರಶಸ್ತಿಯನ್ನು ಪ್ರಮುಖವಾಗಿ ಆಹಾರದ ಗುಣಮಟ್ಟ, ಸೃಜನಾತ್ಮಕತೆ ಮತ್ತು ಅನುಭವಗಳನ್ನು ಆಧರಿಸಿ ನೀಡಲಾಗುತ್ತದೆ. ಈ ಬಾರಿ ಕನ್ನಡನಾಡಿನ ಹಲವಾರು ರೆಸ್ಟೋರೆಂಟ್ಗಳು ಮತ್ತು ಶೆಫ್ಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನನಗೆ ಈ ಪ್ರಶಸ್ತಿ ಲಭಿಸಿದ್ದು ಗೌರವದ ಸಂಗತಿ. ಇದು ನನ್ನ ಕುಟುಂಬ, ಸ್ನೇಹಿತರು ಮತ್ತು ಜಿಲ್ಲೆಯ ಜನರ ಸಹಕಾರದ ಫಲವಾಗಿದೆ. ಈ ಪ್ರಶಸ್ತಿ ನನಗೆ ಇನ್ನಷ್ಟು ಸಾಧನೆ ಮಾಡಲು ಸ್ಪೂರ್ತಿ ನೀಡಿದೆ” ಎಂದರು.

ಈ ಕಾರ್ಯಕ್ರಮದ ಮೂಲಕ ಭಾರತದ ವೈವಿಧ್ಯಮಯ ಆಹಾರ ಸಂಸ್ಕೃತಿ ಮತ್ತು ಪ್ರತಿಭಾವಂತ ಶೆಫ್ಗಳ ಸಾಧನೆಗಳನ್ನು ಗುರುತಿಸಲಾಯಿತು. ಮಂಗಳೂರಿನ ಮಾಸ್ಟರ್ ಚೆಫ್ ಮಹಮ್ಮದ್ ಆಶಿಕ್ ಅವರ ಈ ಸಾಧನೆ ಜಿಲ್ಲೆಯ ಆಹಾರ ಕ್ಷೇತ್ರದ ಹೆಮ್ಮೆಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page