Connect with us

LATEST NEWS

“ಪರೇಶ್‌ ಮೇಸ್ತಾನದ್ದು ಕೊಲೆಯಲ್ಲ ಆಕಸ್ಮಿಕ ಸಾವು”: CBIನಿಂದ ‘B’ ರಿಪೋರ್ಟ್‌

Published

on

ಉತ್ತರಕನ್ನಡ: ರಾಜ್ಯದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಮೀನುಗಾರ ಯುವಕ ಪರೇಶ್‌ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಆ.3 ರಂದು ಹೊನ್ನಾವರದ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ʼಬಿʼ ರಿಪೋರ್ಟ್‌ ಸಲ್ಲಿಸಿದೆ.


ತನಿಖೆಯ ಸಂದರ್ಭ ಮರಣಪೂರ್ವದಲ್ಲಿ ನೀರಿನಲ್ಲಿ ಮುಳುಗಿರುವುದರಿಂದ (ಆಂಟಿ ಮೋರ್ಟೆಮ್‌ ಡ್ರೌನಿಂಗ್) ಮೇಸ್ತಾ ಸಾವನ್ನಪ್ಪಿರುವುದು ವೈದ್ಯಕೀಯ-ಕಾನೂನು ಸಾಕ್ಷ್ಯ/ಅಭಿಪ್ರಾಯಗಳಿಂದ ದೃಢಪಟ್ಟಿದೆ. ಆರೋಪಿಗಳ ಪಾತ್ರದ ಕುರಿತು ಯಾವುದೇ ಸಾಕ್ಷ್ಯ ದೊರೆತಿಲ್ಲ.

ಹೊನ್ನಾವರದ ಪ್ರಧಾನ ಸಿವಿಲ್‌ ನ್ಯಾಯಾಧೀಶರು (ಕಿರಿಯ ಶ್ರೇಣಿ) ಮತ್ತು ಜೆಎಂಎಫ್‌ಸಿಗೆ ಅಂತಿಮ/ಮುಕ್ತಾಯ ವರದಿ ಸಲ್ಲಿಸಲಾಗುತ್ತಿದೆ ಎಂದು ಮೇಸ್ತಾ ತಂದೆ ಕಮಲಾಕರ್‌ ಮೇಸ್ತಾಗೆ ಸಿಬಿಐ ಅಪರಾಧ ವಿಭಾಗದ ಪೊಲೀಸ್‌ ಇನ್‌ಸ್ಪೆಕ್ಟರ್‌ ದಿಲೀಪ್‌ ಕುಮಾರ್‌ ಪಿ ಎಸ್‌ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

2017ರ ಡಿ. 6ರಂದು ಹೊನ್ನಾವರದ ಬಸ್‌ ನಿಲ್ದಾಣದ ಹೋಟೆಲ್‌ ಸಮೀಪ ನೆರೆದಿದ್ದ ಮುಸ್ಲಿಮ್‌ ಸಮುದಾಯದ ಗುಂಪೊಂದು ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆಸಿದ್ದು, ಮಾರಕಾಸ್ತ್ರಗಳಿಂದ ದೇವಸ್ಥಾನ, ಅಂಗಡಿ-ಮುಂಗಟ್ಟು, ವಾಹನಗಳ ಮೇಲೆ ದಾಳಿ ನಡೆಸಿತ್ತು.

ಈ ಸಂದರ್ಭ ತನ್ನ ಪುತ್ರ ಪರೇಶ್‌ ಮೇಸ್ತಾನನ್ನು ಹತ್ಯೆ ಮಾಡಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮೃತ ದೇಹವನ್ನು ಶೆಟ್ಟಿಕೆರೆಗೆ ಎಸೆದಿದ್ದರು ಎಂದು ತಂದೆ ಕಮಲಾಕರ್ ಮೇಸ್ತಾ ಡಿ.8ರಂದು ಹೊನ್ನಾವರ ಠಾಣೆಯಲ್ಲಿ ದೂರು ನೀಡಿದ್ದರು.

ಈ ಪ್ರಕರಣವನ್ನು 2017ರ ಡಿಸೆಂಬರ್‌ 13ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಸಿಬಿಐ ತನಿಖೆಗೆ ವಹಿಸಿತ್ತು. ಕೋಮು ದ್ವೇಷಕ್ಕೆ ಪ್ರತಿಯಾಗಿ ಮೇಸ್ತಾನನ್ನು ಕೊಲೆ ಮಾಡಲಾಗಿದೆ. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಆಗ್ರಹಿಸಿತ್ತು.

DAKSHINA KANNADA

ಮಂಗಳೂರು : ಕೂಳೂರು ಸೇತುವೆ ಬಳಿ ದರ್ಪ ; ಪೊಲೀಸರಿಂದ ಸ್ಪಷ್ಟನೆ

Published

on

ಮಂಗಳೂರು : ಮಾ.21ರಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ “ಕೂಳೂರು ಸೇತುವೆ ಬಳಿ ದರ್ಪ ಮೆರೆದ ಸಂಚಾರ ಪೊಲೀಸರು” ಎಂಬ ವೀಡಿಯೊ 2024ರ ಡಿ.23ರಂದು ಕುದುರೆಮುಖ ಜಂಕ್ಷನ್‌ ನಲ್ಲಿ ನಡೆದಿತ್ತು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಡಿಯೋ ಕುರಿತು ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದೆ.

ಪಾನಮತ್ತನಾದ ಓರ್ವ ವ್ಯಕ್ತಿ ಕುದುರೆಮುಖ ಜಂಕ್ಷನ್ ನಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿದ್ದು, ಸಾರ್ವಜನಿಕರ ಸಹಾಯದೊಂದಿಗೆ ಪೊಲೀಸರು ಆ ವ್ಯಕ್ತಿಯನ್ನು ಬದಿಗೆ ಕಳುಹಿಸಿದರೂ ಆತ ಮತ್ತೆ ಪದೇ ಪದೇ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ ಸಮಯ ತುಂಬಾ ಕುಡಿದಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದು ಆತನಿಗೆ ಮೂಗಿನಲ್ಲಿ ರಕ್ತ ಬಂದಿರುತ್ತದೆ.

ಈ ವೇಳೆ ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಆ ವ್ಯಕ್ತಿಯನ್ನು ಮೇಲಕ್ಕೆತ್ತಿ ಉಪಚರಿಸಿ ಆಸ್ಪತ್ರೆಗೆ ಸಾಗಿಸಲು ವಾಹನದ ಬಳಿ ಕರೆದುಕೊಂಡು ಬರುತ್ತಿರುವಾಗ ಯಾರೋ ಸಾರ್ವಜನಿಕರು ತಪ್ಪಾಗಿ ತಿಳಿದುಕೊಂಡು ವೀಡಿಯೊ ಮಾಡಿ ವೈರಲ್‌ ಮಾಡಿದ್ದಾರೆ ಎಂದು ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದೆ.

Continue Reading

LATEST NEWS

ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ?

Published

on

ಮಂಗಳೂರು: ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಯಾವುದು? ಅಮೆರಿಕ, ಚೀನಾ ಅಥವಾ ರಷ್ಯಾ ಅಲ್ಲ. 2025 ರ ವಿಶ್ವದ ಅತ್ಯಂತ ಸಂತೋಷದಾಯಕ ದೇಶಗಳ ಸೂಚ್ಯಂಕ ಪಟ್ಟಿ ಬಿಡುಗಡೆ ಮಾಡಿದೆ.


ವಲ್ಡ್ ಹ್ಯಾಪಿನೆಸ್ ರಿಪೋರ್ಟ್ 2025 ರ ಪ್ರಕಾರ ಫಿನ್‌ಲ್ಯಾಂಡ್ ಸತತ ಎಂಟನೇ ವರ್ಷವೂ ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಎಂಬ ಕೀರ್ತಿ ಗಳಿಸಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಯೋಗಕ್ಷೇಮ ಕೇಂದ್ರವು ಪ್ರಕಟಿಸಿದ ವಾರ್ಷಿಕ ವರದಿಯಲ್ಲಿ 10 ದೇಶಗಳು ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿವೆ.

ಫಿನ್‌ಲ್ಯಾಂಡ್ ಮೊದಲ ಸ್ಥಾನವನ್ನು ಹೊಂದಿದೆ. ಡೆನ್ಮಾರ್ಕ್, ಐಸ್ಲ್ಯಾಂಡ್ ಮತ್ತು ಸ್ವೀಡನ್ ನಂತರದ ಸ್ಥಾನವನ್ನು ಹೊಂದಿದೆ. ಡೆನ್ಮಾರ್ಕ್, ಐಸ್ಲ್ಯಾಂಡ್ ಮತ್ತು ಸ್ವೀಡನ್ ನಂತರದ ಸ್ಥಾನಗಳಲ್ಲಿವೆ. ಮತ್ತೊಂದೆಡೆ ಭೀಕರ ಅಂತರ್ಯುದ್ಧದಲ್ಲಿ ಕಾದಾಡುತ್ತಿರುವ ಅಫ್ಘಾನಿಸ್ತಾನ ಮತ್ತೊಮ್ಮೆ ಸಂತೋಷದ ರಾಷ್ಟ್ರಗಳ ಪಟ್ಟಿಯಲ್ಲಿ ಕೊನೆಯ ಸ್ಥಾನ ಸೇರಿದ್ದು, 147ನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್ (146) ಮತ್ತು ಲೆಬನಾನ್ (145) ಹಿಂದಿನ ಸ್ಥಾನದಲ್ಲಿದೆ.

ವಿಚಿತ್ರ ಎಂಬಂತೆ ಹಮಾಸ್ ಜೊತೆ ಭೀಕರ ಯುದ್ದ ನಡೆಸಿದ ಇಸ್ರೇಲ್ ದೇಶವು ಎಂಟನೇ ಸ್ಥಾನದಲ್ಲಿದೆ. ಕೋಸ್ಟಾ ರಿಕಾ ಮತ್ತು ಮೆಕ್ಸಿಕೊ ಕೂಡ ಮೊದಲ ಬಾರಿಗೆ ಅಗ್ರ ಹತ್ತು ಸ್ಥಾನಗಳಲ್ಲಿದ್ದು, ಈ ದೇಶಗಳು ಕ್ರಮವಾಗಿ 6 ​​ಮತ್ತು 10ನೇ ಶ್ರೇಯಾಂಕದಲ್ಲಿವೆ.

ಇದನ್ನೂ ಓದಿ:  ಐಪಿಎಲ್ 2025: ಕೆಕೆಆರ್-ಆರ್ಸಿಬಿ ಉದ್ಘಾಟನಾ ಪಂದ್ಯವೇ ರದ್ದಾಗುವ ಸಾಧ್ಯತೆ?

ದೇಶ ಪ್ರತಿಯಿಂದ ಒಂದರಿಂದ ಮೂರು ಸಾವಿರ ಜನರ ಮಾದರಿ ಗಾತ್ರವನ್ನು ಆಯ್ಕೆ ಮಾಡಲಾಗಿದೆ. ಕೇಳಲಾದ ಪ್ರಶ್ನೆಗಳ ಆಧಾರದ ಮೇಲೆ ಅವರಿಗೆ ರಚಿಸಲಾಗಿದೆ. ಈ ಪ್ರಶ್ನೆಗಳಿಗೆ 0 ರಿಂದ 10 ರ ರೇಟಿಂಗ್‌ನಲ್ಲಿ ಉತ್ತರಿಸಬೇಕು. 0 ಎಂದರೆ ಕೆಟ್ಟದು, 10 ಎಂದರೆ ಅತ್ಯುತ್ತಮ ಅನುಭವ. ಸಂಪತ್ತು ಮತ್ತು ಅಭಿವೃದ್ಧಿ, ಸಂಬಂಧಗಳು, ಜನರ ನಡುವಿನ ನಂಬಿಕೆ, ಆತ್ಮತೃಪ್ತಿ, ಸಾಮಾಜಿಕ ಬೆಂಬಲ, ಜೀವಿತಾವಧಿ, ಸ್ವಾತಂತ್ರ್ಯ, ಔದಾರ್ಯ ಮತ್ತು ಭ್ರಷ್ಟಾಚಾರ ಎಲ್ಲಾ ಈ ಅಂಶಗಳನ್ನು ಪರಿಗಣಿಸಿ ದೇಶಗಳಿಗೆ ಸ್ಥಾನ ನಿಗದಿಪಡಿಸಲಾಗಿದೆ.

ಅಗ್ರ 10 ಅಗ್ರ ಸ್ಥಾನದಲ್ಲಿರುವ ದೇಶಗಳು
1. ಫಿನ್ಲ್ಯಾಂಡ್

2. ಡೆನ್ಮಾರ್ಕ್

3. ಐಸ್ಲ್ಯಾಂಡ್

4. ಸ್ವೀಡನ್

5. ನೆದರ್ಲ್ಯಾಂಡ್

6. ಕೋಸ್ಟಾ ರಿಕಾ

7. ನಾರ್ವೆ

8. ಇಸ್ರೇಲ್

9. ಲಕ್ಷಂಬರ್ಗ್

೧೦. ಮೆಕ್ಸಿಕೋ

ಭಾರತಕ್ಕೆ ಎಷ್ಟನೇ ಸ್ಥಾನ?
2025ರ ಸಂತೋಷದ ವರದಿಯಲ್ಲಿ 147 ದೇಶಗಳನ್ನು ಪರಿಗಣಿಸಿ ವರದಿ ಸಿದ್ದಪಡಿಸಲಾಗಿದೆ. ಇದರಲ್ಲಿ ಭಾರತವು 118ನೇ ಸ್ಥಾನವನ್ನು ಹೊಂದಿದೆ. ಕಳೆದ ವರ್ಷಕ್ಕಿಂತ ಕೊಂಚ ಸುಧಾರಿಸಿದೆ ಎಂದು ಹೇಳಬಹುದು. ಏಕೆಂದರೆ 2024ರ ಹ್ಯಾಪಿನೆಸ್ ರಿಪೋರ್ಟ್‌ನಲ್ಲಿ ಭಾರತವು 126ನೇ ಸ್ಥಾನದಲ್ಲಿತ್ತು. ಆದರೆ 2025ರಲ್ಲಿ ಭಾರತವು 8 ಸ್ಥಾನ ಮೇಲಕ್ಕೇರಿದೆ.

ಶ್ರೇಯಾಂಕದಲ್ಲಿ ಕುಸಿತಕಂಡ ಅಮೆರಿಕ
ಸಂತೋಷ ಸೂಚ್ಯಂಕ ವರದಿಯಲ್ಲಿ ಕಳೆದ ವರ್ಷ 23ನೇ ಸ್ಥಾನದಲ್ಲಿದ್ದ ಅಮೆರಿಕ ಈ ಬಾರಿ ಒಂದು ಸ್ಥಾನ ಕುಸಿದಿದೆ. 2012ರಲ್ಲಿ 11ನೇ ಸ್ಥಾನದಲ್ಲಿದ್ದ ಅಮೆರಿಕ ಈಗ 24ನೇ ಸ್ಥಾನಕ್ಕೆ ಕುಸಿದಿರುವುದು ಗಮನಾರ್ಹ.

Continue Reading

LATEST NEWS

ಫಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Published

on

ಗದಗ: ಪ್ರೀತಿ ಪ್ರೇಮದ ಕಾರಣದಿಂದ ಪುರುಷನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಫಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡರಗಿ ತಾಲೂಕಿನ ಬೆಟಗೇರಿ ಬಾಲಕಿಯರ ವೃತ್ತಿಪರ ಹಾಸ್ಟೆಲ್‌ನಲ್ಲಿ ನಡೆದಿದೆ.

ವಿರಪಾಪೂರ ತಾಂಡಾದ ನಿವಾಸಿ ವಂದನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. 19 ವರ್ಷದ ವಂದನಾಗೆ ಅದೇ ಗ್ರಾಮದ 42 ವರ್ಷದ ಕಿರಣ್ ಕಾರಬಾರಿ ಎಂಬಾತ ಪ್ರೀತಿಸುತ್ತಿದ್ದ. ಬಳಿಕ ಮದುವೆಯಾಗು ಅಂತ ಒತ್ತಾಯಿಸುತ್ತಿದ್ದ. ಪ್ರತಿದಿನ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಮದುವೆ ಆಗದಿದ್ದರೆ ಫೋಟೋ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾಗೆ ಹಾಕುವುದಾಗಿ ಹೆದರಿಸಿದ್ದ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ.

ಗುರುವಾರ ಹಾಸ್ಟೆಲ್‌ನಲ್ಲಿ ಪಿನಾಯಿಲ್ ಸೇವಿಸಿದ್ದಾಳೆ, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ.

ಆರೋಪಿಗೆ ತಕ್ಕ ಶಿಕ್ಷೆ ಆಗಬೇಕೆಂದು ಕುಟುಂಬಸ್ಥರ ಆಗ್ರಹವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿ ಕಿರಣ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಗದಗನ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page