Connect with us

LATEST NEWS

ಜಿಲ್ಲೆಯ ಎಲ್ಲಾ ಅಂಗಡಿಗಳಲ್ಲಿ ಸಿಸಿಟಿವಿ, ಥರ್ಮಲ್ ಸ್ಕ್ಯಾನರ್ ಆಳವಡಿಸಿ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

Published

on

ಮಂಗಳೂರು : ದಕ್ಷಿಣ ಜಿಲ್ಲೆಯಲ್ಲಿ ಕೋರೋನಾ ವೈರಸ್ ಸೋಂಕು ಹರಡದಂತೆ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿರುತ್ತಾರೆ.

ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯವಹಾರ ನಡೆಯುವ ಎಲ್ಲಾ ಹೋಟೆಲ್, ರೆಸ್ಟೋರೆಂಟ್‍ಗಳು ವಾಣಿಜ್ಯ ಸಂಕೀರ್ಣಗಳು, ಮಾಲ್‍ಗಳು ಜನಸಂದಣಿ ಸೇರುವ ಪ್ರದೇಶಗಳಲ್ಲಿ ಎಲ್ಲಾ ಅಂಗಡಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ.

ಪತ್ರಿಯೊಬ್ಬಅಂಗಡಿ ಮಾಲೀಕರು ಸಾಮಾಜಿಕಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ನಿಯಮ ಉಲ್ಲಂಘನೆಯಾಗದಂತೆ ಸಾಕಷ್ಟು ಮುಂಜಾಗೃತಾಕ್ರಮವಹಿಸಬೇಕು. ನಗರ ಸ್ಥಳೀಯ ಸಂಸ್ಥೆ ಹಾಗೂ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪ್ರತಿಯೊಬ್ಬ ವರ್ತಕರುತಮ್ಮಅಂಗಡಿಯಲ್ಲಿ ಸಾರ್ವಜಿನಿಕರು ಹೆಚ್ಚಿನ ಸಂಖ್ಯೆಯಲ್ಲಿ ಏಕಕಾಲದಲ್ಲಿ ಸೇರದಂತೆ ಅಂಗಡಿ ಮುಂಗಟ್ಟಿನ ಮುಂಭಾಗದಲ್ಲಿ ಕನಿಷ್ಟ 6×6 ಅಡಿ ಅಂತರವನ್ನು ಗುರುತಿಸಿ ಗ್ರಾಹಕರಲ್ಲಿ ದೈಹಿಕಅಂತರ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಬೇಕು.


ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವರ್ತಕರು ತಮ್ಮ ಅಂಗಡಿ ಮುಂಗಟ್ಟಿನಲ್ಲಿ ಮುಂದೆ ಇರುವ ಸ್ಥಳದಲ್ಲಿ ವಾಹನ ಸಂಚಾರಕ್ಕೆ ಬಳಸಲ್ಪಡುವ ರಸ್ತೆಯನ್ನು ಹೊರತುಪಡಿಸಿ, ಉಳಿದ ಸ್ಥಳವನ್ನು ಸಾಮಾಜಿಕ ಅಂತರ ಕಾಯ್ದುಕೊಂಡು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಳಸುವುದು.

ಪ್ರತಿ ಅಂಗಡಿ ಮಾಲೀಕರು ತಮ್ಮಅಂಗಡಿ ಮುಂಭಾಗದಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್ ವ್ಯವಸ್ಥೆಯನ್ನು ಅಳವಡಿಸುವುದು ಹಾಗೂ ಗ್ರಾಹಕರನ್ನು ಸ್ಯಾನಿಟೈಸರ್ ಬಳಸಲು ಉತ್ತೇಜಿಸುವುದು. ಪ್ರತಿ ಅಂಗಡಿ ಮಾಲೀಕರು ಪ್ರತಿದಿನ ತಮ್ಮತಮ್ಮ ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಸಿಬ್ಬಂದಿಗಳ ಆರೋಗ್ಯತಪಾಸಣೆಯನ್ನು ನಡೆಸುವುದು, ಅಲ್ಲದೇ ಪ್ರತಿ ಮೂರು ದಿನಗಳಿಗೊಮ್ಮೆ ತಮ್ಮ ಅಂಗಡಿಗಳನ್ನು ಸ್ಯಾನಿಟೈಸರ್ ಮಾಡಲು ಕ್ರಮವಹಿಸಬೇಕು.

ಅಂಗಡಿ ಮಾಲಿಕರು ತಮ್ಮ ಅಂಗಡಿ ಮುಂಭಾಗದಲ್ಲಿ ಓರ್ವ ಸಿಬ್ಬಂದಿಯನ್ನು ನಿಯೋಜಿಸಿ ದಿನನಿತ್ಯ ಗ್ರಾಹಕರನ್ನು ಥರ್ಮಲ್ ಸ್ಕ್ಯಾನಿಂಗ್ ಮಾಡುವುದು. ಜ್ವರದ ಲಕ್ಷಣಗಳುಳ್ಳ ಗ್ರಾಹಕರ ಹೆಸರು ದೂರವಾಣಿ ಸಂಖ್ಯೆ ಮತ್ತು ವಿಳಾಸವನ್ನು ರಿಜಿಸ್ಟರ್ ನಲ್ಲಿ ನಮೂದಿಸುವುದು ಹಾಗೂ ತಮ್ಮ ವ್ಯಾಪ್ತಿಯಆರೋಗ್ಯಾಧಿಕಾರಿ ಹಾಗೂ ಮಹಾನಗರಪಾಲಿಕೆಗೆ ವರದಿ ನೀಡಬೇಕು.

ಜ್ವರದ ಲಕ್ಷಣಗಳುಳ್ಳ ಗ್ರಾಹಕರ ಕುರಿತು ವರದಿ ಮಹಾನಗರಪಾಲಿಕೆ ಹಾಗೂ ಆರೋಗ್ಯ ಇಲಾಖೆಗೆ ಸ್ವೀಕೃತವಾದ ತಕ್ಷಣವೇ ಮಹಾನಗರಪಾಲಿಕೆಯಿಂದ / ಜಿಲ್ಲಾಡಳಿತದಿಂದ ಆಂಬುಲೆನ್ಸ್ ವ್ಯವಸ್ಥೆಯನ್ನು ಮಾಡಿಕೋವಿಡ್ ಲಕ್ಷಣಗಳುಳ್ಳ ವ್ಯಕ್ತಿಯನ್ನುಕೋವಿಡ್‍ಕೇರ್ ಸೆಂಟರ್ ಗೆ ತಪಾಸಣೆಗೆ ಕಳುಹಿಸಬೇಕು.

ಅಂಗಡಿ ಮುಂಗಟ್ಟುಗಳಲ್ಲಿ ಸಾರ್ವಜಿನಿಕರು ಸಾಮಾಜಿಕ ಅಂತರವನ್ನುಕಾಯ್ದುಕೊಂಡಿರುವ ಬಗ್ಗೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುತ್ತಿರುವ ಬಗ್ಗೆ ಸಿಸಿಟಿವಿ ಕ್ಯಾಮರಾವನ್ನು ಅಳವಡಿಸಿ ರೆಕಾರ್ಡಿಂಗ್ ಮಾಡವುದು ಸಂಬಂಧಪಟ್ಟ ವರ್ತಕರ ಜವಾಬ್ದಾರಿಯಾಗಿರುತ್ತದೆ. ಸಿಸಿಟಿವಿ ರೆಕಾರ್ಡಿಂಗ್ ದಾಖಲೆಗಳನ್ನು ಸಂಬಂಧಪಟ್ಟ ಆರೋಗ್ಯ ಇಲಾಖಾಧಿಕಾರಿಗೆ ಹಾಗೂ ಆಯುಕ್ತರು ಮಂಗಳೂರು ಮಹಾನಗರಪಾಲಿಕೆ/ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು. ಮೇಲ್ಕಂಡ ಅಧಿಕಾರಿಗಳು ದಾಖಲೆಗಳನ್ನು ನಿಯಮಿತವಾಗಿ ಪರಿಶೀಲಿಸಿ ಸಾಮಾಜಿಕ ಅಂತರವನ್ನು ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದು/ ಪರವಾನಗಿರದ್ದು ಪಡಿಸುವಂತೆಕ್ರಮ ಕೈಗೊಳಲಾಗುವುದು.
ಯಾವುದೇ ಅಂಗಡಿಗಳಲ್ಲಿ ಮಾಸ್ಕ್‍ಧರಿಸದಿರುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದಿರುವುದು ಅಥವಾ ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಮೊದಲ ಬಾರಿಗೆರೂ.1000, ಎರಡನೇ ಮತ್ತು ಮೂರನೇ ಬಾರಿಗೆ ಕ್ರಮವಾಗಿರೂ.2000 ಮತ್ತುರೂ.3000 ದಂಡವನ್ನು ವಿಧಿಸಿ ಎಚ್ಚರಿಗೆ ನೀಡಲು ಹಾಗೂ ಮೂರಕ್ಕಿಂತ ಹೆಚ್ಚು ಬಾರಿ ಷರತ್ತುಗಳನ್ನು ಉಲ್ಲಂಘಸಿದ್ದಲ್ಲಿ ಅಂಗಡಿಗಳ ಪರವಾನಿಗೆಯನ್ನುರದ್ದು ಪಡಿಸಲು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಹಂತದಲ್ಲಿ ಸೂಕ್ತ ಉಪನಿಯಮಗಳನ್ನು ರಚಿಸಿ ಅದನ್ನು ಅನಿಷ್ಟಾನಗೊಳಿಸಬೇಕು.

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page