Connect with us

BANTWAL

ಹೆಡ್ಗೆವಾರ್ ಪಠ್ಯ ಸೇರ್ಪಡೆ ವಿರುದ್ಧ ಪುತ್ತೂರು-ಬಂಟ್ವಾಳದಲ್ಲಿ CFI ಪ್ರತಿಭಟನೆ

Published

on

ಬಂಟ್ವಾಳ: ಶಾಲಾ ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಸೇರ್ಪಡೆ ಮಾಡಿದ ಬಗ್ಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಈ ಪಠ್ಯವನ್ನು ಪುಸ್ತಕದಿಂದ ಹಿಂಪಡೆಯುವಂತೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿದೆ.

ಬಂಟ್ವಾಳದ ಕೈಕಂಬ ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನೆಯಲ್ಲಿ ಸಿಎಫ್‌ಐ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಅಶ್ಫಾಖ್ ಮಾತನಾಡಿ ‘ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂಬ ತಲೆಬರಹದಲ್ಲಿ ಹೆಡ್ಗೆವಾರ್ ಭಾಷಣವನ್ನು ಹತ್ತನೇ ತರಗತಿಯ ಕನ್ನಡ ಗದ್ಯಪುಸ್ತಕದಲ್ಲಿ ಐದನೇ ಪಠ್ಯವಾಗಿ ಸೇರಿಸಲಾಗಿದೆ.

ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಹೇಗೆ ಆದರ್ಶ ಪುರುಷನಾಗಲು ಸಾಧ್ಯವೆಂದು ಪ್ರಶ್ನಿಸಿದ ಪ್ರತಿಭಟನಾಕಾರರು ಉದ್ದೇಶಪೂರ್ವಕವಾಗಿ ಪಠ್ಯಪುಸ್ತಕದ ಪಠ್ಯ ಕ್ರಮವನ್ನು ಬ್ರಾಹ್ಮಣೀಕರಣಗೊಳಿಸುವ ಗುರಿಯೊಂದಿಗೆ ಸಂಘದ ಗರಡಿಯಲ್ಲಿ ಪಳಗಿರುವ ರೋಹಿತ್ ಚಕ್ರತೀರ್ಥ ರಂತಹವರನ್ನು ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳನ್ನು ಅರಿತು ಸಮಾಜದಲ್ಲಿ ಸೌಹಾರ್ದತೆ, ಸಾಮರಸ್ಯಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಕಲಿಕೆ, ವಿದ್ಯೆಯನ್ನು ನೀಡಬೇಕು ಹೊರತು ಹಿಂದೂ ರಾಷ್ಟ್ರವೆಂಬ ಸಂವಿಧಾನಕ್ಕೆ ಅಪಚಾರವೆಸಗುವ ದೇಶವಿರೋಧಿ ಆಲೋಚನೆ ಹೊಂದಿದ್ದ ವ್ಯಕ್ತಿಗಳ ಭಾಷಣ ಹೇಳಿ ಕೊಡುವ ಸರಕಾರದ ಈ ಕೃತ್ಯ ನೈಜ ಸ್ವಾತಂತ್ರ್ಯ ಹೋರಾಟಗಾರರರಿಗೆ ಅಪಮಾನ ಮಾಡುವಂತಿದೆ ಅದಲ್ಲದೆ, ಇದು ದೇಶದ್ರೋಹದ ನಡೆಯಾಗಿದೆ ಎಂದರು.

ಇನ್ನು ಪುತ್ತೂರಿನಲ್ಲಿ ಕೂಡಾ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಎ.ಸಿ ಕಚೇರಿ ಮುಂಭಾಗದಲ್ಲಿ ಹಾಗೂ ಪ್ರತಿಭಟನೆ ನಡೆಸಿತು.

ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ತನ್ನದೇ ಆದ ಹಿಂದೂ ರಾಷ್ಟ್ರದ ಕಲ್ಪನೆಯೊಂದಿಗೆ ಜನರ ದಾರಿ ತಪ್ಪಿಸಿದ ದೇಶದ್ರೋಹಿಯ ಭಾಷಣವನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದು ಶಿಕ್ಷಣದಲ್ಲಿ ಹಿಂದುತ್ವ ಸಿದ್ದಾಂತದ ಹೇರಿಕೆಯೆಂಬುದು ಸ್ಪಷ್ಟವಾಗಿದೆ, ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ವಿರೋಧಿಸುತ್ತಿದೆ ಹಾಗೂ ಈ ಹೆಡ್ಗೆವಾರ್ ಭಾಷಣವನ್ನು ಶೀಘ್ರ ಪಠ್ಯಕ್ರಮದಿಂದ ಕೈ ಬಿಡಬೇಕು ಎಂದು ಆಗ್ರಹಿಸಲಾಯಿತು.

BANTWAL

ಅಪ್ರಾಪ್ತೆಯ ಜೊತೆ ಅನುಚಿತ ವರ್ತನೆ ಪ್ರಕರಣ; ಆರೋಪಿಯ ಬಂಧಿಸುವಂತೆ ಒತ್ತಾಯ

Published

on

ಬಂಟ್ವಾಳ : ಪ್ರಮುಖ ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹಾಗೂ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕನಾಗಿದ್ದ ವ್ಯಕ್ತಿಯೊಬ್ಬರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿತನ ಮನೆಯಲ್ಲಿ ಕೆಲಸಕ್ಕಿದ್ದ ದಲಿತ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿ ದೈಹಿಕ ಕಿರುಕುಳ ನೀಡಿದ ಆರೋಪ ಮಾಡಲಾಗಿದೆ. ಕಳೆದ ಎರಡು ತಿಂಗಳಿನಿಂದ ಬಾಲಕಿ ಶಾಲೆಗೆ ಹೋಗದ ಹಿನ್ನೆಲೆಯಲ್ಲಿ ಶಿಕ್ಷಕರು ವಿಚಾರಿಸಲು ಬಂದಿದ್ದರು. ಈ ವೇಳೆ ಆರೋಗ್ಯ ಸರಿ ಇಲ್ಲ ಎಂದು ಬಾಲಕಿಯ ಬೇಟಿಗೂ ಅವಕಾಶ ನೀಡದೆ ವಾಪಸ್ ಕಳುಹಿಸಿದ್ದರು.

ಆದರೆ ಇದೀಗ ಈ ವಿಚಾರವಾಗಿ ಆರೋಪಿತನ ಗ್ರಾಮದ ಜನರೇ ಘಟನೆಯ ತನಿಖೆಗೆ ಒತ್ತಾಯಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿತ ಹೆಸರಿನಲ್ಲಿ ಪೋಕ್ಸೋ ಹಾಗೂ ದಲಿತ ದೌರ್ಜನ್ಯ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿತ ಪ್ರಭಲ ರಾಜಕೀಯ ಪಕ್ಷದವನಾಗಿದ್ದು, ಬ್ರಾಹ್ಮಣ ಸಮೂದಾಯಕ್ಕೆ ಸೇರಿದವನಾಗಿರುವ ಕಾರಣ ಹಲವರು ತಲೆ ತಗ್ಗಿಸುವಂತಾಗಿದೆ.

Continue Reading

BANTWAL

ಎರಡನೇ ವರ್ಷದ ಮೂಳೂರು-ಅಡ್ಡೂರು ಕಂಬಳದ ಆಹ್ವಾನ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಎರಡನೇ ವರ್ಷದ ಮೂಳೂರು-ಅಡ್ಡೂರು ಜೋಡು ಕರೆ ಕಂಬಳ ಎಪ್ರಿಲ್ 12 ರ ಶನಿವಾರ ನಡೆಯಲಿದೆ.


ಸಮಾಜ ಸೇವಕ ಹಾಗೂ ರಾಜಕೀಯ ನಾಯಕ ಇನಾಯತ್ ಅಲಿಯವರ ನೇತೃತ್ವದಲ್ಲಿ ಈ ಕಂಬಳ ಆಯೋಜನೆಯಾಗಿದೆ. ವಿಜೃಂಭಣೆಯಿಂದ ನಡೆಯುವ ಮೂಳುರು-ಅಡ್ಡೂರು ಜೋಡುಕರೆ ಕಂಬಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರ ಸಮಕ್ಷಮದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಎರಡನೇ ವರ್ಷದ ಕಂಬಳವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾಡಲಿದ್ದಾರೆ.

ಇದನ್ನೂ ಓದಿ: ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ 2 ತಿಂಗಳ ಗೃಹಲಕ್ಷ್ಮೀ ಹಣ 

ಸರ್ವ ಧರ್ಮಗಳ ಪ್ರಮುಖರ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಲಿದ್ದಾರೆ. ಹಲವಾರು ಚಲನ ಚಿತ್ರ ನಟ ನಟಿಯರು ಕೂಡಾ ಸಂಜೆಯ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದಾಗಿ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ಮಾಹಿತಿ ನೀಡಿದ್ದಾರೆ.

Continue Reading

BANTWAL

ಮಂಗಳೂರು : ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಬಸ್ ಪೊಲೀಸರ ವಶಕ್ಕೆ

Published

on

ಮಂಗಳೂರು : ವಿಟ್ಲ -ಮುಡಿಪು ಮಧ್ಯೆ 2 ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದನ್ನು ತಡೆದು ಸಾರ್ವಜನಿಕರು ನಿನ್ನೆ (ಮಾ.23) ವಿಟ್ಲ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಒಂದೇ ಟಯರಲ್ಲಿ ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸೊಂದು ಹಿಂದಿನ ಎಡಬದಿ ಟಯರ್‌ನಲ್ಲಿ ಮಾತ್ರ ಸಂಚರಿಸುತ್ತಿತ್ತು‌. ಇನ್ನೊಂದು ಟಯರ್ ಒಡೆದು ಕರ್ಕಶ ಶಬ್ದ ಬರುತ್ತಿತ್ತು.ಬಸ್‌ನ ಚಾಲಕ, ಕಂಡಕ್ಟರ್ ಮುಂಜಾಗ್ರತೆ ವಹಿಸಿಲ್ಲ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

ಶನಿವಾರ (ಮಾ.22) ಮಧ್ಯಾಹ್ನದಿಂದ ನಿನ್ನೆ (ಮಾ.23) ಮಧ್ಯಾಹ್ನ ತನಕ ವಿಟ್ಲ – ಮುಡಿಪು – ಮಂಗಳೂರು ಮಧ್ಯೆ ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದರೆಂದು ಪ್ರಯಾಣಿಕರೇ ಆರೋಪಿಸಿದ್ದಾರೆ. ಈ ಕುರಿತು ಮಾಹಿತಿ ಪಡೆದ ಸಾರ್ವಜನಿಕರು ಸಾಲೆತ್ತೂರು ಪೇಟೆಯಲ್ಲಿ ಬಸ್ಸನ್ನು ತಡೆ ಹಿಡಿದು ವಿಟ್ಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಬಂಟ್ವಾಳ ಸಾರಿಗೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಆದಷ್ಟು ಶೀಘ್ರವೇ ಈ ನಿರ್ಲಕ್ಷ್ಯದ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page