Connect with us

LATEST NEWS

ಇಂದಿನಿಂದ ಹೊಸ ರಿಯಾಲಿಟಿ ಶೋ ನಲ್ಲಿ ಮಿಂಚಲಿರುವ ಚೈತ್ರಾ ಕುಂದಾಪುರ

Published

on

ಬೆಂಗಳೂರು: ಹಿಂದೂ ಕಾರ್ಯಕರ್ತೆ, ಫೈರ್ ಬ್ರ್ಯಾಂಡ್, ಭಾಷಣಕಾರ್ತಿ ಹಾಗೂ ಬಿಗ್‌ಬಾಸ್ ಸೀಸನ್ 11 ರಲ್ಲಿ ಸಖತ್ ಫೇಮಸ್ ಆಗಿದ್ದ ಚೈತ್ರಾ ಕುಂದಾಪುರ ಇದೀಗ ಹೊಸ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಲಿದ್ದಾರೆ.

ಸೋಷಿಯಲ್ ಮೀಡಿಯಾ ಇರಬಹುದು, ಟಿವಿ ಚಾನೆಲ್‌ ಇರಬಹುದು ಎಲ್ಲೆಡೆ ಚೈತ್ರಾ ಕುಂದಾಪುರ ವಿವಾದಗಳಿಂದಲೇ ಸುದ್ದಿಯಲ್ಲಿ ಇದ್ದರು ಅದರಲ್ಲೂ ಹಿಂದೂ ವಿಚಾರಧಾರೆಗಳ ಕುರಿತಾಗಿ ಆವೇಶಭರಿತವಾಗಿ ಮಾತನಾಡೋದು ಚೈತ್ರಾ ಕುಂದಾಪುರ ಅವರ ಟ್ರೇಡ್ ಮಾರ್ಕ್‌ ಆಗಿತ್ತು.

ಚೈತ್ರಾ ಕುಂದಾಪುರ ಬಿಗ್‌ಬಾಸ್ ಕನ್ನಡ ಸೀಸನ್ 11ರಲ್ಲಿ 14ನೇ ಸ್ಪರ್ಧಿಯಾಗಿ ಪ್ರವೇಶ ಮಾಡಿದ್ದರು. ತನ್ನ ಮಾತುಗಳ ಮೂಲಕನೇ ಸ್ಪರ್ಧಿಗಳ ಬಾಯನ್ನು ಮುಚ್ಚಿಸುತ್ತಿದ್ದ ಈಕೆ ʼಕೇಡಿ ಜೋಡಿʼ ಎಂಬ ಬಿರುದು ಪಡೆದಿದ್ದಾರೆ. ದೊಡ್ಮನೆಯಲ್ಲಿ 105 ದಿನಗಳ ಕಾಲ ಇದ್ದು, ಇದೀಗ ಈ ಶೋ ಮುಗಿದ ಬಳಿಕ ಕಲರ್ಸ್‌ ಕನ್ನಡದ ಇನ್ನೊಂದು ಶೋ ಒಂದರಲ್ಲಿ ಕಾಣಿಸಿದ್ದಾರೆ.

ಇಂದಿನಿಂದ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಾರಂಭವಾಗುತ್ತಿರುವ ಬಾಯ್ಸ್‌ ವರ್ಸಸ್‌ ಗರ್ಲ್ಸ್‌ ಎಂಬ ಹೊಸ ರಿಯಾಲಿಟಿ ಶೋ ನಲ್ಲಿ ಭಾಗವಹಿಸಿದ್ದಾರೆ. ಬಾಯ್ಸ್ ಮತ್ತು ಗರ್ಲ್ಸ್ ಮಧ್ಯೆ ಮಹಾಯುದ್ಧ ನಡೆಯುವ ಶೋ ಇದಾಗಿದೆ. ಈ ಶೋನಲ್ಲಿ ರಜತ್ ಕಿಶನ್‌, ಭವ್ಯಾ ಗೌಡ ಹಾಗೂ ಹನುಮಂತ ಕೂಡ ಇರಲಿದ್ದಾರೆ ಎನ್ನಲಾಗಿದೆ. ಇನ್ನು ಪ್ರತಿ ಶನಿವಾರ-ಭಾನುವಾರ ರಾತ್ರಿ 7.30ಕ್ಕೆ ಈ ಶೋ ಪ್ರಸಾರವಾಗಲಿದೆ.

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಪ್ರಭುದೇವ

Published

on

ಕಡಬ : ಇತ್ತೀಚೆಗೆ ಕರಾವಳಿಯ ದೇಗುಲಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇಂದು (ಮಾ.15) ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪತ್ನಿ ಹಾಗೂ ಕುಟುಂಬ ವರ್ಗದವರ ಜೊತೆಗೂಡಿ ಆಗಮಿಸಿದ್ದ ಪ್ರಭುದೇವ ಮಹಾಭಿಷೇಕ ಪೂಜೆಯನ್ನು ನೆರವೇರಿಸಿ, ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ : “ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

ಈ ಸಂದರ್ಭ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ  ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.

Continue Reading

LATEST NEWS

ವಿಧವೆ ಎಂದು ಬಾಳು ಕೊಟ್ಟವನ ಬಾಳಲ್ಲಿ ವಿಧಿಯಾಟ!

Published

on

ಶಿವಮೊಗ್ಗ : ಯಾರ ಹಣೆಬರಹದಲ್ಲಿ ಏನು ಬರೆದಿರುತ್ತದೆ ಎನ್ನುವುದನ್ನು ಊಹಿಸುವುದೂ ಅಸಾಧ್ಯ. ಕೆಲವೊಬ್ಬರ ಜೀವನದಲ್ಲಿ ವಿಧಿಯಾಡುವ ಆಟ ನೋಡಿ ಕಲ್ಲು ಹೃದಯಗಳೂ ಕರಗುತ್ತದೆ. ಏನೋ ಒಳ್ಳೆಯದು ಮಾಡಲು ಹೋಗಿ ಅದು ತಿರುಗುಬಾಣವಾದರೆ ಆ ವ್ಯಕ್ತಿಯ ಪರಿಸ್ಥಿತಿ ಹೇಗಾಗಬೇಡ ? ಇದೀಗ ಅಂತಹದ್ದೇ ಘಟನೆಯೊಂದು ಶಿವಮೊಗ್ಗದಲ್ಲಿ ನಡೆದಿದ್ದು, ವಿಧವೆ ಎಂದು ಬಾಳುಕೊಟ್ಟವನ ಬಾಳಿನಲ್ಲಿ ವಿಧಿಯಾಡಿದ ಆಟವ ಕಂಡು ಬಾಯಿಗೆ ಬೀಗಹಾಕಿದಂತಾಗಿದೆ. ಏನದು ಘಟನೆ ಗೊತ್ತಾ ? ಇಲ್ಲಿದೆ ನೋಡಿ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊಸಕೊಪ್ಪ ಮೌನೇಶ್‌ ಎಂಬಾ ಯುವಕ 32 ವರ್ಷದ ವಿಧವೆ ದೀಪಿಕಾಳನ್ನು ಮದುವೆಯಾಗಿ ಬಾಳು ಕೊಟ್ಟಿದ್ದು ಬಹಳ ಸುಂದರ ಭವಿಷ್ಯದ ಕನಸು ಕಂಡಿದ್ದ. ಆದರೆ ನಂತರ ನಡೆದಿದ್ದೇ ಬೇರೆ. ವಿಧವೆ ಎಂದು ಬಾಳು ಕೊಟ್ಟ ಯುವಕನ ಜೀವನದಲ್ಲಿ ಬರಸಿಡಿಲಿನಂತಹ ಸುದ್ದಿ ಬಡಿದಿದೆ. ‘ಜೀವನಪೂರ್ತಿ ಜೊತೆಯಾಗಿ ಇರುತ್ತೇನೆ’ ಎಂದು ಮಾತುಕೊಟ್ಟು ಸಪ್ತಪದಿ ತುಳಿದವಳು 15 ದಿನಕ್ಕೆ ಗಂಡನನ್ನು ಬಿಟ್ಟು ಎಸ್ಕೇಪ್ ಆಗಿದ್ದಾಳೆ.

ತಂದೆ ತಾಯಿ ಇಲ್ಲದ ಅನಾಥ ಮೌನೇಶ್ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹೊಸಕೊಪ್ಪದಲ್ಲಿ ಕೆಲಸ ಮಾಡಿಕೊಂಡಿದ್ದ. ಈಗಾಗಲೇ ಮದುವೆಯಾಗಿ ಒಂದು ಮಗು ಇರುವ ದೀಪಿಕಾ 10 ವರ್ಷಗಳ ಹಿಂದೆಯೇ ಗಂಡನನ್ನು ಕಳೆದುಕೊಂಡಿದದ್ದಳು. ಹಾಗಾಗಿ ವಿಧವೆಗೆ ಬಾಳು ನೀಡುವ ಸದುದ್ದೇಶದಿಂದ ದೀಪಿಕಾಳನ್ನು ಫೆ.7 ರಂದು ನವುಲೆಯ ಚೌಡೇಶ್ವರಿ ದೇವಾಲಯದಲ್ಲಿ ಸರಳವಾಗಿ ವಿವಾಹವಾಗಿದ್ದರು. ನಂತರ ಇವರಿಬ್ಬರು ಧರ್ಮಸ್ಥಳ ಸೇರಿ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದರು. ಆದರೆ ಮದುವೆಯಾ ಎರಡನೇ ದಿನಕ್ಕೆ ತವರು ಮನೆ ಸೇರಿದ ಈಕೆ 15 ನೇ ದಿನಕ್ಕೆ ಗಂಡನಿಗೆ ಕೈ ಕೊಟ್ಟು ಎಸ್ಕೇಪ್‌ ಆಗಿದ್ದಾಳೆ.

ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಘಟನೆ ಕುರಿತು ಮವನೇಶ್ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

“ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

Published

on

ಮಂಗಳೂರು: ಕರ್ನಾಟಕದ ಜಾದೂ ಕಲಾವಿದ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಗೆ ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

ಈ ಪ್ರಶಸ್ತಿಯು ಭಾರತದ ಅಗ್ರಗಣ್ಯ ಜಾದೂಗಾರ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ-ವಿದೇಶದ ಹತ್ತು ಜಾದೂ ಸಾಧಕರಿಗೆ ಪ್ರಶಸ್ತಿಯನ್ನು ನೀಡಿದೆ. ವಿಶಾಖಪಟ್ಟಣದ ಲೋಕಸಭಾ ಸದಸ್ಯ ಭರತ್ ಮುತ್ತುಕುಮುಲಿ ಅವರು ಕುದ್ರೋಳಿ ಗಣೇಶ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್, ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೋಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ಧಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ ಎಂದರು.

ಕುದ್ರೋಳಿ ಗಣೇಶ್ ಅವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು, ದೇಶದಾದ್ಯಂತ ಹಾಗೂ ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page