Connect with us

FILM

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

Published

on

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ.

ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ ಮಾಡಿದ್ದ ದರ್ಶನ್ ಕೊರಗಜ್ಜನ ಗುಡಿಗೆ ತೆರಳಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವರ ಮುಂದೆ ಕೈ ಮುಗಿಯುತ್ತಾ ನಿಂತಿರುವ ದರ್ಶನ್ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಇತ್ತೀಚೆಗೆ ನಟ ದರ್ಶನ್ ಮಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ತನ್ನ ಸ್ನೇಹಿತರ ಜೊತೆಗೂಡಿ, ಕೊರಗಜ್ಜನ ಗುಡಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದಿದ್ದಾರೆ. ಕೊರಗಜ್ಜನ ಮುಂದೆ ಕೈಮುಗಿದು ನಿಂತಿರುವ ಡಿ ಬಾಸ್ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತುಳುನಾಡ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿವೆ.

ಮಹಾಮಾರಿ ಕೊರೊನಾ ವೈರಸ್ ಹಿನ್ನಲೆ ಇಡೀ ದೇಶದಲ್ಲಿ ಲಾಕ್ ಡೌನ್ ಹೇರಲಾಗಿತ್ತು. ಈ ಸಂದರ್ಭ ದರ್ಶನ ತಮ್ಮ ಸಾಕು ಪ್ರಾಣಿಗಳ ಜೊತೆ ಕಾಲ ಕಳೆದಿದ್ದಾರೆ. ಇದೇ ವೇಳೆ ಸ್ವಲ್ಪ ಬಿಡುವು ಮಾಡಿಕೊಂಡು ಕ್ಷೇತ್ರ ಭೇಟಿ ಮಾಡಿದ್ದರು.

ಹೀಗೆ ಕ್ಷೇತ್ರ ಭೇಟಿಯಲ್ಲಿದ್ದ ಡಿ ಬಾಸ್ ತನ್ನ ಸ್ನೇಹಿತರೊಂದಿಗೆ ಮಂಗಳೂರಿಗೆ ಕೂಡ ಭೇಟಿ ಕೊಟ್ಟರು. ಮೊದಲೇ ತಮ್ಮ ಸ್ನೇಹಿತರ ಮೂಲಕ ಕೊರಗಜ್ಜನ ಪವಾಡ ಅರಿತಿದ್ದ ಡಿಬಾಸ್, ಇದೇ ಸಂದರ್ಭದಲ್ಲಿ ಕೊರಗಜ್ಜನ ಕ್ಷೇತ್ರಕ್ಕೆ ತೆರಳಿ ಅಜ್ಜನ ಮುಂದೆ ತಮ್ಮ ಕೋರಿಕೆಯನ್ನು ಇರಿಸಿದ್ದರು.

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading

FILM

ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

Published

on

ಮಂಗಳೂರು/ಬೆಂಗಳೂರು : ಆದಿಲಕ್ಷ್ಮೀ ಪುರಾಣ ಇತ್ತೀಚೆಗೆ ಆರಂಭಗೊಂಡಿರುವ ಧಾರಾವಾಹಿ. ಆರಂಭದಿಂದಲೇ ಜನರ ಮೆಚ್ಚುಗೆ ಗಳಿಸುತ್ತಾ ಸಾಗುತ್ತಿರುವ ಸೀರಿಯಲ್. ಕಥೆ, ಪಾತ್ರವರ್ಗ ಎಲ್ಲವೂ ಜನರಿಗೆ ಇಷ್ಟವಾಗಿದೆ. ಆದರೆ, ಇದೀಗ ಈ ಧಾರಾವಾಹಿಯ ಅಭಿಮಾನಿಗಳಿಗೆ ಬೇಸರ ತರಿಸುವ ವಿಚಾರವೊಂದು ಹೊರ ಬಿದ್ದಿದೆ. ಹೌದು, ಈ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದ ನಟಿಯೊಬ್ಬರು ಹೊರಬಂದಿದ್ದಾರೆ.

ರಕ್ಷಿತಾ ಔಟ್:

ಈ ಧಾರಾವಾಹಿಯಲ್ಲಿ ಒಂದೆಡೆ ಲಕ್ಷ್ಮೀ ಪಾತ್ರವೂ ಪ್ರಧಾನವಾಗಿದ್ದಾರೆ. ಅಮೃತಾ ಪಾತ್ರ ಕೂಡ ಪ್ರಮುಖವಾಗಿದೆ. ಈಗಾಗಲೇ ಕೆಲವೊಂದು ಧಾರಾವಾಹಿಗಳಲ್ಲಿ ನಟಿಸಿ ಗಮನ ಸೆಳೆದಿದ್ದ ರಕ್ಷಿತಾ, ಅಮೃತಾ ಆಗಿ ಜನಮನ ಗೆದ್ದಿದ್ದರು. ಆದರೆ, ಈಗ ಧಾರಾವಾಹಿಯಿಂದ ಹೊರಬಂದಿದ್ದಾರೆ ಎಂಬ ವಿಚಾರ ಸದ್ದು ಮಾಡುತ್ತಿದೆ.

ರಕ್ಷಿತಾ ಚೆನ್ನಾಗಿ ಓದಿಕೊಂಡಿದ್ದರು. ಆದರೆ, ಬಣ್ಣದ ಲೋಕ ಅವರನ್ನು ಸೆಳೆದಿತ್ತು. ನಾಲ್ಕು ಕಂಪೆನಿಗಳ ಜಾಬ್ ಆಫರ್ ಲೆಟರ್ ತ್ಯಜಿಸಿ ಆಕೆ ಕಿರುತೆರೆಗೆ ಲಗ್ಗೆ ಇಟ್ಟಿದ್ದರು. ಮಧುಮಗಳು ಧಾರಾವಾಹಿ ಮೂಲಕ ಗಮನ ಸೆಳೆದಿದ್ದ ಅವರು, ಆದಿಲಕ್ಷ್ಮೀ ಪುರಾಣದ ಮೂಲಕ ಮತ್ತಷ್ಟು ಜನಪ್ರಿಯರಾಗಿದ್ದರು.

ಧಾರಾವಾಹಿ ತೊರೆದಿದ್ದು ಯಾಕೆ?

ಆದಿಲಕ್ಷ್ಮೀ ಪುರಾಣ ಎರಡು ಜೋಡಿ ಮದುವೆಯ ಮೇಲೆ ಹೆಣೆಯಲಾದ ಕಥೆ. ಅಮೃತಾ ಇಷ್ಟವಿಲ್ಲದೆ ಸಂಜೀವನನ್ನು ಮದುವೆಯಾದ್ರೆ, ಅತ್ತ ಅನಿರೀಕ್ಷಿತ ತಿರುವು ಎಂಬಂತೆ ಆದಿ ಲಕ್ಷ್ಮೀ ಮದುವೆಯಾಗುತ್ತಾರೆ. ಮುಂದೇನು ಎಂಬ ಕುತೂಹಲದೊಂದಿಗೆ ಧಾರಾವಾಹಿ ಸಾಗುತ್ತಿದೆ. ಇದೀಗ ಅಮೃತಾ ಪಾತ್ರದಲ್ಲಿ ನಟಿಸಿದ್ದ ರಕ್ಷಿತಾ ಸೀರಿಯಲ್‌ನಿಂದ ಹೊರಗೆ ಬಂದಿರುವುದು ಅಭಿಮಾನಿಗಳಿಗೆ ಶಾ*ಕ್ ಕೊಟ್ಟಿದೆ. ರಕ್ಷಿತಾ ಧಾರಾವಾಹಿಯಿಂದ ಹೊರಬಂದಿರುವ ಬಗ್ಗೆ ಸೀರಿಯಲ್ ತಂಡವಾಗಲಿ, ರಕ್ಷಿತಾವಾಗಲಿ ಮಾಹಿತಿ ಹಂಚಿಕೊಂಡಿಲ್ಲ.

ಇದನ್ನೂ ಓದಿ : ದಳಪತಿ ವಿಜಯ್ ಪತ್ನಿ ಸಂಗೀತಾರಿಂದ ಕೋರ್ಟ್‌ಗೆ ಹೊಸ ಅರ್ಜಿ!

ರಕ್ಷಿತಾ ಜಾಗಕ್ಕೆ ಯಾರು?

ಅಮೃತಾ ಆಗಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ರಕ್ಷಿತಾ ಸೀರಿಯಲ್ ತೊರೆದಿದ್ದು, ಆ ಜಾಗಕ್ಕೆ ಹೊಸ ನಟಿಯ ಎಂಟ್ರಿಯಾಗಿದೆ. ಮಾನಸಿ ಜೋಷಿ ಅಮೃತಾ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಈ ಹಿಂದೆ ಪಾರು ಧಾರಾವಾಹಿಯಲ್ಲಿ ಮಾನಸಿ ನಟಿಸಿ ಮೆಚ್ಚುಗೆ ಗಳಿಸಿದ್ದರು.  ರಕ್ಷಿತಾ ಧಾರಾವಾಹಿಯಿಂದ ಹೊರನಡೆದಿರುವ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

Continue Reading

FILM

ದಳಪತಿ ವಿಜಯ್ ಪತ್ನಿ ಸಂಗೀತಾರಿಂದ ಕೋರ್ಟ್‌ಗೆ ಹೊಸ ಅರ್ಜಿ!

Published

on

ತಮಿಳು ನಟ ಮತ್ತು ಟಿ.ವಿ.ಕೆ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರ ಪತ್ನಿ ಸಂಗೀತಾ ಸ್ವರ್ಣಲಿಂಗಂ, ತಮ್ಮ ನಡೆಯುತ್ತಿರುವ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹೊಸ ಅರ್ಜಿಯೊಂದನ್ನು ಸಲ್ಲಿಸಿದ್ದಾರೆ.


ಚೆನ್ನೈನ ನೀಲಂಕರೈನಲ್ಲಿರುವ ತಮ್ಮ ವೈವಾಹಿಕ ಮನೆಯಲ್ಲಿ ವಾಸಿಸುವ ಹಕ್ಕನ್ನು ನೀಡುವಂತೆ ಮತ್ತು ಪ್ರಕರಣ ಇತ್ಯರ್ಥವಾಗುವವರೆಗೆ ಅಲ್ಲಿಂದ ತಮ್ಮನ್ನು ಹೊರಹಾಕದಂತೆ ರಕ್ಷಣೆ ನೀಡಲು ಸಂಗೀತಾ ಅವರು ಮಧ್ಯಂತರ ಆದೇಶವನ್ನು ಕೋರಿದ್ದಾರೆ.

ಸಂಗೀತಾ ಅವರು ಬ್ರಿಟಿಷ್ ನಾಗರಿಕಳಾಗಿದ್ದು, ಚೆನ್ನೈನಲ್ಲಿ ತಮಗೆ ಬೇರೆ ಸ್ವಂತ ಮನೆ ಇಲ್ಲದಿರುವುದರಿಂದ ಇದೇ ಮನೆಯಲ್ಲಿ ಉಳಿಯಲು ಅನುಮತಿ ನೀಡಬೇಕೆಂದು ಅರ್ಜಿಯಲ್ಲಿ ತಿಳಿಸಿದ್ದಾರೆ. ವಿಜಯ್ ಅವರ ವಕೀಲರು ಮನೆಯಿಂದ ಹೊರಹೋಗುವಂತೆ ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ.

ಇದನ್ನೂ ಓದಿ: ದಳಪತಿ ವಿಜಯ್‌ರ ‘ಜನ ನಾಯಗನ್’ ಚಿತ್ರಕ್ಕೆ ಮತ್ತೆ ಸಂಕಷ್ಟ

ಈ ಪ್ರಕರಣವು ಪ್ರಸ್ತುತ ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿದ್ದು, ಮುಂದಿನ ವಿಚಾರಣೆಯು ಮಾರ್ಚ್ 30ರಂದು ನಡೆಯುವ ಸಾಧ್ಯತೆಯಿದೆ. ಅಂದು ನಟ ವಿಜಯ್ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ವಿಜಯ್ ಮತ್ತು ಸಂಗೀತಾ 1999 ರಲ್ಲಿ ವಿವಾಹವಾಗಿದ್ದು, 27 ವರ್ಷಗಳ ದಾಂಪತ್ಯದ ನಂತರ ಈಗ ವಿಚ್ಛೇದನದ ಹಂತಕ್ಕೆ ತಲುಪಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page