Connect with us

LATEST NEWS

ಚೆನ್ನೈ: ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಧುಮುಕಿ ಹೀನಾಯ ಪರಾಭವ ಕಂಡ  ಅಣ್ಣಾಮಲೈ..!

Published

on

ಚೆನ್ನೈ:ಬಿಜೆಪಿ ಅಭ್ಯರ್ಥಿಯಾಗಿ ತಮಿಳುನಾಡು ವಿಧಾನಸಭೆಗೆ ಸ್ಪರ್ಧಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪರಾಭವಗೊಂಡಿದ್ದಾರೆ. ಅರುವಕುರಿಚ್ಚಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಣ್ಣಾಮಲೈ ಅವರನ್ನು ಡಿಎಂಕೆಯ ಆರ್.ಎಳಂಗೊ ಸೋಲಿಸಿದ್ದಾರೆ.ಕರ್ನಾಟಕದ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಅಧೀಕ್ಷಕರಾಗಿ ಅಣ್ಣಾಮಲೈ ಸೇವೆ ಸಲ್ಲಿಸಿದ್ದರು. ಕಳೆದ ವರ್ಷ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಕೆಲವು ತಿಂಗಳುಗಳ ಬಳಿಕ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

ಈ ನಡುವೆ ಅಣ್ಣಾಮಲೈ ಚುನಾವಣೆಗೆ ಸ್ಪರ್ಧಿಸಿ ಗೆಲ್ಲುವುದು ಖಚಿತ ಎಂದೇ ಹೇಳಲಾಗುತ್ತಿತ್ತು. ಆದರೆ ಇವರ ಸೋಲಿನ ಬಗ್ಗೆ ಹೇಳುವುದಾದರೆ ರಾಜಕೀಯದಲ್ಲಿ ಗೆಲ್ಲುವ ಲಕ್‌ ಕೂಡಾ ಇರಬೇಕು ಎನ್ನುವುದನ್ನು ತೋರಿಸಿಕೊಟ್ಟಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಸಿಡಿಲು ಬಡಿದು ಕೂಲಿ ಕಾರ್ಮಿಕ ಸಾವು

Published

on

ಹರಪನಹಳ್ಳಿ: ಸಿಡಿಲು ಬಡಿದು ಕೂಲಿ ಕಾರ್ಮಿಕನೊಬ್ಬ ಸಾವನ್ನಪ್ಪಿದ ಘಟನೆ ಹರಪನಹಳ್ಳಿಯ ತೆಲಿಗಿ ಗ್ರಾಮದ ಚೆನ್ನಗಿರಿಯಲ್ಲಿ ನಡೆದಿದೆ.

ಹಾಲೇಶಪ್ಪ (48) ಮೃತಪಟ್ಟ ಕಾರ್ಮಿಕ. ಜೊತೆಗೆ ಆತನೊಂದಿಗಿದ್ದ ಆಕಳು ಕೂಡ ಸಿಡಿಲು ಬಡಿದು ಸತ್ತು ಹೋಗಿದೆ.

ಜಮೀನೊಂದರಲ್ಲಿ ಹಾಲೇಶಪ್ಪನು ಆಕಳನ್ನು ಮೇಯಿಸುತ್ತಿದ್ದ. ಈ ವೇಳೆ ಗುಡುಗು ಮಿಂಚು ಸಹಿತ ಸುರಿದ ಭಾರೀ ಮಳೆಗೆ ಹಾಲೇಶಪ್ಪನಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ತಹಶೀಲ್ದಾರ ಬಿ ವಿ ಗಿರೀಶ್ ಬಾಬು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಲುವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಕ್ರಿಕೆಟಿಗ ಅಖ್ತರ್ ಸೇರಿದಂತೆ ಪಾಕಿಸ್ತಾನದ 16 ಯೂಟ್ಯೂಬ್‌ ಚಾನೆಲ್‌ಗಳು ಬ್ಯಾನ್

Published

on

ಮಂಗಳೂರು/ನವದೆಹಲಿ : ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯಿಂದ ಭಾರತ  ಹಾಗೂ ಪಾಕ್ ನಡುವಿನ ಸಂಬಂಧ ಇನ್ನಷ್ಟು ಹದಗೆಟ್ಟಿದೆ. ಭಾರತ ಪಾಕ್ ವಿರುದ್ಧ ಹಲವು ಕ್ರ,ಮಕ್ಕೆ ಮುಂದಾಗಿದೆ.  ಈ ನಡುವೆ ಭಾರತದ ವಿರುದ್ಧ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ ಎಂದು ವರದಿಯಾಗಿದೆ.

ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ, ಸೇನೆಯ ವಿರುದ್ಧ ಪ್ರಚೋದನಕಾರಿ, ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಸುಳ್ಳು ಸುದ್ದಿಗಳನ್ನು ಹರಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ.

ಪಾಕಿಸ್ತಾನದ ಪ್ರಮುಖ ಸುದ್ದಿ ಸಂಸ್ಥೆಗಳು ಮತ್ತು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಸೇರಿದಂತೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಶಿಕ್ಷಕನಾಗಿದ್ದ ಆದಿಲ್ ಹುಸೇನ್ ಉಗ್ರನಾಗಿದ್ದು ಹೇಗೆ?

ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ಜಿಯೋ ನ್ಯೂಸ್, ರಫ್ತಾರ್ ಮತ್ತು ಸುನೋ ನ್ಯೂಸ್‌ನಂತಹ ಪ್ರಮುಖ ಪಾಕಿಸ್ತಾನಿ ಸುದ್ದಿವಾಹಿನಿಗಳನ್ನು ನಿಷೇಧಿಸಲಾಗಿದೆ.

 

 

 

Continue Reading

LATEST NEWS

ಶಿಕ್ಷಕನಾಗಿದ್ದ ಆದಿಲ್ ಹುಸೇನ್ ಉಗ್ರನಾಗಿದ್ದು ಹೇಗೆ?

Published

on

ಮಂಗಳೂರು/ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯ ‘ಮಾಸ್ಟರ್‌ಮೈಂಡ್‌’ಗಳ ಪೈಕಿ ಕಾಶ್ಮೀರದ ಸ್ಥಳೀಯ ನಿವಾಸಿ ಆದಿಲ್ ಹುಸೇನ್ ಥೋಕರ್ ಹೆಸರು ಕೂಡ ಕೇಳಿ ಬಂದಿದೆ.

ಆದಿಲ್ ಹುಸೇನ್, ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದಾನೆ ಎಂದು ಎನ್‌ಐಎ ಹೇಳಿದೆ.

ಮಾಧ್ಯಮಗಳ ವರದಿಯ ಪ್ರಕಾರ, ಆದಿಲ್ ಅನಂತನಾಗ್ ಜಿಲ್ಲೆಯ ಗುರಿ ಗ್ರಾಮಕ್ಕೆ ಸೇರಿದವನು ಎಂದು ತಿಳಿದುಬಂದಿದೆ. ಮೃದು ಭಾಷಿಯಾಗಿದ್ದ ಆತ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನಾಗಿದ್ದ. ಆದರೆ ಈತ ಇಂತಹ ದೊಡ್ಡ ಪ್ರಮಾಣದ ದಾಳಿಗೆ ಸಂಚು ರೂಪಿಸುತ್ತಾನೆ ಎಂದು ಯಾರೂ ಊಹಿಸಿರಲಿಲ್ಲ ಎಂದು ಸ್ಥಳೀಯರು ಹೇಳಿದ್ದಾರೆ.

ಶಿಕ್ಷಕನಾಗಿದ್ದ ಆದಿಲ್ ಹುಸೇನ್ ಕ್ರಮೇಣ ಮೂಲಭೂತವಾದದತ್ತ ಆಕರ್ಷಿತನಾಗಿದ್ದ. 2010ರಲ್ಲಿ, ಗುಂಡಿನ ಚಕಮಕಿಗಳಲ್ಲಿ ಹತರಾದ ಉಗ್ರರ ಅಂತ್ಯಕ್ರಿಯೆಗಳಲ್ಲಿ ಈತ ಪಾಲ್ಗೊಳ್ಳುತ್ತಿದ್ದ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಪಹಲ್ಗಾಮ್ ಉಗ್ರ ದಾಳಿ ವಿರೋಧಿಸಿ ಪ್ರತಿಭಟನೆ; ಕುತ್ತಿಗೆ ಕತ್ತರಿಸುವುದಾಗಿ ಬೆದರಿಕೆ ಹಾಕಿದ ಪಾಕ್ ಸೇನಾ ಅಧಿಕಾರಿ

2018ರಲ್ಲಿ ಕಾನೂನುಬದ್ದವಾಗಿಯೇ ವೀಸಾ ಪಡೆದು ಆತ ಪಾಕಿಸ್ತಾನಕ್ಕೆ ತೆರಳಿದ್ದ. ವೈಯಕ್ತಿಕ ಕಾರಣಗಳಿಗಾಗಿ ಅಲ್ಲಿಗೆ ತೆರಳಿದ್ದ ಎಂದು ತೋರಿಕೆಗೆ ಕಂಡುಬಂದರೂ ನಂತರ ಆತ ಎಲ್‌ಇಟಿ ಸೇರಿದ್ದ. ಕಳೆದ ವರ್ಷ ಗುಪ್ತವಾಗಿ ಭಾರತ ಪ್ರವೇಶಿಸಿದ್ದ. ದೋಡಾ ಮತ್ತು ಕಿಶ್ತವಾಡ ಪ್ರದೇಶಗಳಲ್ಲಿ ಸಕ್ರಿಯವಾಗಿದ್ದ ಎಂದು ವರದಿಯಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page