Connect with us

LATEST NEWS

ಅಖಿಲ ಭಾರತೀಯ ಅಖಾಡ ಪರಿಷದ್‌ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅನುಮಾನಾಸ್ಪದ ಸಾವು: ಓರ್ವ ಶಿಷ್ಯನ ಬಂಧನ

Published

on

ಪ್ರಯಾಗ್‌ರಾಜ್: ಅಖಿಲ ಭಾರತೀಯ ಅಖಾಡ ಪರಿಷದ್ (ಎಬಿಎಪಿ) ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಅವರು ಪ್ರಯಾಗ್‌ರಾಜ್‌ನಲ್ಲಿನ ಶ್ರೀ ಮಠ ಮಘಾಂಬರಿ ಗಡ್ಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 62 ವರ್ಷದ ಅವರ ದೇಹ ಕೊಠಡಿಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.

ಕೊಠಡಿಯಲ್ಲಿ ಆತ್ಮಹತ್ಯೆ ಚೀಟಿಯನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತಮ್ಮ ಶಿಷ್ಯರಲ್ಲಿ ಒಬ್ಬರಾದ ಆನಂದ್ ಗಿರಿಯಿಂದ ಮಾನಸಿಕ ಹಿಂಸೆ ಅನುಭವಿಸಿದ್ದು, ಈ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಡ ಹೇರಿತ್ತು ಎಂಬುದಾಗಿ ಅವರು ಅದರಲ್ಲಿ ಆರೋಪಿಸಿದ್ದಾರೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಮಾನ್ಯತೆ ಪಡೆದಿರುವ 13 ಹಿಂದೂ ಸನ್ಯಾಸ ಸಂಸ್ಥೆಗಳ ಸರ್ವೋಚ್ಛ ನಿರ್ಣಾಯಕ ಸಂಸ್ಥೆಯಾಗಿರುವ ಎಬಿಎಪಿಯ ಮುಖ್ಯಸ್ಥರಾಗಿದ್ದ ನರೇಂದ್ರ ಗಿರಿ ಅವರ ಸಾವು ಅನೇಕ ಸಂದೇಹಗಳಿಗೆ ಕಾರಣವಾಗಿದೆ.
ಈ ಘಟನೆಯ ಬಗ್ಗೆ ಗಿರಿ ಅವರ ಶಿಷ್ಯಂದಿರುವ ಸೋಮವಾರ ಸಂಜೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳುವ ವೇಳೆಗೆ ಮಹಾಂತ ನರೇಂದ್ರ ಗಿರಿ ಅವರ ಅನುಯಾಯಿಗಳು ಬಾಗಿಲು ಒಡೆದು ಕುಣಿಕೆಯಿಂದ ಅವರ ದೇಹವನ್ನು ಕೆಳಕ್ಕಿಳಿಸಿದ್ದರು ಎಂದು ಎಡಿಜಿ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಕೈಬರಹದಲ್ಲಿ ಬರೆಯಲಾದ ಆತ್ಮಹತ್ಯಾ ಚೀಟಿ ಪತ್ತೆಯಾಗಿದೆ. ಅದರಲ್ಲಿ ಅವರು ತಮ್ಮ ಒಬ್ಬ ಶಿಷ್ಯನ ವಿರುದ್ಧ ಆರೋಪ ಮಾಡಿದ್ದಾರೆ.

ಆನಂದ್ ಗಿರಿ ಮಾನಸಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿದ್ದಾರೆ. ಘಟನೆಯ ಸನ್ನಿವೇಶ ಹಾಗೂ ಆತ್ಮಹತ್ಯೆಯ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಮೂವರ ಬಂಧನ
ನರೇಂದ್ರ ಗಿರಿ ಪತ್ರದಲ್ಲಿ ಆರೋಪಿಸಿರುವ ಆನಂದ್ ಗಿರಿ ಹಾಗೂ ಮಹಾಂತ ಅವರೊಂದಿಗೆ ವಾಸಿಸುತ್ತಿದ್ದ ಸಂದೀಪ್ ತಿವಾರಿ ಮತ್ತು ಆದ್ಯ ತಿವಾರಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆನಂದ್ ಗಿರಿ, ಮಹಾಂತ ಅವರ ಅತಿ ಆಪ್ತ ಶಿಷ್ಯನಾಗಿದ್ದು, ಮೇ ತಿಂಗಳಲ್ಲಿ ಅವರ ನಡುವೆ ಮನಸ್ತಾಪ ಉಂಟಾಗಿತ್ತು.

ವಂಚನೆ ಹಾಗೂ ಆರ್ಥಿಕ ಅವ್ಯವಹಾರಗಳು ನಡೆದಿದೆ ಎಂದು ಪೂಜಾರಿಗಳ ಗುಂಪು ಆರೋಪಿಸಿದ ಬಳಿಕ ಆನಂದ್ ಗಿರಿಯನ್ನು ಹೊರಗಟ್ಟಲಾಗಿತ್ತು. ಕೆಲವು ದಿನಗಳ ಬಳಿಕ, ತನ್ನ ಗುರುವಿನ ಕಾಲಿಗೆ ಬಿದ್ದು ಆನಂದ್ ಗಿರಿ ಕ್ಷಮಾಪಣೆ ಕೋರುವ ವಿಡಿಯೋ ಹರಿದಾಡಿತ್ತು.

ಆದರೆ ಈ ಸಂಧಾನ ಹೆಚ್ಚು ಸಮಯ ಉಳಿದಿರಲಿಲ್ಲ ಎಂದು ಪೊಲೀಸರು ಶಂಕಿಸಿದ್ದಾರೆ.
ಇದು ಕೊಲೆ ಎಂದ ಆನಂದ್ ಗಿರಿ
ಹರಿದ್ವಾರದ ಶ್ಯಾಂಪುರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದ ಬಂಧನಕ್ಕೆ ಒಳಗಾಗುವ ಮುನ್ನ ಘಾಜಿವಾಲಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಷ್ಯ ಆನಂದ್ ಗಿರಿ ಆತ್ಮಹತ್ಯಾ ಪತ್ರದಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವುದು ಸಂಚಿನ ಭಾಗ ಎಂದು ಆರೋಪಿಸಿದ್ದಾರೆ.

DAKSHINA KANNADA

7 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿ, ಲುಕ್ ಔಟ್ ನೋಟಿಸ್ ಹೊರಡಿಸಿದ ಕೊಣಾಜೆ ಪೊಲೀಸರು

Published

on

ಮಂಗಳೂರು: ನಗರದ ಹೊರವಲಯದ ಪಿ ಎ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕಾಸರಗೋಡು ನಿವಾಸಿ ಸಲೀಂ ಎಂಬವರ ಪುತ್ರ ಮೊಹಮ್ಮದ್ ಶಾಮೀಲ್‌(21) ಎಂಬವರು 7  ವರ್ಷಗಳ ಹಿಂದೆ ಪಿ ಎ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 14-4-2018ರಂದು ಕಾಲೇಜಿನ ಪಾರ್ಕಿಂಗ್ ಸ್ಥಳಕ್ಕೆ ಬಂದು ಕಾಲೇಜಿನ ಒಳಗೆ ಬಾರದೇ ಮನೆಗೂ ಹೋಗದೇ ನಾಪತ್ತೆಯಾಗಿದ್ದರು.

ಅವರನ್ನು ಕೂಡಲೇ ಪತ್ತೆ ಮಾಡಿಕೊಡುವಂತೆ ಲಿಖಿತ ದೂರನ್ನು ಕೊಣಾಜೆ ಠಾಣಾ ಪೊಲೀಸರಲ್ಲಿ ದಾಖಲಿಸಿದ್ದರು. ಪಿ ಎ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಶರೀಫ್ ಎಂಬವರು ಕೊಣಾಜೆ ಠಾಣೆಗೆ ಮತ್ತೆ ದೂರು ಸಲ್ಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಎತ್ತರ 168 CM, ಗೋಧಿ ಮೈ ಬಣ್ಣ, ಸಾಧಾರಣ ಶರೀರ, ಕೋಲು ಮುಖ ಹೊಂದಿದ್ದು, ಕಪ್ಪು ಕುರುಚಲು ಗಡ್ಡ ಮತ್ತು ಮೀಸೆ ಹಾಗೂ ಉದ್ದ ತಲೆ ಕೂದಲು ಹೊಂದಿದ್ದಾರೆ. ಮಾಲಯಾಳಂ, ಇಂಗ್ಲೀಷ್, ಹಿಂದಿ ಭಾಷೆಯನ್ನು ಅವರು ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಪೊಲೀಸ್ ಆಯುಕ್ತರ ಕಛೇರಿಯ ಮಂಗಳೂರು ನಗರ ನಿಯಂತ್ರಣ ಕೊಠಡಿಗೆ ದೂರವಾಣಿ ಸಂಖ್ಯೆ  0824-2220800 ಅಥವಾ ಕೊಣಾಜೆ ಪೊಲೀಸ್ ಠಾಣೆಯ 0824-2220536, 9091873198 ,9535247535 ನೇ ಸಂಖ್ಯೆಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ.

 

 

Continue Reading

bengaluru

ವಿಶೇಷ ಚೇತನ ಯುವತಿಯನ್ನೂ ಬಿಡದ ಕಾಮುಕ, ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಸ್ಥಳೀಯರು

Published

on

ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್​​ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಮದುವೆಗೆ ಎಂದು ಸಂತ್ರಸ್ತೆ ಕುಟುಂಬಸ್ಥರು ತೆರಳಿದ್ದು, ವಿಶೇಷ ಚೇತನ ಯುವತಿಯನ್ನು ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ.

ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಈ ವೇಳೆ ಮಗಳನ್ನು ನೋಡಿಕೊಂಡು ಹೋಗೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ. ಹೀಗಾಗಿ ಕಾಲಿನಿಂದ ಒದ್ದು ಆಕೆ ಬಾಗಿಲನ್ನು ತೆರೆದಿದ್ದು, ಮಗಳ ಸ್ಥಿತಿ ಕಂಡು ಶಾಕ್​ ಆಗಿದ್ದಾಳೆ.

ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಆರೋಪಿ ಮುಂದಾಗಿದ್ದನು. ಘಟನೆ ಬಳಿಕ ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

 

 

Continue Reading

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page