Connect with us

DAKSHINA KANNADA

ಕ್ರಿಶ್ಚಿಯನ್‌ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶ; ಖಾದರ್ ಸಂತಾಪ

Published

on

ಮಂಗಳೂರು : ಪೋಪ್‌ ಫ್ರಾನ್ಸಿಸ್​​ ಅಂದರೆ ಜನರಿಗೆ ನೆರಳು ಕೊಡುವ ಮರ. ನಿಸ್ವಾರ್ಥ ಮನಸ್ಸಿನ ದೊರೆ. ತಂಪಾಗಿ ಮಳೆ ಸುರಿಯುವ ಸೋನೆ, ಹಿಂದುಳಿದ ಬಡಜನರ ಪಾಲಿಗೆ ಆತನೇ ದೈವ. ಬದುಕಿನಲ್ಲಿನ ಸುಖ ಶಾಂತಿ, ನೆಮ್ಮದಿಗಳಿರುವ ಆಟಕ್ಕೆ ಫ್ರಾನ್ಸಿಸ್​​ ಚಾಂಪಿಯನ್.ಈಗಲೂ ವ್ಯಾಟಿಕನ್ ಸಿಟಿಯ ಮಂದಿಗೆ ಪೋಪ್​ ಫ್ರಾನ್ಸಿಸ್​​ ಚಾಂಪಿಯನ್ನೇ. ಅಂತಹ ಮಹಾನ್ ವ್ಯಕ್ತಿ, 88 ವರ್ಷದ ಪೋಪ್ ಫ್ರಾನ್ಸಿಸ್ ಡಬಲ್​​ ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು.

ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಅಂಗಳದಲ್ಲಿ ಸಾವಿರಾರು ಭಕ್ತರು ಸೇರಿ “ಹ್ಯಾಪಿ ಈಸ್ಟರ್” ಆಚರಣೆ ನಡೆಸುವಾಗ, ಅವರನ್ನ ಹಾರೈಸಲು ಫ್ರಾನ್ಸಿಸ್ ವೀಲ್‌ಚೇರ್‌ನಲ್ಲಿ ಹೊರಬಂದಿದ್ದ ​​. ಅದೇ ಅವರ ಕೊನೆ ದರ್ಶನ ಎಂದು ಯಾರಿಗೂ ತಿಳಿದಿರಲಿಲ್ಲ. ಯಾಕೆಂದರೆ ಡಬಲ್ ನ್ಯುಮೋನಿಯಾ ಚಿಕಿತ್ಸೆ ಪಡೆದು ಮನೆಗೆ ಬಂದು ವಾರಗಳು ಕಳೆದಿದಷ್ಟೇ. ನಿನ್ನೆ (ಏ.21) ಪೋಪ್​ ಫ್ರಾನ್ಸಿಸ್ ಇಹಲೋಕ ತ್ಯಜಿಸಿದ್ದಾರೆ. ಫ್ರಾನ್ಸಿಸ್ ನಿಧನಕ್ಕೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ :  ಕ್ಯಾಥೊಲಿಕ್‌ ಕ್ರೈಸ್ತರ ಜಗದ್ಗುರು ಪೋಪ್ ಫ್ರಾನ್ಸಿಸ್ ಇನ್ನಿಲ್ಲ

“ಆಧ್ಯಾತ್ಮಿಕ ಗುರುಗಳಾಗಿದ್ದ ಫ್ರಾನ್ಸಿಸ್ ಸಹಾನುಭೂತಿ, ಸರಳತೆ, ನ್ಯಾಯ ಮತ್ತು ಶಾಂತಿ ಬಯಸುವ ನೈತಿಕ ಧ್ವನಿಯಾಗಿದ್ದರು. ಪೋಪ್ ಆಗಿ ಅವರ ಸರಳ ಜೀವನ ಮತ್ತು ಬಡವರ ಬಗ್ಗೆ ಪ್ರೀತಿ, ವಿಶೇಷ ಕಾಳಜಿ, ಪ್ರತಿಯೊಬ್ಬ ಮನುಷ್ಯನ ಘನತೆಯ ಬಗ್ಗೆ ಆಳವಾದ ಕಾಳಜಿಯನ್ನು ಹೊಂದಿದ್ದರು. ಫ್ರಾನ್ಸಿಸ್ ಅವರ ಸೌಮ್ಯ ಸ್ವಭಾವ ಮತ್ತು ವಿವೇಕಪೂರ್ಣ ಮಾತುಗಳಿಗೆ ಬಹಳ ಆಕರ್ಷಿತನಾಗಿದ್ದೆ. ಈ ಉದಾತ್ತ ಗುಣಗಳು ನನ್ನಲ್ಲಿ ಮಾತ್ರವಲ್ಲ ಜಗತ್ತಿನ ಕೋಟ್ಯಂತರ ಜನರ ಹೃದಯದಲ್ಲಿ ಅಚ್ಚಳಿಯದೆ ಉಳಿಯಲಿವೆ” ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಹೇಳಿದ್ದಾರೆ.

ಪೋಪ್ ಫ್ರಾನ್ಸಿಸ್ ಅವರನ್ನು 2024ರ ಡಿಸೆಂಬರ್‌ನಲ್ಲಿ ಭೇಟಿಯಾಗಿ ಅವರ ಆಶೀರ್ವಾದವನ್ನು ಪಡೆದ ಕ್ಷಣಗಳನ್ನು ನೆನಪಿಸಿಕೊಂಡಿರುವ ಸ್ಪೀಕರ್ ಯು.ಟಿ.ಖಾದರ್ “ಪೋಪ್ ಅವರನ್ನು ಭೇಟಿಯಾಗಿ ಅವರ ಆಶೀರ್ವಾದ ಸ್ವೀಕರಿಸಿರುವುದು ಬದುಕಿನ ಅಮೂಲ್ಯ ಕ್ಷಣವಾಗಿ ಸದಾ ನೆನಪಿನಲ್ಲಿ ಉಳಿಯಲಿದೆ. ಅವರು ನೀಡಿರುವ ಸಲಹೆಯು ತನ್ನ ಮೇಲೆ ಪ್ರಭಾವ ಬೀರಿದೆ. ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ನಮ್ಮ ರಾಜ್ಯದ ಜನರ ಪರವಾಗಿ, ಸಂತಾಪ ವ್ಯಕ್ತಪಡಿಸುವೆನು. ಅವರ ಆತ್ಮಕ್ಕೆ ಶಾಶ್ವತ ಶಾಂತಿ ಸಿಗಲಿ . ಅವರ ದಯೆ ಮತ್ತು ಏಕತೆಯ ಪರಂಪರೆ ಮಾನವತೆಗಾಗಿ ಬೆಳಕು ನೀಡುವ ದಾರಿಯಾಗಿ ಮುಂದುವರಿಯಲಿ ಎಂದು ನಾವು ಆಶಿಸುತ್ತೇವೆ” ಎಂದು ಖಾದರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

DAKSHINA KANNADA

ಮಹಿಳೆಯೊಂದಿಗೆ ಅಸಭ್ಯ ವರ್ತನೆ; ಬಿಜೆಪಿ ಮುಖಂಡನ ಉಚ್ಚಾಟನೆ

Published

on

ವಿಟ್ಲ : ರಸ್ತೆ ವಿಚಾರವಾಗಿ ನಡೆದ ಜಗಳದ ವೇಳೆ ಮಹಿಳೆಗೆ ಗುಪ್ತಾಂ*ಗ ತೋರಿಸಿ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಿಕೃತಿ ಮೆರೆದಿದ್ದ. ಈ ವಿಚಾರ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಅಸಭ್ಯ ವರ್ತನೆ ತೋರಿದ ಪದ್ಮನಾಭ ಸಫಲ್ಯ ವಿರುದ್ಧ  ಬಿಜೆಪಿ ಕ್ರಮ ಕೈಗೊಂಡಿದೆ.

ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಿರುವ ಬಗ್ಗೆ ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ತಿಳಿಸಿದೆ. ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಪದ್ಮನಾಭ ಸಪಲ್ಯನನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಲಾಗಿದೆ. ಅಲ್ಲದೆ ಪಂಚಾಯತ್‌ ಉಪಾಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡುವಂತೆ ಪುತ್ತೂರು ಗ್ರಾಮಾಂತರ ಮಂಡಲ  ಅಧ್ಯಕ್ಷ ದಯಾನಂದ ಶೆಟ್ಟಿ ಸೂಚಿಸಿದ್ದಾರೆ.

ಮಹಿಳೆಯರಿಗೆ ಗೌರವ ಮತ್ತು ಪ್ರಾತಿನಿಧ್ಯ ಕೊಡುವ ಪಾರ್ಟಿಯಲ್ಲಿ ವ್ಯತಿರಿಕ್ತವಾಗಿ ನಡೆದುಕೊಂಡು ಪಕ್ಷದ ಘನತೆ, ಗೌರವ ಹಾಗೂ ವರ್ಚಸ್ಸಿಗೆ ಘಾಸಿಯುಂಟು ಮಾಡಿರುವ ಕಾರಣಕ್ಕಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪದ್ಮನಾಭ ಸಫಲ್ಯ ಹಾಗೂ ಮನೆ ಸಮೀಪದ‌ ಮಹಿಳೆಗೂ ರಸ್ತೆ ವಿಚಾರದಲ್ಲಿ ವಿವಾದ ಇತ್ತು. ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ಮನೆ ದಾರಿಗೆ ಗೇಟು ಅಳವಡಿಸಿದ್ದ. ಇದನ್ನು ಪ್ರಶ್ನಿಸಿದ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಈ ಸಂಬಂಧ ಮಹಿಳೆ ಪದ್ಮನಾಭ ಸಫಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ : ಪೆಹಲ್ಗಾಮ್ ದಾಳಿ : ಮೂವರು ಉಗ್ರರ ಫೋಟೋ ಬಿಡುಗಡೆ; ಸುಳಿವು ಕೊಟ್ಟವರಿಗೆ 20 ಲಕ್ಷ!

ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಫಲ್ಯರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವ ರದ್ದುಗೊಳಿಸಿ ಪಕ್ಷದಿಂದ ಉಚ್ಚಾಟಿಸಲಾಗಿದೆ.  ಪದ್ಮನಾಭ ಸಫಲ್ಯನ ಅಸಭ್ಯ ವರ್ತನೆಯ ವೀಡಿಯೋ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

Continue Reading

DAKSHINA KANNADA

ಮಂಗಳೂರು : ಟಿಂಟೆಡ್ ಗ್ಲಾಸ್‌ ಅಳವಡಿಸಿದ್ದ ಕಾರುಗಳ ಮೇಲೆ ಬಿತ್ತು ಕೇಸ್

Published

on

ಮಂಗಳೂರು : ಬ್ಲಾಕ್ ಫಿಲ್ಮ್, ಸನ್ ಫಿಲ್ಮ್ ಅಥವಾ ಟಿಂಟೆಡ್ ಗ್ಲಾಸ್‌ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಮಂಗಳೂರು ನಗರ ಪೊಲೀಸರು ಪತ್ತೆ ಹಚ್ಚಿ ಕಾರುಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

10 ದಿನದಲ್ಲಿ 500ಕ್ಕೂ ಅಧಿಕ ಕಾರುಗಳ ವಿರುದ್ಧ ಕೇಸ್ :

ಮೇ 2 ರಿಂದ 11 ವರೆಗೆ ಒಟ್ಟು 504 ಕಾರುಗಳ ವಿರುದ್ಧ ಪ್ರಕರಣವನ್ನು ದಾಖಲಿಸಿ ರೂ.2,53,000 ದಂಡ ವಿಧಿಸಲಾಗಿದೆ. ಅಲ್ಲದೇ ವಾಹನಗಳಿಗೆ ಅಳವಡಿಸಿರುವ ಟಿಂಟೆಡ್‌ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಪೊಲೀಸರು ಸೂಕ್ತ ತಿಳುವಳಿಕೆಯನ್ನು ನೀಡಿದರು.

ಇದನ್ನೂ ಓದಿ : ಉಡುಪಿ : ನಿಂತಿದ್ದ ಇನ್ಸುಲೇಟ‌ರ್ ವಾಹನಕ್ಕೆ ಡಿಕ್ಕಿ ಹೊಡೆದ ಕಾರು

ಸರ್ವೋಚ್ಚ ನ್ಯಾಯಾಲಯದ ಆದೇಶ :

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳ ಪರಿಶೀಲನೆಯನ್ನು ನಡೆಸಲಾಯಿತು. ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದ್ದು, ಸಾರ್ವಜನಿಕರು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ತಿಳುವಳಿಕೆ ನೀಡಲಾಯಿತು.

ವಿಡಿಯೋ ನೋಡಿ :

Continue Reading

BELTHANGADY

ನಿದ್ದೆ ಮಾತ್ರೆ ಸೇವನೆ ತಾಯಿ ಮಗ ಆತ್ಮಹತ್ಯೆ ಯತ್ನ ; ಡೆತ್‌ನೋಟ್‌ನಲ್ಲಿ ಏನಿದೆ ..?

Published

on

ಬೆಳ್ತಂಗಡಿ : ಅತಿಯಾದ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಸಾವಿಗೀಡಾಗಿ ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಿನ್ನೆ (ಮೇ.12) ಸಂಭವಿಸಿದೆ.

ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ| ಕುಂಞರಾಮನ್ ನಾಯ‌ರ್ ಅವರ ಪತ್ನಿ ಕಲ್ಯಾಣಿ (96) ಸಾವನ್ನಪ್ಪಿದರೆ, ಪುತ್ರ, ಖ್ಯಾತ ಜನಪದ ಕಲಾವಿದ, ಶಿಕ್ಷಕ ಜಯರಾಂ ಕೆ. (58) ಅವರು ಗಂಭೀರಾವಸ್ಥೆಯಲ್ಲಿದ್ದು ಮಂಗಳೂರಿನ ವೆಸ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯವೇ ಈ ದುರ್ಘಟನೆಗೆ ಮುಕ್ಯ ಕಾರಣ ಎನ್ನಲಾಗಿದೆ.

ಮಲಗಿದ ಸ್ಥಿತಿಯಲ್ಲಿ ತಾಯಿ- ಮಗ :

ಕಲ್ಯಾಣಿ ಮತ್ತು ಜಯರಾಂ ಅವರ ಮನೆಯಲ್ಲಿ ಯಾವುದೇ ಚಟುವಟಿಕೆ ಇಲ್ಲದಿರುವುದನ್ನು ಗಮನಿಸಿ ನೆರೆ ಹೊರೆಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಊರವರು ಸೇರಿ ಮನೆಯ ಬಾಗಿಲು ತೆಗೆದು ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿರುವುದು ಕಂಡುಬಂದಿತ್ತು. ತತ್‌ಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಡೆತ್‌ನೋಟ್‌ನಲ್ಲಿ ಏನಿದೆ ..?

ತೀವ್ರ ನಿಗಾ ಘಟಕದಲ್ಲಿದ್ದ ತಾಯಿ ಕಲ್ಯಾಣಿ ಅವರು ಮೇ 12ರಂದು ಸಂಜೆ ಕೊನೆಯುಸಿರೆಳೆದರು. ಮಗ ಜಯರಾಂ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ವಿಷಮಿಸಿದ್ದರಿಂದ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮಲಗಿದ ಜಾಗದಲ್ಲಿ ಜಯರಾಂ ಅವರು ಬರೆದಿರುವ ನಾಲ್ಕು ಪುಟ ಗಳ ಪತ್ರ ಲಭಿಸಿದ್ದು ಅದರಲ್ಲಿ ಸಾಲದ ಸಮಸ್ಯೆ, ತನ್ನ ಅನಾರೋಗ್ಯದ ಕಾರಣ ದಿಂದ ನಾವು ನಿದ್ರೆ ಮಾತ್ರೆ ಸೇವಿಸಿರುತ್ತೇವೆ. ನಮ್ಮನ್ನು ಬದುಕಿಸುವ ಪ್ರಯತ್ನ ಮಾಡಬೇಡಿ ಎಂದು ಬರೆಯಲಾಗಿದೆ.

ತಾಯಿ ಕಳೆದ ನಾಲ್ಕು ವರ್ಷಗಳಿಂದ ವಯೋ ಸಹಜ ಅನಾರೋಗ್ಯದಿಂದ ಮಲಗಿದಲ್ಲೇ ಇದ್ದು ಅವರ ಆರೈಕೆಯನ್ನು ಮಗನೇ ಮಾಡುತ್ತಿದ್ದರು. ಆದ್ದರಿಂದ ನಾನು ಸತ್ತರೆ ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ಕಾರಣಕ್ಕೆ ನಾವಿಬ್ಬರೂ ಜತೆಯಾಗಿ ಸಾಯುತ್ತಿದ್ದೇವೆ ಎಂದು ಬರೆದಿದ್ದಾರೆ ಎನ್ನಲಾಗಿದೆ. ತಾಯಿಗೆ ಅವರು ಮೊದಲು ಮಾತ್ರೆ ನೀಡಿ ಬಳಿಕ ಮಾತ್ರೆ ಸೇವಿಸಿದರೇ ಅಥವಾ ಇಬ್ಬರೂ ಜತೆಗೆ ಮಾತ್ರೆ ಸೇವಿಸಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page