Connect with us

DAKSHINA KANNADA

ಮಂಗಳೂರು: ಕ್ರೈಸ್ತರ ಪ್ರಾರ್ಥನಾ ಕೇಂದ್ರ ನೆಲಸಮಗೈದ ಇಬ್ಬರ ಬಂಧನ

Published

on

ಮಂಗಳೂರು: ನಗರದ ಹೊರವಲಯದ ಕೂಳೂರು ಸಮೀಪದ ಪಂಜಿಮೊಗರು-ಉರುಂದಾಡಿ ಗುಡ್ಡೆ ಎಂಬಲ್ಲಿ ಫೆ.5ರಂದು ಸೈಂಟ್ ಆ್ಯಂಟನಿ ಹೋಲಿ ಕ್ರಾಸ್ ಪ್ರಾರ್ಥನಾ ಕೇಂದ್ರವನ್ನು ನೆಲಸಮಗೈದ ಘಟನೆಗೆ ಸಂಬಂಧಿಸಿ ಕಾವೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.


ಬಂಧಿತರನ್ನು ಬಜ್ಪೆಯ ಲತೀಶ್ ಮತ್ತು ಪಂಜಿಮೊಗರುವಿನ ಧನಂಜಯ್ ಎಂದು ಗುರುತಿಸಲಾಗಿದೆ. ಸುಮಾರು 40 ವರ್ಷದ ಹಿಂದೆ ಸ್ಥಾಪಿಸಲಾದ ಈ ಪ್ರಾರ್ಥನಾ ಕೇಂದ್ರವನ್ನು ಜೆಸಿಬಿ ಬಳಸಿ ಕೆಡವಲಾಗಿತ್ತು.


ಇದರಿಂದ ಆಕ್ರೋಶಗೊಂಡ ಸ್ಥಳೀಯ ಕ್ರೈಸ್ತರು ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕೂಳೂರು ಜಂಕ್ಷನ್‌ನಲ್ಲಿ ಪ್ರತಿಭಟನೆ ನಡೆಸಿದ್ದರು.

ಇದೀಗ ಇಬ್ಬರು ಆರೋಪಿಗಳನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.

 

DAKSHINA KANNADA

ಶ್ರೀ ಚೈತನ್ಯ ಟೆಕ್ನೋ ಶಾಲೆ ಮಂಗಳೂರು : CBSE 10ನೇ ತರಗತಿ ಪರೀಕ್ಷೆಯಲ್ಲಿ 487 ಅಂಕ ಮತ್ತು 100% ಉತ್ತೀರ್ಣ

Published

on

ಮಂಗಳೂರು : ಮಂಗಳೂರು ಶ್ರೀ ಚೈತನ್ಯ ಟೆಕ್ನೋ ಶಾಲೆ 2024-25ನೇ ಶೈಕ್ಷಣಿಕ ವರ್ಷದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ 100% ಉತ್ತೀರ್ಣವನ್ನು ಸಾಧಿಸುವ ಮೂಲಕ ಮತ್ತೊಮ್ಮೆ ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ.

ಶೈಕ್ಷಣಿಕ ಸಾಧನೆಯ ಅದ್ಭುತ ಪ್ರದರ್ಶನದಲ್ಲಿ, ಸಂಸ್ಥೆಯ 21 ಕ್ಕೂ ಹೆಚ್ಚು ವಿದ್ಯಾರ್ಥಿಗಳು 500 ರಲ್ಲಿ 450 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.  ಸಾಧಕರ ಗುಂಪಿನಲ್ಲಿ ನಿತಿಕಾ ಶ್ರೇಯಾ ರೆಡ್ಡಿ ಕರ್ರಾ  487 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.  ಬಳಿಕ ಅದ್ವೈತ್ ಜೋಶಿ 482 ಅಂಕಗಳೊಂದಿಗೆ ಮತ್ತು ಅನುಷ್ಕಾ ಕಿಶೋರ್ ಶೆಟ್ಟಿ 478 ಅಂಕಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

ಈ ಬಗ್ಗೆ ಚೈತನ್ಯ ಟೆಕ್ನೋ ಶಾಲೆಯ AGM ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು, ಈ ಸಾಧನೆಯು ನಮ್ಮ ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಶಿಸ್ತು ಮತ್ತು ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

ಶಾಲೆಯ ಪ್ರಾಂಶುಪಾಲೆ ವಿನುತಾ ವಿನಾಯಕ ಕಾಮತ್ ಮತ್ತು ಆಡಳಿತ ಮಂಡಳಿಯು ಶೈಕ್ಷಣಿಕ ವರ್ಷದುದ್ದಕ್ಕೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಬೆಂಬಲ ನೀಡುವಲ್ಲಿ ಅವರ ನಿರ್ಣಾಯಕ ಪಾತ್ರವನ್ನು ಗುರುತಿಸಿ ಅಧ್ಯಾಪಕರು ಮತ್ತು ಪೋಷಕರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ : ನೀರಿಗಾಗಿ ಭಾರತವನ್ನು ಗೋಗರೆದ ಪಾಕಿಸ್ತಾನ; ರದ್ದಾಗುತ್ತ ಸಿಂಧೂ ಜಲ ಒಪ್ಪಂದ?

ಈ ಅತ್ಯುತ್ತಮ ಸಾಧನೆಯೊಂದಿಗೆ ಶ್ರೀ ಚೈತನ್ಯ ಟೆಕ್ನೋ ಶಾಲೆಯು ಈ ಪ್ರದೇಶದಲ್ಲಿ ಶೈಕ್ಷಣಿಕ ಶ್ರೇಷ್ಠತೆಯನ್ನು ಪೋಷಿಸಲು ಮೀಸಲಾಗಿರುವ ಪ್ರಮುಖ ಸಂಸ್ಥೆಯಾಗಿ ತನ್ನ ಖ್ಯಾತಿಯನ್ನು ಗಟ್ಟಿಗೊಳಿಸುತ್ತಿದೆ.

 

Continue Reading

DAKSHINA KANNADA

ಸರ್ವೇ ಮೇಲ್ವಿಚಾರಕನ ಮನೆ ಮೇಲೆ ಲೋಕಾಯುಕ್ತ ದಾಳಿ

Published

on

ಮಂಗಳೂರು : ಸರ್ವೇ ಮೇಲ್ವಿಚಾರಕರೊಬ್ಬರ ಮನೆ, ಕಚೇರಿ ಮೇಲೆ ಗುರುವಾರ(ಮೇ 15) ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈ ನ 8ನೇ ಕ್ರಾಸ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಯತ್ನ; ತಂದೆ, ಮಗ ಸಾವು, ತಾಯಿ ಸ್ಥಿತಿ ಗಂಭೀರ

ಒಟ್ಟು 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ.  ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ತುಮಕೂರು ಮೂಲದವರು.  ತಮ್ಮ ಸಂಪಾದನೆಗಿಂತ ಅಧಿಕ ಪ್ರಮಾಣದಲ್ಲಿ ಹಣವನ್ನು ಕ್ರೋಢೀಕರಣ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

 

 

Continue Reading

DAKSHINA KANNADA

ಕಡಲ್ಕೊರೆತ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯ; ಸ್ಪೀಕರ್ ಖಾದರ್

Published

on

ಮಂಗಳೂರು: ಉಳ್ಳಾಲ ಮತ್ತು ಸೋಮೇಶ್ವರ ಕಡಲ್ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ಬುಧವಾರ ಸ್ಪೀಕರ್ ಯು.ಟಿ.ಖಾದರ್ ಸಭೆ ನಡೆಸಿ ಕಾಮಗಾರಿ ನಡೆಸುವ ವಿಚಾರದಲ್ಲಿ ನಿರ್ಲಕ್ಷ್ಯದ ತಾಳಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಕೋಟೆಪುರ, ಮೊಗವೀರಪಟ್ಣ, ಸೀಗ್ರೌಂಡ್ ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಗಳಾಗಿದ್ದು ಕಾಮಗಾರಿಗೆ ದುಡ್ಡು ಬಿಡುಗಡೆಯಾಗಿ ಆರು ತಿಂಗಳಾದರೆ, ಟೆಂಡರ್ ಆಗಿ ಒಂದೂವರೆ ತಿಂಗಳಾಗಿದೆ. ಆದರೆ ಕೆಲಸ ಇನ್ನೂ ಆರಂಭಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕೆಲಸ ಯಾವಾಗ ಆರಂಭಿಸುತ್ತೀರಿ ? ಮಳೆ ಶುರುವಾದ ಬಳಿಕ ಕೆಲಸ ಹೇಗೆ ಮಾಡ್ತೀರಾ ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಎಎನ್‍ಎಫ್ ಮಾದರಿ ವಿಶೇಷ ಪಡೆ ರಚನೆಗೆ ಪ್ರಸ್ತಾವನೆ ಸಲ್ಲಿಕೆ; ಗೃಹ ಸಚಿವ

ಜಿಲ್ಲಾಧಿಕಾರಿ ಕಚೇರಿ ಮತ್ತು ಉಳ್ಳಾಲ‌ ಉರುಸ್ ನಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಉದ್ಘಾಟನೆ ಮುಂದಿನ ಬಾರಿ ನೆರವೇರಿಸಲಿದ್ದಾರೆ.

ಉಳ್ಳಾಲ‌ಕ್ಕೆ ಸಾವಿರ ಕೋಟಿ ಅನುದಾನ ನೀಡಿದ್ದು ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಉಳ್ಳಾಲ‌ದ ಜನತೆ ಮಾಡಲಿದ್ದಾರೆ ಎಂದು ಖಾದರ್ ತಿಳಿಸಿದರು.

Continue Reading
Advertisement

Trending

Copyright © 2025 Namma Kudla News

You cannot copy content of this page