Connect with us

LATEST NEWS

ಉಡುಪಿ: ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ ರೂಪಾಯಿ ನೆರವು-ಸಿಎಂ ಘೋಷಣೆ

Published

on

ಉಡುಪಿ: ಕಾಪು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶಪುಣ್ಯೋತ್ಸವ ನಡೆಯುತ್ತಿದ್ದು, ಇಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.


ಮೊದಲಿಗೆ ಕ್ಷೇತ್ರದೊಳಗೆ ಆಗಮಿಸಿ ಶ್ರೀ ದೇವಿ ದರುಶನ ಪಡೆದುಕೊಂಡ ಬಳಿಕ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಳಿಕ ಮಾತನಾಡಿದ ಅವರು ‘ಮಹಾಲಕ್ಷ್ಮೀ ಹೆಸರಿನಲ್ಲಿಯೇ ಶಕ್ತಿ ಇದೆ. ಮಹಾಲಕ್ಷ್ಮೀ ಕೃಪೆ ಆದವರು ಬದುಕಿನಲ್ಲಿ ಅತ್ಯಂತ ಯಶಸ್ವಿ ಆಗುತ್ತಾರೆ’ ಎಂದರು.

ಸಾಹಸ ಅನ್ನುವುದು ಕರಾವಳಿ ಜನರ ಗುಣಧರ್ಮ ಆಗಿದೆ. ಮೊಗವೀರರದ್ದು ಸಾಹಸವೇ ಗುಣಧರ್ಮವಾಗಿದೆ. ಮೊಗವೀರರು ಕಠಿಣಪರಿಶ್ರಮಿಗಳು ಎಂದರು.

ಮೀನುಗಾರಿಕೆಗೆ ಹೊಸತಂತ್ರಜ್ಞಾನದ ಬಳಕೆ ಮಾಡಿ ಹೆಚ್ಚಿನ ಮೀನುಗಾರಿಕೆ ಮಾಡಿಸಲು 100 ಹೈಸ್ಪೀಡ್ ಬೋಟುಗಳನ್ನು ಕೊಡುತ್ತೇವೆ. 5000 ಮನೆ ಕಟ್ಟಿಕೊಡುವ ಯೋಜನೆಗಳನ್ನು ಮೀನುಗಾರರಿಗೆ ರೂಪಿಸಲಾಗಿದೆ. 8 ಬಂದರುಗಳ ಡ್ರೆಜ್ಜಿಂಗ್‌ಗೆ ವಿಶೇಷ ಅನುದಾನ ನೀಡಲಾಗಿದೆ ಒಟ್ಟಿನಲ್ಲಿ ಮೀನುಗಾರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ.

ಮಹಾಲಕ್ಷ್ಮೀ ಕ್ಷೇತ್ರಕ್ಕೆ 5 ಕೋಟಿ ರೂಪಾಯಿ ನೆರವು ಅಲ್ಲದೆ ಮೊಗವೀರರ ಬೇಡಿಕೆಗೆ ಸ್ಪಂದಿಸುವುದಾಗಿ ನುಡಿದರು. ಸಭೆಯಲ್ಲಿ ಸಂಸ್ಕೃತಿ ಸಚಿವ ವಿ ಸುನಿಲ್‌ ಕುಮಾರ್, ಸಾರಿಗೆ ಸಚಿವ ಶ್ರೀರಾಮುಲು, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್ ಅಂಗಾರ, ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್‌, ಸುಕುಮಾರ್ ಶೆಟ್ಟಿ, ರಘುಪತಿ ಭಟ್,

ಲಾಲಾಜಿ ಮೆಂಡನ್‌, ಮಾಜಿ ಸಚಿವ ಪ್ರಮೋದ್ ಮಧ್ವರಾಜ್‌, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮೊದಲಾದವರಿದ್ದರು.
ನಾಡೋಜ ಜಿ ಶಂಕರ್ ಸರ್ವರನ್ನು ಸ್ವಾಗತಿಸಿ ತಮ್ಮ ಹತ್ತುಹಲವು ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಮುಂದಿಟ್ಟರು. ಮೊಗವೀರರಿಗಾಗಿ ಹಾಸ್ಟೆಲ್‌ ಸೌಕರ್ಯ ಮಾಡಿಸಲು ಮುಂದಾಗಬೇಕು ಎಂದರು.

ಸಬ್ಸಿಡಿ ಡೀಸೆಲ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಇಟ್ಟರು. ಮೀನುಗಾರಿಕಾ ವಿಶ್ವವಿದ್ಯಾನಿಲಯ, ಮಹಿಳಾ ಮೀನುಗಾರರಿಗೆ ಸಾಲ ಸೌಲಭ್ಯದ ಯೋಜನೆ ಮಾಡಬೇಕು ಎಂದು ಬೇಡಿಕೆ ಮುಂದಿಟ್ಟರು.

Advertisement
Click to comment

Leave a Reply

Your email address will not be published. Required fields are marked *

LATEST NEWS

ಮಳೆ ತಂದ ಆವಾಂತರ; ರಸ್ತೆ ಕಾಣದೆ ಮೀನಿನ ಲಾರಿ ಪಲ್ಟಿ

Published

on

ಹಾಸನ: ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ರಾಟೆ ಮನೆ ಬಳಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮೀನುಗಳನ್ನು ಸಾಗಿಸುತ್ತಿದ್ದ KA-02-AB-479 ನಂಬರ್‌ನ ಲಾರಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಗಿದೆ.

ಇದನ್ನೂ ಓದಿ: ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

ಇದರಿಂದಾಗಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

LATEST NEWS

ಪಂಜಾಬ್ ಎದುರು ಡೆಲ್ಲಿ ಕ್ಯಾಪಿಟಲ್ಸ್‌ಗೆ ಗೆಲುವು; ಆರ್‌ಸಿಬಿಗೆ ಗುಡ್‌ ನ್ಯೂಸ್..!

Published

on

ಮಂಗಳೂರು/ಜೈಪುರ: ಜೈಪುರದಲ್ಲಿ ಪಂಜಾಬ್ ಕಿಂಗ್ಸ್​ಗೆ ಡೆಲ್ಲಿಯ ಪವರ್ ಫುಲ್ ಡಿಚ್ಚಿ ನೀಡ್ತು. ಪಂಜಾಬ್ ನೀಡಿದ್ದ ಬೃಹತ್ ಟಾರ್ಗೆಟ್​ನ ಕೂಲ್ ಆ್ಯಂಡ್ ಕಾಮ್ ಆಗಿ ಚೇಸ್ ಡಿದ ಡೆಲ್ಲಿ, ಟೂರ್ನಿಗೆ ಗೆಲುವಿನ ವಿದಾಯ ಹೇಳ್ತು.

ಹೌದು, ಶನಿವಾರದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪಂಜಾಬ್ ಗೆ ಸೋಲಿನ ಶಾಕ್ ನೀಡಿತು. ಅಂಕಪಟ್ಟಿಯಲ್ಲಿ ಆಗ್ರ ಸ್ಥಾನಕ್ಕೇರಿ ಪ್ಲೇ ಆಫ್ ನಲ್ಲಿ ಆಡುವ ಗುರಿ ಹೊಂದಿದ್ದ ಪಂಜಾಬ್ ಗೆ ಈಗಾಗಲೇ ಹೊರ ಬಿದ್ದಿರುವ ಡೆಲ್ಲಿ ಆಘಾತ ನೀಡಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 206 ರನ್​ ಕಲೆಹಾಕಿದರೆ, ಈ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 19.3 ಓವರ್​ಗಳಲ್ಲಿ ಚೇಸ್ ಮಾಡಿದೆ. ಈ ಮೂಲಕ ಡೆಲ್ಲಿ ಪಡೆ 6 ವಿಕೆಟ್​ಗಳ ಜಯ ಸಾಧಿಸಿದೆ.

ಆರ್‌ಸಿಬಿಗೆ ಗುಡ್‌ ನ್ಯೂಸ್..!
ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಜಯ ಸಾಧಿಸುತ್ತಿದ್ದಂತೆ, ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಕ್ವಾಲಿಫೈಯರ್ ಹಾದಿ ಸುಗಮವಾಗಿದೆ. ಅಂದರೆ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬೇಕಿದ್ದರೆ, ಮುಂದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದರೆ ಸಾಕು.

ಒಂದು ವೇಳೆ ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದರೆ, 19 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೇರಲಿದೆ. ಇದೇ ವೇಳೆ ಪಂಜಾಬ್ ಕಿಂಗ್ಸ್ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೆ, ಆರ್​ಸಿಬಿ ತಂಡ ಮೊದಲ ಕ್ವಾಲಿಫೈಯರ್ ಪಂದ್ಯವಾಡುವುದು ಖಚಿತವಾಗಲಿದೆ.

ಇದನ್ನೂ ಓದಿ: ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ತಂಡದಲ್ಲಿ ಸ್ಥಾನ ಪಡೆದ ಮೂವರು ಕನ್ನಡಿಗರು

ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೂ ಆರ್​ಸಿಬಿ ತಂಡವು ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಇದಕ್ಕಾಗಿ ಆರ್​ಸಿಬಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನೆಟ್ ರನ್ ರೇಟ್ ಅನ್ನು ಗುರಿಯಾಗಿಸಿ ಅಮೋಘ ಗೆಲುವು ದಾಖಲಿಸಬೇಕಾಗುತ್ತದೆ.

ಹೀಗಾಗಿ ಆರ್​ಸಿಬಿ ತಂಡವು ಪಂಜಾಬ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯವನ್ನು ಸಹ ಎದುರು ನೋಡಲಿದ್ದಾರೆ. ಈ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಯ ಲೀಗ್​ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಜಯಗಳಿಸಿದರೆ ಸಾಕು. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಥವಾ ದ್ವಿತೀಯ ಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್ ಪಂದ್ಯವಾಡಬಹುದು.

 

Continue Reading

DAKSHINA KANNADA

ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

Published

on

ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂ*ಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾ*ವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ ಎಂದು ಗುರುತಿಸಲಾಗಿದೆ. ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಮನೋಜ್ ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ತನ್ನ ಬೈಕಲ್ಲಿ ತೆರಳಿದ್ದರು. ರಾತ್ರಿ ವೇಳೆ ವಾಪಸ್ ಆಗುತ್ತಿದ್ದಾಗ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ.

ಇದನ್ನೂ ಓದಿ: WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

ಇದರಿಂದ ರಸ್ತೆಗೆಸೆಯಲ್ಪಟ್ಟ ಮನೋಜ್ ಅವರು ಗಂ*ಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page