Connect with us

DAKSHINA KANNADA

ಮಂಗಳೂರಿನಲ್ಲಿ ತಡೆಗೋಡೆ ಕುಸಿತ: ತಪ್ಪಿದ ಭಾರೀ ಅನಾಹುತ; 13ಕ್ಕೂ ಹೆಚ್ಚು ವಾಹನ ಜಖಂ

Published

on

ಮಂಗಳೂರು: ತಡೆಗೋಡೆಯೊಂದು ಕುಸಿದ ಪರಿಣಾಮ ಸುಮಾರು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ನಿನ್ನೆ ಸಂಜೆ ನಗರದ ಬಂದರ್‌ನ ನಲಪಾಡ್ ಕುನಿಲ್ ಟವರ್ಸ್‌ಗೆ ಹೊಂದಿಕೊಂಡಂತಿರುವ ಎಪಿಎಂಸಿ ಯಾರ್ಡ್‌ನಲ್ಲಿ ನಡೆದಿದೆ.


ಅಪಾರ್ಟ್‌ಮೆಂಟ್‌ನಲ್ಲಿ ನೂರಕ್ಕೂ ಹೆಚ್ಚು ಫ್ಲಾಟ್‌ಗಳಿದ್ದು, ಬಹುತೇಕ ಮಕ್ಕಳು ಕಟ್ಟಡದ ಆವರಣದಲ್ಲಿ ಆಟ ಆಡುತ್ತಿದ್ದರು. ಅದೃಷ್ಟವಶಾತ್ ಶನಿವಾರ ಸಂಜೆ ವೇಳೆ ಮಳೆ ಬರುತ್ತಿದ್ದರಿಂದ ಮಕ್ಕಳು ಹೊರಬಂದಿಲ್ಲ. ಇದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜೊತೆಗೆ ಎಪಿಎಂಸಿ ಯಾರ್ಡ್‌ನ ತಡೆಗೋಡೆಯೂ ಸಂಪೂರ್ಣವಾಗಿ ಶಿಥಿಲಗೊಂಡಿದೆ. ಇದರಿಂದ ಸಂಜೆ 4:30ರ ಸುಮಾರಿಗೆ ತಡೆಗೋಡೆ ಕುಸಿದಿದೆ. ಪರಿಣಾಮ ತಡೆಗೋಡೆಯ ಅವಶೇಷಗಳು ನಲಪಾಡ್ ಟವರ್ಸ್‌ನ ಕಾಂಪೌಂಡ್‌ನ್ನು ಸೇರಿದಂತೆ ಆವರಣದುದ್ದಕ್ಕು ಹರಡಿಕೊಂಡಿದೆ.


ಘಟನೆಯಲ್ಲಿ 13ಕ್ಕೂ ಹೆಚ್ಚು ವಾಹನಗಳು ತಡೆಗೋಡೆಯ ಅವಶೇಷಗಳ ಅಡಿಯಲ್ಲಿ ಹೂತು ಹೋಗಿವೆ. ಅಲ್ಲದೆ, ಕಟ್ಟಡದ ಆವರಣದಲ್ಲಿದ್ದ ನೀರಿನ ಬಾವಿಯಲ್ಲಿ ಅರ್ಥ ಭಾಗದಷ್ಟು ಅವಶೇಷಗಳಿಂದ ತುಂಬಿಹೋಗಿದೆ. ಬಾವಿಯ ನೀರು ಕುಡಿಯಲು ಯೋಗ್ಯವಲ್ಲದಂತಾಗಿದೆ. ಸುಮಾರು ಒಂದೂವರೆ ಅಡಿ ಅಗಲ, 25 ಅಡಿ ಎತ್ತರ ಹಾಗೂ 100 ಅಡಿಗೂ ಹೆಚ್ಚು ಉದ್ದದ ತಡೆಗೋಡೆ ಧರಾಶಾಹಿಯಾಗಿದೆ.
ಅಪಾರ್ಟ್‌ಮೆಂಟ್‌ ಅಪಾಯದಲ್ಲಿದೆ
ಸ್ಮಾರ್ಟ್‌ಸಿಟಿ ಕಾಮಗಾರಿಯ ಜಲ್ಲಿ, ಮರಳು ಸಹಿತ ಅವಶೇಷಗಳನ್ನು ತಡೆಗೋಡೆಗೆ ಸುರಿಯಲಾಗುತ್ತಿದೆ. ಅದರ ಒತ್ತಡಕ್ಕೆ ಗೋಡೆ ಕುಸಿದಿದೆ. ಇನ್ನುಳಿದ ಗೋಡೆಯ ಭಾಗವೂ ಬಿರುಕು ಬಿಟ್ಟಿದ್ದು, ಬೀಳುವ ಹಂತದಲ್ಲಿದೆ. ಇನ್ನುಳಿದ ಆ ಗೋಡೆಯೂ ಬಿದ್ದಲ್ಲಿ ಅಪಾರ್ಟ್‌ಮೆಂಟ್‌ಗೆ ಅಪಾಯವಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಮೇಲಧಿಕಾರಿಗಳು ಗಮನ ಹರಿಸಬೇಕು’ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು

DAKSHINA KANNADA

ಅಕ್ರಮ ಗೋ ಸಾಗಾಟ; ಸ್ಕೂಟರ್ ಬಿಟ್ಟು ಆರೋಪಿ ಪರಾರಿ

Published

on

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಇಂದು (ಮಾ.15) ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ.

ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್‌ನಲ್ಲಿದ್ದ 100ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸ್ಕೂಟ‌ರ್ ಸವಾರ ಗಾಡಿ ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಬಳಿಕ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Continue Reading

DAKSHINA KANNADA

ಸುಳ್ಯ : ಗ್ಯಾಸ್ ಸಿಲಿಂಡರ್ ಸರಬರಾಜು ಲಾರಿ ಪಲ್ಟಿ; ಸವಾರ ಗಂಭೀರ

Published

on

ಸುಳ್ಯ : ಭಾರತ್ ಗ್ಯಾಸ್ ಸಿಲಿಂಡ‌ರ್ ಸರಬರಾಜು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ತಿರುವಿನ ಬಳಿ ಪಲ್ಟಿಯಾಗಿ ಬಿದ್ದಿರುವ ಘಟನೆ ಸುಳ್ಯ ತಾಲೂಕು ಕುಂಬರ್ಚೋಡು ತಿರುವಿನಲ್ಲಿ ನಿನ್ನೆ (ಮಾ.14) ತಡರಾತ್ರಿ ಸಂಭವಿಸಿದೆ.

ಘಟನೆಯ ಪರಿನಾಮ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಅಪಘಾತದ ಕಾರಣವಾಗಿ ಸ್ಥಳದಲ್ಲಿ ಅಲ್ಪ ಸಮಯ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿರುತ್ತದೆ. ಲಾರಿಯಲ್ಲಿ ಇದ್ದ ಗ್ಯಾಸ್ ಸಿಲಿಂಡ‌ರ್ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ.

Continue Reading

DAKSHINA KANNADA

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ ಇನ್ನಿಲ್ಲ

Published

on

ಮಂಗಳೂರು : ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ(81) ಇಂದು(ಮಾ.15) ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದವರಾದ ವಾಮನ ಅವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸರಾಗಿ ಸಾಧನೆ ಮೆರೆದಿದ್ದಾರೆ.

ನವೆಂಬರ್ 15, 1944 ರಲ್ಲಿ ವಾಮನ ನಂದಾವರ ಜನಿಸಿದರು. ಅವರ ತಂದೆ ಬಾಬು ಬಾಳೆಪುಣಿ, ತಾಯಿ ಪೂವಮ್ಮ.  ಪ್ರಾಥಮಿಕ ಶಿಕ್ಷಣವನ್ನು ಬಂಟ್ವಾಳ ತಾಲೂಕಿನ ಮುದುಂಗಾರು ಕಟ್ಟೆ ಸರಿಕಾರಿ ಎಲಿಮೆಂಟರಿ ಶಾಲೆ, ಪಾಣೆಮಂಗಳೂರಿನ ಎಸ್‌ವಿಎಸ್ ಹೈಯರ್ ಎಲಿಮೆಂಟರಿ ಶಾಲೆ, ಶ್ರೀ ಭಾರತಿ ಹಿರಿಯ ಪ್ರಾಥಮಿಕ ಶಾಲೆ, ಬೋರ್ಡ್ ಹೈಸ್ಕೂಲ್ ಕುರ್ನಾಡ್, ಆನಂದಾಶ್ರಮ ಪ್ರೌಢಶಾಲೆ ಕೋಟೆಕಾರ್‌ನಲ್ಲಿ ಪಡೆದರು.

ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ ಎಸ್‌ಸಿ ಪದವಿ ಪಡೆದ ಅವರು ಮಂಗಳೂರು ಸರಕಾರಿ ಮಹಾವಿದ್ಯಾನಿಯದಲ್ಲಿ ಬಿ.ಇಡಿ ಪದವಿ ಪಡೆದರು.  ಕರ್ನಾಟಕ ವಿಶ್ವವಿದ್ಯಾನಿಲಯದಿಂದ ಕನ್ನಡ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅಣ್ಣಾಮಲೈ ವಿಶ್ವವಿದ್ಯಾಲಯದಲ್ಲಿ ಎಂ.ಎಡ್ ಪದವಿ ಪಡೆದರು. ಮಂಗಳೂರು ವಿಶ್ವವಿದ್ಯಾನಿಯದ ಬಿ.ಎ ವಿವೇಕ ರೈ ಅವರ ಮಾರ್ಗದರ್ಶನದಲ್ಲಿ ‘ ಕೋಟಿ ಚೆನ್ನಯ ಜಾನಪದೀಯ ಅಧ್ಯಯನ’ ಮಹಾಪ್ರಬಂಧಕ್ಕೆ ಪಿಹೆಚ್‌ಡಿ ಪದವಿ ಗಳಿಸಿದರು.

ಬೆಂಗಳೂರು ಚನ್ನೇನಹಳ್ಳಿ ಜನಸೇವಾ ವಿದ್ಯಾಕೇಂದ್ರದಲ್ಲಿ ಸಹಾಯಕ ಅಧ್ಯಾಪಕರಾಗಿ ಶಿಕ್ಷಣ ವೃತ್ತಿ ಜೀವನ ಆರಂಭಿಸಿದರು. ಬಳಿಕ ಸೇಂಟ್ ಆನ್ಸ್ ಪ್ರೌಢಶಾಲೆಯ ಸಹಾಯಕ ಅಧ್ಯಾಪಕರಾಗಿ, ಸೇಂಟ್ ಆನ್ಸ್ ಮಹಿಳಾ ಶಿಕ್ಷಕ-ಶಿಕ್ಷಣ ತರಬೇತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅತಿಥಿ ಉಪನ್ಯಾಸಕರಾಗಿ, ಸಹ್ಯಾದ್ರಿ ಶಿಕ್ಣಣ ಸಂಸ್ಥೆಯ ಸ್ಥಾಪಕ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದಾರೆ.

ಇಂದಿರಾ ಗಾಂಧಿ ರಾಷ್ತ್ರೀಯ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಮಾರ್ಗದರ್ಶಕರಾಗಿದ್ದ ಅವರು ಪಿಲಿಕುಳ ನಿಸರ್ಗಧಾಮದ ಯೋಜನಾಧಿಕಾರಿ ಹಾಗೂ ಮಂಗಳೂರು ದರ್ಶನ ಯೋಜನೆಯಲ್ಲಿ ಸಹಾಯಕ ಸಂಪಾದಕರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ : ಕೊನೆಗೂ ಭೂಮಿಗೆ ಮರಳಲಿದ್ದಾರೆ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್

ಕೃತಿ ವಿವರ :

ತಾಳಮೇಳ (ಕನ್ನಡ ಕವನ ಸಂಕಲನ) ೧೯೭೫, ಓಲೆಪಟಾಕಿ (ಸ್ವತಂತ್ರ ತುಳು ಕನ್ನಡ ಒಗಟುಗಳ ಸಂಕಲನ)೧೯೮೦, ತುಳುವೆರೆ ಕುಸಾಲ್ ಕುಸೆಲ್ (ತುಳು ಜಾನಪದ ಪ್ರಬಂಧ) ೧೯೮೭/೧೯೮೮, ಸಿಂಗದನ (ತುಳು ಜಾನಪದ ಅಧ್ಯಯನ ಪ್ರಬಂಧ) ೧೯೮೭/೧೯೮೮, ತುಳುಟು ಪನಿಕತೆ (ತುಳುತ್ತ ದಂತ ಕತೆಕುಲು) ೧೯೮೮, ಅವಳಿ ವೀರರೆ ಕುರಿತ ಜಾನಪದ ಮಹಾಕಾವ್ಯ ‘ಕೋಟಿ ಚೆನ್ನಯ’, ‘ಜಾನಪದ ಸುತ್ತಮುತ್ತ’, ಡಿ.ವಿ.ಜಿ.ಯವರ ಸಾಹಿತ್ಯ ವಿಮರ್ಶೆ ‘ನಂಬಿಕೆ’, ಅಭಿನಂದನ ಗ್ರಂಥ ‘ಕಾಕಾನ ಅಭಿನಂದನೆ’, ಸ್ಮರಣ ಸಂಚಿಕೆ ‘ಪೆಂಗದೂಮ’, ಬರಹಗಾರರ ಕೈಪಿಡಿ ‘ತುಳು ಸಾಹಿತಿ ಕಲಾವಿದರ ಮಾಹಿತಿ’, ಕನ್ನಡ ಸಾಹಿತ್ಯ ಸಮ್ಮೇಳನದ ‘ಪೊನ್ನ ಕಂಠಿ’, ‘ಅಜ್ಜಿ ತಾಂಕಿನ ಪುಳ್ಳಿ’, ‘ನೆತ್ತರಾ ನೀರಾ’, ಇಂಚಿತ್ತಿ ತುಳು ನಾಟಕೊಲು, ತುಳು ಸಾಹಿತ್ಯ ಚರಿತ್ರೆ, ತುಳು ಜಾನಪದದ ಆಚರಣೆ, ತುಳು ಭಾಷಾ ಸಾಹಿತ್ಯ ಡಿ.ಕೆ. ಚೌಟ ಇಂಚಿತಿ ವ್ಯಕ್ತಿ ಚಿತ್ರ, ಮನಶಾಸ್ತ್ರ ವಿಜ್ಞಾನಿಯ ಜೀವನ – ಸಾಧನೆ ಕುರಿತ ‘ಸರ್ ಜೀಮ್ಸ್ ಜಾರ್ಜ್ ಫ್ರೆಜರ್‌’, ‘ಬೀರ’(ತುಳು ಕವನ ಸಂಕಲನ), ತುಳು ದಂತಕತೆ ‘ತುಳುಟು ಪನಿಕತೆ’ ಮತ್ತು ‘ಒಂಜಿ ಕೋಪೆ ಕತೆಕುಲು’, ‘ಕಿಡಿಗೇಡಿಯ ಕೀಟಲೆ’(ತುಳು ಜಾನಪದ ಕತೆ), ‘ಕೋಟಿ ಚೆನ್ನಯ’ (ಮಕ್ಕಳ ಕಥೆ).

ಪ್ರಶಸ್ತಿ ವಿವರ :

ಡಾ.ವಾಮನ ನಂದಾವರ ತುಳು ಸಾಹಿತ್ಯ ಆಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ, ಬಂಟ್ವಾಳ ತಾಲ್ಲೂಕು 12ನೆಯ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಅವರ ಸಾಧನೆಗೆ  ತುಳು ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಪೊಳಲಿ ಶೀನಪ್ಪ ಹೆಗ್ಗಡೆ ಪ್ರಶಸ್ತಿ, ನಾಟಕ ಅಕಾಡೆಮಿ ಗೌರವ ಪ್ರಶಸ್ತಿ, ಕಾಂತಾವರ ಕನ್ನಡ ಸಂಘದ ಪುರಸ್ಕಾರ ದೊರೆತಿವೆ.

Continue Reading
Advertisement

Trending

Copyright © 2025 Namma Kudla News

You cannot copy content of this page