Connect with us

BANTWAL

ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಕೆಸರುಮಯ- ಚಾಲಕರ ಗೋಳಾಟ..!!

Published

on

ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆಯಾಗಿದೆ. 

ಬಂಟ್ವಾಳ: ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆಯಾಗಿದೆ.

ರಸ್ತೆ ಅಂತ ಬೋರ್ಡ್ ಹಾಕಿದರೆ ಮಾತ್ರ ನೀವು ರಸ್ತೆ ಎಂದು ನಂಬಬಹುದು.

ಅಂತಹ ದುಸ್ಥಿತಿಯಲ್ಲಿರುವ ಕಲ್ಲಡ್ಕದ ಅವಸ್ಥೆಯನ್ನು ಹೇಳುವುದು ಯಾರ ಬಳಿ, ಕೇಳುವವರು ಯಾರು ? ಎಂಬ ಚಿಂತೆಯಲ್ಲಿದ್ದಾರೆ.

ಮನೆಯ ಅಂಗಳ ತುಂಬಾ ಕೆಸರು ನೀರು, ಅಂಗಡಿ ಬಾಗಿಲು ತೆರೆದರೆ ಒಳಗೆ ನುಗ್ಗುತ್ತದೆ ಕೆಸರು, ನಡೆದುಕೊಂಡು ಹೋಗಲು ದಾರಿಯಿಲ್ಲ, ನೀರು ಹರಿದು ಹೋಗಲು ಚರಂಡಿಯಿಲ್ಲ, ನಿತ್ಯ ಟ್ರಾಫಿಕ್ ಜಾಮ್ ಇದು ನಮ್ಮೂರ ಕಲ್ಲಡ್ಕದ ಸಮಸ್ಯೆ.

ವಾಹನಗಳ ಓಡಾಟದ ಭರಾಟೆಯ ನಡುವೆ ಇಕ್ಕಟ್ಟಾದ ಸರ್ವೀಸ್ ರಸ್ತೆಯಲ್ಲಿ ಓವರ್ ಟೇಕ್ ಮಾಡುವುದರಿಂದ ಅಪಘಾತವೇ ಮೊದಲಾದ ವಿಷಯಗಳನ್ನು ಇಟ್ಟುಕೊಂಡು ಕೆಲ ದಿನಗಳ ಹಿಂದೆ ರಸ್ತೆ ದುರಸ್ತಿಗೊಳಿಸಬೇಕು.

ಧೂಳಿನಿಂದ ಮುಕ್ತಿ ನೀಡಬೇಕು ಎಂದು ಆಗ್ರಹಿಸಿ ಕಲ್ಲಡ್ಕದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ಆಗಸ್ಟ್ ಅಂತ್ಯದೊಳಗೆ ಕಾಮಗಾರಿ ಆರಂಭಿಸಿ ಎಲ್ಲದಕ್ಕೂ ಮುಕ್ತಿ ನೀಡುತ್ತೇವೆ ಎಂದು ಗುತ್ತಿಗೆದಾರ ಕಂಪನಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆಗೆ ಅಂತ್ಯ ದೊರಕಿತ್ತು.

ಆದರೆ ಇದೀಗ ಕಾಮಗಾರಿ ನಡೆಸಲು ಮಳೆ ಅಡ್ಡಿಯಾಗಿರುವುದು ಒಂದು ಸಮಸ್ಯೆಯಾದರೆ, ರಸ್ತೆಯಲ್ಲಿ ನೀರು ಹರಿದುಹೋಗಲು ಜಾಗವೇ ಇಲ್ಲದ ಕಾರಣ, ಮೂರು ನಾಲ್ಕಿಂಚು ನೀರು ನಿಲ್ಲುವುದು ಹಾಗೂ ಇಡೀ ರಸ್ತೆ ಕೆಸರುಮಯವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವಕ್ಕೆ ಅಪಾಯ ತಂದೊಡ್ಡಿರುವುದು ಇನ್ನೊಂದು ಸಮಸ್ಯೆ.

ಶಾಲೆ, ಕಾಲೇಜುಗಳಿಗೆ ಬಸ್ಸಿಗಾಗಿ ಕಾಯುವವರು ಸಂಕಟ ಅನುಭವಿಸುತ್ತಿದ್ದಾರೆ.

ಇಷ್ಟಾದರೂ ಘನಗಾತ್ರದ ವಾಹನಗಳು ವೇಗವಾಗಿ ಹೋಗುವುದನ್ನು ನಿಲ್ಲಿಸಿಲ್ಲ.

ಆದ್ದರಿಂದ ಕೂಡಲೇ ಸಂಬಂಧಪಟ್ಟವರು ಇದರತ್ತ ಗಮನ ಹರಿಸಬೇಕಾಗಿದೆ.

BANTWAL

ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕೊಲೆಗೈದು ಪತಿ ನೇಣು ಬಿಗಿದು ಆತ್ಮಹತ್ಯೆ

Published

on

ಬಂಟ್ವಾಳ: ಗರ್ಭಿಣಿ ಪತ್ನಿಯನ್ನು ಕೊಲೆಗೈದು ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ನಡೆದಿದೆ.

ಬಡಗುಂಡಿ ನಿವಾಸಿ ತಿಮ್ಮಪ್ಪ ರಾಮ ಮೂಲ್ಯ (50) ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅವರ ಪತ್ನಿ ಜಯಂತಿ (40) ಕೊಲೆಯಾದ ಮಹಿಳೆ. ನಿನ್ನೆ ರಾತ್ರಿ ತಿಮ್ಮಪ್ಪ ರಾಮ ಮೂಲ್ಯ ತನ್ನ ಹೆಂಡತಿ ಜಯಂತಿ ಜತೆ ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು, ಜಗಳ ವಿಕೋಪಕ್ಕೆ ತಿರುಗಿ ಜಯಂತಿ ಅವರಿಗೆ ಹಲ್ಲೆ ಮಾಡಿ, ಕತ್ತು ಹಿಚುಕಿ ಸಾಯಿಸಿರುತ್ತಾನೆ. ಬಳಿಕ ತಿಮ್ಮಪ್ಪ ಕೂಡಾ ಅಡುಗೆ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

ಈ ಘಟನೆಗೆ ಸಂಬಂಧಿಸಿದಂತೆ, ಮೃತ ಜಯಂತಿ ಅವರ ತಂಗಿ ಫರಂಗಿಪೇಟೆಯ ಸುಜಾತಾ ಮತ್ತು ಮೃತ ತಿಮ್ಮಪ್ಪ ಅವರ ಅಣ್ಣ ಸಜೀಪ ಮೂಡ ನಿವಾಸಿ ವಿಶ್ವನಾಥ ಅವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

READ IN ENGLISH : https://www.nammakudlaenglish.com/bantwal-man-kills-pregnant-wife-dies-by-suicide/

ಇದನ್ನೂ ಓದಿ: ಬೆಂಗಳೂರು: ಮರದ ಕೊಂಬೆ ಬಿದ್ದು ಮೆದುಳು ನಿಷ್ಕ್ರಿಯಗೊಂಡಿದ್ದ ಅಕ್ಷಯ್ ಸಾವು

ತಿಮ್ಮಪ್ಪ ಅವರ ಮನೆ ಸಜೀಪ ಮೂಡ ಗ್ರಾಮದ ಮಿತ್ತಮಜಲಿನಲ್ಲಿದ್ದು, ಜಯಂತಿಯ ಮನೆ ಬಡಗುಂಡಿಯಲ್ಲಿದೆ. ಅವರಿಗೆ 15 ವರ್ಷಗಳ ಹಿಂದೆ ಮದುವೆಯಾಗಿದ್ದು, ಈವರೆಗೆ ಮಕ್ಕಳಾಗಿರಲಿಲ್ಲ. ಸದ್ಯ ಜಯಂತಿ ಗರ್ಭಿಣಿಯಾಗಿದ್ದು, ಜುಲೈ 2 ರಂದು ಸೀಮಂತ ನಡೆಸಲು ದಿನಾಂಕ ನಿಗದಿಯಾಗಿತ್ತು ಎನ್ನಲಾಗಿದೆ. ಇದೀಗ ದಂಪತಿ ಮಧ್ಯೆ ನಡೆದ ಜಗಳಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಭೇಟಿ ನೀಡಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರಿಸಿದ್ದಾರೆ.

Continue Reading

BANTWAL

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಸಂಚಾರ ನಿಷೇಧ

Published

on

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಹಳೆಯ ಉಕ್ಕಿನ ಸೇತುವೆಯು ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ನಿಷೇಧ ಮಾಡಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ.ಭಟ್ ಅವರು ಆದೇಶಿಸಿದ್ದಾರೆ.


ಮುಂದಿನ ದಿನಗಳಲ್ಲಿ ಯಾವುದೇ ಅನಾಹುತ ಆಗಬಾರದೆಂಬ ನಿಟ್ಟಿನಲ್ಲಿ ಮತ್ತು ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಮಾಡಿ ವರದಿ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವಂತೆ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಇದನ್ನೂ ಓದಿ: ಜೂನ್.16 ರಿಂದ 20ರ ವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಪಾಣೆಮಂಗಳೂರಿನ ಉಕ್ಕಿನ ಸೇತುವೆ 111 ವರ್ಷವನ್ನು ಪೂರೈಸಿದ್ದು, ಅವಿಭಜಿತ ದ.ಕ. ಜಿಲ್ಲೆಯ ಮೊದಲ ಸಂಪರ್ಕ ಸೇತುವೆ ಎನ್ನುವ ಹೆಗ್ಗಳಿಕೆಯೂ ಈ ಸೇತುವೆಗಿದೆ. ಇನ್ನು ಪಾಣೆಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದ್ದು ಸ್ಥಳೀಯರಿಗೆ ಸಂಚಾರದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.

 

 

 

 

Continue Reading

BANTWAL

ಬಂಟ್ವಾಳ: ಅಡಿಕೆ ವ್ಯಾಪಾರಿಯಿಂದ ರೈತರಿಗೆ ಪಂಗನಾಮ; 10 ಕೋಟಿ ವಂಚಿಸಿ ಪರಾರಿ

Published

on

ಬಂಟ್ವಾಳ: ಅಡಿಕೆ ವ್ಯಾಪಾರಿಯೊಬ್ಬರು ಕೃಷಿಕರಿಂದ ಅಡಿಕೆ ಖರೀದಿಸಿ ಹಣ ಬಾಕಿ ಇರಿಸಿ ವಂಚಿಸಿ ನಂಬಿಕೆ ದ್ರೋಹ ಎಸಗಿದ ಆರೋಪದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಮೈಂದಾಳ ನಿವಾಸಿ ನೌಫಲ್‌ ಮಹಮ್ಮದ್‌ ಈ ಪ್ರಕರಣದ ಆರೋಪಿಯಾಗಿದ್ದು, ಇದೀಗ ಆತ ಗ್ರಾಹಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಆರೋಪಿಸಲಾಗಿದೆ. ಆತ ಸುಮಾರು 94 ಲಕ್ಷ ರೂಪಾಯಿಗೂ ಆಧಿಕ ಮೊತ್ತದ ಹಣ ಬಾಕಿ ಇರಿಸಿ ವಂಚನೆ ಎಸಗಿರುವುದಾಗಿ ಆಪಾದಿಸಲಾಗಿದೆ. ನಾವೂರು ಗ್ರಾಮದ ನಿವಾಸಿ ಪ್ರವೀಣ್‌ ಡಿ’ ಸೋಜಾ ಎಂಬವರು ನೀಡಿದ ದೂರಿನಂತೆ ಎಫ್.ಐ.ಆರ್. ದಾಖಲಾಗಿದೆ.

ಅಡಿಕೆ ಮಾರಾಟ ಮಾಡುವ ವೇಳೆ ನೌಫಲ್ ಮಾರಾಟಗಾರರಿಗೆ ಸ್ವಲ್ಪ ಹಣವನ್ನು ಕೊಡುತ್ತಿದ್ದು, ಬಳಿಕ ಕೆಲವು ದಿನಗಳ ಬಳಿಕ ಹಣವನ್ನು ಕೊಡುತ್ತಿರುವ ಪ್ರಕ್ರಿಯೆ ನಡೆಯುತ್ತಿತ್ತು. ಮಾರ್ಚ್ 8 ರಂದು ಬೆಳಗ್ಗೆ ಪ್ರವೀಣ್ ಅವರು ನೌಫಲ್‌ ಮಹಮ್ಮದ್‌ ಅಂಗಡಿಗೆ ವಾಹನದಲ್ಲಿ ಹೋಗಿ ಸುಮಾರು 6.5 ಕ್ವಿಂಟಾಲ್‌ ಅಡಿಕೆಯನ್ನು ಮಾರಾಟ ಮಾಡಿದ ಬಗ್ಗೆ ಅಂದಾಜು 3,50,000 ರೂ ಹಣವನ್ನು ನೀಡಿರಲಿಲ್ಲ. ಜೂನ್ 9ರಂದು ರಾತ್ರಿ ಪ್ರವೀಣ್ ಗೆ ನೌಫಲ್ ಕರೆ ಮಾಡಿ, ತಾನು ನಷ್ಟದಲ್ಲಿದ್ದು, ಬಾಕಿ ಹಣವನ್ನು ಸ್ವಲ್ಪ ಸ್ವಲ್ಪವಾಗಿ ನೀಡುವುದಾಗಿ ಮೆಸೇಜ್‌ ಕಳುಹಿಸಿದ್ದಾಗಿ ದೂರಲಾಗಿದೆ.

ಇದನ್ನೂ ಓದಿ: ಕಾಶಿ ವಿಶ್ವನಾಥ ಮಂದಿರದಲ್ಲಿ 21 ನಕಲಿ ಅರ್ಚಕರು ಅರೆಸ್ಟ್

ಇದರಿಂದ ಗಾಬರಿಗೊಂಡ ಪ್ರವೀಣ್, ಜೂನ್ 10ರಂದು ಬೆಳಿಗ್ಗೆ ಅಂಗಡಿಗೆ ಹೋಗಿ ನೋಡಿದಾಗ ಬೀಗ ಹಾಕಿದ್ದು, ಮನೆಗೂ ಬೀಗ ಹಾಕಲಾಗಿತ್ತು. ಆರೋಪಿಯ ಮೊಬೈಲ್ ಸ್ವಿಚ್ಡ್‌ ಆಫ್‌ ಆಗಿದ್ದು, ಹಣ ಪಡೆಯಲು ಬಾಕಿಯಿದ್ದ ಇತರ 24 ಜನರು ಕೂಡಾ ಸ್ಥಳದಲ್ಲಿದ್ದರು. ಆರೋಪಿಯು ತನ್ನೊಂದಿಗೆ ಅಡಿಕೆ ಮತ್ತು ಕರಿಮೆಣಸು ವ್ಯಾಪಾರ ಮಾಡಿಕೊಂಡಿದ್ದವರಿಗೆ ಒಟ್ಟು 94,77,810 ರೂಪಾಯಿ ನೀಡದೆ ನಂಬಿಕೆ ದ್ರೋಹ ಮತ್ತು ವಂಚನೆ ಮಾಡುವ ಉದ್ದೇಶದಿಂದ ತಲೆಮರೆಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page