Connect with us

BANTWAL

ಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಕಾಲಿಗೆ ಗುಂಡೇಟು.!

Published

on

ಬಂಟ್ವಾಳ: ಗುಂಡೇಟಿನಿಂದ ಕಾಂಗ್ರೆಸ್ ಮುಖಂಡರೊಬ್ಬರು ಗಾಯ ಗೊಂಡಿದ್ದಾರೆ. ಇಂಟಕ್ ನಲ್ಲಿ ಸಕ್ರೀಯವಾಗಿದ್ದ ಚಿತ್ತರಂಜನ್ ಶೆಟ್ಟಿ ಗಾಯಗೊಂಡವರಾಗಿದ್ದಾರೆ.

ಬಂಟ್ವಾಳ ‌ತಾಲೂಕಿನ‌ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಗುಂಡು ಹಾರಿದ್ದು, ಅಸಲಿಗೆ ಚಿತ್ತರಂಜನ್ ಶೆಟ್ಟಿ ಅವರ ಕಿಸೆಯಲ್ಲಿದ್ದ ಪಿಸ್ತೂಲ್ ನಿಂದಲೇ ಈ ಫೈರಿಂಗ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಸ್ವಂತ ಭದ್ರತೆಗಾಗಿ ಇರಿಸಿಕೊಂಡಿದ್ದ ಪಿಸ್ತೂಲ್ ಸರಿಯಾಗಿ ಲಾಕ್ ಮಾಡದ ಕಾರಣ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

BANTWAL

ಮಂಗಳೂರು : ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ಬಸ್ ಪೊಲೀಸರ ವಶಕ್ಕೆ

Published

on

ಮಂಗಳೂರು : ವಿಟ್ಲ -ಮುಡಿಪು ಮಧ್ಯೆ 2 ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸೊಂದನ್ನು ತಡೆದು ಸಾರ್ವಜನಿಕರು ನಿನ್ನೆ (ಮಾ.23) ವಿಟ್ಲ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಒಂದೇ ಟಯರಲ್ಲಿ ವಿಟ್ಲ-ಮುಡಿಪು-ಮಂಗಳೂರು ಮಧ್ಯೆ ಸಂಚರಿಸುವ ಖಾಸಗಿ ಬಸ್ಸೊಂದು ಹಿಂದಿನ ಎಡಬದಿ ಟಯರ್‌ನಲ್ಲಿ ಮಾತ್ರ ಸಂಚರಿಸುತ್ತಿತ್ತು‌. ಇನ್ನೊಂದು ಟಯರ್ ಒಡೆದು ಕರ್ಕಶ ಶಬ್ದ ಬರುತ್ತಿತ್ತು.ಬಸ್‌ನ ಚಾಲಕ, ಕಂಡಕ್ಟರ್ ಮುಂಜಾಗ್ರತೆ ವಹಿಸಿಲ್ಲ ಎಂದು ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ.

ಶನಿವಾರ (ಮಾ.22) ಮಧ್ಯಾಹ್ನದಿಂದ ನಿನ್ನೆ (ಮಾ.23) ಮಧ್ಯಾಹ್ನ ತನಕ ವಿಟ್ಲ – ಮುಡಿಪು – ಮಂಗಳೂರು ಮಧ್ಯೆ ಅಪಾಯಕಾರಿ ರೀತಿಯಲ್ಲಿ ಸಂಚರಿಸುತ್ತಾ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದರೆಂದು ಪ್ರಯಾಣಿಕರೇ ಆರೋಪಿಸಿದ್ದಾರೆ. ಈ ಕುರಿತು ಮಾಹಿತಿ ಪಡೆದ ಸಾರ್ವಜನಿಕರು ಸಾಲೆತ್ತೂರು ಪೇಟೆಯಲ್ಲಿ ಬಸ್ಸನ್ನು ತಡೆ ಹಿಡಿದು ವಿಟ್ಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಬಂಟ್ವಾಳ ಸಾರಿಗೆ ಅಧಿಕಾರಿಗಳಿಗೂ ಮಾಹಿತಿ ನೀಡಲಾಗಿದೆ. ಆದಷ್ಟು ಶೀಘ್ರವೇ ಈ ನಿರ್ಲಕ್ಷ್ಯದ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.

Continue Reading

BANTWAL

ಬಂಟ್ವಾಳ: ಕಾರಿಂಜ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾದ ಕೋತಿರಾಜ್

Published

on

ಬಂಟ್ವಾಳ: ಕರುನಾಡಿನ ಸ್ಪೈಡರ್ ಮ್ಯಾನ್ ಎಂದೇ ಹೆಸರು ಪಡೆದ ಕೋತಿರಾಜ್ ಅವರು ಪ್ರಥಮ ಬಾರಿಗೆ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ಬೆಟ್ಟವನ್ನು ಏರುವ ಸಾಹಸಕ್ಕೆ ಮುಂದಾಗಿದ್ದಾರೆ.

ಮಾ.23 ರಂದು ಆದಿತ್ಯವಾರ ಬಂಡೆ ಏರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಬಡವರ ಕಲ್ಯಾಣಕ್ಕಾಗಿ ಟ್ರಸ್ಟ್ ವೊಂದನ್ನು ನಡೆಸುವ ಕೋತಿರಾಜ್, ಆ ಮೂಲಕ ಇನ್ನಷ್ಟು ಸಮಾಜ ಸೇವೆ ಮಾಡಲು ಆರ್ಥಿಕ ಸಹಾಯ ಧನದ ಅವಶ್ಯಕತೆ ಇದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳದ ಪುರಾಣ ಪ್ರಸಿದ್ಧ ದೇವಾಲಯದ ಬೆಟ್ಟವನ್ನೇರಲು ಸಿದ್ಧತೆ ನಡೆಸಿದ್ದಾರೆ. ದೇವಸ್ಥಾನ ಹಾಗೂ ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ಈ ಬಗ್ಗೆ ಅಧಿಕೃತವಾಗಿ ಪತ್ರವನ್ನು ನೀಡಿದ ಅವರು ಬೆಳ್ತಂಗಡಿ ಬಂಟ್ವಾಳ ತಾಲೂಕಿನ ಜನರ ಸಹಕಾರ ಯಾಚಿಸಿದ್ದಾರೆ.

Continue Reading

BANTWAL

ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ತಹಶಿಲ್ದಾರ್ ಹಠಾತ್ ದಾಳಿ

Published

on

ವಿಟ್ಲ : ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಬಂಟ್ವಾಳ ತಹಶಿಲ್ದಾರ್ ಅರ್ಚನಾ ಭಟ್ ನೇತೃತ್ವದಲ್ಲಿ ತಾಲೂಕು ಆಡಳಿತದ ಅಧಿಕಾರಿಗಳು ನಿನ್ನೆ (ಮಾ.19) ಬಂಟ್ವಾಳ ತಾಲೂಕಿನ ಕುಡ್ತಮುಗೇರು ಹಾಗೂ ಗಡಿಪ್ರದೇಶವಾದ ಕನ್ಯಾನ ಪಾದೆಕಲ್ಲು ಎಂಬಲ್ಲಿಗೆ ಬೆಳಿಗ್ಗೆ 7 ಗಂಟೆ ಸುಮಾರಿಗೆ ದಿಢೀರ್ ದಾಳಿ ನಡೆಸಿದ್ದಾರೆ.

ಕುಡ್ತಮುಗೇರು ಎಂಬಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುವ ಬಗ್ಗೆ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿದಾಗ ಸುಮಾರು 30 ಕ್ಕೂ ಅಧಿಕ ಪಿಕಪ್ ಲೋಡ್ ಮರಳು ರಾಶಿ ಸ್ಥಳದಲ್ಲಿ ಸಂಗ್ರಹಿಸಲಾಗಿದೆ. ಕಂದಾಯ ಅಧಿಕಾರಿಗಳ ತಂಡ ಹಠಾತ್ ದಾಳಿ ನಡೆಸಿ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಸ್ಥಳೀಯ ಗ್ರಾ.ಪಂ.ಪಿಡಿಒ ಅವರಿಗೆ ಪ್ರಕರಣವನ್ನು ದಾಖಲಿಸಿ ಕ್ರಮಕೈಗೊಳ್ಳಲು ಹಸ್ತಾಂತರ ಮಾಡಲಾಗಿದೆ.

ದಾಳಿಯ ವೇಳೆ ತಹಶಿಲ್ದಾರ್ ಅರ್ಚನಾ ಭಟ್ ಜೊತೆಗೆ ವಿಟ್ಲ ಕಂದಾಯ ಅಧಿಕಾರಿ ರವಿ ಎಂ.ಎನ್‌, ಗ್ರಾಮ ಆಡಳಿತಾಧಿಕಾರಿ ಕರಿಬಸಪ್ಪ ನಾಯಕ್, ಗ್ರಾಮ ಸಹಾಯಕಾದ ಗಿರೀಶ್ ಶೆಟ್ಟಿ, ರುಕ್ಮಯ್ಯ ಮೂಲ್ಯ, ಲಿಂಗಪ್ಪ ಗೌಡ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page