ಮಂಗಳೂರು : ಕೊರೊನಾ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.
ಸುಹೈಲ್ ಕಂದಕ್ ಬಂಧನ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರು, ಮುಖಂಡರು, ಕಂಕನಾಡಿ ನಗರ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ವಿಪರೀತ ದರ ವಿಧಿಸಿದ ಬಗ್ಗೆ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಇತ್ತೀಚೆಗೆ ಆಸ್ಪತ್ರೆ ಮುಂಭಾಗ ಧರಣಿ ನಡೆಸಿದ್ದರು. ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಸೇರಿದಂತೆ ಸುಹೈಲ್ ಕಂದಕ್ ಅವರ ನೇತೃತ್ವದಲ್ಲಿ ಸಾಮಾಜಿಕ ಕಾರ್ಯಗಳು ನಡೆಯುತ್ತಿದ್ದವು. ಆದರೆ, ಸುಹೈಲ್ ಕಂದಕ್ , ಇಂಡಿಯಾನ ಆಸ್ಪತ್ರೆಯ ಐಸಿಯುಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಂಕನಾಡಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ಕೋವಿಡ್ ವಾರಿಯರ್ ಮೇಲಿನ ಹಲ್ಲೆ ಸಹಿಸಲಾಗದು: ಪೊಲೀಸ್ ಆಯುಕ್ತ ಶಶಿಕುಮಾರ್
ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕೋವಿಡ್ನಂತಹ ತುರ್ತು ಸಂದರ್ಭದಲ್ಲಿ ಮುಂಚೂಣಿಯಲ್ಲಿದ್ದು ಸೇವೆ ಸಲ್ಲಿಸುತ್ತಿರುವ ಕೊರೋನ ಯೋಧರುಗಳ ಮೇಲಿನ ಹಲ್ಲೆಯನ್ನು ಸಹಿಸುವಂತಿಲ್ಲ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯರ ಮೇಲಿನ ಹಲ್ಲೆ ಹಾಗೂ ಕೋವಿಡ್ ಸೋಂಕಿಂತ ಗರ್ಭಿಣಿಗೆ ಚಿಕಿತ್ಸೆ ನಿರಾಕರಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ.
ಕರ್ತವ್ಯದಲ್ಲಿದ್ದ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ.
ಸುಹೈಲ್ ಕಂದಕ್ ಬಂಧನ – ಎಸ್ ಡಿಪಿ ಐ ತೀವ್ರ ಖಂಡನೆ
ಮಂಗಳೂರಿನ ಮೆಡಿಕಲ್ ಮಾಫಿಯಾದ ಅಹಂಕಾರದ ವರ್ತನೆ ಹಾಗೂ ಹಗಲು ದರೋಡೆ ಯನ್ನು ಪ್ರಶ್ನಿಸುವವರನ್ನು ಮಾಫಿಯಾದ ಒತ್ತಡದಿಂದ ಪೊಲೀಸರು ಬಂಧಿಸುತ್ತಿರುವುದು ಖಂಡನೀಯ, ಈ ಮೂಲಕ ಅನ್ಯಾಯವನ್ನು ಪ್ರಶ್ನಿಸುವವರ ಶಬ್ಧವನ್ನು ದಮನಿಸಬಹುದೆಂದು ಪೊಲೀಸರು ಬಾವಿಸಿದ್ದರೆ ಅದು ಅವರ ಮೂರ್ಖತನ ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕೋವಿಡ್ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಲವಾರು ಸಂಘಟನೆಗಳು, ರಾಜಕೀಯ ಪಕ್ಷದ ನಾಯಕರು ,ಕಾರ್ಯಕರ್ತರು ಸೋಂಕಿನ ಅಪಾಯವನ್ನು ಲೆಕ್ಕಿಸದೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ರಾತ್ರಿ ಹಗಲೆನ್ನದೇ ತಂಡಗಳಾಗಿ ಕೋವಿಡ್ ರೋಗಿಗಳ ಸೇವೆಯಲ್ಲಿ ನಿರತರಾಗಿದ್ದಾರೆ. ಹಳ್ಳಿಗಳಿಂದ, ಹೊರಜಿಲ್ಲೆ, ಹೊರರಾಜ್ಯಗಳಿಂದ ಚಿಕಿತ್ಸೆಗಾಗಿ ಮಂಗಳೂರಿಗೆ ಬರುವ ರೋಗಿಗಳಿಗೆ ಬೇಕಾದ ನೆರವುಗಳನ್ನು ಇವರು ಒದಗಿಸುತ್ತಿರುವುದು ,ಅದರೊಂದಿಗೆ ಮಂಗಳೂರಿನ ಕೆಲವು ವೈದ್ಯರು ಹಾಗೂ ಆಸ್ಪತ್ರೆಗಳ ಹಗಲು ದರೋಡೆ, ಬೇಕಾಬಿಟ್ಟಿ ಸುಲಿಗೆಯನ್ನು ಪ್ರಶ್ನಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಿ ಕೊಡುತ್ತಿರುವುದು ಆಸ್ಪತ್ರೆ ಮಂಡಳಿಗೆ ನುಂಗಲಾರದ ತುತ್ತಾಗಿದೆ . ಕೋವಿಡ್ ಹೆಸರಿನಲ್ಲಿ ಪ್ಯಾಕೇಜ್ ಗಳನ್ನು ಮಾಡಿಕೊಂಡು ಆರೋಗ್ಯ ಕ್ಷೇತ್ರವನ್ನು ಅಪ್ಪಟ ವ್ಯಾಪಾರೀ ಕೇಂದ್ರವಾಗಿಸಿದ ಮಂಗಳೂರಿನ ಆಸ್ಪತ್ರೆಗಳ ಆಹಂನಿಂದ ಕೂಡಿದ ಸರ್ವಾಧಿಕಾರಿ ದೋರಣೆಗೆ ಜಿಲ್ಲೆಯ ಜನತೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಎಸ್ಡಿಪಿಐ ಆಗ್ರಹಿಸುತ್ತಿದೆ.
ಹಣದ ಅಹಂನಲ್ಲಿರುವ ಆಸ್ಪತ್ರೆ ಆಡಳಿತ ಮಂಡಳಿ ನೀಡುವ ದೂರನ್ನು ಕೂಡಲೇ ಪಡೆದು ಸಾಮಾಜಿಕ ಸೇವೆಯಲ್ಲಿ ನಿರತರಾದ ಯುವಕರನ್ನು ಬಂಧಿಸಲು ಅವಸರ ತೋರಿಸುವ ಪೊಲೀಸರು ಇತ್ತೀಚೆಗೆ ಮಂಗಳೂರಿನಲ್ಲಿ ಡಾಕ್ಟರ್ ಪ್ರಿಯಾ ಬಲ್ಲಾಳ್ ಹಾಗೂ ಕೆಲವು ವೈದ್ಯರು ಮತ್ತು ಹಲವು ಆಸ್ಪತ್ರೆಗಳ ಅಮಾನವೀಯ ಕ್ರತ್ಯಗಳಿಂದ ಪಡಬಾರದ ಸಂಕಷ್ಟ ಅನುಭವಿಸಿದ ಖತೀಜಾ ಜಾಸ್ಮಿನ್ ಎಂಬ ತುಂಬು ಗರ್ಭಣಿ ಮಹಿಳೆಯ ದೂರನ್ನು ಏಕೆ ಸ್ವೀಕರಿಸಲಿಲ್ಲ, ಈ ವಿಚಾರದಲ್ಲಿ
ಎಸ್ ಡಿ ಪಿ ಐ ಸೇರಿದಂತೆ ಹಲವಾರು ಸಂಘಟನೆಗಳು ಧ್ವನಿಗೂಡಿಸಿದರೂ ಚಕಾರವೆತ್ತದ ಪೊಲೀಸರು ಸಂತ್ರಸ್ತ ಕುಟುಂಬದ ಸದಸ್ಯರನ್ನೇ ಬಂಧಿಸಿ ಮಾನಸಿಕ ಹಿಂಸೆ ನೀಡಿದ್ದು ಗಮನಿಸುವಾಗ ಇಲಾಖೆಯ ಅಧಿಕಾರಿಗಳು ಯಾರ ಪರವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂಬ ಸಂಶಯ ಕಾಡುತ್ತಿದೆ ಇದನ್ನು ಪೊಲೀಸ್ ಇಲಾಖೆ ಸ್ಪಷ್ಟ ಪಡಿಸಬೇಕೆಂದು SDPI ಆಗ್ರಹಿಸುತ್ತಿದೆ
ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಇರುವ ಹಳೆಯ ಕಡತಗಳನ್ನು ಪರಿಶೀಲಿಸಿದರೆ ಅನ್ಯಾಯಕ್ಕೊಳಗಾದವರು ವೈದ್ಯರ ಹಾಗೂ ಅಸ್ಪತ್ರೆಗಳ ನಿರ್ಲಕ್ಷ್ಯದ ವಿರುದ್ಧ ನೀಡಿದ ನೂರಾರು ದೂರುಗಳ ಪ್ರತಿಗಳು ಸಿಗಬಹುದು ಆದರೆ ಇಲ್ಲೆಲ್ಲೂ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ ಇಂದು ಕಾರ್ಪೊರೇಟ್ ನಿಯಂತ್ರಣ ದಲ್ಲಿರುವ ಆಸ್ಪತ್ರೆಯ ಆಡಳಿತ ಮಂಡಳಿ ನೀಡಿದ ದೂರಿಗೆ ಕೂಡಲೇ ಸ್ಪಂದಿಸಿ ಸುಹೈಲ್ ಕಂದಕ್ ರಂತವರನ್ನು ಬಂಧಿಸಿದ್ದಾರೆ, ಎಂದರೆ ಮೆಡಿಕಲ್ ಮಾಫಿಯಾದ ಕರಾಳ ಬೇರುಗಳು ಎಷ್ಟೊಂದು ಆಳವಾಗಿದೆ ಎಂಬುದು ಮನವರಿಕೆ ಆಗುತ್ತದೆ .
ಜನಸಾಮಾನ್ಯರ ಪರವಾಗಿ ನಿಲ್ಲಬೇಕಾದ ಸರಕಾರ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈರೀತಿ ಅಮಾಯಕರನ್ನ ಬಂಧಿಸಿ ಬಂಡವಾಳಶಾಹಿಯ ಪರವಾಗಿ ನಿಲ್ಲುವುದಾದರೆ ನಾಗರಿಕರು ಇಲಾಖೆ ಮೇಲಿನ ವಿಶ್ವಾಸ ಕಳೆದುಕೊಂಡು ಬೀದಿಗಿಳಿಯ ಬೇಕಾಗಬಹುದು .ಇದಕ್ಕೆ ಅವಕಾಶ ನೀಡದೇ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆಕಿಸಿ ಸಂವಿಧಾನ ಬದ್ದವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಇಲ್ಲದಿದ್ದರೆ ಜನಸಾಮಾನ್ಯರ ಪರವಾಗಿ ಅನ್ಯಾಯದ ವಿರುದ್ಧ ವಾಗಿ ಎಸ್ಡಿಪಿಐ ಕಾನೂನು ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಅಥಾವುಲ್ಲಾ ಎಚ್ಚರಿಕೆ ನೀಡಿದ್ದಾರೆ.
ಮಂಗಳೂರು : ಮಂಗಳೂರು ಶ್ರೀ ಚೈತನ್ಯ ಟೆಕ್ನೋ ಶಾಲೆ 2024-25ನೇ ಶೈಕ್ಷಣಿಕ ವರ್ಷದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ 100% ಉತ್ತೀರ್ಣವನ್ನು ಸಾಧಿಸುವ ಮೂಲಕ ಮತ್ತೊಮ್ಮೆ ತನ್ನ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಬೀತುಪಡಿಸಿದೆ.
ಶೈಕ್ಷಣಿಕ ಸಾಧನೆಯ ಅದ್ಭುತ ಪ್ರದರ್ಶನದಲ್ಲಿ, ಸಂಸ್ಥೆಯ 21 ಕ್ಕೂ ಹೆಚ್ಚು ವಿದ್ಯಾರ್ಥಿಗಳು 500 ರಲ್ಲಿ 450 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಸಾಧಕರ ಗುಂಪಿನಲ್ಲಿ ನಿತಿಕಾ ಶ್ರೇಯಾ ರೆಡ್ಡಿ ಕರ್ರಾ 487 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಬಳಿಕ ಅದ್ವೈತ್ ಜೋಶಿ 482 ಅಂಕಗಳೊಂದಿಗೆ ಮತ್ತು ಅನುಷ್ಕಾ ಕಿಶೋರ್ ಶೆಟ್ಟಿ 478 ಅಂಕಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.
ಈ ಬಗ್ಗೆ ಚೈತನ್ಯ ಟೆಕ್ನೋ ಶಾಲೆಯ AGM ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು, ಈ ಸಾಧನೆಯು ನಮ್ಮ ವಿದ್ಯಾರ್ಥಿಗಳ ಕಠಿಣ ಪರಿಶ್ರಮ, ಶಿಸ್ತು ಮತ್ತು ದೃಢಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಶಾಲೆಯ ಪ್ರಾಂಶುಪಾಲೆ ವಿನುತಾ ವಿನಾಯಕ ಕಾಮತ್ ಮತ್ತು ಆಡಳಿತ ಮಂಡಳಿಯು ಶೈಕ್ಷಣಿಕ ವರ್ಷದುದ್ದಕ್ಕೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮತ್ತು ಬೆಂಬಲ ನೀಡುವಲ್ಲಿ ಅವರ ನಿರ್ಣಾಯಕ ಪಾತ್ರವನ್ನು ಗುರುತಿಸಿ ಅಧ್ಯಾಪಕರು ಮತ್ತು ಪೋಷಕರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.
ಈ ಅತ್ಯುತ್ತಮ ಸಾಧನೆಯೊಂದಿಗೆ ಶ್ರೀ ಚೈತನ್ಯ ಟೆಕ್ನೋ ಶಾಲೆಯು ಈ ಪ್ರದೇಶದಲ್ಲಿ ಶೈಕ್ಷಣಿಕ ಶ್ರೇಷ್ಠತೆಯನ್ನು ಪೋಷಿಸಲು ಮೀಸಲಾಗಿರುವ ಪ್ರಮುಖ ಸಂಸ್ಥೆಯಾಗಿ ತನ್ನ ಖ್ಯಾತಿಯನ್ನು ಗಟ್ಟಿಗೊಳಿಸುತ್ತಿದೆ.
ಮಂಗಳೂರು : ಸರ್ವೇ ಮೇಲ್ವಿಚಾರಕರೊಬ್ಬರ ಮನೆ, ಕಚೇರಿ ಮೇಲೆ ಗುರುವಾರ(ಮೇ 15) ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ ಹಿನ್ನೆಲೆಯಲ್ಲಿ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ಮಂಗಳೂರಿನ ಬಿಜೈ ನ 8ನೇ ಕ್ರಾಸ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆದಿದೆ.
ಒಟ್ಟು 3 ಕಾರುಗಳಲ್ಲಿ ಬಂದಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆಪತ್ರಗಳನ್ನು ಪರಿಶೀಲಿಸುತ್ತಿದ್ದಾರೆ. ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜುನಾಥ್ ತುಮಕೂರು ಮೂಲದವರು. ತಮ್ಮ ಸಂಪಾದನೆಗಿಂತ ಅಧಿಕ ಪ್ರಮಾಣದಲ್ಲಿ ಹಣವನ್ನು ಕ್ರೋಢೀಕರಣ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು: ಉಳ್ಳಾಲ ಮತ್ತು ಸೋಮೇಶ್ವರ ಕಡಲ್ಕೊರೆತ ತಡೆಗಟ್ಟುವ ನಿಟ್ಟಿನಲ್ಲಿ ಬುಧವಾರ ಸ್ಪೀಕರ್ ಯು.ಟಿ.ಖಾದರ್ ಸಭೆ ನಡೆಸಿ ಕಾಮಗಾರಿ ನಡೆಸುವ ವಿಚಾರದಲ್ಲಿ ನಿರ್ಲಕ್ಷ್ಯದ ತಾಳಿರುವ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕೋಟೆಪುರ, ಮೊಗವೀರಪಟ್ಣ, ಸೀಗ್ರೌಂಡ್ ಉಚ್ಚಿಲ ಬಟ್ಟಪ್ಪಾಡಿ ಕಡಲ್ಕೊರೆತ ಪ್ರದೇಶಗಳಾಗಿದ್ದು ಕಾಮಗಾರಿಗೆ ದುಡ್ಡು ಬಿಡುಗಡೆಯಾಗಿ ಆರು ತಿಂಗಳಾದರೆ, ಟೆಂಡರ್ ಆಗಿ ಒಂದೂವರೆ ತಿಂಗಳಾಗಿದೆ. ಆದರೆ ಕೆಲಸ ಇನ್ನೂ ಆರಂಭಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕೆಲಸ ಯಾವಾಗ ಆರಂಭಿಸುತ್ತೀರಿ ? ಮಳೆ ಶುರುವಾದ ಬಳಿಕ ಕೆಲಸ ಹೇಗೆ ಮಾಡ್ತೀರಾ ? ಎಂದು ಪ್ರಶ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ ಮತ್ತು ಉಳ್ಳಾಲ ಉರುಸ್ ನಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಉದ್ಘಾಟನೆ ಮುಂದಿನ ಬಾರಿ ನೆರವೇರಿಸಲಿದ್ದಾರೆ.
ಉಳ್ಳಾಲಕ್ಕೆ ಸಾವಿರ ಕೋಟಿ ಅನುದಾನ ನೀಡಿದ್ದು ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಉಳ್ಳಾಲದ ಜನತೆ ಮಾಡಲಿದ್ದಾರೆ ಎಂದು ಖಾದರ್ ತಿಳಿಸಿದರು.