Connect with us

LATEST NEWS

ಬಕ್ರೀದ್‌ ಆಚರಣೆ: ಒಂದು ಬಾರಿ 50 ಜನರು ಮಾತ್ರ ಪ್ರಾರ್ಥನೆ ಮಾಡಲು ಅವಕಾಶ

Published

on

ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಬಕ್ರೀದ್‌ ಆಚರಣೆ ವೇಳೆ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಈ ವೇಳೆ ಮಸೀದಿಗಳಲ್ಲಿ ಒಂದು ಬಾರಿ 50 ಜನರು ಮಾತ್ರ ಪ್ರಾರ್ಥನೆ ಮಾಡಲು ಅವಕಾಶವಿದೆ ಎಂದು ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾರ್ಗಸೂಚಿಯನ್ನು ಪ್ರಕಟ ಮಾಡಿದ್ದು,  ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ನಮಾಜ್‌ ಮಾಡುವಾಗ ಕನಿಷ್ಠ ಆರು ಅಡಿಗಳ ಅಂತರ ಕಾಯ್ದುಕೊಳ್ಳಬೇಕು. 65 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲೇ ಪ್ರಾರ್ಥನೆ ಸಲ್ಲಿಸಬೇಕು. ಆಲಿಂಗನ ಮತ್ತು ಹಸ್ತಲಾಘವಕ್ಕೆ ಅವಕಾಶ ನೀಡಬಾರದು ಎಂದು ಸೂಚಿಸಲಾಗಿದೆ. ಪ್ರಾಣಿ ವಧೆ ಮಾಡುವ ಸಂಪ್ರದಾಯ ಇದ್ದು, ಇದಕ್ಕೆ ನಿರ್ಬಂಧ ಹೇರಲಾಗಿದೆ. ಬಕ್ರೀದ್‌ ಹಬ್ಬದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

DAKSHINA KANNADA

ಮಂಗಳೂರು: ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸಹಿತ ಮೂವರು ಅರೆಸ್ಟ್

Published

on

ಮಂಗಳೂರು: ಡ್ರಗ್‌ ಪೆಡ್ಲಿಂಗ್ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಮಂಗಳೂರಿನ ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಮೈದಾನ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ ಬಂಧಿಸಿದ್ದಾರೆ. ಮೊಹಮ್ಮದ್ ನಿಗಾರೀಸ್, ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಸಬೀರ್ ಅಹಮ್ಮದ್ ಬಂಧಿತ ಆರೋಪಿಗಳು.

ಆರೋಪಿಗಳಿಂದ 59,300 ರೂ. ಬೆಲೆಬಾಳುವ 1.511 ಕೆಜಿ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪಕ, 2 ಮೊಬೈಲ್, 1 ಸ್ಕೂಟರನ್ನು ವಶಪಡಿಸಿಕೊಂಡಿದ್ದಾರೆ. ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟ್ರದ ಧುಲೆ ನಿವಾಸಿ ಮೊಹಮ್ಮದ್ ನಿಗಾರೀಸ್  ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ.

ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ ಮತ್ತು ಪೆರ್ಮನ್ನೂರು ಗಂಡಿ ನಿವಾಸಿ ಸಬೀರ್ ಅಹಮ್ಮದ್‌, ಡ್ರೈವರ್ ಮತ್ತು ಪೈಂಟರ್ ಅಗಿದ್ದವರು. ಶಕೀಬನು ಬಿ.ಸಿ.ರೋಡ್‌ನ ಫ್ಯಾಬೀನ್ ಎಂಬಾತನಿಂದ ಗಾಂಜಾ ಪಡೆದುಕೊಂಡು ಮಾರಾಟ ಮಾಡುತ್ತಿರುವಾಗ ಗಂಡಿ ಪ್ರದೇಶದಲ್ಲಿ  ಬಂಧಿಸಿದ್ದಾರೆ.

 

Continue Reading

DAKSHINA KANNADA

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಹುಭಾಷಾ ನಟಿ ನಯನ ತಾರಾ ದಂಪತಿ ಭೇಟಿ

Published

on

ಸುಬ್ರಹ್ಮಣ್ಯ: ಬಹುಭಾಷಾ ನಟಿ ನಯನ ತಾರಾ ದಂಪತಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಕ್ಷೇತ್ರದಲ್ಲಿ ನಡೆವ ಸರ್ಪ ಸಂಸ್ಕಾರ ಸೇವೆಯಲ್ಲಿ ಭಾಗಿಯಾದರು.

ಪತಿ ವಿಘ್ನೇಶ್‌ ಶಿವನ್ ಜೊತೆ ಆಗಮಿಸಿದ ನಯನ್ ತಾರಾ ದಂಪತಿಗೆ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು.

ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಅವರ ಉಪಸ್ಥಿತಿಯಲ್ಲಿ ಸಮಿತಿ ಪ್ರಮುಖರು ಸೇರಿ ಗೌರವ ಸಲ್ಲಿಸಿದರು.

 

Continue Reading

BIG BOSS

BBK12: ಟಾಸ್ಕ್‌ನಲ್ಲಿ ಸೋತು ತಂಡವನ್ನು ಸಂಕಷ್ಟದಲ್ಲಿ ಸಿಲುಕಿಸಿದ ಗಿಲ್ಲಿ!?

Published

on

BBK12: ಬಿಗ್‌ ಬಾಸ್‌ ಸೀಸನ್ 12ರಲ್ಲಿ ಗಿಲ್ಲಿ ಬೆಸ್ಟ್ ಎಂಟರ್‌ಟೈನರ್ ಅನ್ನೊದರಲ್ಲಿ ಎರಡು ಮಾತಿಲ್ಲ. ಆದರೆ ಟಾಸ್ಕ್ ವಿಚಾರಕ್ಕೆ ಬಂದಾಗ ಎಲ್ಲೋ ಒಂದು ಕಡೆ ಎಡವಿ ಬೀಳುತ್ತಿರುತ್ತಾರೆ. ಅದು ಈ ವಾರದ ಟಾಸ್ಕ್‌ನಲ್ಲಿಯೂ ರೀಪಿಟ್ ಆಗಿದೆ. ಈ ಬಾರಿ ಗಿಲ್ಲಿ ಟಾಸ್ಕ್‌ನಲ್ಲಿ ಸೋತಿರುವ ಕಾರಣ ಇಡೀ ತಂಡನೇ ಬೆಲೆ ತೆರಬೇಕಿದೆ.

ಹೌದು, ಬಿಗ್ ಬಾಸ್‌ನಲ್ಲಿ ಈ ವಾರ ಮಾಳು ಕ್ಯಾಪ್ಟನ್ ಆಗಿದ್ದು, ಟಾಸ್ಕ್‌ಗಳ ಅಬ್ಬರ ಜೋರಾಗಿದೆ. ಮನೆಯಲ್ಲಿ ನಾಮಿನೇಟ್ ಟೀಮ್ ಹಾಗೂ ಸೇಫ್‌ ಟೀಮ್ ಎಂಬ ಎರಡು ಗುಂಪುಗಳಾಗಿದ್ದು, ಟಾಸ್ಕ್‌ನಲ್ಲಿ ಪೈಪೋಟಿ ನೀಡುತ್ತಿದ್ದಾರೆ.

ಆದರೆ ಸೇಫ್ ಟೀಮ್‌ ಸೋತು ಹೋಗಿದೆ. ಇದಕ್ಕೆ ಕಾರಣ ಗಿಲ್ಲಿ ಮಾಡಿಕೊಂಡಿರುವ ಎಡವಟ್ಟು. ಈ ಬಗ್ಗೆ ಗಿಲ್ಲಿ ಮಾತನಾಡಿದ್ದಾರೆ.

ಇದನ್ನೂ ಓದಿ: BBK12: ‘ನಾಮಿನೇಟೆಡ್’ ತಂಡಕ್ಕೆ ಹೊಸ ಚಾಲೆಂಜ್ ನೀಡಿದ ಬಿಗ್ ಬಾಸ್; ರಾಶಿಕಾ ವಿರುದ್ದ ತಿರುಗಿಬಿದ್ದ ರಕ್ಷಿತಾ!

ಮೊದಲು ತಂಡದ ಪರವಾಗಿ ನಾನೇ ಆಡೋಕೆ ಹೊಗ್ತೀನಿ ಅಂತ ಮುಂದೆ ಹೋಗಿದ್ದಾರೆ. ಆದರೆ ಆಟದ ಮಧ್ಯದಲ್ಲಿ ಎಡವಟ್ಟು ಮಾಡಿಕೊಂಡು ಸೋತು ಹೋಗಿದ್ದಾರೆ. ಈ ಬಗ್ಗೆ ಗಿಲ್ಲಿ ‘ನಾನು ಹೋದ ಟೀಮ್ ಸೋಲುತ್ತೆ ಅಂತ ಎಲ್ಲರೂ ಹೇಳ್ತಿದ್ರು, ನನಗೂ ಈಗ ನಿಜ ಅನಿಸ್ತಿದೆ. ಎಷ್ಟು ಸ್ಟಾಂಗ್ ಇದ್ರೂ ಸೋಲುತ್ತಿದ್ದೇವೆ ಅಂದ್ರೆ ನನ್ನಲ್ಲೇ ಏನೋ ಸಮಸ್ಯೆ ಇರಬೇಕೆಂದು’ ತಂಡದ ಜೊತೆ ತಮಾಷೆಯಿಂದ ಮಾತನಾಡಿದ್ದಾರೆ. ಇನ್ನೊಂದು ಕಡೆ ಗಿಲ್ಲಿಗೆ ನಾಮಿನೇಟ್ ಆಗುವ ಆತಂಕ ಎದುರಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page