Connect with us

FILM

ಸಿನಿಮಾ ಒಂದೇ ಆಯಾಮದಲ್ಲಿ ಸಾಗಬಾರದು, ಬದಲಾವಣೆ ಅಗತ್ಯ: ವಿಜಯಕುಮಾರ್ ಕೊಡಿಯಾಲ್ ಬೈಲ್

Published

on

ಮಂಗಳೂರು: ಕತ್ತಲೆ ಆವರಿಸಿದ ತುಳು ಸಿನಿಮಾರಂಗಕ್ಕೆ ಬೆಳಕು ನೀಡುವ ಸಿನಿಮಾ ಬರಬೇಕಾಗಿದೆ. ಏಕಾತನೆಯಿಂದ ಕೂಡಿದ ಸಿನಿಮಾದಿಂದ ಬೇಸೆತ್ತ ಪ್ರೇಕ್ಷಕರು ಹೊಸ ಬಗೆಯ ಸಿನಿಮಾಗಳ ಕುರಿತು ನಿರೀಕ್ಷೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಸುಮುಖ ಪ್ರೊಡಕ್ಷನ್ ನಿರ್ಮಿಸಿರುವ “ತುಡರ್” ತುಳು ಸಿನಿಮಾ ಬಿಡುಗಡೆಗೆ ಸಿದ್ಧವಾಗಿರುವುದು ಸಂತೋಷದ ವಿಚಾರ ಎಂದು ಖ್ಯಾತ ಚಲನಚಿತ್ರ ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಹೇಳಿದ್ದಾರೆ. ಅವರು ಭಾರತ್ ಮಾಲ್ ನ‌ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ  “ತುಡರ್‌” ಸಿನೆಮಾದ ಹಾಡುಗಳ ಬಿಡುಗಡೆ ಸಂದರ್ಭದಲ್ಲಿ  ದೀಪ ಬೆಳಗಿಸಿ ಮಾತನಾಡಿದರು.

ಸಿನಿಮಾ ಒಂದೇ ಆಯಾಮದಲ್ಲಿ ಸಾಗಬಾರದು. ಬದಲಾವಣೆ ಅಗತ್ಯ.‌ ತುಡರ್ ಸಿನಿಮಾದಲ್ಲಿ ಹೊಸ ಹೊಸ ಕಲಾವಿದರಿದ್ದಾರೆ. ಬಾಲಿವುಡ್ ನ ಹೆಸರಾಂತ ತಂತ್ರಜ್ಞರಿದ್ದಾರೆ. ಸಿನಿಮಾದಲ್ಲಿ ಒಳ್ಳೆಯ ಕತೆ ಎಲ್ಲವೂ ಇದೆ.  ನಿರೂಪಣೆ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎಂದು ವಿಜಯಕುಮಾರ್ ಕೊಡಿಯಾಲ್ ಬೈಲ್ ತಿಳಿಸಿದರು.

ಹಾಸ್ಯ ಚಿತ್ರಗಳ ಜೊತೆಗೆ ಸದಭಿರುಚಿಯ ಕಥಾವಸ್ತುವನ್ನು ಒಳಗೊಂಡ ಸಿನಿಮಾಗಳು ಬರಬೇಕು. ತುಡರ್ ಸಿನಿಮಾ ಹೊಸಬರ ಪ್ರಯತ್ನವಾಗಿದ್ದು, ಅವರ ಪ್ರಯತ್ನಕ್ಕೆ ಎಲ್ಲರ ಬೆಂಬಲ ಪ್ರೋತ್ಸಾಹ ಬೇಕಾಗಿದೆ ಎಂದು ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ತಿಳಿಸಿದರು.
ಸಮಾರಂಭದಲ್ಲಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ಕಾರ್ಪೋರೇಟರ್ ಕಿರಣ್ ಕುಮಾರ್, ಪ್ರೇಮ್ ಶೆಟ್ಟಿ ಸುರತ್ಕಲ್, ಭಾಸ್ಕರ ರೈ ಕುಕ್ಕುವಳ್ಳಿ, ಉಳಿದೊಟ್ಟು ರವೀಂದ್ರ ಶೆಟ್ಟಿ, ನಟ ಸಿದ್ದಾರ್ಥ್ ಎಚ್ ಶೆಟ್ಟಿ, ಹರೀಶ್ ಶೆಟ್ಟಿ, ಆರತಿ ಶೆಟ್ಟಿ, ನಿರ್ದೇಶಕರಾದ ಎಲ್ವನ್ ಮಸ್ಕರೇನಸ್, ದಿನೇಶ್ ಶೆಟ್ಟಿ ,ನಟರಾದ ವಿನೀತ್ , ಸಮತಾ ಅಮೀನ್, ಸಾಹಿಲ್ ರೈ ನಿರ್ಮಾಪಕ ವಿಲ್ಸನ್ ರೆಬೆಲ್ಲೊ, ಮೋಹನ್ ರಾಜ್ ಮೊದಲಾದವರು ಉಪಸ್ಥಿತರಿದ್ದರು.

ತುಡರ್ ಸಿನಿಮಾಕ್ಕೆ ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 36 ದಿನಗಳ ಕಾಲ ಚಿತ್ರೀಕರಣ ನಡೆದಿದ್ದು, ಸಿನಿಮಾ ಜೂನ್ ತಿಂಗಳಲ್ಲಿ ಕರಾವಳಿಯಾದ್ಯಂತ ತೆರೆ ಕಾಣಲಿದೆ. ತಾರಾಗಣದಲ್ಲಿ ಸಿದ್ಧಾರ್ಥ್ ಎಚ್ ಶೆಟ್ಟಿ, ದೀಕ್ಷಾ ಭಿಷೇ, ಅರವಿಂದ ಬೋಳಾರ್ , ರೂಪ ವರ್ಕಾಡಿ ಮೊದಲಾದವರಿದ್ದಾರೆ. ಸುಮುಖ ಪ್ರೊಡಕ್ಷನ್ಸ್, ಸ್ನೇಹ ಗ್ರೂಪ್ಸ್ ಹಾಗೂ ಟಿಇ ಫಿಲ್ಮ್ಸ್ ಜೊತೆಗೂಡಿ ಈ ಚಿತ್ರ ನಿರ್ಮಾಣ ಮಾಡಿದ್ದು, ತೇಜೇಶ್ ಪೂಜಾರಿ, ಎಲ್ಟನ್ ಮಸ್ಕರೇನಸ್ ನಿರ್ದೇಶನ ಮಾಡಿದ್ದಾರೆ. ಇನ್ನು ಸಿನೆಮಾದ ಕಥೆ , ಚಿತ್ರ ಕಥೆ , ಸಂಭಾಷಣೆ ಸಾಹಿತ್ಯ  ಮೋಹನ್ ರಾಜ್ ಅವರದ್ದಾಗಿದ್ದಾಗಿದೆ.

FILM

ರೆಬೆಲ್‌ ಸ್ಟಾರ್‌ ಅಂಬರೀಶ್ ಮೊಮ್ಮಗನ ಹೆಸರೇನು ಗೊತ್ತಾ?

Published

on

ಬೆಂಗಳೂರು: ಅಭಿಷೇಕ್-ಅವಿವಾಗೆ 2024ರ ನವೆಂಬರ್ 12ರಂದು ಗಂಡು ಮಗು ಜನಿಸಿತ್ತು. ಈ ಮಗುವಿಗೆ ಇಂದು ನಾಮಕರಣ ಶಾಸ್ತ್ರ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ ಒಂದರಲ್ಲಿ ಬಹಳ ಅದ್ದೂರಿಯಾಗಿ ನಾಮಕರಣ ಶಾಸ್ತ್ರ ನೆರವೇರಿದೆ.

ಇನ್ನು ರಬೆಲ್ ಅಂಬರೀಶ್ ಮೊಮ್ಮಗನಿಗೆ ರಾಣಾ ಅಮರ್ ಅಂಬರೀಶ್ ಎಂದು ನಾಮಕರಣ ಮಾಡಲಾಗಿದೆ. ಅಭೀಷೇಕ್ ಅವರು ತಮ್ಮ ಮಗುವಿಗೆ ಅಪ್ಪನ ಮೂಲ ಹೆಸರನ್ನೇ ಹಿಟ್ಟಿದ್ದಾರೆ. ಅಂಬರೀಶ್ ಅವರ ಮೂಲ ಹೆಸರು ಅಮರ್‌ನಾಥ್ ಎಂದು ಆಗಿತ್ತು. ಹೀಗಾಗಿ ಈ ಹೆಸರನ್ನೇ ಆಯ್ಕೆ ಮಾಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಅಂಬರೀಶ್‌ನ ಆಪ್ತವಲಯದವರು ಹಾಗೂ ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.

Continue Reading

FILM

ಎಆರ್ ರೆಹಮಾನ್ ಆರೋಗ್ಯದಲ್ಲಿ ಏರು-ಪೇರು; ಆಸ್ಪತ್ರೆಗೆ ದಾಖಲು

Published

on

ಮಂಗಳೂರು/ಚೆನ್ನೈ: ಖ್ಯಾತ ಸಂಗೀತ ಕ್ಷೇತ್ರದ ದಿಗ್ಗಜ ಎಆರ್ ರೆಹಮಾನ್ ಅವರ ಆರೋಗ್ಯದಲ್ಲಿ ಏರು-ಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಂದು (ಮಾ.16) ಬೆಳಗ್ಗೆ 7.30ರ ಸುಮಾರಿಗೆ ರೆಹಮಾನ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ರೆಹಮಾನ್ ಅವರನ್ನು ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದೆನೋವಿನ ಹಿನ್ನೆಲೆಯಲ್ಲಿ ಎ.ಆರ್ ರೆಹಮಾನ್ ಅವರಿಗೆ ECG, ಎಕೋಕಾರ್ಡಿಯೋಗ್ರಾಮ್ ಸೇರಿ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ಸದ್ಯಕ್ಕೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಇನ್ನೂ ಕೆಲ ದಿನ ಅಪೋಲೊ ಆಸ್ಪತ್ರೆಯಲ್ಲಿಯೇ ಕಳೆಯಲಿರುವ ಎಆರ್ ರೆಹಮಾನ್ ಆಂಜಿಯೋಗ್ರಾಂ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ, ಖ್ಯಾತ ಸಂಗೀತ ನಿರ್ದೇಶಕನ ದಾಂಪತ್ಯ ಜೀವನದಲ್ಲಿ ಬಿರುಕು!

ಎಆರ್ ರೆಹಮಾನ್ ಅವರಿಗೆ ಈಗ 58 ವರ್ಷ ವಯಸ್ಸಾಗಿದೆ. ಇತ್ತೀಚೆಗಷ್ಟೆ ಅವರು ಪತ್ನಿ ಸಾಯಿರಾ ಬಾನು ಅವರಿಂದ ದೂರಾಗಿದ್ದಾರೆ. ಪತ್ನಿಯಿಂದ ವಿಚ್ಛೇದನ ಪಡೆದಿರುವ ಎಆರ್ ರೆಹಮಾನ್ ಏಕಾಂಗಿಯಾಗಿದ್ದಾರೆ. ಅಂದಹಾಗೆ ರೆಹಮಾನ್ ಅವರಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ರೆಹಮಾನ್ ಪುತ್ರ ಮತ್ತು ಪುತ್ರಿ ಇಬ್ಬರೂ ಸಹ ಗಾಯಕರೇ ಆಗಿದ್ದಾರೆ.

Continue Reading

FILM

ಕಿಚ್ಚ ಸುದೀಪ್ ಮಗಳು ಸಾನ್ವಿ ಓದಿದ್ದು ಇಷ್ಟೇನಾ..!

Published

on

ಬೆಂಗಳೂರು: ನಟ ಕಿಚ್ಚ ಸುದೀಪ್‌ ಸ್ಯಾಂಡಲ್‌ವುಡ್‌ನಲ್ಲಿ ಮಿಂಚುತ್ತಿರುವ ಮುಂಚೂಣಿ ನಟರಲ್ಲಿ ಪ್ರಮುಖರು ಎನ್ನುವುದರಲ್ಲಿ ಎರಡು ಮಾತಿಲ್ಲ. ಇತ್ತೀಚೆಗೆ ಅವರ ಮ್ಯಾಕ್ಸ್‌ ಸಿನಿಮಾ ಚಿತ್ರರಂಗದಲ್ಲಿ ಸಖತ್‌ ಫೇಮಸ್ ಆಗಿತ್ತು. ತಂದೆಯಂತೆ ಮಗಳು ಎನ್ನುವ ಹಾಗೆ ಕಿಚ್ಚ ಸುದೀಪ್ ಮಗಳು ಸಾನ್ವಿ ಶೀಘ್ರದಲ್ಲೇ ನಟನಾ ಕ್ಷೇತ್ರದಲ್ಲೂ ಮಿಂಚಲಿದ್ದಾರೆ.

 

ಸದ್ಯ ಸಂಗೀತ ಮತ್ತು ನಟನಾ ಕ್ಷೇತ್ರದಲ್ಲಿ ಅತ್ಯಂತ ಒಲವು ಮೂಡಿಸಿಕೊಂಡಿರುವ ಸಾನ್ವಿ ಸುದೀಪ್ ಇತ್ತೀಚೆಗಷ್ಟು ಝೀ ಕನ್ನಡ ಸರಿಗಮಪ ಶೋ ನಲ್ಲಿ ತನ್ನ ತಂದೆಯ ಎದುರೇ ಪದ್ಯವನ್ನು ಹಾಡಿದ್ದರು. ಮಗಳ ಪ್ರಯತ್ನಕ್ಕೆ ಸುದೀಪ್ ಖುಷಿಯಾಗಿದ್ದರು.

ಇನ್ನು 21 ವರ್ಷದ ಸಾನ್ವಿ ಏನು ಓದಿದ್ದಾರೆ ಎಂಬುವುದೇ ಎಲ್ಲಾರಿಗೆ ಕುತೂಹಲ ಮೂಡಿಸಿದೆ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಸಾನ್ವಿ ತನ್ನ ವಿದ್ಯಾರ್ಹತೆಯ ಬಗ್ಗೆ ಮಾತನಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, “ನನ್ನ ಶಿಕ್ಷಣದ ಬಗ್ಗೆ ಅನೇಕರು ಪ್ರಶ್ನೆ ಕೇಳುತ್ತಿದ್ದಾರೆ. ಆದರೆ ಯಾಕೆ ಅಂತ ಅರ್ಥ ಆಗುತ್ತಿಲ್ಲ. ನಾನು ಇನ್ನೂ ಏನೂ ಸಾಧನೆ ಮಾಡಿಲ್ಲ. ನಾನು ಬೆಂಗಳೂರಿನಲ್ಲಿ ಪಿಯುಸಿವರೆಗೆ ಓದಿದೆ. ಆಗಲೇ ನನಗೆ ಸಾಕಾಗಿತ್ತು. ಮನರಂಜನೆ ಕ್ಷೇತ್ರದಲ್ಲಿ ಇರುವವರಲ್ಲಿ ಅನೇಕರಿಗೆ ಶಿಕ್ಷಣದ ಬಗ್ಗೆ ಆಸಕ್ತಿ ಇರೋದಿಲ್ಲ. ಪಿಯುಸಿ ಮುಗಿಸಿ ನಾನು ನಾಲ್ಕು ತಿಂಗಳುಗಳ ಕಾಲ ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಆಕ್ಸಿಂಗ್ ಕೋರ್ಸ್ ಮಾಡಿದೆ” ಎಂದು ಹೇಳಿದ್ದಾರೆ.

ಅಲ್ಲದೇ ಸಾನ್ವಿ ಈಗ ಚಿತ್ರರಂಗದಲ್ಲಿ ಆಕ್ಟಿವ್ ಆಗುತ್ತಿದ್ದಾರೆ. ಅಪ್ಪ ಸುದೀಪ್ ಮುಂದೆ ಖಡಕ್‌ ವಿಲನ್‌ ಆಗಿ ಸಾನ್ವಿಗೆ ನಟಿಸುವ ಆಸೆ ಇದೆ. ಆದರೆ ಹಿರೋಯಿನ್ ಮಾತ್ರ ಆಗೋದಿಲ್ಲ ಎಂದು ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page