Connect with us

LATEST NEWS

ಅಪ್ರಾಪ್ತನಿಗೆ ಆಟೋ ನೀಡಿದ್ದಕ್ಕೆ ಮಾಲೀಕನಿಗೆ 1.41 ಕೋಟಿ ರೂ. ದಂಡ ವಿಧಿಸಿದ ನ್ಯಾಯಾಲಯ

Published

on

ಗಂಗಾವತಿ: ಬಾಲಕನಿಗೆ ಆಟೊ ಕೊಟ್ಟವನಿಗೆ ನ್ಯಾಯಾಲಯವು 1.41 ಕೋಟಿ ರೂ. ದಂಡ ವಿಧಿಸಿದ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.

17 ವರ್ಷದ ಬಾಲಕನೊಬ್ಬ ಆಟೊ ಚಲಾಯಿಸುವಾಗ ಅಪಘಾತ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ. ಹೀಗಾಗಿ ಬಾಲಕನಿಗೆ ಆಟೋ ನೀಡಿದ ಮಾಲೀಕನಿಗೆ ಪಟ್ಟಣದ ಹಿರಿಯ ಸಿವಿಲ್ ನ್ಯಾಯಾಲಯ ದಂಡ ವಿಧಿಸಿದೆ.

ಗಂಗಾವತಿ ನಿವಾಸಿ ರಾಜಶೇಖರ ಪಾಟೀಲ್, 2021ರ ಮಾರ್ಚ್ 10ರಂದು ಪಟ್ಟಣದ ಸ್ವಸ್ತಿಕ್ ಕಂಪ್ಯೂಟರ್ ಬಳಿ ಬೈಕ್ ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತಿದ್ದರು. ಈ ವೇಳೆ ಬಾಲಕನೊಬ್ಬ ಅಡ್ಡಾದಿಡ್ಡಿಯಾಗಿ ಆಟೊ ಓಡಿಸಿಕೊಂಡು ಬಂದು ಅವರಿಗೆ ಡಿಕ್ಕಿ ಹೊಡೆದಿದ್ದ.

ತೀವ್ರ ಗಾಯಗೊಂಡಿದ್ದ ರಾಜಶೇಖರ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದರು. ಸೂಕ್ತ ಪರಿಹಾರ ನೀಡುವಂತೆ ಕೋರಿ ರಾಜಶೇಖರ ಪಾಟೀಲ್ ಕುಟುಂಬ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾ. ರಮೇಶ ಎಸ್.ಗಾಣಿಗೇರ ಅವರು, ಬಾಲಕನಿಗೆ ಆಟೊ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ ದೊಡ್ಡ ಮೊತ್ತದ ದಂಡ ವಿಧಿಸಿದ್ದಾರೆ. ದಂಡದ ಮೊತ್ತವನ್ನು ರಾಜಶೇಖರ ಅವರ ಕುಟುಂಬಕ್ಕೆ ಪರಿಹಾರವಾಗಿ ನೀಡುವಂತೆಯೂ ಸೂಚಿಸಿದ್ದಾರೆ.

LATEST NEWS

ಕಟಪಾಡಿ ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣ: ಕೋಟ ಶ್ರೀನಿವಾಸ್‌ ಪೂಜಾರಿ

Published

on

ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಉಡುಪಿ ಜಿಲ್ಲೆಯ ಕಟಪಾಡಿ ಜಂಕ್ಷನ್ ಬಳಿ ಉಡುಪಿ ಕಿನ್ನಿಮೂಲ್ಕಿ ಮಾದರಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಕಳೆದ ಮಾರ್ಚ್‌ನಲ್ಲಿ ಟೆಂಡ‌ರ್ ಪ್ರಕ್ರಿಯೆ ಮುಗಿದಿದ್ದು, 17 ಕೋಟಿ ರೂಪಾಯಿ ವೆಚ್ಚದಲ್ಲಿ ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸ್ಥಳೀಯ ಸಾರ್ವಜನಿಕರೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಮಾಹಿತಿ ನೀಡಿದರು. ಅಂಡರ್ ಪಾಸ್ ನಿರ್ಮಾಣವು 550 ಮೀಟರ್‌ ಉದ್ದ, 5.5 ಮೀಟರ್‌ ಎತ್ತರ ಇರಲಿದೆ. ನ್ಯಾಷನಲ್ ಇನ್‌ಫ್ರಾ ಪ್ರಾಜೆಕ್ಟ್ ಕಂಪೆನಿ ಕಾಮಗಾರಿ ವಹಿಸಿಕೊಂಡಿದೆ. 10 ಕಡೆ ಸರ್ವಿಸ್ ರಸ್ತೆ ನಿರ್ಮಾಣ, 6 ಕಡೆ ಪಾದಚಾರಿ ಮಾರ್ಗ ನಿರ್ಮಾಣವಾಗಲಿದೆ.

ಇದನ್ನೂ ಓದಿ: ವಿವಾಹ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಸಿಎ ಹೃದಯಾಘಾತದಿಂದ ಸಾವು

ಕಾಮಗಾರಿ ಪೂರ್ಣಗೊಳ್ಳಲು 24 ತಿಂಗಳು ಬೇಕಾಗುತ್ತದೆ ಎಂದು ತಿಳಿಸಿದರು. ಕಟಪಾಡಿ ಗ್ರಾಮ ಪಂಚಾಯತ್‌ ಆಡಳಿತ ಸೇರಿದಂತೆ ಅಧಿಕಾರಿಗಳು ಮತ್ತು ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಯನ್ನುಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಕಟಪಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಪ್ರಭಾ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು.

Continue Reading

LATEST NEWS

ವಿವಾಹ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಸಿಎ ಹೃದಯಾಘಾತದಿಂದ ಸಾವು

Published

on

ಇಂದೋರ್‌: ವಿವಾಹ ಸಂಭ್ರಮದಲ್ಲಿ ಪಾಲ್ಗೊಂಡಿದ್ದ 29 ವರ್ಷದ ಚಾರ್ಟರ್ಡ್‌ ಅಕೌಂಟೆಂಟ್‌ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಇಂದೋರ್‌ನ ಸಿಎಟಿ ರಸ್ತೆಯಲ್ಲಿರುವ ಮದುವೆ ಗಾರ್ಡನ್‌ನಲ್ಲಿ ನಡೆದಿದೆ.

ಪುಣೆಯ ಸಂಪತ್‌ಹಿಲ್ಸ್‌ನ ನಿವಾಸಿ ಆಯುಷ್‌ ವ್ಯಾಸ್‌ ಮೃತಪಟ್ಟ ಯುವಕ. ಮದುವೆಯ ಸಂಭ್ರಮಾಚಾರಣೆಯ ವೇಳೆ ಈತನ ಆರೋಗ್ಯ ಹದಗೆಟ್ಟಿದ್ದು, ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ ಆಯುಷ್‌ ಶನಿವಾರ ಸಂಜೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ನಂತರ ಗಾರ್ಡನ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ ಬಂದಾಗ ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಗುಂಡ್ಯದಲ್ಲಿ ಮತ್ತೆ ಕೆಎಸ್ಆರ್ಟಿಸಿ ಬಸ್ಸು ಮತ್ತು ಲಾರಿ ಅಪಘಾತ

ವೈದ್ಯಕೀಯ ಪರೀಕ್ಷೆಯಲ್ಲಿ ಅಪರೂಪದ ವಿಷಯ ಬೆಳಕಿಗೆ ಬಂದಿದೆ. ಹೃದಯದ ಅಪಧಮನಿಗಳು ಅಸಾಮಾನ್ಯವಾಗಿ ಗಟ್ಟಿಯಾಗಿದ್ದವು ಎಂದು ಹೇಳಲಾಗಿದೆ. ಇದು ಯುವ ವಯಸ್ಸಿನವರಲ್ಲಿ ಬಹಳ ವಿರಳ ಎನ್ನಲಾಗಿದೆ.

Continue Reading

LATEST NEWS

ಐಪಿಎಲ್‌ ಅಥವಾ ಪಿಎಸ್‌ಎಲ್‌ಗಿಂತ ಹೆತ್ತವರ ಸುರಕ್ಷತೆಯೇ ಮುಖ್ಯವಾಗಿತ್ತು: ಮೊಯಿನ್ ಅಲಿ

Published

on

ಮಂಗಳೂರು/ನವದೆಹಲಿ: ಕೋಲ್ಕತ್ತಾ ನೈಟ್‌ರೈಡರ್ಸ್ ತಂಡದ ಇಂಗ್ಲೆಂಡ್ ಸ್ಪಿನ್ನರ್ ಮೊಯಿನ್ ಅಲಿ 2025ರ ಐಪಿಎಲ್‌ನಿಂದ ಹೊರಹೋಗಲು ಕಾರಣವೇನೆಂದು ಹೇಳಿದ್ದಾರೆ.

ಭಾರತೀಯ ಸೇನೆ ಮತ್ತು ವಾಯುಪಡೆ ಆಪರೇಷನ್ ಸಿಂದೂರ್ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಪಾಕಿಸ್ತಾನದ ನಿದ್ದೆಗೆಡಿಸಿತು. ಆದರೆ ಈ ದಾಳಿಯ ಸಂದರ್ಭದಲ್ಲಿ ಇಂಗ್ಲೆಂಡ್ ಸ್ಪಿನ್ನರ್ ಮೊಹಿನ್ ಆಲಿ ಅವರ ಹೆತ್ತವರು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಬಳಿ ಇದ್ದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿಯಾದ ಮೊಹಮ್ಮದ್ ಶಮಿ; ಬಿಜೆಪಿ ಸೆರ್ತಾರಾ ಟೀಮ್‌ ಇಂಡಿಯಾ ವೇಗಿ

ಈ ಬಗ್ಗೆ ಮಾತನಾಡಿದ ಮೊಯಿನ್ ಅಲಿ, “ನನ್ನ ಹೆತ್ತವರಿದ್ದ ಜಾಗಕ್ಕೆ ಸುಮಾರು 30-35 ಕಿ.ಮೀ. ದೂರಕ್ಕೆ ಭಾರತೀಯ ಸೇನೆ ಮಿಸೈಲ್ ದಾಳಿ ನಡೆಸಿತು. ಇದೊಂಥರ ತಲೆ ಕೆಡುವಂಥ ಪರಿಸ್ಥಿತಿ. ಬಳಿಕ, ಹೆತ್ತವರು ಹೇಗೋ ಒಂದು ವಿಮಾನ ಹಿಡಿದು ಅದೇ ದಿನ ಅಲ್ಲಿಂದ ತೆರಳಿದರು. ಅನಂತರ ನನಗೆ ವೈರಲ್ ಜ್ವರ ಕಾಡತೊಡಗಿತು. ಹೀಗಾಗಿ ನನಗೆ ಐಪಿಎಲ್ ಅಥವಾ ಪಿಎಸ್‌ಎಲ್‌ಗಿಂತ ಹೆತ್ತವರ ಸುರಕ್ಷತೆಯೇ ಮುಖ್ಯವಾಗಿತ್ತು. ಆದ್ದರಿಂದ ನಾನು ಬೇಗ ಐಪಿಎಲ್ ತೊರೆಯಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page