Connect with us

LATEST NEWS

‘ತಂದೆಯನ್ನು ಭೇಟಿ ಮಾಡಲು ಹೋದರೆ ಹೊಡಿತಾರೆ..’ ಸಿ.ಪಿ ಯೋಗೇಶ್ವರ್‌ ಪುತ್ರಿಯ ಅಳಲು..! ರಾಜಕೀಯ ಚರ್ಚೆಗೆ ಕಾರಣವಾಯ್ತು ಈ ವೀಡಿಯೋ

Published

on

ಬೆಂಗಳೂರು: ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಬಿಜಿಪಿ ಮುಖಂಡರ ಪುತ್ರಿಯ ಹೇಳಿಕೆಯ ವೀಡಿಯೋವೊಂದು ಭಾರಿ ವೈರಲ್ ಆಗುತ್ತಿದೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್‌ ಅವರ ಪುತ್ರಿ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಮಾಡಿ ತಂದೆ ವಿರುದ್ಧ ಹರಿಹಾಯ್ದಿದ್ದಾರೆ.

nisha yogeshwar

ಸಿ.ಪಿ. ಯೋಗೇಶ್ವ‌ರ್ ಮತ್ತು ಅವರ ಎರಡನೇ ಪತ್ನಿ ವಿರುದ್ಧ ಮೊದಲನೇ ಪತ್ನಿಯ ಪುತ್ರಿ ನಿಶಾ ಯೋಗೇಶ್ವ‌ರ್ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.  ಕೌಟುಂಬಿಕ ಸಮಸ್ಯೆಗಳ ಕುರಿತಾಗಿ ವಿಡಿಯೊ ವೊಂದನ್ನು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದೀಗ ಈ ವೀಡಿಯೋ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

‘ನನ್ನ ತಂದೆ ಮತ್ತು ಚಿಕ್ಕಮ್ಮ(ಮಲತಾಯಿ) ಇಬ್ಬರೂ ಮೊದಲನೇ ಪತ್ನಿಯ ಮಗಳಾದ ನನ್ನನ್ನು ಬೆಳೆಸಿ ಆದರ್ಶವಾಗಲಿಲ್ಲ. ತಂದೆಯ ಭೇಟಿಗೆ ಹೋದರೆ ಪೊಲೀಸರನ್ನು ಕರೆಯಿಸುತ್ತಾರೆ. ಮಾತನಾಡಿಸಲು ಮುಂದಾದರೆ ಕಪಾಳಕ್ಕೆ ಹೊಡೆಯುತ್ತಾರೆ. ನಿನಗೆ ಒಂದು ರೂಪಾಯಿ ಕೂಡ ಕೊಡುವುದಿಲ್ಲ. ಭಿಕ್ಷೆ ಬೇಡಿ ಬದುಕು ಎನ್ನುತ್ತಾರೆ. ನನ್ನ ಬದುಕಿನಿಂದ ತಂದೆ ಹೊರ ಹೋದಾಗಿನಿಂದಲೂ ವನವಾಸ ಅನುಭವಿಸುತ್ತಲೇ ಇದ್ದೇನೆ’ ಎಂದು ಹೇಳಿದ್ದಾರೆ.

Read More..; ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್‌ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

‘ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ನಾನು ವಿಡಿಯೊವೊಂದನ್ನು ಪೋಸ್ಟ್ ಮಾಡಿದ್ದೆ. ನನ್ನ ಹೆಸರಿನ ಮುಂದೆ ತಮ್ಮ ಹೆಸರನ್ನು ಬಳಸದಂತೆ ತಾಕೀತು ಮಾಡಿದರು. ಅವರ ಹೆಸರು ಇಲ್ಲದೆ ನನಗೆ ಅಸ್ತಿತ್ವವೇ ಇಲ್ಲ ಎಂದು ಹೀಯಾಳಿಸಿದ್ದಾರೆ. ಈ ಬಗ್ಗೆ ಮಾತನಾಡಲು ಇಷ್ಟಪವಿಲ್ಲದಿದ್ದರೂ ಕೂಡಾ ಮಾತನಾಡಲೇಬೇಕಾದ ಪರಿಸ್ಥಿತಿ ಬಂದಿದೆ. ನಾನು ಹತ್ತು ವರ್ಷವಿದ್ದಾಗಲೇನನ್ನ ತಂದೆ ನಮ್ಮ ಬದುಕಿನಿಂದ ಹೊರ ನಡೆದಿದ್ದಾರೆ. ಆದರೂ, ಚುನಾವಣೆ ಸಂದರ್ಭದಲ್ಲಿ ಕರೆದಾಗ ಅವರ ಪರ ಪ್ರಚಾರ ಮಾಡಿದ್ದೆ. ಅವರಿಷ್ಟಕ್ಕೆ ಅನುಗುಣವಾಗಿ ಕೆಲಸ ಮಾಡಿದಾಗ ಎಲ್ಲವೂ ಚೆನ್ನಾಗಿತ್ತು. ಈಗ 24 ವರ್ಷದ ನಂತರ ನನ್ನ ಬಗ್ಗೆ ಯೋಚಿಸಿದ್ದಕ್ಕೆ ಆದರ್ಶ ಮಗಳಾಗದೆ ಯಾರಿಗೂ ಬೇಡವಾಗಿದ್ದೇನೆ. ತಂದೆ ಹೆಸರನ್ನು ಬಳಸಬಾರದೆಂಬ ಮಾತು ಬರುತ್ತಿವೆ’ ಎಂದು ನಿಶಾ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.

‘ಈ ರೀತಿ ಕಾಮೆಂಟ್ ಮಾಡುವವರು ಯಾರೆಂದು ನನಗೆ ಗೊತ್ತಿದೆ. ಅವರೆಲ್ಲರೂ ಒಂದು ಕಡೆ ಸೇರಿ ನನ್ನ ಆಧಾರ್, ಪಾಸ್‌ಪೋರ್ಟ್, ಜನನ ಪ್ರಮಾಣಪತ್ರ ಸೇರಿದಂತೆ ಹಲವು ಕಡೆ ತಂದೆ ಹೆಸರನ್ನು ಹೇಗೆ ತೆಗೆಯಬೇಕೆಂದು ನನಗೆ ಹೇಳಿ ಕೊಡಲಿ. ಹೆಸರು ತೆಗೆದರೆ ಅವರು ನನ್ನ ತಂದೆ ಎಂಬ ಸತ್ಯ ಸುಳ್ಳಾಗುತ್ತಾ..?  24 ವರ್ಷದ ಹಿಂದೆ ಅವರ ಜೀವನದಿಂದ ನನ್ನನ್ನು ತೆಗೆದುಬಿಟ್ಟಿದ್ದೀರಿ. ಈಗ ಹೆಸರಿನ ಮುಂದೆಯೇ ಅವರನ್ನು ತೆಗೆಯಲು ಮುಂದಾಗಿದ್ದೀರಾ’ ಎಂದು ಪ್ರಶ್ನಿಸಿದ್ದಾರೆ.

ಕೈ ಸೇರಲು ಯತ್ನ:

ಇನ್ನು ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಸಕ್ರಿಯವಾಗಿದ್ದ ನಿಶಾ, ಕಾಂಗ್ರೆಸ್ ಸೇರಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ನಾಯಕರ ಜೊತೆಯೂ ಕಾಣಿಸಿಕೊಂಡಿದ್ದರು. ಪಕ್ಷ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಮಾಧ್ಯಮದವರ ಜೊತೆ ಪ್ರತಿಕ್ರಿಯಿಸಿದ್ದ ಶಿವಕುಮಾರ್ ನಿಶಾ ರವರಿಗೆ ಇನ್ನೂ ಮದುವೆ ಆಗಿಲ್ಲ. ಅವರು ತಂದೆ ಮನೆಯಲ್ಲೇ ಇರಬೇಕು. ಮಗಳ ಮದುವೆ ಸಮಯದಲ್ಲಿ ತಂದೆ ಧಾರೆ ಎರೆದು ಕೊಡಬೇಕು. ತಂದೆ- ಮಗಳನ್ನು ದೂರ ಮಾಡಿದ ಅಪಕೀರ್ತಿ ನನಗೆ ಬೇಡ ಎಂದು ಸುಮ್ಮನಿದ್ದೇನೆ ಎಂದು ಹೇಳಿದ್ದರು.

ಮೋದಿ ಭೇಟಿ ಮಾಡಿಸಲಿಲ್ಲ – ನಿಶಾ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡಿದ ನನ್ನ ತಾಯಿಯ ಕಪಾಳಕ್ಕೆ ತಂದೆ ಹೊಡೆದಿದ್ದರು. ಚಿಕ್ಕಮ್ಮನ ಮಗ ನನ್ನ ತಮ್ಮನಿಗೆ ಹೊಡೆದು, ಮನೆಯಿಂದ ಸಾಮಗ್ರಿ ಹೊರ ಹಾಕಿದ್ದರು. ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಬಂದಾಗ ಅವರನ್ನು ಭೇಟಿ ಮಾಡಿಸಿ ಎಂದು ಕೇಳಿಕೊಂಡಿದ್ದೆ. ಆದರೆ, ಬೇಕೆಂದೇ ಭೇಟಿ ಮಾಡಿಸಲಿಲ್ಲ. ಇದೆಂಥಾ ನ್ಯಾಯ ಎಂದು ನಿಶಾ ಪ್ರಶ್ನಿಸಿದ್ದಾರೆ.

ಮಗಳಿಗೆ ಯಾಕೆ ಒಂದು ದಾರಿ ತೋರಿಸಲಿಲ್ಲ ಎಂದು ನನ್ನ ತಂದೆಯನ್ನು ಪ್ರಶ್ನಿಸಿ. ಅವರು ನನ್ನಿಂದ ಮಾತ್ರ ಸರಿಯಾದುದನ್ನು ಬಯಸಿದರೆ ಸಾಕೇ? ಅವರು ಸರಿಯಾಗಿರಬೇಕಲ್ಲವೇ? ಮಾತನಾಡಲು ನನ್ನ ಬಳಿ ಸಾಕಷ್ಟಿದೆ. ನನ್ನನ್ನು ಶಾಂತವಾಗಿರಲು ಬಿಡಿ. ಇಲ್ಲದಿದ್ದರೆ, ನೀವು ಎಲ್ಲಿ ತಲೆ ಎತ್ತಿ ನಡೆಯುವುದಕ್ಕೆ ಸಾಧ್ಯವಾಗುವುದಿಲ್ಲವೊ ಅಲ್ಲಿಗೆ ವಿಡಿಯೊ ಕಳಿಸುತ್ತೇನೆ ಎಂದು ತಂದೆಗೆ ಎಚ್ಚರಿಸಿದ್ದಾರೆ.

LATEST NEWS

ಏರ್‌ ಇಂಡಿಯಾ ವಿಮಾನ ದುರಂತ: ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ವಿಶ್ವಾಸ್ ರಮೇಶ್‌

Published

on

ಮಂಗಳೂರು/ಅಹಮದಾಬಾದ್: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬ್ರಿಟನ್ ಪ್ರಜೆ ವಿಶ್ವಾಸ್ ಕುಮಾರ್ ರಮೇಶ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅದೇ ದುರಂತದಲ್ಲಿ ಮೃತಪಟ್ಟ ಸಹೋದರ ಅಜಯ್ ರಮೇಶ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.


ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಬ್ರಿಟನ್‌ನಿಂದ ದಿಯುಗೆ ಬಂದಿದ್ದ ಸಹೋದರರು ಜೂನ್ 12ರಂದು ಮರಳಿ ಲಂಡನ್‌ಗೆ ಹೊರಟಿದ್ದರು. ಈ ವೇಳೆ ವಿಮಾನ ಅಪಘಾತ ಸಂಭವಿಸಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ; ಕೊನೆಗೂ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಪರ್ಯಾಸವೆಂದರೆ ವಿಶ್ವಾಸ್ ಅವರ ಸಹೋದರ ಅಜಯ್ ರಮೇಶ್ ಸಾವನ್ನಪ್ಪಿದ್ದರು. ಹೀಗಾಗಿ ಅವರ ಡಿಎನ್‌ಎ ಗುರುತಿಸಲಾಗಿದ್ದು, ಇಂದು ದಿಯುವಿನಲ್ಲಿ ಬೆಳಿಗ್ಗೆ ಅಜಯ್ ಅವರ ಅಂತ್ಯಕ್ರಿಯೆ ನಡೆದಿದ್ದು, ವಿಶ್ವಾಸ್ ಕೂಡ ಅಲ್ಲಿ ಹಾಜರಿದ್ದರು ಎಂದು ವರದಿಯಾಗಿದೆ.

Continue Reading

LATEST NEWS

ಇನ್ನು ಮುಂದೆ 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

Published

on

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದೆ ಪಯಾಣಕ್ಕೆ ಅನುಕೂಲವಾಗುವಂತೆ ಫಾಸ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ.

3 ಸಾವಿರ ರೂಪಾಯಿಗೆ ವಾರ್ಷಿಕ ಟೋಲ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.

READ IN ENGLISH : https://www.nammakudlaenglish.com/annual-toll-pass-for-%e2%82%b93000-from-now-on/

ಇದನ್ನೂ ಓದಿ: 6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆ ಯಾಗಲಿದೆ.

Continue Reading

LATEST NEWS

ಉಡುಪಿ: ಶಾಲಾ ಬಸ್ ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

Published

on

ಉಡುಪಿ: ಖಾಸಗಿ ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ನಡೆದಿದೆ.


ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವಾಗ ಹಿಂದಿನಿಂದ ಬಂದ ಲಾರಿ ಡಿ*ಕ್ಕಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

READ IN ENGLISH : https://www.nammakudlaenglish.com/udupi-lorry-rams-into-school-bus-students-sustain-minor-injuries/

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಅಪಘಾತದ ಸಂದರ್ಭದಲ್ಲಿ ವ್ಯಾನ್‌ನಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page