Connect with us

ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ಗುಂಪು-ಗದ್ದಲ: ಲಾಠಿ ಬೀಸಿದ ಪೊಲೀಸರು

Published

on

ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ಗುಂಪು-ಗದ್ದಲ: ಲಾಠಿ ಬೀಸಿದ ಪೊಲೀಸರು

ಮಂಗಳೂರು: ದೇಶದಾದ್ಯಂತ ಮಹಾಮಾರಿಯಂತೆ ಹರಡುತ್ತಿರುವ ಕೊರೊನಾ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇಂದಿ (ಮಾರ್ಚ್ 25) ನಿಂದ ಇಡೀ ದೇಶದಲ್ಲಿ ಲಾಕ್ ಡೌನ್ ಜಾರಿ ಮಾಡಿದೆ.

ಈ ಬಗ್ಗೆ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ್ದು, ದೇಶದೆಲ್ಲೆಡೆ 21 ದಿನಗಳ ಕಾಲ ಈ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಈ ಲಾಕ್ ಡೌನ್ ನನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಎಲ್ಲಾ ರಾಜ್ಯ ಸರಕಾರಗಳಿಗೆ ಕೇಂದ್ರ ಈಗಾಗಲೇ ಆದೇಶ ನೀಡಿದೆ.

ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸೇವೆಗಳು ಮುಂದಿನ 21 ದಿನಗಳ ಕಾಲ ಸ್ಥಗಿತಗೊಳ್ಳಲಿದೆ.

ಅಗತ್ಯ ವಸ್ತುಗಳಾದ ದಿನಸಿ ಅಂಗಡಿಗಳು, ಕೇಂದ್ರ ತರಕಾರಿ ಮಾರುಕಟ್ಟೆ, ಹಣ್ಣು-ಹಂಪಲುಗಳು ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗಾಗಿ ಜನ ಮುಗಿ ಬೀಳುತ್ತಿದ್ದಾರೆ.

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಜಾರಿಗೆ ತರಲಾದ ಲಾಕ್ ಡೌನ್ ಅನ್ನು ಜನರು ಸರಿಯಾಗಿ ಅರ್ಥ ಮಾಡಿಕೊಳ್ಳದ ಸ್ಥಿತಿಯೂ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆಗಳಲ್ಲಿ ಕಂಡು ಬಂದಿದೆ.

ಇಂದು ಬೆಳಗ್ಗೆ ಮಂಗಳೂರು ಸೆಂಟ್ರಲ್ ಮಾರ್ಕೆಟ್ ನಲ್ಲಿ ಜನಜಂಗುಳಿ ಹಾಗೂ ಸಾಮಾಗ್ರಿ ಕೊಳ್ಳಲು ನೂಕು-ನುಗ್ಗಲು ಕಂಡು ಬಂದಿತ್ತು. ಇದನ್ನು ಕಂಡ ಪೊಲೀಸರು ಲಾಠಿ ಬೀಸಿ ಗುಂಪು ಚದುರಿಸಿದ್ದಲ್ಲದೇ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ.

ಇನ್ನು ಅಲ್ಲಲ್ಲಿ ಜನರು ರೌಂಡಪ್ ಸರ್ಕಲ್ ನಲ್ಲಿ ನಿಂತು ಅಂತರ ಕಾಯ್ದುಕೊಂಡ ಸನ್ನಿವೇಶ ಕೂಡ ಕಂಡುಬಂತು.

ಇನ್ನು ನಾಳೆಯಿಂದ ಮಂಗಳೂರು ಸಂಪೂರ್ಣ ಬಂದ್ ಆಗಲಿದೆ ಎಂಬುದನ್ನು ಕೂಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸ್ಪಷ್ಟಪಡಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ದೇವಸ್ಥಾನದ ಸ್ನಾನಗೃಹದಲ್ಲಿ ಇಬ್ಬರು ಯುವತಿಯರ ಶವ ಪತ್ತೆ

Published

on

ಗಾಂಧೀನಗರ: ದೇವಾಲಯದ ಆವರಣದಲ್ಲಿ ಇಬ್ಬರು ಯುವತಿಯರ ಮೃತದೇಹಗಳು ಪತ್ತೆಯಾಗಿರುವ ಘಟನೆ ಗುಜರಾತ್‌ ಗಾಂಧೀನಗರದ ಸೂರತ್‌ನ ಸ್ವಾಮಿನಾರಾಯಣ ದೇವಾಲಯದಲ್ಲಿ ನಡೆದಿದೆ.


ದೇವಾಲಯದ ಆವರಣದಲ್ಲಿರುವ ಸ್ನಾನಗೃಹದಲ್ಲಿ ಇಬ್ಬರು ಯುವತಿಯರು ಶವವಾಗಿ ಪತ್ತೆಯಾಗಿದ್ದಾರೆ. ವಿಷಕಾರಿ ಔಷಧಗಳ ಚುಚ್ಚುಮದ್ದು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಶುಕ್ರವಾರ ಬೆಳಗ್ಗೆ ಇಬ್ಬರು ಹುಡುಗಿಯರು ಮನೆಯಿಂದ ಕಾಲೇಜಿಗೆ ಹೊರಟಿದ್ದು, ಆದರೆ ಮಧ್ಯಾಹ್ನದ ವೇಳೆಗೆ ಹಿಂತಿರುಗಲಿಲ್ಲ. ಬಳಿಕ ಮಾಹಿತಿ ತಿಳಿದ ಪೊಲೀಸರು ಹುಡುಕಾಟ ಆರಂಭಿಸಿದ್ದು, ಫೋನ್‌ಗಳ ಲೊಕೇಷನ್‌ ಆಧರಿಸಿ ದೇವಾಲಯ ಸಂಕೀರ್ಣದಲ್ಲಿ ಕೊನೆಯದಾಗಿ ಇದ್ದ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದರು. ಶನಿವಾರವೂ ಮುಂದುವರಿದ ಹುಡುಕಾಟದಲ್ಲಿ ಅವರ ಸ್ಕೂಟರ್‌ಗಳು ನಿಂತಿರುವುದು ಕಂಡುಬಂದಿದೆ.

ದೇವಾಲಯದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಹುಡುಗಿಯರು ಸ್ನಾನಗೃಹದ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪೊಲೀಸರು ಸ್ಥಳಕ್ಕೆ ತಲುಪಿದಾಗ, ಲಾಕ್‌ ಆಗಿದ್ದ ಸ್ನಾನಗೃಹದ ಬಾಗಿಲನ್ನು ಒಡೆದು ಒಳನುಗ್ಗಿದಾಗ ಹುಡುಗಿಯರು ಸತ್ತಿರುವುದು ಕಂಡುಬಂದಿದೆ. ಅವರ ದೇಹದ ಬಳಿ ಬಿದ್ದಿದ್ದ ಒಂದು ಸಿರಿಂಜ್ ಮತ್ತು ಮೂರು ಬಾಟಲಿ ವಿಷಕಾರಿ ಔಷಧಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಪ್ರವಾಸಿ ತಾಣ ಜೇನುಕಲ್ಲು ಗುಡ್ಡದಲ್ಲಿ ದುರಂತ: ಪ್ರಪಾತಕ್ಕೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ

ಯುವತಿಯರ ಸಾವಿಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Continue Reading

INTERNATIONAL

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾ*ಳಿ

Published

on

ಮಂಗಳೂರು/ದುಬೈ : ವಿಶ್ವದ ಎರಡನೇ ಅತ್ಯಂತ ಜನನಿಬಿಡ  ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಘಟನೆಯ ಬೆನ್ನಲ್ಲೇ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಡ್ರೋನ್ ಬಿದ್ದ ಜಾಗದಲ್ಲಿ ದಟ್ಟವಾದ ಹೊಗೆ ಕಾಣಿಸಿದ್ದು ಸಾ*ವು, ನೋ*ವಿನ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ದುಬೈಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳನ್ನು ಮುಂದಿನ ಸೂಚನೆ ಬರುವ ವರೆಗೆ ಸ್ಥಗಿತಗೊಳಿಸಲು ಎಮಿರೇಟ್ಸ್ ಸರ್ಕಾರ ಸೂಚಿಸಿತ್ತು. ಇನ್ನು ಘಟನೆಗೆ ಸಂಬಂಧಪಟ್ಟ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ಮೂರು ದಿನದ ಸಾಂಬಾರ್‌ನಿಂದ ಜಗಳ….ಪ್ರಾ*ಣ ಬಿಟ್ಟ ಗೃಹಿಣಿ!

ಇದೀಗ ಭಾಗಶಃ ವಿಮಾನಗಳ ಹಾರಾಟ ಪ್ರಾರಂಭಿಸಲಾಗಿದೆ ಎಂದು ವರದಿಯಾಗಿದೆ.

Continue Reading

LATEST NEWS

ಪ್ರವಾಸಿ ತಾಣ ಜೇನುಕಲ್ಲು ಗುಡ್ಡದಲ್ಲಿ ದುರಂತ: ಪ್ರಪಾತಕ್ಕೆ ಹಾರಿ ಪ್ರಾಣ ಬಿಟ್ಟ ವ್ಯಕ್ತಿ

Published

on

ಯಲ್ಲಾಪುರ: ಪ್ರಸಿದ್ಧ ಪ್ರವಾಸಿ ತಾಣವಾದ ಜೇನುಕಲ್ಲು ಗುಡ್ಡದಲ್ಲಿ ವ್ಯಕ್ತಿಯೊಬ್ಬರು ಪ್ರಪಾತಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದೆ.


ಮೃತಪಟ್ಟ ವ್ಯಕ್ತಿಯನ್ನು ಶ್ರೀನಿಧಿ ಕೃಷ್ಣ ಕಡಕೋಳ ಎಂದು ಗುರುತಿಸಲಾಗಿದೆ. ಯಲ್ಲಾಪುರದಿಂದ ಸುಮಾರು 17 ಕಿ.ಮೀ ದೂರದಲ್ಲಿರುವ ಪಶ್ಚಿಮ ಘಟ್ಟಗಳ ಸುಂದರ ವ್ಯೂ ಪಾಯಿಂಟ್ ಆದ ಜೇನುಕಲ್ಲು ಗುಡ್ಡದಲ್ಲಿ ಈ ದುರ್ಘಟನೆ ನಡೆದಿದೆ.

ಶ್ರೀನಿಧಿ ಮಾ.4ರಂದು ಗೋಕರ್ಣಕ್ಕೆ ಹೋಗಿ ಬರುವುದಾಗಿ ಹೇಳಿ ಸ್ಕೂಟಿಯಲ್ಲಿ ಹೊಟಿದ್ದ. ಮಾ.7ರಂದು ಈತನ ಶವ ಜೇನುಕಲ್ಲು ಗುಡ್ಡದಲ್ಲಿ ದೊರೆತಿದೆ. ಗುಡ್ಡದ ತುದಿಯಿಂದ ಆಳವಾದ ಪ್ರಪಾತಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಇದನ್ನೂ ಓದಿ: ದಳಪತಿ ವಿಜಯ್ ಪತ್ನಿ ಸಂಗೀತಾರಿಂದ ಕೋರ್ಟ್‌ಗೆ ಹೊಸ ಅರ್ಜಿ!

ಈ ಕುರಿತು ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತನ ಶರೀರವನ್ನು ಗುಡ್ಡದಿಂದ ಹೊರತೆಗೆದಿದ್ದಾರೆ. ಬಳಿಕ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page