Connect with us

LATEST NEWS

ವರದಿಗಾರನ ಮೇಲೆ ಹಲ್ಲೆ: ಪತ್ರಕರ್ತರ ಸಂಘದಿಂದ ಕಮೀಷನರ್‌ಗೆ ಮನವಿ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ, ಖಾಸಗಿ ಜಿಲ್ಲಾ ವರದಿಗಾರರಾಗಿರುವ ಸುಖಪಾಲ್ ಪೊಳಲಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ.

ಆದ್ದರಿಂದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.


ಈ ವೇಳೆ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಸೇರಿ ಪದಾಧಿಕಾರಿಗಳು ಮತ್ತು ಪತ್ರಕರ್ತರು ಉಪಸ್ಥಿತರಿದ್ದರು.


ಇದೇ ವೇಳೆ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್ ಕುಮಾರ್ ನಾಳ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ಪುತ್ತೂರಿನ ಸಹಾಯಕ ಕಮಿಷನ್‌ನರ ಮುಖಾಂತರ ಮನವಿ ಸಲ್ಲಿಸಿದರು.

DAKSHINA KANNADA

ದ್ವೇಷ ಭಾಷಣ ಆರೋಪ; ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ದ ಎಫ್‌ಐಆರ್‌

Published

on

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಹಾಗೂ ಆ ಭಾಷಣವನ್ನು ಪ್ರಸಾರ ಮಾಡಿದ ವಾಹಿನಿಯೊಂದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕೋಮು ದ್ವೇಷ ಹಾಗೂ ಹಿಂಸೆಗೆ ಪ್ರಚೋದನೆಯಾಗುವ ರೀತಿಯಲ್ಲಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತು ಭಾಷಣವನ್ನು ಪ್ರಸಾರ ಮಾಡಿದ ವಾಹಿನಿ ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಂದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

LATEST NEWS

ರಾಜ್ಯ ರಾಜಕೀಯದಲ್ಲಿ ಸಂಚಲನ; ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ನಿರಾಕರಿಸಿದ ರಾಜ್ಯಪಾಲರು!

Published

on

ಬೆಂಗಳೂರು: ಇಂದಿನಿಂದ (ಜ.22) ಆರಂಭವಾಗಲಿರುವ ಜಂಟಿ ಅಧಿವೇಶನಕ್ಕೂ ಮುನ್ನವೇ ರಾಜ್ಯ ರಾಜಕೀಯದಲ್ಲಿ ಸಂಚನ ಸೃಷ್ಟಿಯಾಗಿದೆ. ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಬಿಗ್‌ ಶಾಕ್‌ ಕೊಟ್ಟಿದ್ದಾರೆ.


ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಅಂಶಗಳಿವೆ ಎಂಬ ಆಕ್ಷೇಪ ಎತ್ತಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಜಂಟಿ ಅಧಿವೇಶನದಲ್ಲಿ ಭಾಷಣ ಓದಲು ನಿರಾಕರಿಸಿದ್ದಾರೆ. ಇದು ಸರ್ಕಾರ ಮತ್ತು ಲೋಕಭವನದ ನಡುವೆ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.

ಈ ನಡುವೆ ಲೋಕಭವನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ನೇತೃತ್ವದ ನಿಯೋಗ ಭೇಟಿ ನೀಡಿ ರಾಜ್ಯಪಾಲರಿಗೆ ಸಾಂವಿಧಾನಿಕ ಹುದ್ದೆ ಸ್ಥಾನಮಾನಗಳ ಬಗ್ಗೆ ಮಾಹಿತಿ ನೀಡಿದೆ.

ಇದನ್ನೂ ಓದಿ: ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

ನಿಯಮಾವಳಿ ಏನು?
ರಾಜ್ಯಪಾಲರು ಭಾಷಣ ಓದಲು ನಿರಾಕರಿಸಿದರೆ ಅವರ ಮೇಲೆ ಕಾನೂನು ಕ್ರಮ ಜರುಗಿಸಲು ಸಂವಿಧಾನದ 361ನೇ ವಿಧಿ ಅಡ್ಡಿಯಾಗುತ್ತದೆ. ಈ ವಿಧಿಯ ಅಡಿಯಲ್ಲಿ ರಾಜ್ಯಪಾಲರ ಅಧಿಕಾರವಧಿಯಲ್ಲಿ ಕಾನೂನು ರಕ್ಷಣೆ ಇರುತ್ತದೆ. ರಾಜ್ಯಪಾಲರ ಈ ನಡೆ ಸಂವಿಧಾನಾತ್ಮಕ ಬಿಕ್ಕಟ್ಟಿಗೆ ಕಾರಣವಾಗುತ್ತದೆಯೇ ಹೊರತು ಶಿಕ್ಷಾರ್ಹ ಅಪರಾಧವಾಗುವುದಿಲ್ಲ.

Continue Reading

FILM

ಅರಿಶಿನ ಶಾಸ್ತ್ರದಲ್ಲಿ ಮಿಂದೆದ್ದ ನಟ ಉಗ್ರಂ ಮಂಜು

Published

on

ಕನ್ನಡದ ಜನಪ್ರಿಯ ನಟ ಹಾಗೂ ಬಿಗ್ ಬಾಸ್ ಕನ್ನಡ ಸೀಸನ್-11ರ ಸ್ಪರ್ಧಿ ಉಗ್ರಂ ಮಂಜು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಉಗ್ರಂ ಮಂಜು ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ಸರಳವಾಗಿ ನಡೆದಿದೆ.

ಕನ್ನಡ ಚಿತ್ರರಂಗದ ಖ್ಯಾತ ನಟ ಉಗ್ರಂ ಮಂಜು ಅವರ ಜೀವನದ ಹೊಸ ಅಧ್ಯಾಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಇದೇ 23ರಂದು ಧರ್ಮಸ್ಥಳದ ಮಹೋತ್ಸವ ಭವನದಲ್ಲಿ ಉಗ್ರಂ ಮಂಜು ಹಾಗೂ ಸಾಯಿ ಸಂಧ್ಯಾ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

ಮದುವೆಗೆ ಎರಡು ದಿನಗಳು ಬಾಕಿ ಇರುವಂತೆಯೇ, ಮಂಜು ಮನೆಯಲ್ಲಿ ಹಳದಿ ಶಾಸ್ತ್ರದ ಸಂಭ್ರಮ ವಿಜೃಂಭಣೆಯಿಂದ ನಡೆಯಿತು. ಕುಟುಂಬಸ್ಥರು, ಆಪ್ತರು ಹಾಗೂ ಬಂಧುಮಿತ್ರರ ಸಮ್ಮುಖದಲ್ಲಿ ಅರಿಶಿಣ ಶಾಸ್ತ್ರ ನೆರವೇರಿತು. ಸಂಪ್ರದಾಯದಂತೆ ಮಂಜು ಅವರಿಗೆ ಅರಿಶಿಣ ಲೇಪಿಸಿ, ಶುಭಾಶಯಗಳ ಸುರಿಮಳೆಗೈಯಲಾಯಿತು.

ಇದನ್ನೂ ಓದಿ: BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಇತ್ತೀಚೆಗೆ ಉಗ್ರಂ ಮಂಜು ಎರಡನೇ ಬಾರಿಗೆ ಬಿಗ್‌ಬಾಸ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದರು. ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಸದಸ್ಯರೊಂದಿಗೆ ತಮ್ಮ ಬ್ಯಾಚುಲರ್ ಪಾರ್ಟಿಯನ್ನು ಸಹ ಮಾಡಿಕೊಂಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page