Connect with us

DAKSHINA KANNADA

ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರು ನಿನ್ನೆ (ಜೂ.18) ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

READ IN ENGLISH : https://www.nammakudlaenglish.com/darshan-h-v-assumes-charge-as-the-new-deputy-commissioner-of-dakshina-kannada-district/

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ದುರಂತ: ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ವಿಶ್ವಾಸ್ ರಮೇಶ್‌

ಮುಲ್ಲೈ ಮುಗಿಲನ್ ಎಂಪಿ ಜೂ.17, 2023ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪೂರ್ಣಗೊಳಿಸಿರುವ ಬೆನ್ನಲ್ಲೆ ಅವರಿಗೆ ವರ್ಗಾವಣೆಯಾಗಿದೆ. ಅಲ್ಲದೇ 2016 ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್ ಎಚ್.ವಿ. ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ ಬೆಂಗಳೂರಿನ ಸೇವಾ ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು.

DAKSHINA KANNADA

ಅಲೋಶಿಯನ್ ಗೇಮ್ಸ್- 2026 : ಜ.3 ರಿಂದ ಮಂಗಳೂರಿನಲ್ಲಿ ಅಂತರ್‌ ಕಾಲೇಜು ಕ್ರೀಡೋತ್ಸವ

Published

on

ಮಂಗಳೂರು : ಮಂಗಳೂರಿನ ಸೈಂಟ್ ಅಲೋಶಿಯಸ್‌ ಡೀಮ್ಡ್ ಯೂನಿವರ್ಸಿಟಿ ವತಿಯಿಂದ ಅಲೋಶಿಯನ್ ಗೇಮ್ಸ್- 2026 ಎಂಬ ಮೆಗಾ ಅಂತರ್‌ ಕಾಲೇಜು ಕ್ರೀಡಾ ಉತ್ಸವವನ್ನು 2026 ಜನವರಿ 3 ರಿಂದ 11 ರ ತನಕ ಮಂಗಳೂರಿನಲ್ಲಿ ಆಯೋಜಿಸಲಾಗಿದೆ.

ದಕ್ಷಿಣ ಭಾರತದಲ್ಲಿಯೇ ಅತಿ ದೊಡ್ಡದೆಂದು ಪರಿಗಣಿಸಲಾದ ಈ ಕ್ರೀಡೋತ್ಸವದಲ್ಲಿ 13 ಸ್ಪರ್ಧಾತ್ಮಕ ಕ್ರೀಡೆಗಳು ಮತ್ತು ಒಂದು ಮ್ಯಾರಥಾನ್‌ ನಡೆಯಲಿದೆ. ಕ್ರೀಡಾಳುಗಳು, ಪ್ರೇಕ್ಷಕರು ಮತ್ತು ಸ್ವಯಂ ಸೇವಕರು ಸೇರಿದಂತೆ 20,000 ಕ್ಕೂ ಅಧಿಕ ಜನರು ಇದರಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಸೈಂಟ್‌ ಅಲೋಶಿಯಸ್ ಡೀಮ್ಡ್ ಯೂನಿವರ್ಸಿಟಿಯ ಕುಲಪತಿ ವಂದನೀಯ ಡಾಕ್ಟರ್‌ ಪ್ರವೀಣ್ ಮಾರ್ಟಿಸ್‌ ಮತ್ತು ಕ್ರೀಡೋತ್ಸವ ಸಮಿತಿಯ ಅಸಿತ್ ಕುಲಕರ್ಣಿ ಅವರು ಸುದ್ದಿಗೋಷ್ಟಿಯಲ್ಲಿ ಈ ಕುರಿತಂತೆ ಮಾಹಿತಿ ನೀಡಿದರು.

13 ಸ್ಪರ್ಧಾತ್ಮಕ ಕ್ರೀಡೆಗಳಲ್ಲಿ ಕರ್ನಾಟಕ ಸೇರಿದಂತೆ ದೇಶಾದ್ಯಂತದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಮ್ಯಾರಥಾನ್‌ ಓಟವು ಎಲ್ಲಾ ಸಾರ್ವಜನಿಕರಿಗೆ ಮುಕ್ತವಾಗಿರುತ್ತದೆ. ಇವತ್ತಿನಿಂದಲೇ ನೋಂದಣಿ ಆರಂಭವಾಗಿದೆ.

ಇದನ್ನೂ ಓದಿ : ಕುಟುಂಬ ಸಮೇತರಾಗಿ ಕಾಪು ಕ್ಷೇತ್ರಕ್ಕೆ ನಟಿ ಶ್ರುತಿ ಭೇಟಿ

‘ಕ್ರೀಡಾ ಚಟುವಟಿಕೆಗಳ ಮೂಲಕ ಬಾಂಧವ್ಯ ನಿರ್ಮಾಣ’ ಎಂಬ ಟ್ಯಾಗ್‌ ಲೈನ್‌ ಅಡಿಯಲ್ಲಿ ದೇಶಾದ್ಯಂತದ ಯುವ ಕ್ರೀಡಾಳುಗಳನ್ನು ಒಂದು ಗೂಡಿಸುವ ಉದ್ದೇಶದೊಂದಿಗೆ ಈ ಕ್ರೀಡೋತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಅರುಣ್‌ ಎಂ. ಡಿ’ಸೋಜಾ ಮತ್ತು ನಿತಿಶಾ ರೊಡ್ರಿಗಸ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಚಂದ್ರಕಲಾ ಅವರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

 

Continue Reading

DAKSHINA KANNADA

ಕುದ್ರೋಳಿ ಕ್ಷೇತ್ರದಲ್ಲಿ ಇಂದು ಭೈರವಾಷ್ಟಮಿ

Published

on

ಮಂಗಳೂರು : ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಇಂದು(ನ.12) ಭೈರವಾಷ್ಟಮಿ ಪ್ರಯುಕ್ತ ಬೆಳಿಗ್ಗೆ ಭೈರವ ದೇವರಿಗೆ ಅಭಿಷೇಕ, ಮಹಾಪೂಜೆ ನೆರವೇರಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭ ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಹೆಚ್ ಸೋಮಸುಂದರಂ ಮತ್ತು ಕಾರ್ಯದರ್ಶಿ ಮಾಧವ ಸುವರ್ಣ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಕಟೀಲು ಏಳನೇ ಮೇಳದ ಪದಾರ್ಪಣೆ ಸಂಭ್ರಮ; ನ.15ರಂದು ನಡೆಯಲಿದೆ ವೈಭವದ ಮೆರವಣಿಗೆ

ಕ್ಷೇತ್ರದಲ್ಲಿ ಇಂದು(ನ.12) ಸಂಜೆ 7.30 ಕ್ಕೆ ಭೈರವ ತರ್ಪಣ ಮತ್ತು ಮಹಾಪೂಜೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಯಲ್ಲಿ ಆಗಮಿಸಿ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗುವಂತೆ ಕ್ಷೇತ್ರದ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿ ವಿನಂತಿಸಿಕೊಂಡಿದೆ.

Continue Reading

DAKSHINA KANNADA

ನಂದಿಗುಡ್ಡೆಯಲ್ಲಿ ಕೊರಗಜ್ಜ ಚಿತ್ರ ತಂಡದಿಂದ ಹರಕೆಯ ಕೋಲ ಸೇವೆ

Published

on

ಮಂಗಳೂರು: ಸುಧೀರ್ ಅತ್ತಾವರ್ ನಿರ್ದೇಶನದಲ್ಲಿ ಮೂಡಿ ಬಂದಿರುವ 6 ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿರುವ ಕೊರಗಜ್ಜ ಸಿನೆಮಾ ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಾದ್ಯಂತ ತೆರೆ ಕಾಣಲಿದೆ. ಅದಕ್ಕೂ ಮುನ್ನ ಚಿತ್ರ ತಂಡ ಮಂಗಳೂರಿನ ನಂದಿಗುಡ್ಡೆ ಕೊರಗಜ್ಜನ ಸಾನಿಧ್ಯದಲ್ಲಿ ಹರಕೆಯ ಕೋಲ ಸೇವೆ ಮಾಡಿ ಚಿತ್ರದ ಯಶಸ್ವಿಗೆ ಪ್ರಾರ್ಥನೆ ಮಾಡಿದೆ.


ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಶ್ರುತಿ, ಭವ್ಯ, ಜೈಜಗದೀಶ್, ವಿಜಯಲಕ್ಷ್ಮಿ ಸಿಂಗ್, ಶ್ರುತಿ ತಂದೆ, ತಾಯಿ ಸಹಿತ ಚಿತ್ರರಂಗದ ಹಲವು ಮಂದಿ ಸೇರಿ ಸುಮಾರು 1500 ಅಧಿಕ ಮಂದಿ ಭಕ್ತರು ಕೊರಗಜ್ಜನ ಕೋಲದಲ್ಲಿ ಭಾಗಿಗಳಾಗಿದ್ದರು.

ತ್ರಿವಿಕ್ರಮ ಸಪಲ್ಯ ನಿರ್ಮಾಣದ ‘ಸಕ್ಸಸ್ ಫಿಲ್ಮ್ಸ್’ ಹಾಗೂ ‘ತ್ರಿವಿಕ್ರಮ ಸಿನಿಮಾಸ್’ ಮೂಲಕ ಈ ಸಿನಿಮಾ ನಿರ್ಮಾಣವಾಗಿದ್ದು, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಕೆಲಸ ಮಾಡಿದ್ದಾರೆ.


ತುಳು, ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಗೊಳ್ಳಲಿದೆ. ಇನ್ನು ಸಿನೆಮಾದಲ್ಲಿ ನಟಿಸಿರುವ ಖ್ಯಾತ ನಟಿ ಶ್ರುತಿ ಅವರು ಚಿತ್ರದ ಅಭಿನಯದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

 

Continue Reading
Advertisement

Trending

Copyright © 2025 Namma Kudla News

You cannot copy content of this page