Connect with us

BANTWAL

ವಿಟ್ಲ: ನಿಧನ ಹೊಂದಿ 6 ತಿಂಗಳಾದ ಮೇಲೆ ಬಂತು ಕೊರೋನಾ 2 ಡೋಸ್‌ ನೀಡಿದ SMS-ಕುಟುಂಬಸ್ಥರು ಗಲಿಬಿಲಿ

Published

on

ವಿಟ್ಲ: ಕೊರೋನಾ ಮೊದಲ ಡೋಸ್‌ ಪಡೆದ ವ್ಯಕ್ತಿ ಎರಡನೇ ಡೋಸ್‌ ಪಡೆಯುವ ಮೊದಲು ಮೃತಪಟ್ಟಿದ್ದರು. ಇದೀಗ ಎರಡನೇಯ ಡೋಸ್‌ ನೀಡಲಾಗಿದೆ ಎಂಬ ಎಸ್‌ಎಂಎಸ್‌ ಬಂದು ಗಲಿಬಿಲಿ ಮೂಡಿಸಿದ ಘಟನೆ ಮಾಣಿ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ.


ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್​ ಎಂಬುವರು 2001ರ ಏ.27 ರಂದು ಮೃತಪಟ್ಟಿದ್ದರು. ಆದರೆ, ಅ.14ರಂದು ಅವರಿಗೆ ಎರಡನೇ ಡೋಸ್​ ನೀಡಲಾಗಿದೆ ಎಂಬ ಎಸ್​ಎಂಎಸ್​ ಮಗನ ಮೊಬೈಲ್​ಗೆ ಬಂದಿದೆ.

‘ನನ್ನ ತಂದೆಗೆ ಮಾರ್ಚ್​ 24ರಂದು ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆಯ ಪ್ರಥಮ ಡೋಸ್​ ನೀಡಲಾಗಿತ್ತು. ಎರಡನೇ ಡೋಸ್​ ಪಡೆಯುವ ಮೊದಲೇ ನನ್ನ ತಂದೆ ತೀರಿಕೊಂಡಿದ್ದಾರೆ. ಆದರೆ,

ಅ.14ರಂದು ನನ್ನ ಮೊಬೈಲ್​ಗೆ ಒಟಿಪಿ ಬಂದಿದ್ದು ಬಳಿಕ ಎಸ್​ಎಂಎಸ್​ ಬಂದಿದೆ. ಅದರಲ್ಲಿ ನನ್ನ ತಂದೆಗೆ ಎರಡನೇ ಡೋಸ್​ ನೀಡಲಾಗಿದೆ’ ಎಂದು ತಿಳಿಸಲಾಗಿದೆ.
ಎಸ್​ಎಂಎಸ್​ ಲಿಂಕ್​ ಓಪನ್​ ಮಾಡಿ ಪಿಡಿಎಫ್​ ಪರಿಶೀಲಿಸಿದಾಗ ಅದರಲ್ಲೂ ಎರಡನೇ ಡೋಸ್​ ನೀಡಿದ್ದಾರೆ ಎಂಬ ದಾಖಲೆ ಇದೆ. ಈ ಬಗ್ಗೆ 2 ತಿಂಗಳ ಹಿಂದೆ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕರೆ ಬಂದಿತ್ತು.

ತಂದೆಗೆ ಎರಡನೇ ಡೋಸ್​ ನೀಡುವಂತೆ ಹೇಳಿದ್ದರು. ತಂದೆಯ ನಿಧನದ ಮಾಹಿತಿ ನೀಡಿದ್ದೆ. ಆದರೂ ಎರಡನೇ ಡೋಸ್​ ನೀಡಿರುವ ಸಂದೇಶ ಬಂದಿದೆ ಎಂದು ಸಾದಿಕ್​ ದೂರಿದ್ದಾರೆ.

ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ದೀಪಾ ಪ್ರಭು ತಿಳಿಸಿದ್ದಾರೆ.

BANTWAL

ಸ್ಕೂಟರಿಗೆ ಢಿ*ಕ್ಕಿ ಹೊಡೆದ KSRTC ಬಸ್; ಸವಾರ ಸಾ*ವು

Published

on

ಬಂಟ್ವಾಳ: ಕೆ.ಎಸ್.ಆ‌ರ್.ಟಿ.ಸಿ ಬಸ್ಸು ಓವ‌ರ್ ಟೇಕ್ ಭರದಲ್ಲಿ ಸ್ಕೂಟರ್ ರೊಂದಕ್ಕೆ ಢಿ*ಕ್ಕಿಯಾಗಿ ಸವಾರ ಮೃ*ತಪಟ್ಟ ಘಟನೆ ಭಾನುವಾರ (ಮೇ 18) ತಡರಾತ್ರಿ ಪಾಣೆಮಂಗಳೂರಿನ ನೆಹರೂನಗರದಲ್ಲಿ ತಡರಾತ್ರಿ ನಡೆದಿದೆ.


ಮಂಗಳೂರು ನಿವಾಸಿ ಅಲಿಸ್ಟರ್ ಡಿಸೋಜ(24) ಮೃ*ತಪಟ್ಟವರು. ಅವರು ವಿಟ್ಲದಲ್ಲಿ ನಡೆದ ಗೃಹಪ್ರವೇಶದಲ್ಲಿ ಪಾಲ್ಗೊಂಡು ಮತ್ತೊಂದು ಬೈಕಿನಲ್ಲಿದ್ದ ಸ್ನೇಹಿತರ ಜತೆ ಮಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ.

ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಬಿರುಗಾಳಿ; 25 ಮಂದಿ ಬಲಿ

ಮಂಗಳೂರು ಭಾಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಅಂಬಾರಿ ಬಸ್ಸು ನೆಹರೂನಗರದಲ್ಲಿ ಟೆಂಪೊ ಟ್ರಾವೆಲರ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರಿಗೆ ಡಿ*ಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಲಾರಿಗಳು ಪರಸ್ಪರ ಡಿಕ್ಕಿಯಾಗಿ ಪಲ್ಟಿ; ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದು ಚಾಲಕ ಸಾ*ವು

Published

on

ಬಂಟ್ವಾಳ: ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾ*ವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಬಳಿ ಗುರುವಾರ ನಡೆದಿದೆ.

ಮೃತರನ್ನು ಸಜೀಪನಡು ಗೋಳಿಪಡ್ಪು ನಿವಾಸಿ ರಫೀಕ್ ( 45) ಎಂದು ಗುರುತಿಸಲಾಗಿದೆ. ಲಾರಿಯಲ್ಲಿದ್ದ ಕ್ಲೀನರ್ ಯೂಸುಫ್ ಎಂಬಾತನ ಕೈ ಕಾಲುಗಳ ಮೇಲೆ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಂದು ಲಾರಿಯ ಚಾಲಕ ರಿಜ್ವಾನ್ ಹಾಗೂ ಕ್ಲೀನರ್ ಅಲ್ಪಾಸ್ ಎಂಬವರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಂಚಿನಡ್ಕಪದವು ಎಂಬಲ್ಲಿ ಈ ಅಪ*ಘಾತ ಸಂಭವಿಸಿದ್ದು , ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಸಜೀಪನಡು ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಿಸಿ ಡಾಮರು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.​​​​​

ಅಪ*ಘಾತದ ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಎರಡೂ ಟಿಪ್ಪರ್ ಲಾರಿಗಳು ಪಲ್ಟಿಯಾಗಿ ರಸ್ತೆಯ ಬದಿಯಲ್ಲಿರುವ ಅಡಿಕೆ ತೋಟದಲ್ಲಿ ಪಲ್ಟಿಯಾಗಿ ಬಿದ್ದಿದೆ. ಟಿಪ್ಪರ್‌ನಲ್ಲಿ ಸಂಗ್ರಹಿಸಲಾದ ಜಲ್ಲಿಕಲ್ಲು ಮಿಶ್ರಿತ ಬಿಸಿ ಡಾಮಾರು ಕೆಂಪು ಕಲ್ಲು ತುಂಬಿದ ಲಾರಿಯ ಚಾಲಕನ ಮೇಲೆ ಚೆಲ್ಲಿದ ಕಾರಣ ಅವರ ಮೈ ಸಂಪೂರ್ಣ ಬೆಂದು ಹೋಗಿದೆ. ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ರಫೀಕ್ ಜೊತೆಗಿದ್ದ ಕ್ಲೀನರ್ ಯೂಸುಫ್ ಅವರ ಮೇಲೂ ಬಿಸಿ ಡಾಮಾರು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ ಮೂವರ ಆತ್ಮಹ*ತ್ಯೆ ಪ್ರಕರಣ; ಎಸ್ಪಿ ಡಾ. ಅರುಣ್‌ ಹೇಳಿದ್ದೇನು?

ಸಜೀಪನಡುವಿಲ್ಲಿ ರಸ್ತೆಗೆ ಡಾಮರು ಹಾಕುವ ಉದ್ದೇಶದಿಂದ ಡಾಮರು ಸಾಗಿಸುವ ವೇಳೆ ಘಟನೆ ನಡೆದಿದೆ.ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯತನದ ಚಾಲನೆ ಹಾಗೂ ಅಜಾಗರೂಕತೆಯೆ ಕಾರಣ ಎನ್ನಲಾಗಿದೆ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ದ್ವಿಚಕ್ರ ವಾಹನಕ್ಕೆ ಕಾರು ಡಿ*ಕ್ಕಿ; ಗಂ*ಭೀರ ಗಾಯಗೊಂಡಿದ್ದ ಸವಾರ ಸಾ*ವು

Published

on

ಬಂಟ್ವಾಳ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವಿದ್ಯಾರ್ಥಿ ಮಂಚಿ ಕುಕ್ಕಾಜೆ ನಿವಾಸಿ ಲಿಖಿತ್‌(22) ಎಂಬಾತನಿಗೆ ಕಾರು ಡಿಕ್ಕಿಯಾಗಿ ಗಂ*ಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾ*ವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಈತ ರಜೆಯಲ್ಲಿ ಸ್ಟೇಜ್ ಡೆಕೋರೇಷನ್ ಕೆಲಸಕ್ಕೆ ಹೋಗುತ್ತಿದ್ದ ಎಂದು ಹೇಳಲಾಗಿದೆ. ಲಿಖಿತ್ ಮೇ 13ರ ಮಂಗಳವಾರ ಸಂಜೆ ಸುಮಾರು 5.30 ರ ವೇಳೆಗೆ ಬಿಸಿರೋಡಿನಿಂದ ಮನೆ ಕಡೆಗೆ ಸಂಚರಿಸುತ್ತಿದ್ದ ವೇಳೆ ಪಾಣೆಮಂಗಳೂರು ಎಂಬಲ್ಲಿ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರು ಡಿ*ಕ್ಕಿಯಾಗಿದೆ.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣ; ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಅಪ*ಘಾತದಲ್ಲಿ ಗಂ*ಭೀರವಾಗಿ ಗಾಯಗೊಂಡಿದ್ದ ಈತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈತ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಟ್ರಾಫಿಕ್ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page