Connect with us

ಊಟಕ್ಕೆ ಕೋಳಿ ಸಾರು ಕೊಟ್ಟಿಲ್ಲ ಎಂಬ ಕಾರಣಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಮಾರಾಣಾಂತಿಕ ಹಲ್ಲೆ..!

Published

on

ಊಟಕ್ಕೆ ಕೋಳಿ ಸಾರು ಕೊಟ್ಟಿಲ್ಲ ಎಂಬ ಕಾರಣಕ್ಕೆ ಆಶಾ ಕಾರ್ಯಕರ್ತೆಯ ಮೇಲೆ ಮಾರಾಣಾಂತಿಕ ಹಲ್ಲೆ..!

ಕಲಬುರ್ಗಿ: ಕೊರೋನಾ ಸೋಂಕು ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಂಕು ನಿಯಂತ್ರಣಕ್ಕೆ ಇಂದು 24 ಗಂಟೆಗಳ ಸಂಪೂರ್ಣ ಲಾಕ್​ಡೌನ್​ ಘೋಷಿಸಿದೆ.

ಮತ್ತೊಂದೆಡೆ ಕೊರೋನಾ ಸೋಂಕು ಹರಡದಂತೆ ಕೊರೋನಾ ವಾರಿಯರ್ಸ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಕ್ವಾರಂಟೈನ್ ಕೇಂದ್ರಗಳು ಹೆಚ್ಚಾಗುತ್ತಿದ್ದು, ಅಲ್ಲಿ ದಾಖಲಾಗುವವ ಸಂಖ್ಯೆಯೂ ಜಾಸ್ತಿಯಾಗುತ್ತಿದೆ.

ತಮಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲವೆಂದು ಹಲ್ಲೆ ಮಾಡುವಂತಹ ದುಷ್ಕೃತ್ಯಗಳೂ ಕೆಲವು ಕ್ವಾರಂಟಯನ್‌ ಕೇಂದ್ರಗಳಲ್ಲಿ ಸಂಭವಿಸಿದೆ. ಕೋಳಿ ಊಟ ಕೊಡದಿದ್ದಕ್ಕೆ ಆಶಾ ಕಾರ್ಯಕರ್ತೆಯನ್ನು ಥಳಿಸಿದ ಘಟನೆ ಕಲ್ಬುರ್ಗಿಯಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ರೇಣುಕಾ ಕುಡಕಿ ತೀವ್ರ ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯಾಗಿದ್ದಾಳೆ.

ರೇಣುಕಾ ಕೈ ಮೂಳೆ ಮುರಿದಿದ್ದು, ಆಳಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸೋಮನಾಥ್ ಕಾಂಬಳೆ ಎಂಬತ ಚಿಕನ್ ಗಾಗಿ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಮುಂಬೈನಿಂದ ಬಂದಿದ್ದ ಈತ ಗ್ರಾಮದ ಸರ್ಕಾರಿ ಶಾಲೆಯ ಕ್ವಾರಂಟೈನ್ ಕೇಂದ್ರದಲ್ಲಿದ್ದ.

ಊಟಕ್ಕೆ ಚಿಕನ್ ಬೇಕು, ಮಕ್ಕಳಿಗೆ ಚಿಪ್ಸ್ ಬೇಕೆಂದು ಈ ಭೂಪ ಬೇಡಿಕೆ ಇಟ್ಟಿದ್ದಾನೆ. ಅಧಿಕಾರಿಗಳ ಗಮನಕ್ಕೆ ತರುವುದಾಗಿ ಆಶಾ ಕಾರ್ಯಕರ್ತೆ ಹೇಳಿದ್ದರೂ ಕೆಳದೇ ಕೋಪಗೊಂಡ ಸೋಮನಾಥ ಆಶಾ ಕಾರ್ಯಕರ್ತೆ ರೇಣುಕಾ ಮೇಲೆ ಹಲ್ಲೆ ಮಾರಣಾಮತಿಕ ಹಲ್ಲೆ ನಡೆಸಿದ್ದಾನೆ.

ಜೊತೆಗೆ ಸೋಮನಾಥನ ಹೆಂಡತಿ ಮತ್ತು ಕುಟುಂಬದ ಐವರು ಸದಸ್ಯರು ಕೂಡ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನು ಆರೋಪ ಕೇಳಿ ಬಂದಿದೆ.

ಕ್ವಾರಂಟೈನ್ ಇರುವ ಕಾರಣಕ್ಕೆ ಸದ್ಯಕ್ಕೆ ಆರೋಪಿಯನ್ನು ಬಂಧಿಸಿಲ್ಲ. ಕ್ವಾರಂಟೈನ್ ಮುಗಿದ ಮೇಲೆ ಆತನ ವಿರುದ್ಧ ಕ್ರಮ ಕೈಗೊಳ್ಳೋ ಸಾಧ್ಯತೆಗಳಿವೆ. ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಕಲಾಯಿ ಅಶ್ರಫ್ ಹತ್ಯೆಗೆ ರಿವೇಂಜ್ ಪೋಸ್ಟ್..! 16 ಇನ್ಸ್ಟಾಗ್ರಾಂ ಖಾತೆ ವಿರುದ್ಧ FIR

Published

on

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾದ ಕರಾವಳಿಯಲ್ಲಿ ಧರ್ಮ ದಂಗಲ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೆ ಹತ್ಯೆಗೆ ಪ್ರಚೋದನೆ ನೀಡುವ ಉದ್ದೇಶದಲ್ಲಿ ಹಾಕಿರುವಂತಹ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಭಯ ಹುಟ್ಟಿಸಿದೆ.

2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಎಚ್ಚರಿಕೆ ನೀಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ರವಾನೆಯಾಗುತ್ತಿದೆ.

Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಬ್ಯಾರಿ ರಾಯಲ್ ನವಾಬ್ ,  ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು. ಇದೀಗ ಇಂತಹ ಪ್ರಚೋದನಾಕಾರಿ ಪೋಸ್ಟ್ ಹಾಕುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Continue Reading

STATE

ಬೆಳಗಾವಿ ಅಧಿವೇಶನದಲ್ಲಿ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ 50 ಲಕ್ಷ ರೂ. ನೀಡಲು ಶಾಸಕರ ಮನವಿ

Published

on

ಬೆಳಗಾವಿ: ಢಾಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಗೆದ್ದ ಕಾರ್ಕಳ್ ಮಿಯ್ಯಾರಿನ ಧನಲಕ್ಷ್ಮಿ ಪೂಜಾರಿ ಅವರು ಇಂದು ತನ್ನ ಕೋಚ್‌ ತೇಜಸ್ವಿನಿ ಪೈ ಅವರ ಜತೆಗೆ ಬೆಳವಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದಅಧಿವೇಶನದ ಕಲಾಪ ವೀಕ್ಷಿಸಿದರು.

 

ಈ ಸಂದರ್ಭದಲ್ಲಿ ಧನ ಲಕ್ಷ್ಮಿ ಅವರನ್ನು ಸರಕಾರದ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಧನಲಕ್ಷ್ಮಿ ಅದರ ಸಾಧನೆಯನ್ನು ಗುರುತಿಸಿ ಸರಕಾರದ ವತಿಯಿಂದ ಈಗಾಗಲೇ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು ತಿಳಿಸಿದರು.

ಧನಲಕ್ಷ್ಮಿ ಮತ್ತು ಆಕೆಯ ತರಬೇತುದಾರರಾದ ತೇಜಸ್ವಿನಿ ಪೈ ಅವರನ್ನು ಅಭಿನಂದಿಸುತ್ತೇನೆ ಎಂದರು. ಧನಲಕ್ಞ್ಮಿ ಅವರಿಗೆ  ಕನಿಷ್ಟ 50 ಲಕ್ಷ ರೂಪಾಯಿ ಬಹುಮಾನ ನೀಡ ಬೇಕೆಂದು ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದರು.ಆಕೆಗೆ ಸರಕಾರಿ ಉದ್ಯೋಗ ಕೊಡಿಸಬೇಕೆಂದು ವಿ ಸುನಿಲ್ ಕುಮಾರ್ ಮನವಿ ಮಾಡಿದರು.

Continue Reading

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page