Connect with us

LATEST NEWS

ಮಸ್ಕತ್ ನಲ್ಲಿ ಮೇಳೈಸಿದ ದೇವೀ ಮಹಾತ್ಮೆ ಯಕ್ಷಗಾನ

Published

on

ಮಸ್ಕತ್/ಮಂಗಳೂರು: 2016 ರಲ್ಲಿ ಸೇವಾ ಮನೋಭಾವದ ಸಮಾನಾಸಕ್ತದಿಂದ ಮೈದಳೆದ ಬಿರುವ ವಾಟ್ಸಾಪ್ ಗ್ರೂಪ್ ನ ಜವನೆರ್ ಸಂಘಟನೆ ಹಾಗೂ ಇವೆಂಟ್ ಸಂಸ್ಥೆ ಇನ್ಸ್ಪಿರೇಷನ್ ಡಿಸೈನ್ ನ ನೆರಳಲ್ಲಿ ಮಸ್ಕತ್ ನಲ್ಲಿ ಶ್ರೀ ಕಟೀಲು 6 ಮೇಳಗಳ ಆಯ್ದ ಕಲಾವಿದರಿಂದ ಮೇ. 31 ರಂದು ಪ್ರದರ್ಶನಗೊಂಡ ” ಶ್ರೀ ದೇವೀ ಮಹಾತ್ಮೆ” ಯಕ್ಷಗಾನವು ಅಪೂರ್ವ ಯಶಸ್ಸನ್ನು ಕಂಡಿತು.

ಬಯಲಾಟದ ಸಂಪ್ರದಾಯಿಕ ರಂಗಸ್ಥಳ, ಸಂಘಟಕರೇ ಅಣಿಗೊಳಿಸಿದ ರಥ ಪೀಠ, ಉಯ್ಯಾಲೆ, ಪುಷ್ಪ ಅಲಂಕಾರ, ಬ್ಯಾಂಡ್ ಗರ್ನಲ್, ಹಗಲು ಬತ್ತಿ, ಸುಡುಮದ್ದು ಬಳಸದೆ ತಾಂತ್ರಿಕ ನೈಪುಣ್ಯತೆಯಿಂದ ಗೌಜಿಯ ಬಯಲಾಟ ಸಂಪನ್ನಗೊಂಡಿತು.

ಮೂರು ದೀಪ ಬೆಳಗಿ ಉದ್ಘಾಟನೆ

ಕಟೀಲು ಶ್ರೀ ದುರ್ಗಾ ಪರಮೇಶ್ವರಿಯ ಪುಷ್ಪ ಅಲಂಕಾರದ ಸುಂದರ ಚಿತ್ರವನ್ನು ಚೌಕಿ ಪೂಜೆಗೆ ಅಣಿಗೊಳಿಸಲಾಗಿತ್ತು. ಸಮಯಕ್ಕೆ ಸರಿಯಾಗಿ ” ಅಬ್ಬರ ತಾಳ ” ದೊಂದಿಗೆ ಸಭಾಂಗಣವನ್ನು ಮುಂಗಡ ಉಚಿತ ಪಾಸ್ ಪಡೆದು, ಪ್ರಸಾದ ಭೋಜನ ಸ್ವೀಕರಿಸಿ ಬರುವ ಯಕ್ಷಗಾನ ಆಸಕ್ತರಿಗೆ ಮುಕ್ತಗೊಳಿಸಲಾಯಿತು. ‘ಕೇಳಿ ಬಡಿಯುವ’ ಸಮಯದಲ್ಲಿ ಮುಕ್ಕಾಲು ಸಭಾಂಗಣ ತುಂಬಿತ್ತು.

ಸಂಘಟಕ ಗುರುಪ್ರಸಾದ್ ರಾಮ ಅಮೀನ್ ನಾನಿಲ್ ಅವರು ಸ್ವಾಗತಿಸಿದರು. ಅಕ್ಷತಾ ರಿಷಿಕೇಶ್ ಪ್ರಸ್ತಾವನೆ ಗೈದರು. ಶಾಂತ ರಾಮ ಅಮೀನ್ ನಾನಿಲ್, ಲೀಲಾ ಶೇಖರ್ ಸಾಲಿಯಾನ್, ಸುಚೇತನಾ ಕೆ. ಅಂಚನ್ ಹಾಗೂ ಅತಿಥಿಗಳು ಮೂರು ದೀಪಗಳನ್ನು ಏಕಕಾಲದಲ್ಲಿ ಪ್ರಜ್ವಲಿಸಿದರು.

ಬಿರುವ ಜವಾನೆರ್‌ನ ಎಂಟು ವರ್ಷ ಗಳ ಸೇವಾಯಾನ ಹಾಗೂ ಸಂಘಟಿಸಿದ ಕಲಾ ಕಾರ್ಯಕ್ರಮ ಗಳ ಮಾಹಿತಿಯನ್ನು ಒಳಗೊಂಡ ” ಮೆಮರೀಸ್ ” ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕಾಗಿ ಭಾರತದಿಂದ ಬಂದ ಮುಂಬೈಯ ಸೂರ್ಯ ಪ್ರಕಾಶ್ ಜಯಸುವರ್ಣ, ಮಿತ್ರ ಹೆರಾಜೆ, ಗಂಗಾಧರ್ ಪೂಜಾರಿ, ಅನಂದ ಸನಿಲ್, ನಮ್ಮ ಕುಡ್ಲ ಲೀಲಾಕ್ಷ ಬಿ ಕರ್ಕೇರ ಇವರನ್ನು ಓಮಾನ್ ಲಾಂಛನ ಪ್ರತಿಕೃತಿ ನೀಡಿ ಗೌರವಿಸಲಾಯಿತು.

ಮಂಗಳೂರು ಕುದ್ರೋಳಿ ದೇವಸ್ಥಾನ ದ ಸಮೀಪ ನಿರ್ಮಾಣ ಆಗಲಿರುವ ಶ್ರೀನಾಥ್ ಹೆಬ್ಬಾರ್ ಅವರ ಲ್ಯಾಂಡ್ ಟ್ರೇಡರ್ಸ್ ನ 33 ಮಹಡಿಗಳ ” ಮಹಾಲಕ್ಷ್ಮಿ” ವಸತಿ ಸಮುಚ್ಚಯದ ಬಗ್ಗೆ ಮೋಹನ್ ದಾಸ್ ಸಾಲಿಯಾನ್ ಪಚ್ಚನಾಡಿ ಮಾಹಿತಿ ನೀಡಿದರು. ಅರ್ಥ ಶಾಸ್ತ್ರಜ್ಞ ಡಾ. ಅಂಚನ್ ಉದ್ಯಮಿ ಗಳಾದ ಸಿ. ಕೆ, ಉಮೇಶ್ ಬಂಟ್ವಾಳ್, ನರೇಶ್ ಪೈ ಶುಭ ಹಾರೈಕೆ ಮಾಡಿದರು. ಸುರೇಶ ಭಟ್, ವಾಲ್ಟರ್ ಎಮ್ ಪಿರೇರಾ, ಅಚಲ್ ಮಹಾಬಲ ಶೆಟ್ಟಿ, ದಿನೇಶ್ ಲೋಕನಾಥ್ ಪೂಜಾರಿ, ಶಿವಪ್ರಕಾಶ್ ಕುಂಪಲ ಉಪಸ್ಥಿತರಿದ್ದರು.

ಇನ್ಸ್ಪಿರೇಷನ್ ಡಿಸೈನ್ ನ ಉತ್ತಮ್ ಕೋಟ್ಯಾನ್ ಧನ್ಯವಾದ ಸಮಾರ್ಪಿಸಿದರು. ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.

ಅಗರಿ ಶ್ರೀನಿವಾಸ ಭಾಗವತ ವಿರಚಿತ “ಶ್ರೀ ದೇವೀ ಮಹಾತ್ಮೆ” ಯಕ್ಷಗಾನ ಬಯಲಾಟವು ಬಲಿಪ ಪ್ರಸಾದ ಭಾಗವತ ಹಾಗೂ ದೇವೀ ಪ್ರಸಾದ ಆಳ್ವ ತಲಪಾಡಿ ಇವರು ಭಾಗವತಿಕೆಯಲ್ಲಿ ಜನರನ್ನು ಮನರಂಜಿಸಿದರು.

ನಿತಿನ್ ಹುನ್ಸೆಕಟ್ಟೆ ಅವರು ಆಯ್ಕೆ ಮಾಡಿದ್ದ ಕಟೀಲು 6 ಮೇಳಗಳ 30 ಕಲಾವಿದರನ್ನು ಒಳಗೊಂಡ ತಂಡದ ಪ್ರಸ್ತುತಿ ಸರ್ವತ್ರ ಶ್ಲಾಘನೆಗೆ ಪಾತ್ರವಾಯಿತು. ಈ ವರ್ಷದ ತಿರುಗಾಟದಲ್ಲಿ ಶ್ರೀ ದೇವಿಯ ಪಾತ್ರ ನಿರ್ವಹಿಸಿದ್ದ ಮೂವರು, ನಾಲ್ವರು ರಕ್ತ ಬೀಜಾಸುರ ಮತ್ತು ಇಬ್ಬರು ಮಹಿಷಾಸುರ ಹಾಗೂ ಚಂಡ ಮುಂಡ ಪಾತ್ರ ನಿರ್ವಹಿಸುವ ನಾಲ್ವರು ಈ ಪ್ರಸಂಗದಲ್ಲಿ ವೇಷಧಾರಿಗಳಾಗಿ ಮಿಂಚಿದ್ದಾರೆ.

ಉದ್ಯಮಿಗಳ ಮನದ ಮಾತು:

ಒಮಾನ್ ನ ಪ್ರಸಿದ್ದ ಉದ್ಯಮಿಗಳಾದ ಶಶಿಧರ್ ಶೆಟ್ಟಿ ಮಲ್ಲಾರ್ ಹಾಗೂ ದಿವಾಕರ ಶೆಟ್ಟಿ ಇವರು ಸುಮಾರು 9 ಗಂಟೆಗಳ ಕಾಲ ಕಾರ್ಯಕ್ರಮ ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮನದಾಳದ ಮಾತು ಹಂಚಿಕೊಂಡಿರುವ ಇವರು ಬಿರುವ ಜವನೆರ್ ಸಂಘಟನೆ ಮಸ್ಕತ್ ನಲ್ಲಿ ನಡೆಸಿದ್ದ ಎಲ್ಲಾ ಕಾರ್ಯಕ್ರಮಗಳೂ ಯಶಸ್ಸು ಕಂಡಿದೆ. ಇಂದು ಪ್ರದರ್ಶನಗೊಂಡ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟ ಮಸ್ಕತ್ ನ ಸಾಂಸ್ಕೃತಿಕ ಚರಿತ್ರೆಯಲ್ಲಿ ಅಪೂರ್ವ ದಾಖಲೆ ನಿರ್ಮಿಸಿದೆ ಎಂದು ಹೇಳಿದ್ದಾರೆ.

ಒಮಾನ್ ಮಸ್ಕತ್ ನ ರೂಯಿಯ ಆಫಲಾಜ್ ಹೋಟೆಲ್‌ನ ಸಭಾಂಗಣದಲ್ಲಿ ಕಿಕ್ಕಿರಿದು ನೆರೆದ ಪ್ರೇಕ್ಷಕರು ಮೂಕ ವಿಸ್ಮಿತ ರಾಗಿ ಕರುನಾಡಿನ ಹೆಮ್ಮೆಯ ತೆಂಕುತಿಟ್ಟು ಯಕ್ಷಗಾನದ ಸವಿಯನ್ನು ಸವಿದಿದ್ದಾರೆ. ಸಭಾ ಕಲಾಪದಿಂದ ತೊಡಗಿ ಮಂಗಳ ಪದ್ಯ ಆದ ನಂತರ ನಡೆದ ಕಲಾವಿದರ ಗೌರವ, ಸನ್ಮಾನವನ್ನೂ ಅಸ್ಥೆಯಿಂದ ವೀಕ್ಷಿಸಿದ ವಿದೇಶದಲ್ಲಿ ನೆಲೆಸಿರುವ ಬಂಧುಗಳ ಕಲಾಸಕ್ತಿ ಕಲಾವಿದರನ್ನೂ ಭಾವುಕರನ್ನಾಗಿಸಿತು.

LATEST NEWS

ಪೋಪ್ ಫ್ರಾನ್ಸಿಸ್ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭ; 160 ದೇಶಗಳ ಗಣ್ಯರು ಭಾಗಿ

Published

on

ಮಂಗಳೂರು/ವ್ಯಾಟಿಕನ್ ಸಿಟಿ: ಅನಾರೋಗ್ಯದಿಂದ ಕಳೆದ ಸೋಮವಾರ (ಏ.21)ದಂದು ನಿಧ*ನರಾದ ಕ್ರಿಶ್ಚಿಯನ್ ಕ್ಯಾಥೋಲಿಕ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಇಂದು (ಏ.26 ಶನಿವಾರ) ವ್ಯಾಟಿಕನ್‌ನಲ್ಲಿ ನಡೆಯಲಿದೆ. ಈಗಾಗಲೇ ಸಿದ್ದತೆಗಳು ಆರಂಭವಾಗಿದೆ. ಸೆಂಟ್ ಪೀಟರ್ಸ್ ಸ್ಕ್ವೇರ್‌ನಲ್ಲಿ ಜಗತ್ತಿನ ಹಲವು ರಾಷ್ಟ್ರಗಳ ಗಣ್ಯರು ಪಾಲ್ಗೊಂಡಿದ್ದಾರೆ.


ಇಹಲೋಕ ತ್ಯಜಿಸಿರುವ ಕ್ರಿಶ್ಚಿಯನ್ ಧರ್ಮಗುರು ಪೋಪ್ ಫ್ರಾನ್ಸಿಸ್ ಅವರ ಅಂತಿಮ ದರ್ಶನಕ್ಕಾಗಿ ವ್ಯಾಟಿಕನ್ ಸಿಟಿಗೆ ಭಕ್ತಸಾಗರವೇ ಹರಿದುಬಂದಿದೆ. ನಿನ್ನೆ (ಏ.25 ಶುಕ್ರವಾರ) 2,50,000 ಜನರು ಪೋಪ್ ಫ್ರಾನ್ಸಿಸ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಇಂದು ಸುಮಾರು 2 ಲಕ್ಷಕ್ಕೂ ಅಧಿಕ ಜನ ತಮ್ಮ ಗುರುವಿನ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ಅಂದಾಜಿಸಲಾಗಿದೆ.

160 ದೇಶಗಳ ಗಣ್ಯರು ಭಾಗಿ
ಪೋಪ್ ಫ್ರಾನ್ಸಿಸ್ ಅವರ ಮೃತದೇಹವನ್ನು ವ್ಯಾಟಿಕನ್ ಸಿಟಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಜಗತ್ತಿನ ಸುಮಾರು 160 ದೇಶಗಳ ಗಣ್ಯರು ಅಗಲಿದ ಧರ್ಮಗುರುವಿನ ಅಂತಿಮ ದರ್ಶನ ಪಡೆದಿದ್ದಾರೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೇರಿದಂತೆ ಹಲವು ಜಾಗತಿಕ ಗಣ್ಯರು ಪೋಪ್‌ ಫ್ರಾನ್ಸಿಸ್‌ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹೊಸ ಪೋಪ್ ಆಯ್ಕೆ ಪ್ರಕ್ರಿಯೆ ಹೇಗೆ? ಮುಂದಿನ ಪೋಪ್ ಯಾರಾಗಬಹುದು..!?

ಸೇಂಟ್ ಮೇರಿ ಮೇಜರ್ ಬೆಸಿಲಿಕಾದಲ್ಲಿ ಅಂತ್ಯಕ್ರಿಯೆ
ಫ್ರಾನ್ಸಿಸ್ ಅವರ ಅಂತ್ಯಕ್ರಿಯೆ ಸೇಂಟ್ ಮೇರಿ ಮೇಜರ್ ಬೆಸಿಲಿಕಾದಲ್ಲಿ ನಡೆಯಲಿದೆ. ಇದು ರೋಮ್‌ನ ಮುಖ್ಯ ರೈಲ್ವೇ ಸ್ಟೇಷನ್ ಬಳಿ ಇದೆ. ಇಲ್ಲಿ ಸರಳವಾದ ಸಮಾಧಿಗೆ ಸಿದ್ಧತೆ ನಡೆದಿದೆ. ಸಮಾಧಿ ಮೇಲೆ ‘ಫ್ರಾನ್ಸಿಸ್’ ಎಂದಷ್ಟೇ ಇರಲಿದೆ.

Continue Reading

DAKSHINA KANNADA

ಪುತ್ತೂರಿನಲ್ಲಿದೆಯಂತೆ ನಕಲಿ ವೈದ್ಯರ ಹಾವಳಿ; ಪ್ರತಿಭಟನೆಯಲ್ಲಿ ಬಯಲಾಯ್ತು ರಹಸ್ಯ!

Published

on

ಪುತ್ತೂರು : ಪುತ್ತೂರಿನಲ್ಲಿ ಸರ್ಕಾರಿ ವೈದ್ಯಾಧಿಕಾರಿ ಮೇಲೆ ಹ*ಲ್ಲೆಗೆ ಮುಂದಾದ ಪ್ರಕರಣದ ವಿಚಾರದಲ್ಲಿ ವೈದ್ಯರು ಪ್ರತಿಭಟನೆ ನಡೆಸಿದ್ದರು. ಸೂಕ್ತ ಕಾನೂನು ಭರವಸೆ ಬಳಿಕ ವೈದ್ಯರ ಪ್ರತಿಭಟನೆ ಅಂತ್ಯವಾಗಿದೆಯಾದ್ರೂ ಶನಿವಾರ(ಎ.26) ಸಂಜೆ ತನಕ ಗಡುವು ನೀಡಲಾಗಿದೆ. ಆದ್ರೆ, ಈ ನಡುವೆ ಪುತ್ತೂರಿನಲ್ಲಿ ನಕಲಿ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಚಾರ ಕೂಡ ಬಯಲಿಗೆ ಬಂದಿದೆ.

ಪುತ್ತೂರಿನಲ್ಲಿರುವ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿಗೆ ದೂರು ನೀಡಲಾಗಿದೆ ಅಂತ ಸ್ವತಃ ಭಾರತೀಯ ವೈದ್ಯಕೀಯ ಸಂಘದ ಕಾರ್ಯದರ್ಶಿ ಹೇಳಿದ್ದಾರೆ. ವಿಪರ್ಯಾಸ ಅಂದ್ರೆ, ಈ ವಿಚಾರವಾಗಿ ದೂರು ನೀಡಿ ಎರಡು ವರ್ಷವಾಗಿದ್ರೂ ಕ್ರಮ ಕೈಗೊಂಡಿಲ್ಲ ಎಂಬ ವಿಚಾರವನ್ನೂ ಅವರೇ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಜನಿವಾರ ಪ್ರಕರಣ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವುದು ಅತ್ಯಂತ ಅಗತ್ಯದ ವಿಚಾರವಾಗಿದ್ದು, ಇದರ ವಿಚಾರವಾಗಿ ವೈದ್ಯಕೀಯ ಸಂಘ ನೀಡಿದ ದೂರಿಗೆ ಕ್ರಮ ಆಗದೇ ಇದ್ರೂ ಮೌನವಾಗಿರುವುದೇ ಅಚ್ಚರಿಯ ಸಂಗತಿ. ಈ ಬಗ್ಗೆ ಆರೋಗ್ಯ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

 

 

Continue Reading

LATEST NEWS

ದುರ್ಗಮ ಹಾದಿ ಪಹಲ್ಗಾಮ್‌ನ ಬೈಸರನ್‌ನಲ್ಲಿ ಯೋಧರೇಕೆ ಇರಲಿಲ್ಲ: ಕೇಂದ್ರ ಸ್ಪಷ್ಟನೆ

Published

on

ಮಂಗಳೂರು/ನವದೆಹಲಿ: ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಮುಗ್ದ ಪ್ರವಾಸಿಗರ ಭೀಕರ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಯ ಬೆನ್ನಲ್ಲೇ ಭದ್ರತಾ ವೈಫಲ್ಯದ ಬಗ್ಗೆ ಹಲವಾರು ಭಾರತೀಯರು ಆತಂಕ ವ್ಯಕ್ತಪಡಿಸಿದ್ದರು. ಸರ್ವ ಪಕ್ಷ ಸಭೆಯಲ್ಲಿಯೂ ಭದ್ರತಾ ವೈಫಲ್ಯದ ಬಗ್ಗೆ ವಿಪಕ್ಷಗಳು ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದವು.

ದುರ್ಗಮ ಹಾದಿಯಾದ ಪಹಲ್ಗಾಮ್‌ನ ಬೈಸರನ್‌ನಲ್ಲಿ ಯೋಧರೇಕೆ ಇರಲಿಲ್ಲ ಎಂಬ ಪ್ರಶ್ನೆಗೆ ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರ ಉತ್ತರಿಸಿದೆ.

ಭದ್ರತಾ ಪಡೆ ನಿಯೋಜನೆಗೂ ಮುನ್ನ ಮಾಹಿತಿ ನೀಡದೇ, ಬೈಸರನ್‌ನಲ್ಲಿ ಪ್ರವಾಸಿಗರ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದೇ ಈ ಅನಾಹುತಕ್ಕೆ ಕಾರಣ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.

ಸರ್ವಪಕ್ಷ ಸಭೆಯಲ್ಲಿ ಬೈಸರನ್ ಹುಲ್ಲುಗಾವಲಿನಲ್ಲಿ ಭದ್ರತಾ ಪಡೆಗಳ ಅಲಭ್ಯತೆಯ ಬಗ್ಗೆ ಪ್ರಶ್ನೆಯೆದ್ದ ಹಿನ್ನೆಲೆಯಲ್ಲಿ ಉತ್ತರಿಸಿದ ಸರಕಾರ, ‘ಜೂನ್ ತಿಂಗಳಿನಲ್ಲಿ ಪ್ರಾರಂಭವಾಗುವ ವಾರ್ಷಿಕ ಅಮರನಾಥ ಯಾತ್ರೆಗೂ ಮುನ್ನ ಈ ಪ್ರದೇಶದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುತ್ತದೆ ಹಾಗೂ ಇಲ್ಲಿಗೆ ಪ್ರವಾಸಿಗರ ಭೇಟಿಗೂ ಅವಕಾಶ ಕಲ್ಪಿಸಲಾಗುತ್ತದೆ.

ಇದನ್ನೂ ಓದಿ: ಪಹಲ್ಗಾಮ್ ಉಗ್ರ ದಾಳಿ ವಿರೋಧಿಸಿ ಪ್ರತಿಭಟನೆ; ಕುತ್ತಿಗೆ ಕತ್ತರಿಸುವುದಾಗಿ ಬೆದರಿಕೆ ಹಾಕಿದ ಪಾಕ್ ಸೇನಾ ಅಧಿಕಾರಿ

ಆದರೆ ಪ್ರವಾಸಿ ಮಾರ್ಗದರ್ಶಿಗಳು ಸ್ಥಳೀಯಾಡಳಿತಗಳ ಗಮನಕ್ಕೆ ತಾರದೇ ಎ.20ರಿಂದಲೇ ಈ ಪ್ರದೇಶಕ್ಕೆ ಪ್ರವಾಸಿಗರನ್ನು ಕರೆ ತರಲು ಪ್ರಾರಂಭಿಸಿದ್ದರು. ಈ ವಿಷಯ ಪೊಲೀಸರಿಗಾಗಲೀ, ಸೇನೆಗಾಗಲೀ ಗೊತ್ತಿರಲಿಲ್ಲ. ಅವಧಿಗಿಂತ ಮೊದಲೇ ಪ್ರವಾಸೋದ್ಯಮ ಪ್ರಾರಂಭವಾಗಿದ್ದರಿಂದ ಸೈನಿಕರ ನಿಯೋಜನೆ ಸಾಧ್ಯವಾಗಿರಲಿಲ್ಲ’ ಎಂದು ಸ್ಪಷ್ಟಪಡಿಸಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page