Connect with us

LATEST NEWS

ಟಿ20 ಪಂದ್ಯದಲ್ಲಿ ನೂತನ ಮೈಲಿಗಲ್ಲು ಸಾಧಿಸಿದ ಧೋನಿ; ಪ್ಲೇಆಫ್‌ಗೆ ಎಂಟ್ರಿ ಕೊಡಲು ಸಿಎಸ್‌ಕೆಗೆ ಇನ್ನೂ ಇದೆ ಚಾನ್ಸ್..!

Published

on

ಮಂಗಳೂರು/ಚೆನ್ನೈ: ಎಂ.ಎಸ್​.ಧೋನಿ ನೇತೃತ್ವದ ಚೆನ್ನೈ ಸೂಪರ್​ ಕಿಂಗ್ಸ್​ಗೆ ಮತ್ತೊಂದು ಸೋಲಾಗಿದೆ. ನಿನ್ನೆ ಸನ್​ರೈಸರ್ಸ್​ ಹೈದರಾಬಾದ್​ ವಿರುದ್ಧ ಸೋಲುವ ಮೂಲಕ ಈ ಬಾರಿಯ ಐಪಿಎಲ್​​ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದಿದೆ.

ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ (SRH) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.5 ಓವರ್​ಗಳಲ್ಲಿ 154 ರನ್ ​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡವು 18.4 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 155 ರನ್​ಗಳಿಸಿ ಐದು ವಿಕೆಟ್​ಗಳ ಜಯ ಸಾಧಿಸಿದೆ.

ಟಿ20 ಪಂದ್ಯದಲ್ಲಿ ನೂತನ ಮೈಲಿಗಲ್ಲು ಸಾಧಿಸಿದ ಧೋನಿ
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, 400 ಟಿ-20 ಪಂದ್ಯಗಳನ್ನು ಆಡಿದ ಗೌರವಕ್ಕೆ ಭಾಜನರಾಗಿದ್ದಾರೆ.

ಧೋನಿ 400 ಟಿ20 ಪಂದ್ಯಗಳನ್ನಾಡಿದ ಭಾರತದ 4ನೇ ಆಟಗಾರ. 456 ಪಂದ್ಯಗಳನ್ನಾಡಿರುವ ರೋಹಿತ್ ಶರ್ಮಾ ಆಗ್ರಸ್ಥಾನಿಯಾಗಿದ್ದಾರೆ. ದಿನೇಶ್ ಕಾರ್ತಿಕ್ 412, ವಿರಾಟ್ ಕೊಹ್ಲಿ 408 ಪಂದ್ಯಗಳನ್ನಾಡಿದ್ದಾರೆ.

ಒಟ್ಟು 272 ಐಪಿಎಲ್ ಪಂದ್ಯಗಳಲ್ಲಿ ಧೋನಿ 5,377 ರನ್ ಬಾರಿಸಿದ್ದಾರೆ. ಇದರಲ್ಲಿ 24 ಅರ್ಧ ಶತಕ, 373 ಬೌಂಡರಿ, 260 ಸಿಕ್ಸರ್ ಸೇರಿದೆ.

ಪ್ಲೇಆಫ್‌ಗೆ ಎಂಟ್ರಿ ಕೊಡಲು ಸಿಎಸ್‌ಕೆಗೆ ಇನ್ನೂ ಇದೆ ಚಾನ್ಸ್..?
ಇಲ್ಲಿಯವರೆಗೆ ಒಟ್ಟು 9 ಪಂದ್ಯಗಳನ್ನು ಆಡಿರುವ ಚೆನ್ನೈ ಸೂಪರ್​ ಕಿಂಗ್ಸ್, 7 ರಲ್ಲಿ ಸೋತು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ ಸಿಎಸ್‌ಕೆ ತಂಡ ಪ್ಲೇಆಫ್ ರೇಸ್‌ನಿಂದ ಇನ್ನೂ ಹೊರಬಿದ್ದಿಲ್ಲ.

ಏಕೆಂದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇನ್ನೂ 5 ಪಂದ್ಯಗಳಿವೆ. ಈ ಐದು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 14 ಅಂಕಗಳನ್ನು ಪಡೆದು ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಒಂದು ವೇಳೆ ಅಂಕ ಪಟ್ಟಿಯಲ್ಲಿ ಅಗ್ರ-4 ರಲ್ಲಿ ಕಾಣಿಸಿಕೊಳ್ಳುವ ತಂಡಗಳು 16 ಅಂಕಗಳನ್ನು ಕಲೆಹಾಕಿದರೆ ಸಿಎಸ್​ಕೆ ಪ್ಲೇಆಫ್ ರೇಸ್​ನಿಂದ ಹೊರಬೀಳುವುದು ಖಚಿತ.

ಅಂದರೆ ಇಲ್ಲಿ ಸಿಎಸ್​ಕೆ ತಂಡವು ಪ್ಲೇಆಫ್​ ಪ್ರವೇಶಿಸಬೇಕಿದ್ದರೆ, ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಹಾಗೆಯೇ ಲೀಗ್​ ಹಂತದ ಮುಕ್ತಾಯದ ವೇಳೆ ಪಾಯಿಂಟ್ಸ್ ಟೇಬಲ್​ನಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡವೊಂದು 14 ಅಂಕಗಳನ್ನು ಮಾತ್ರ ಪಡೆದಿರಬೇಕಾಗುತ್ತದೆ.

ಇದನ್ನೂ ಓದಿ: ತವರಿನಲ್ಲಿ ವನವಾಸ ಅಂತ್ಯಗೊಳಿಸಿ ಸೋಲುವ ಆರ್‌ಸಿಬಿ ಗೆದ್ದಿದ್ದು ಇಲ್ಲೇ..!

ಹೀಗೆ ಅಂಕ ಪಟ್ಟಿಯಲ್ಲಿರುವ ನಾಲ್ಕನೇ ಸ್ಥಾನ ಅಲಂಕರಿಸುವ ತಂಡ 14 ಅಂಕಗಳೊಂದಿಗೆ ಕಾಣಿಸಿಕೊಂಡರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ನೆಟ್ ರನ್ ರೇಟ್​ನೊಂದಿಗೆ 14 ಪಾಯಿಂಟ್ಸ್ ಪಡೆದು ಪ್ಲೇಆಫ್​ಗೆ ಪ್ರವೇಶಿಸಬಹುದು. ಆದರೆ ಅದಕ್ಕೂ ಮುನ್ನ ಸಿಎಸ್​ಕೆ ತಂಡ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕು. ಅಲ್ಲದೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಅಲಂಕರಿಸುವ ತಂಡದ ಪಾಯಿಂಟ್ಸ್ 14 ದಾಟದಂತೆ ಪ್ರಾರ್ಥಿಸಬೇಕು. ಹೀಗಾದರೆ ಮಾತ್ರ ಸಿಎಸ್‌ಕೆಗೆ ಪ್ಲೇಆಫ್‌ಗೆ ಎಂಟ್ರಿ ಕೊಡಬಹುದು.

 

LATEST NEWS

ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು ಪೂರ್ಣವಾಗಿ ಉತ್ತರಿಸಿದ್ದೇವೆ: ಆದಂಪುರ್‌ ವಾಯುನೆಲೆಯಲ್ಲಿ ಪ್ರಧಾನಿ ಮೋದಿ

Published

on

ಮಂಗಳೂರು/ಆದಂಪುರ್: ಆಪರೇಷನ್ ಸಿಂಧೂರ್ ನಂತರ ಪ್ರಧಾನಿ ಮೋದಿ ನಿನ್ನೆ ಮೊದಲ ಬಾರಿಗೆ ಸಾರ್ವಜನಿಕ ಭಾಷಣ ಮಾಡಿದ್ದರು. ಅದರ ಬೆನ್ನಲ್ಲೇ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬಿನ ಆದಂಪುರ್ ವಾಯುನೆಲೆಗೆ ಭೇಟಿ ನೀಡಿದರು.

ಪ್ರಧಾನಿ ಮೋದಿ ಅದಂಪುರ್ ಭೇಟಿ ಹೆಚ್ಚು ಮಹತ್ವ ಪಡೆದಿದ್ದು ಏಕೆಂದರೆ, ಪಾಕಿಸ್ತಾನದವರು ನಾವು ಆದಂಪುರ್‌ ವಾಯುನೆಲೆಯನ್ನು ಛಿದ್ರಗೊಳಿಸಿದ್ದೇವೆ ಎಂಬ ಸುಳ್ಳು ಸುದ್ದಿ ಹರಡಿದ್ದರು. ಆದರೆ, ಇಂದು ಬೆಳಿಗ್ಗೆ  ಪಂಜಾಬ್‌ನ  ಅದೇ ಆದಂಪುರ್ ವಾಯುನೆಲೆಯಲ್ಲಿ ಪ್ರಧಾನಿ ಮೋದಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು ಪೂರ್ಣವಾಗಿ ಉತ್ತರಿಸಿದ್ದೇವೆ!

ವಾಯುನೆಲೆಯಲ್ಲಿ ಐಎಎಫ್ ಯೋಧರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು ಪೂರ್ಣವಾಗಿ ಉತ್ತರಿಸಿದ್ದೇವೆ ಎಂದಿದ್ದಾರೆ. ಅಲ್ಲದೆ ಯಾವುದೇ ಭಯೋತ್ಪಾದಕ ದಾಳಿಗೆ ನಮ್ಮದೇ ಆದ ಷರತ್ತುಗಳ ಮೇಲೆ ನಿರ್ಣಾಯಕ ಉತ್ತರ ನೀಡಲಾಗುವುದು ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ಸಂದೇಶವನ್ನೂ ರವಾನಿಸಿ ಪಾಕ್ ಸೇನೆಯ ಬೆವರಿಳಿಸಿದ್ದಾರೆ.

ಒಂದು ದಾಳಿ ಪಾಕಿಸ್ತಾನದಲ್ಲಿ ಮಹಾವಿನಾಶಕ್ಕೆ ಕಾರಣ!

“ನಾವು ಗಾಡ್‌ಫಾದರ್‌ಗಳು ಮತ್ತು ಭಯೋತ್ಪಾದನೆಯ ರಾಜ್ಯ ಪ್ರಾಯೋಜಕರ ನಡುವೆ ವ್ಯತ್ಯಾಸವನ್ನು ತೋರಿಸುವುದಿಲ್ಲ. ಅವರು ಅಮಾಯಕರನ್ನು ಕೊಂದರೆ ಅವರಿಗೆ ವಿನಾಶವೊಂದೇ ಪರಿಹಾರ ಎಂದು ತಿಳಿದಿದೆ. ಪಾಕಿಸ್ತಾನದವರು ಹೇಡಿಗಳಂತೆ ಬಂದರು. ಆದರೆ ಅವರು ಎದುರಿಸಬೇಕಾಗಿದ್ದು ಭಾರತೀಯ ಸೇನೆಯನ್ನು ಎಂಬುದನ್ನು ಮರೆತಿದ್ದಾರೆ. ಪಾಕಿಸ್ತಾನದ 9 ಭಯೋತ್ಪಾದಕ ಪಡೆಗಳು ನಾಶವಾದವು. 100ಕ್ಕೂ ಹೆಚ್ಚು ಭಯೋತ್ಪಾದಕರು ಕೊಲ್ಲಲ್ಪಟ್ಟರು. ಅವರ ಒಂದು ದಾಳಿ ಪಾಕಿಸ್ತಾನದಲ್ಲಿ ಮಹಾವಿನಾಶಕ್ಕೆ ಕಾರಣವಾಯಿತು. ಈಗ ಪಾಕಿಸ್ತಾನದವರು ನಮ್ಮ ಕ್ಷಿಪಣಿ, ಡ್ರೋನ್​ಗಳ ಬಗ್ಗೆ ಯೋಚನೆ ಮಾಡಿದರೆ ಸಾಕು ಕಣ್ಣುಮುಚ್ಚಿ ನಿದ್ರೆ ಮಾಡಲು ಸಾಧ್ಯವಾಗುವುದಿಲ್ಲ” ಎಂದು ಪ್ರಧಾನಿ ಮೋದಿ ಪಾಕಿಸ್ತಾನವನ್ನು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಮೋದಿ ನಿವಾಸದ ಮೇಲೆ ಬಾಂ*ಬ್ ದಾಳಿ ಆಗಬೇಕು ಎಂದಿದ್ದ ವ್ಯಕ್ತಿಯ ಬಂಧನ

ಇದೇ ವೇಳೆ ಪಾಕಿಸ್ತಾನದ ಬಗ್ಗೆ ಭಾರತಕ್ಕಿರುವ ಮೂರು ಪ್ರಮುಖ ನೀತಿಗಳ ಕುರಿತು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಭಾರತದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ. ಭಾರತವು ಪರಮಾಣು ಬ್ಲ್ಯಾಕ್‌ಮೇಲ್‌ಗಳನ್ನು ಸ್ವೀಕರಿಸವುದಿಲ್ಲ. ಇನ್ನೂ ಭಯೋತ್ಪಾದಕರು ಮತ್ತು ಭಯೋತ್ಪಾದನೆಯನ್ನು ಬೆಂಬಲಿಸುವ ಪಾಕ್ ಸರ್ಕಾರ ಕೂಡ ಭಯೋತ್ಪಾದಕರೇ ಆಗಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ಭಾರತೀಯ ಯೋಧರನ್ನು ಶ್ಲಾಘಿಸಿದ ಪ್ರಧಾನಿ ಮೋದಿ

“ಇದು ಹೊಸ ಭಾರತ, ಶಾಂತಿಯನ್ನು ಬಯಸುತ್ತದೆ. ಆದರೆ ಪಾಕಿಸ್ತಾನದಿಂದ ಮಾನವೀಯತೆಯ ಮೇಲೆ ದಾಳಿ ನಡೆದರೆ, ನಾವು ನಿಮ್ಮನ್ನು ನಿರ್ನಾಮ ಮಾಡುತ್ತೇವೆ. ಪಾಕಿಸ್ತಾನದಲ್ಲಿ ಭಯೋತ್ಪಾದಕರು ಶಾಂತಿಯುತವಾಗಿ ಬದುಕಲು ಯಾವುದೇ ಸ್ಥಳವೂ ಉಳಿದಿಲ್ಲ ಎಂಬ ಸಂದೇಶವನ್ನು ನಾವು ಅವರಿಗೆ ನೀಡಿದ್ದೇವೆ. ಭಾರತೀಯ ಸೇನೆ, ಭಾರತೀಯ ವಾಯುಪಡೆ ಮತ್ತು ಭಾರತೀಯ ನೌಕಾಪಡೆ ಪಾಕಿಸ್ತಾನಿ ಸೈನ್ಯವನ್ನು ಸೋಲಿಸಿವೆ” ಎಂದು ಭಾರತೀಯ ಯೋಧರನ್ನು ಶ್ಲಾಘಿಸಿದ್ದಾರೆ.

 

Continue Reading

LATEST NEWS

ಬದಲಾಯ್ತು ಗೂಗಲ್ ಲೋಗೋ; 10 ವರ್ಷಗಳ ಬಳಿಕ ಆಧುನಿಕ ಟಚ್

Published

on

ನವದೆಹಲಿ: ಸುಮಾರು 10 ವರ್ಷಗಳ ನಂತರ ಗೂಗಲ್ ಮತ್ತೊಮ್ಮೆ ತನ್ನ ಐಕಾನಿಕ್ ‘G’ ಲೋಗೋವನ್ನು ಬದಲಾಯಿಸಿದೆ.

2015 ರಲ್ಲಿ, ಗೂಗಲ್ ತನ್ನ ಕ್ಲಾಸಿಕ್ ಲೋಗೋವನ್ನು ಆಧುನಿಕ ಟೈಪ್‌ಫೇಸ್ ಪ್ರಾಡಕ್ಟ್ ಸ್ಯಾನ್ಸ್ ಗೆ ಬದಲಾಯಿಸಿತು. ಈಗ 2025 ರಲ್ಲಿ, ಕಂಪನಿಯು ಇದಕ್ಕೆ ಹೊಸ ದೃಶ್ಯ ತಿರುವನ್ನು ಸೇರಿಸಿದೆ.

ಹೊಸ ಲೋಗೋದಲ್ಲಿ ಗೂಗಲ್ ತನ್ನ ಬ್ರ್ಯಾಂಡ್‌ನ ಗುರುತಾಗಿರುವ ನೀಲಿ, ಕೆಂಪು, ಹಸಿರು ಮತ್ತು ಹಳದಿ ಎಂಬ ನಾಲ್ಕು ಸಾಂಪ್ರದಾಯಿಕ ಬಣ್ಣಗಳನ್ನು ಉಳಿಸಿಕೊಂಡಿದೆ. ಆದರೆ ಈ ಬಾರಿ ವಿನ್ಯಾಸದಲ್ಲಿ ಹೊಸ ತಿರುವು ಇದೆ.

ಇದನ್ನೂ ಓದಿ: ಹೊಸದಾಗಿ ನಿರ್ಮಾಣವಾಗುತ್ತಿರುವ ಮನೆಗೆ ನೀರು ಹಾಕಲು ಹೋಗಿ ಬಾಲಕಿ ಸಾವು

ಮೊದಲು ಈ ಬಣ್ಣಗಳನ್ನು G ಲೋಗೋದಲ್ಲಿ ಬ್ಲಾಕ್ ಶೈಲಿಯಲ್ಲಿ ಕಾಣಲಾಗುತ್ತಿತ್ತು. ಈಗ ಅದೇ ಬಣ್ಣಗಳನ್ನು ಗ್ರೇಡಿಯಂಟ್‌ನಲ್ಲಿ ಅಂದರೆ ಬೆಳಕಿನಿಂದ ಗಾಢ ಛಾಯೆಗಳವರೆಗೆ ಕಾಣಬಹುದು. ಇದು ಜನರಿಗೆ ಕ್ರಿಯಾತ್ಮಕ ಮತ್ತು ಆಧುನಿಕ ಅನುಭವವನ್ನು ನೀಡುತ್ತದೆ. ಗೂಗಲ್‌ನ ಈ ಹೊಸ ಲೋಗೋ ಕಂಪನಿಯು ಈಗ ತನ್ನ ಹಳೆಯ ನೋಟವನ್ನು ಮೀರಿ ಹೆಚ್ಚು ಸ್ಮಾರ್ಟ್, ಫ್ಯೂಚರಿಸ್ಟಿಕ್ ಮತ್ತು ಎಐ-ಪವರ್ಡ್​ ಬ್ರ್ಯಾಂಡಿಂಗ್‌ನತ್ತ ಸಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ.

Continue Reading

LATEST NEWS

ಆರ್‌ಸಿಬಿ ತಂಡಕ್ಕೆ ಮೊದಲ ಮ್ಯಾಚ್; ಇಲ್ಲಿದೆ ನೋಡಿ IPL 2025ರ ಪರಿಷ್ಕೃತ ವೇಳಾಪಟ್ಟಿ

Published

on

ಮಂಗಳೂರು/ಮುಂಬೈ: ಭಾರತ-ಪಾಕಿಸ್ತಾನ ಉದ್ವಿಗ್ನತೆ ಕಡಿಮೆಯಾಗಿದ್ದು, ಸ್ಥಗಿತಗೊಂಡಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ಶನಿವಾರದಿಂದ ಶುರುವಾಗುವುದು ಬಹುತೇಕ ಖಚಿತವಾಗಿದೆ.


ಹೌದು, ಈಗಾಗಲೇ ಗುಜರಾತ್ ಟೈಟನ್ಸ್ ಸೇರಿದಂತೆ ಕೆಲ ತಂಡಗಳು ಐಪಿಎಲ್‌ನ ಉಳಿದ ಪಂದ್ಯಗಳಿಗಾಗಿ ಸಿದ್ದತೆಗಳನ್ನು ಆರಂಭಿಸಿವೆ. ಈ ಸಿದ್ದತೆಗಳ ನಡುವೆ ಮತ್ತೊಂದು ಮಾಹಿತಿ ಕೂಡ ಹೊರಬಿದ್ದಿದೆ. ಅದೇನೆಂದರೆ.. ಐಪಿಎಲ್ ಪುನರಾಂಭಗೊಳ್ಳುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯದೊಂದಿಗೆ ಎಂಬುದು. ಹೀಗಾಗಿ ಆರ್‌ಸಿಬಿ ಅಭಿಮಾನಿಗಳಿಗೆ ಈ ಸುದ್ದಿ ಮತ್ತಷ್ಟು ಖುಷಿ ಕೊಟ್ಟಿದೆ. ಇನ್ನು ಈ ಬಾರಿಯ ಫೈನಲ್ ಪಂದ್ಯವನ್ನು ಜೂನ್ 3ರಂದು ಆಯೋಜಿಸಲು ನಿರ್ಧರಿಸಲಾಗಿದೆ.

ಐಪಿಎಲ್ 2025ರ ಪರಿಷ್ಕೃತ ವೇಳಾಪಟ್ಟಿ

Continue Reading
Advertisement

Trending

Copyright © 2025 Namma Kudla News

You cannot copy content of this page