Connect with us

FILM

‘ಎ’oತಹ ಖುಷಿ ಸುದ್ದಿ ಕೊಟ್ರು ಗೊತ್ತಾ ರಿಯಲ್ ಸ್ಟಾರ್ ಉಪೇಂದ್ರ?

Published

on

ಸ್ಯಾಂಡಲ್ ವುಡ್ : ರಿಯಲ್ ಸ್ಟಾರ್ ಉಪೇಂದ್ರ ಅಂದ್ರೆ ಕೇಳ್ಬೇಕಾ? ಅವರ ಸಿನಿಮಾ ನೋಡಲು ಎಲ್ಲರೂ ತುದಿಗಾಲಲ್ಲಿ ಕಾಯುತ್ತಾರೆ. ಅದರಲ್ಲೂ ಅವರ ನಿರ್ದೇಶನ ಅಂದ್ರೆ ಹೇಳೋದೆ ಬೇಡ. ಕುತೂಹಲ ಹೆಚ್ಚಾಗಿರುತ್ತದೆ. ಸದ್ಯ ಉಪ್ಪಿ ‘ಯುಐ’ ಸಿನಿಮಾದಲ್ಲಿ ಬಿಝಿಯಾಗಿರೋದು ಗೊತ್ತಿರುವ ವಿಚಾರ. ಸಿನಿಮಾದ ಅಪ್ಡೇಟ್ಸ್ ಗಾಗಿ ಅಭಿಮಾನಿಗಳು ಕಾಯುತ್ತಿದ್ರೆ, ಉಪ್ಪಿ ಸಂತಸದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.

ಯುಐ ಸಿನಿಮಾ ನಡುವೆ ಗುಡ್ ನ್ಯೂಸ್ ಕೊಟ್ರು ಉಪ್ಪಿ:

ಯುಐ ಉಪ್ಪಿದಾದಾ ನಿರ್ದೇಶನದ ಬಹುನಿರೀಕ್ಷಿತ ಚಿತ್ರ. ಈಗಾಗಲೇ ಪೋಸ್ಟರ್, ಟೀಸರ್ ನಿಂದ ಭಾರೀ ಸದ್ದು ಮಾಡಿದೆ. ಅಲ್ಲದೇ, ‘ಟ್ರೋಲಾಗುತ್ತೆ’ ಹಾಡಂತೂ ಭಾರೀ ಸದ್ದು ಮಾಡಿದೆ, ಈಗಾಗಲೂ ಜನರ ನಾಲಗೆಯಲ್ಲಿ ನಲಿದಾಡುತ್ತಿದೆ.

ಮನೋಹರ್ ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ‘ಯುಐ’ಗೆ ಅಜನೀಶ್ ಲೋಕನಾಥ್ ಸಂಗೀತವಿದೆ. ರೀಷ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ. ಇನ್ನು ಚಿತ್ರದ ಬಗ್ಗೆ ಹೊಸ ವಿಚಾರ ಸಿಗಬಹುದಾ ಅಂತ ಕಾದವರಿಗೆ ಈಗ ಮತ್ತೊಂದು ಸಂತಸದ ಸುದ್ದಿ ಸಿಕ್ಕಿದೆ. ಉಪ್ಪಿ ಬ್ಲಾಕ್ ಬಾಸ್ಟರ್ ಹಿಟ್ ಚಿತ್ರ ‘ಎ’ ತೆರೆಗೆ ಬರುತ್ತಿದೆ. ಅದೂ ಹೊಸ ರೂಪದಲ್ಲಿ.

ಮತ್ತೆ ಬರುತ್ತಿದೆ ‘ಎ’ :


ಹಳೆ ಚಿತ್ರಗಳು ಮತ್ತೆ ತೆರೆಗೆ ಬರೋದು ಸಾಮಾನ್ಯ. ಇತ್ತೀಚೆಗಷ್ಟೇ ಪುನೀತ್ ರಾಜ್ ಕುಮಾರ್ ನಟನೆಯ ಪವರ್, ಅಂಜನೀಪುತ್ರ ತೆರೆಗೆ ಬಂದಿದ್ದವು. ಇದೀಗ ಉಪೇಂದ್ರ ಅವರ ‘ಎ’ ಸಿನಿಮಾ ತೆರೆಗೆ ಬರಲಿದೆ. ‘ಎ’ ಸಿನಿಮಾ ಕನ್ನಡ ಸಿನಿ ರಂಗದಲ್ಲಿ ಹೊಸ ಹವಾ ಸೃಷ್ಟಿಸಿದ್ದ ಚಿತ್ರ. ಉಪೇಂದ್ರ ನಿರ್ದೇಶಕನಾಗಿ, ಸಹ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿದ್ದರು. ‘ಎ’ ಚಿತ್ರದ ಮೂಲಕ ಅವರು ನಿರ್ದೇಶನದ ಜೊತೆ ನಾಯಕ ನಟನಾಗಿಯೂ ಕಾಣಿಸಿಕೊಂಡರು. 1998 ರಲ್ಲಿ ಈ ಸಿನಿಮಾ ಬಿಡುಗಡೆಗೊಂಡಿತ್ತು.

‘ಎ’ ಚಿತ್ರ ಚಂದನವನದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಈ ಚಿತ್ರ ಕನ್ನಡ ಸಿನಿರಂಗದಲ್ಲಿ ಹೊಸ ಅಲೆ ಹುಟ್ಟು ಹಾಕಿತ್ತು. ವಿಭಿನ್ನ ಶೈಲಿಯ ಕಥಾ ನಿರೂಪಣೆ ಜನರಿಗೆ ಇಷ್ಟವಾಗಿತ್ತು. ಸಿನಿಮಾ ನೋಡಿದವರು ಮತ್ತೆ ಮತ್ತೆ ನೋಡಲಾರಂಭಿಸಿದ್ದರು. ಉಪ್ಪಿ ಸಿನಿಮಾವೆಂದರೆ ಒಗಟು…ಅರ್ಥೈಯಿಸಿಕೊಂಡರೆ ಅದರಾಳದ ಜೀವಂತ ಬೇರು ಗೋಚರಿಸುವುದು. ಈ ಚಿತ್ರ ನೋಡಿದವರು ಮತ್ತೆ ಉಪ್ಪಿ ಸಿನಿಮಾಗಳಿಗಾಗಿ ಕಾಯಲಾರಂಭಿಸಿದರು. ಅಷ್ಟರ ಮಟ್ಟಿಗೆ ಸೌಂಡ್ ಮಾಡಿತ್ತು ‘ಎ’.

ಗುರುಕಿರಣ್ ಸಂಗೀತವೂ ಮೋಡಿ ಮಾಡಿತ್ತು. ಚಾಂದಿನೀ…ಎಂದು, ಸುಮ್ ಸುಮ್ನೇ ನಗ್ತಾಳೆ ಎನ್ನುತ್ತಾ…ಮಾರಿ ಕಣ್ಣು ಹೋರಿ ಮ್ಯಾಕೆ ಎಂದು ಜನ ನಲಿದರು. ಹೇಳ್ಕೊಳಕ್ಕೊಂದೂರು ತಲೆ ಮ್ಯಾಗೆ ಒಂದ್ಸೂರು ಎಂದವರು ಇದು ಒನ್ ಡೇ ಮ್ಯಾಚು ಕಣೋ…ಡೆರೆಂಡ್ಯಾವ್..ಡ್ಯಾವ್..ಡ್ಯಾವ್ ಎನ್ನುತ್ತಾ ಮ್ಯೂಸಿಕ್ ನ್ನೂ ಬಾಯಲ್ಲಿ ನುಡಿಸುವ ಮಟ್ಟಿಗೆ ಹಾಡುಗಳು ಕ್ಲಿಕ್
ಆಗಿದ್ದವು. ಈಗಲೂ ಆಗುತ್ತಿದೆ. ಇದು ಎವರ್ ಗ್ರೀನ್ ಸಿನಿಮಾ…ನಿತ್ಯಹರಿದ್ವರ್ಣ ಗೀತೆಗಳ ಚಿತ್ರ.

ಇದನ್ನೂ ಓದಿ : ಬದುಕುಳಿವ ಛಾನ್ಸ್ ಇದ್ದಿದ್ದು ಕೇವಲ ಶೇ. 30 ರಷ್ಟು…ನಿತ್ಯ ಜಗಳ…ಗಾಬರಿ; ನಟಿ ಸೋನಾಲಿ ಬೇಂದ್ರೆ ಕ್ಯಾನ್ಸರ್ ಗೆದ್ದ ಕಥೆ ಇಲ್ಲಿದೆ

ಯಾವಾಗ ತೆರೆಗೆ?

ಎ ಚಿತ್ರವನ್ನು 1.2 5 ಕೋಟಿಯಲ್ಲಿ ತಯಾರಿಸಲಾಗಿದ್ದು, 20 ಕೋಟಿಗೂ ಅಧಿಕ ಗಳಿಕೆ ಮಾಡಿತ್ತು.(ಗೂಗಲ್ ಮಾಹಿತಿ) ಇದೀಗ ಮತ್ತೆ ಚಿತ್ರ ಬಿಡುಗಡೆಯಾಗುತ್ತಿದೆ. ಮೇ 17 ರಂದು ತೆರೆಗೆ ಬರಲಿದೆ. ಇವತ್ತಿನ ಕಾಲಕ್ಕೆ ತಕ್ಕ ಹಾಗೆ ಚಿತ್ರವನ್ನು ತಯಾರು ಮಾಡಲಾಗಿದೆ. ಡಿಜಿಟಲ್ ರೂಪದಲ್ಲಿ ತೆರೆಗೆ ತರುವ ಪ್ರಯತ್ನ ಮಾಡಲಾಗಿದೆ. ಮತ್ತೆ ಹೇಗೆ ಉಪ್ಪಿ ‘ಎ’ ಸದ್ದು ಮಾಡಲಿದೆ? ಎಷ್ಟು ಕಲೆಕ್ಷನ್ ಮಾಡಲಿದೆ? ಎಂದು ಕಾದು ನೋಡಬೇಕಿದೆ.

DAKSHINA KANNADA

ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

Published

on

ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರು, ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೋಲಿಸ್ ಪಿವಿ ಆರ್ ,ರೂಪವಾಣಿ , ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್ ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್ ಹಾಗೂ ಸಿನಿ ಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.

ಇದನ್ನೂ ಓದಿ: 35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

ತುಳು ಚಿತ್ರರಂಗದ ಖ್ಯಾತ ನಟರು ಇದರಲ್ಲಿ ನಟಿಸಿದ್ದಾರೆ ಎಂದು ವಿವರಿಸಿದರು. ವೇದಿಕೆಯಲ್ಲಿ ರಾಕೇಶ್ ಆಚಾರ್ಯ, ಸುಧಾಕರ್, ಪ್ರಶಾಂತ್ ಆಚಾರ್ಯ, ತಮ್ಮ ಲಕ್ಷ್ಮಣ ಮೊದಲಾದವರಿದ್ದರು.

Continue Reading

FILM

35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

Published

on

ಮಂಗಳೂರು/ಚೆನ್ನೈ: ವಯಸ್ಸು 47 ಆಗಿದ್ದರೂ ಬ್ಯಾಚುಲರ್ ಆಗಿಯೇ ಉಳಿದಿದ್ದ ನಟ ವಿಶಾಲ್ ಕೊನೆಗೂ ಏಕಾಂಗಿ ಜೀವನಕ್ಕೆ ವಿದಾಯ ಹೇಳುವ ಸಮಯ ಬಂದಿದೆ. ಕೊನೆಗೂ ವಿಶಾಲ್ ಅವರು ಮದುವೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅವರು ಕೈ ಹಿಡಿಯಲಿರುವ ವಧು ಯಾರು ಎಂಬ ನಿಮ್ಮ ಪ್ರಶ್ನೆಗೆ ಉತ್ತರ ಇಲ್ಲಿದೆ.

ಹೌದು, ವಿಶಾಲ್ ಕೃಷ್ಣ ಅವರು ಮದುವೆ ಆಗಲು ಸಜ್ಜಾಗಿದ್ದಾರೆ. ಹಾಗಾದರೆ ಹುಡುಗಿ ಯಾರು ಎಂಬ ಪ್ರಶ್ನೆ ಮೂಡುವುದು ಸಹಜ. ತಮಿಳು ಚಿತ್ರರಂಗದ ಖ್ಯಾತ ನಟಿ ಸಾಯಿ ಧನ್ಶಿಕಾ ಜೊತೆ ವಿಶಾಲ್ ಹಸೆಮಣೆ ಏರಲಿದ್ದಾರೆ. ಇದು ಲವ್ ಮ್ಯಾರೇಜ್ ಕೂಡ ಹೌದು. ಆಗಸ್ಟ್‌ನಲ್ಲಿ ಮದುವೆ ಆಗೋದಾಗಿ ಸಿಹಿಸುದ್ದಿ ಕೊಟ್ಟಿದ್ದಾರೆ.

ಕಳೆದ 15 ವರ್ಷಗಳಿಂದ ಪರಿಚಿತರಾಗಿರುವ ಧನ್ಶಿಕಾ ಜೊತೆ ವಿಶಾಲ್ ಮದುವೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಚೆನ್ನೈನಲ್ಲಿ ನಡೆದ ಧನ್ಶಿಕಾ ನಟನೆಯ ‘ಯೋಗಿದ’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶಾಲ್, ನನಗೆ ಧನ್ಶಿಕಾ ಜೊತೆ ಮದುವೆ ಫಿಕ್ಸ್ ಆಗಿದೆ. ಅವರ ತಂದೆ ಕೂಡ ಇಲ್ಲಿಯೇ ಇದ್ದಾರೆ. ಅವರ ಆಶೀರ್ವಾದೊಂದಿಗೆ ನಾನು ಅವಳನ್ನು ಪರಿಚಯಿಸುತ್ತಿದ್ದೇನೆ. ಧನ್ಶಿಕಾ ಅದ್ಭುತ ನಟಿ. ಮದುವೆ ಬಳಿಕವೂ ಆಕೆ ನಟನೆ ಮಾಡುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಮತ್ತೆ ಪವಿತ್ರಾ ಪ್ರೀತಿಯಲ್ಲಿ ಬಿದ್ರಾ ದರ್ಶನ್‌!?

ಬಳಿಕ ಮಾತನಾಡಿದ ಧನ್ಶಿಕಾ, ನಮ್ಮ ಸುದ್ದಿ ವರದಿ ವೈರಲ್ ಆದ ನಂತರ ನಮ್ಮ ಸಂಬಂಧವನ್ನು ಅಧಿಕೃತಗೊಳಿಸುವಂತೆ ಒತ್ತಾಯಿಸಲಾಯಿತು ಎಂದರು. ನಾವಿಬ್ಬರು ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಲು ಬಯಸಿರಲಿಲ್ಲ. ಆದಾಗ್ಯೂ, ಇಂದು ಬೆಳಗ್ಗೆ ಸುದ್ದಿ ವರದಿ ವೈರಲ್ ಆಯಿತು. ಹೀಗಾಗಿ ಮರೆಮಾಡಲು ಏನೂ ಉಳಿದಿಲ್ಲ. ಕಳೆದ 15 ವರ್ಷಗಳಿಂದಲೂ ಇಬ್ಬರ ನಡುವೆ ಒಳ್ಳೆಯ ಸಂಬಂಧ ಇದೆ. ನಡಿಗರ್ ಸಂಘದ ಕಟ್ಟಡ ಆ.15ರಂದು ಉದ್ಘಾಟನೆ ಮಾಡಲು ಪ್ಲ್ಯಾನ್ ಮಾಡಿದ್ದೇವೆ. ಆಗಸ್ಟ್‌ 29ರಂದು ವಿಶಾಲ್ ಅವರ ಹುಟ್ಟುಹಬ್ಬ. ಅದೇ ದಿನ ವಿವಾಹ ನಿಶ್ಚಯ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಸುದ್ದಿ ಕೇಳಿ ಫ್ಯಾನ್ಸ್ ಫುಲ್‌ ಖುಷ್‌ ಆಗಿದ್ದಾರೆ.

Continue Reading

FILM

ಮತ್ತೆ ಪವಿತ್ರಾ ಪ್ರೀತಿಯಲ್ಲಿ ಬಿದ್ರಾ ದರ್ಶನ್‌!?

Published

on

ಮಂಗಳೂರು/ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಈ ವೇಳೆ ಒಂದಷ್ಟು ಅಚ್ಚರಿಯ ಘಟನೆ ನಡೆದಿದೆ.

ಕೋರ್ಟ್‌ಗೆ ಎ1 ಪವಿತ್ರ ಗೌಡ, ಎ2 ನಟ ದರ್ಶನ್‌ ಸೇರಿದಂತೆ ಇತರೆ ಆರೋಪಿಗಳು ಹಾಜರಾಗಿದ್ದರು. ಮೊದಲೇ ಕೋರ್ಟ್ ಹಾಲ್ ಒಳಗೆ ಪವಿತ್ರಗೌಡ ಅವರು ನಿಂತಿದ್ದರು. ನಟ ಧನ್ವೀರ್ ಜೊತೆ ನಟ ದರ್ಶನ್ ಅವರು ಕಪ್ಪು ಟೀ ಶರ್ಟ್‌ನಲ್ಲಿ ಆಗಮಿಸಿದರು.

ಮೊದಲಿಗೆ ಪವಿತ್ರಾಗೌಡ ಅವರಿಂದ ದೂರ ನಿಂತಿದ್ದ ದರ್ಶನ್, ನ್ಯಾಯಾಧೀಶರು 1ನೇ ಆರೋಪಿತೆ ಪಕ್ಕ ನಿಲ್ಲಿ ಎಂದು ಸೂಚಿಸಿದ್ದಾರಂತೆ. ಬಳಿಕ ದರ್ಶನ್ ಹಾಗೂ ಪವಿತ್ರಾ ಗೌಡ ಕೋರ್ಟ್‌ನಲ್ಲಿ ಅಕ್ಕ-ಪಕ್ಕದಲ್ಲಿ ನಿಂತಿದ್ದರು. ಈ ವೇಳೆ ದಾಸ ಗಪ್‌ ಚುಪ್ ಆಗಿದ್ದರಂತೆ. ಕೋರ್ಟ್‌ನಿಂದ ಹೊರ ಬರುತ್ತಿದ್ದಂತೆ ದರ್ಶನ್‌ ಕೈನ ಪವಿತ್ರಾ ಹಿಡಿದುಕೊಂಡಿದ್ದರು.

ಆದರೆ ಕೋರ್ಟ್​ನಿಂದ ಹೊರಹೋಗುವಾಗ ಜನ ಜಂಗುಳಿ ಇತ್ತು. ಈ ಕಾರಣಕ್ಕೆ ದರ್ಶನ್ ಹಾಗೂ ಪವಿತ್ರಾ ಕೈ ಕೈ ಹಿಡಿದು ಬಂದಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನೂ ಲಿಫ್ಟ್‌ನಲ್ಲಿ ನಟ ದರ್ಶನ್‌ಗೆ ಪವಿತ್ರಾಗೌಡ ಅವರು ದುಂಬಾಲು ಬಿದ್ದು ಮಾತನಾಡಿಸಿದರು. ಕೈ ಹಿಡಿದು ಫೋನ್ ನಂಬರ್ ನೀಡುವಂತೆ ಒತ್ತಾಯ ಮಾಡಿದರು. ಕೊನೆಗೆ ದರ್ಶನ್ ಅವರು ತನ್ನ ಮೊಬೈಲ್‌ ಸಂಖ್ಯೆಯನ್ನೂ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Continue Reading
Advertisement

Trending

Copyright © 2025 Namma Kudla News

You cannot copy content of this page