Connect with us

LATEST NEWS

ಸುನಿತಾ ವಿಲಿಯಮ್ಸ್ ಅವರಿಗೆ ಭಾರತರತ್ನ ಕೊಡಿ ಎಂದ ದೀದಿ

Published

on

ಮಂಗಳೂರು/ಕೋಲ್ಕತ್ತಾ: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಯಶಸ್ವಿಯಾಗಿ ಭೂಮಿಗೆ ಮರಳಿದ ಭಾರತೀಯ ಮೂಲದ ಅಮೆರಿಕ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರಿಗೆ ಎಲ್ಲೆಡೆಯಿಂದ ಶ್ಲಾಘನೆ ವ್ಯಕ್ತವಾಗುತ್ತಿದೆ. ಈ ನಡುವೆ ಸುನಿತಾ ಅವರಿಗೆ ಭಾರತರತ್ನ ನೀಡಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.


ಈ ಕುರಿತು ಇಂದು ವಿಧಾನಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಒಂಬತ್ತು ತಿಂಗಳ ಕಾಲ ಬಾಹ್ಯಾಕಾಶದಲ್ಲಿ ನಡೆಸಿದ ಸಮರ್ಪಿತ ಕೆಲಸಕ್ಕಾಗಿ ಸುನಿತಾ ವಿಲಿಯಮ್ಸ್ ಅವರನ್ನು ಶ್ಲಾಘಿಸಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ತಂಡವನ್ನೂ ಶ್ಲಾಘಿಸಿದರು.

ಸುನಿತಾ ಸುರಕ್ಷಿತವಾಗಿ ಭೂಮಿಗೆ ಮರಳಿರುವುದು ತುಂಬಾ ಸಂತೋಷವಾಗಿದೆ. ಅವರ ಧೈರ್ಯವನ್ನು ಮೆಚ್ಚಲೆಬೇಕು. ನನಗೂ ಬಾಹ್ಯಾಕಾಶ ವಿಜ್ಞಾನದಲ್ಲಿ ಆಸಕ್ತಿ ಇದೆ. ವಿವಿಧ ಮೂಲಗಳ ಮಾಹಿತಿಗಳನ್ನು ತಿಳಿದುಕೊಳ್ಳುತ್ತಿದ್ದೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಬಾಹ್ಯಾಕಾಶದಲ್ಲಿರುವ ಗಗನಯಾತ್ರಿಗಳು ಸ್ನಾನ ಹೇಗೆ ಮಾಡುತ್ತಾರೆ ಗೊತ್ತಾ?

ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಿದ ಬೆನ್ನಲ್ಲೇ ನಿನ್ನೆ ಟ್ವೀಟ್ ಮಾಡಿದ್ದ ಮಮತಾ ಬ್ಯಾನರ್ಜಿ, “ಹಲವು ದಿನಗಳ ನಂತರ, ಅಂತಿಮವಾಗಿ ಮತ್ತು ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಸ್ವಾಗತಿಸುತ್ತೇವೆ. ನಮ್ಮ ಭಾರತದ ಮಗಳು ನಮ್ಮ ಬಳಿಗೆ ಮರಳಿದ್ದಾಳೆ ಮತ್ತು ನಾವು ತುಂಬಾ ಸಂತೋಷ ಮತ್ತು ಹರ್ಷಗೊಂಡಿದ್ದೇವೆ. ಅವರ ಧೈರ್ಯವನ್ನು ಮೆಚ್ಚಲೇಬೇಕು ಎಂದು ಅವರ ಮರಳುವಿಕೆಗೆ ಅಭಿನಂದನೆಗಳು” ಎಂದಿದ್ದರು.

DAKSHINA KANNADA

ಯುವಕನ ಬರ್ಬರ ಹತ್ಯೆ ಬಗ್ಗೆ ಅಪಪ್ರಚಾರ ಸಲ್ಲದು : ಅನುಪಮ್ ಅಗರ್ವಾಲ್

Published

on

ಮಂಗಳೂರು : ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆಯು ಮಂಗಳೂರು ಹೊರವಲಯದ ಕುಡುಪು ಸಮೀಪ ನಿನ್ನೆ (ಏ.27) ಸಂಜೆ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಯಾವುದೇ ರೀತಿಯಿಂದನೂ ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸುಮಾರು 35 ರಿಂದ 40 ವರ್ಷ ಪ್ರಾಯದ ಹೊರ ರಾಜ್ಯದ ಈ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಅಪರಿಚಿತ ಯುವಕನೊಬ್ಬ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತಪಟ್ಟ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ಸಾಗಿಸಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ತಿಳಿಯಬಹುದಾಗಿದೆ. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಒಬ್ಬರಿಗೊಬ್ಬರು ತಾಳಿಕಟ್ಟಿಕೊಂಡ ಯುವತಿಯರು; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಸ್ನೇಹಿತೆಯರ ಮದುವೆ ವೀಡಿಯೋ

Published

on

ಯವತಿಯರಿಬ್ಬರು ಒಬ್ಬರಿಗೊಬ್ಬರು ತಾಳಿ ಕಟ್ಟಿ ಹಾರ ಬದಲಾಯಿಸಿ ಹಸೆಮಣೆ ಏರಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಕ್ಷಿಣ ಭಾರತದ ಕೇರಳ ಅಥವಾ ತಮಿಳುನಾಡಿನಲ್ಲಿ ಈ ಮದುವೆ ನಡೆದಿರುವುದಾಗಿ ವಿಡಿಯೋ ವೀಕ್ಷಿಸಿದ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಬ್ಬರು ಯುವತಿಯರು ಮದುವೆ ಮಂಟಪದಲ್ಲಿ ತಾಳಿಯನ್ನು ಪ್ರದರ್ಶಿಸಿ ಒಬ್ಬರಿಗೊಬ್ಬರು ತಾಳಿ ಕಟ್ಟಿಕೊಂಡು ಪ್ರತಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಹಾರ ಬದಲಾಯಿಸಿಕೊಂಡು ಮದುವೆಯಾಗಿದ್ದಾರೆ.

ಇದು ನಿಜ ಮದುವೆಯಾ ಅಥವಾ ರೀಲ್ಸ್ ಗಾಗಿ ಮಾಡಿರೋದಾ ಎಂದು ಜನರು ಪ್ರಶ್ನೆ ಮಾಡಿದ್ದಾರೆ. ಕೆಲವರು ಈ ವಿಡಿಯೋಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದು, ನಮ್ಮ ದೇಶದ ಸಂಸ್ಕೃತಿಯನ್ನು ಹಾಳು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಐವರು ಮಡದಿಯರ ಮುದ್ದಿನ ಗಂಡ.. ಇಂದು 11 ಮಕ್ಕಳ ತಂದೆ..! ಈತನ ಐದು ಮದುವೆಗೆ ಕಾರಣ ಏನು ಗೊತ್ತಾ?

ಸಲಿಂಗಿಗಳ ಮದುವೆಗೆ ಸುಪ್ರೀಂ ಕೋರ್ಟ್ ಮಾನ್ಯತೆ ನೀಡಿಲ್ಲವಾಗಿದ್ದರೂ, ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇರಲು ಅವಕಾಶ ನೀಡಿದೆ. ಹಾಗೊಂದು ವೇಳೆ ಮದುವೆ ಆದರೆ ಅದನ್ನು ಮಾನ್ಯಗೊಳಿಸುವ ವಿಚಾರವನ್ನು ಶಾಸಕಾಂಗದ ಜವಾಬ್ದಾರಿಗೆ ಬಿಟ್ಟಿದೆ. ಈ ವಿಡಿಯೋ ವೈರಲ್ ಆದ ಬಳಿಕ ಭಾರತದಲ್ಲಿ ಸಲಿಂಗಿಗಳ ಮದುವೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

Continue Reading

DAKSHINA KANNADA

ಕುಂಭದ್ರೋಣ ಮಳೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

Published

on

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಆರಂಭಗೊಂಡು ಹಲವು ವರ್ಷವಾದ್ರೂ ಇನ್ನೂ ಕೂಡಾ ಪೂರ್ಣಗೊಂಡಿಲ್ಲ. ಕೆಲವಡೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಏನೋ ನಿರ್ಮಾಣ ಮಾಡಲಾಗಿದೆಯಾದರೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ವ್ಯವಸ್ಥೆಯೇ ಮಾಡಿಲ್ಲ.

 

ಕಳೆದ ವರ್ಷ ಇದೇ ಸಮಸ್ಯೆಯಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ಇದೀಗ ಮಳೆಗಾಲ ಸಮೀಪಿಸ್ತಾ ಇದ್ದು , ಅಕಾಲಿಕ ಮಳೆ ಕೂಡಾ ಆರಂಭವಾಗಿದೆ. ಭಾನುವಾರ ಬಂಟ್ವಾಳ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮತ್ತೆ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ.

ಬಂಟ್ವಾಳ ತಾಲೂಕಿ ಕಲ್ಲಡ್ಕ ಸಮೀಪದ ಸೂರಿಕುಮೇರು ಎಂಬಲ್ಲಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಇಡೀ ರಸ್ತೆಯೇ ನದಿಯಂತಾಗಿ ಹೋಗಿದೆ. ಇದರ ನಡುವೆ ಸಣ್ಣಪುಟ್ಟ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹೆದ್ದಾರಿ ಕಾಮಗಾರಿಗೆ ಹಿಡಿ ಶಾಪ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ : ಹುಲಿ ವೇಷದಾರಿ ಹೃದಯಾಘಾತಕ್ಕೆ ಬಲಿ

ಹೆದ್ದಾರಿಯ ಇಕ್ಕೆಲೆಯಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದ್ದು, ತಕ್ಷಣವೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page