Connect with us

LATEST NEWS

ಡಿಕೆ ಶಿವಕುಮಾರ್‌ ಕಾಂತಾರ ಸಿನಿಮಾದಲ್ಲಿ ರಿಷಬ್‌ ಶೆಟ್ಟಿಗೆ ಕಾಂಪಿಟೀಟರ್‌ ಎಂದ್ರು ಸಿ.ಟಿ ರವಿ..!

Published

on

ಚಿಕ್ಕಮಗಳೂರು : ಡಿಕೆ ಶಿವ ಕುಮಾರ್ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಆಗಿ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆ ಶಿವಕುಮಾರ್ ಪಾಲಿಗೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ವ್ಯಂಗ್ಯವಾಡಿದ್ದಾರೆ.

ಡಿ.ಕೆ ಶಿವಕುಮಾರ್ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ. ಭಾರತ್‌ ಜೋಡೋ ಕಾರ್ಯಕ್ರಮದ ಸಂವಾದದಲ್ಲಿ ತಂದೆಯನ್ನು ಕಳೆದುಕೊಂಡ ಬಾಲಕಿಯ ನೋವಿನ ಮಾತುಗಳನ್ನು ಕೇಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕಣ್ಣೀರಿಟ್ಟಿದ್ದರು.

ಡಿಕೆಶಿ ಭಾವುಕರಾಗಿರೋದನ್ನು ವ್ಯಂಗ್ಯವಾಡಿರುವ ಶಾಸಕ ಸಿ.ಟಿ.ರವಿ, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ.

ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು. ಡಿ.ಕೆ ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡ್ತಾರೆ.

ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಡಿ.ಕೆ.ಶಿವಕುಮಾರ್ ಅವರಿಗೆ ಬೈ ಬರ್ತ್ ಬಂದಿದೆ ಎಂದು ಕಾಲೆಳೆದಿದ್ದಾರೆ.

ಅಲ್ಲದೇ, ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ ಎಂದಿರುವ ಸಿ.ಟಿ ರವಿ, ಡಿಕೆ ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ.

ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ.

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ.

ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆ ಶಿವಕುಮಾರ್ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆ ಶಿವಕುಮಾರ್ ಪಾಲಿಗೆ. ಈ ರೀತಿಯ ಕಮೆಂಟ್‌ಗಳನ್ನ ನಾನು ನೋಡಿದ್ದೇನೆ.

ಲೇಟಾಗಿದೆ, ಆದ್ರೂ ಕೂಡ ಕಡೆ ಅವಕಾಶ ಸಿಕ್ಕರೂ ಸಿಗಬಹುದು. ಸಿನಿಮಾದಲ್ಲಿ ನಟಿಸಲು ಡಿಕೆ ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದು ವ್ಯಂಗ್ಯವಾಡಿದರು.

BELTHANGADY

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಮೂವರು ಗಂಭೀರ

Published

on

ಬೆಳ್ತಂಗಡಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮಿಪದ ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ನಿನ್ನೆ (ಏ.21) ಸಂಜೆ ನಡೆದಿದೆ.

ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣ ಮಾಡುತ್ತಿದ್ದ ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50), ವೈಭವ್‌ (23) ಎಂಬುವವರು ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

LATEST NEWS

ಕಾಣಿಕೆ ಡಬ್ಬಿ ಒಡೆದು ಕಳ್ಳತನ; ಕಿಡಿಗೇಡಿಗಳು ಪರಾರಿ

Published

on

ಮಲ್ಪೆ : ಕರಾವಳಿ ದೈವ, ದೇವರ ಆರಾಧನೆಗೆ ಹೆಸರಾದ ನಾಡು. ಆದರೆ ಇಂತಹ ಪುಣ್ಯ ಭೂಮಿಯಲ್ಲೂ ದುಷ್ಕೃತ್ಯಗಳು ಹೆಚ್ಚಾಗುತ್ತಿದೆ. ಇದೀಗ ದೈಸ್ಥಾನದ ಡಬ್ಬಿಯನ್ನೇ ಹೊಡೆದು , ಕಳ್ಳತ ಮಾಡಿ, ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.

ಮಲ್ಪೆಯ ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ದೇವರಬೆಟ್ಟು ಆವರಣ ಗೋಡೆಯ ಹೊರಭಾಗದಲ್ಲಿ ಇಟ್ಟಿದಂತಹ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿರುವ ಹಣವನ್ನು ಕಳವು ಮಾಡಿ ಖದೀಮರು ಪರಾರಿಯಾಗಿದ್ದಾರೆ.

ಎ.19 ರಂದು ಸಂಜೆ 6 ರಿಂದ 8.45 ರ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಕಾಣಿಕೆ ಡಬ್ಬಿಯಲ್ಲಿದ್ದ 15ಸಾವಿರ ಹಣ ಕಳವು ಮಾಡಲಾಗಿರುವ ಕುರಿತು ಮಲ್ಪೆ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ತಿಳಿಸಲಾಗಿದೆ.

Continue Reading

bangalore

ಜನಿವಾರಕ್ಕೆ ಕತ್ತರಿ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು : ಸಿಎಂ ಸಿದ್ಧರಾಮಯ್ಯ

Published

on

ಬೆಂಗಳೂರು : ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ಜನಿವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ನಡೆದ ಪ್ರೆಸ್‌ಮೀಟ್‌ನಲ್ಲಿ ಸಿ.ಎಂ.ಸಿದ್ಧರಾಮಯ್ಯ ಮಾತನಾಡಿದ್ದಾರೆ. “ಸಿಇಟಿ ಪರೀಕ್ಷೆ ವೇಳೆ ಬೀದರ್, ಶಿವಮೊಗ್ಗ, ಸಾಗರ, ಧಾರವಾಡಗಳಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಜನಿವಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು :

“ವಿದ್ಯಾರ್ಥಿಗಳ ಜನಿವಾರ ಕತ್ತರಿಸಿರುವ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ತೆಗೆದುಕೊಳ್ಳಬೇಕು. ಜನಿವಾರವನ್ನು ಕೇವಲ ಬ್ರಾಹ್ಮಣ ಸಮಾಜದವರಷ್ಟೇ ಹಾಕುವುದಿಲ್ಲ. ಬೇರೆ ಬೇರೆ ಸಮುದಾಯಗಳು ಪವಿತ್ರ ದಾರವನ್ನು ಧರಿಸುತ್ತಿದ್ದಾರೆ. ಆ ಎಲ್ಲ ಸಮುದಾಯಗಳಿಗೆ ಧಕ್ಕೆ ಆಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಜನಿವಾರ ಪ್ರಕರಣಕ್ಕೆ ಶಾಶ್ವತ ಪರಿಹಾರ :

ಸಿಇಟಿಯಲ್ಲಿ ನಡೆದ ಜನಿವಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮುಂದಾಗಿರುವ ಸರಕಾರ, ಈ ಸಂಬಂಧ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ನಿರ್ಧರಿಸಿದೆ. ಇಂಥ ಘಟನೆ ಪುನರಾವರ್ತನೆ ಆಗದಿರಲು ಶಾಶ್ವತ ಪರಿಹಾರ ಕಂಡು ಕೊಳ್ಳಲು ಈಗ ಸರಕಾರ ಪ್ರತ್ಯೇಕ ತಜ್ಞರ ಸಮಿತಿ ರಚಿಸಲು ಉದ್ದೇಶಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page