Connect with us

LATEST NEWS

ಇಯರ್ ಎಂಡ್ ಸಮೀಪಿಸುತ್ತಿದೆ ..! ಈ 5 ಕೆಲಸ ಮಾಡಿ, ಹಣ ಭದ್ರಗೊಳಿಸಿ ..!

Published

on

ಆರ್ಥಿಕವಾಗಿ ಪ್ರತಿಯೊಬ್ಬ ಮನುಷ್ಯನೂ ಗಟ್ಟಿಯಾಗಿರಬೇಕು. ಸಂಪಾದನೆ ಎಷ್ಟೇ ಇದ್ದರೂ ಕೆಲವು ಸಮಸ್ಯೆಗಳು ನಮ್ಮನ್ನು ಆರ್ಥಿಕವಾಗಿ ಕೆಳಗೆ ತಳ್ಳುತ್ತವೆ. ಹಾಗೂ ಎಲವೊಂದು ಸಂದರ್ಭ ದೇಶದಲ್ಲಿರುವ ಸೌಲಭ್ಯಗಳನ್ನು ಕಳೆದುಕೊಳ್ಳಬೇಕಾಗುತ್ತದೆ. ಮಾರ್ಚ್ ತಿಂಗಳು ಮುಗಿಯುತ್ತಿದೆ. ಇಯರ್ ಎಂಡ್ ಸಮೀಪಿಸುತ್ತಿದೆ. ಈ ಐದು ಕೆಲಸಗಳನ್ನು ಮಾಡಿದರೆ ಮಾತ್ರ ನಮ್ಮ ಹಣ ಉಳಿಯಲು ಸಾಧ್ಯ. ಹಾಗಾದರೆ ಆ 5 ಕೆಲಸಗಳು ಯಾವುವು ? ಇಲ್ಲಿದೆ ನೋಡಿ.

ಆರ್ಥಿಕವಾಗಿ ಸ್ವಲ್ಪ ಹಣ ಉಳಿಸಲು, ಅನಗತ್ಯ ಖರ್ಚುಗಳನ್ನು ತಪ್ಪಿಸಲು ಈ ಸೂತ್ರಗಳನ್ನು ಅನುಸರಿಸಿ. ಮಾರ್ಚ್ 31ರೊಳಗೆ ಈ ಕೆಲಸಗಳನ್ನು ಮುಗಿಸಿಕೊಳ್ಳುವುದು ಬೆಸ್ಟ್..

1 . ಫಾರ್ಮ್ 12 ಬಿಬಿ ಎಲ್ಲಾ ಸಂಬಳ ಪಡೆಯುವ ತೆರಿಗೆದಾರರಿಗೂ ಅನ್ವಯಿಸುತ್ತದೆ. ಮಾರ್ಚ್ 31ರೊಳಗೆ ಫಾರ್ಮ್ 12 ಬಿಬಿಯನ್ನು ಸಲ್ಲಿಸಬೇಕು.

2 . ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರದಲ್ಲಿ ಮಾರ್ಚ್ 31ರೊಳಗೆ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಸದಸ್ಯರಾಗಬಹುದು. ಹಣ ಉಳಿತಾಯಕ್ಕೆ ಕೇಂದ್ರ ಸರ್ಕಾರ ತಂದಿರುವ ಯೋಜನೆ ಇದಾಗಿದೆ.

3 . ಇವಿ ಸಾಲಗಳು 2019 ಏಪ್ರಿಲ್ 1 ರಿಂದ 2023 ಮಾರ್ಚ್ 31 ರವರೆಗೆ ಎಲೆಕ್ಟ್ರಾನಿಕ್ಸ್ ವಾಹನವನ್ನು ಖರೀದಿಸಿದ್ದರೆ, ಬಡ್ಡಿ ದರ ಕಡಿಮೆಯಾಗುತ್ತದೆ.

4 . ಪಿಪಿಎಫ್, ಇಎಲ್ಎಸ್ಎಸ್, ಸುಕನ್ಯಾ ಸಮೃದ್ಧಿ ಯೋಜನೆ ಅಥವಾ ಎಫ್‌ಡಿಯಲ್ಲಿ ಹೂಡಿಕೆ ಮಾಡಿ ತೆರಿಗೆ ಉಳಿಸಿ, ಅಭಿವೃದ್ಧಿ ಹೊಂದಬಹುದು.

5 . ಫಾಸ್ಟ್ಯಾಗ್ ಕೆವೈಸಿ ನವೀಕರಿಸಲು, ಫಾಸ್ಟ್ಯಾಗ್ ಪೋರ್ಟಲ್‌ನಲ್ಲಿ ಅಥವಾ ಬ್ಯಾಂಕಿನ ಪೋರ್ಟಲ್‌ನಲ್ಲಿ ಲಾಗಿನ್ ಆಗುವುದು ಉತ್ತಮ.

LATEST NEWS

ಸಹಾಯ ಕೇಳಿ ಬಂದ ಯುವತಿಯ ಗ್ಯಾಂಗ್ ರೇ*ಪ್..! ಅಟೋ ಚಾಲಕ ಅಂದರ್..!

Published

on

ಮಂಗಳೂರು : ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ಬಂದು ಕೇರಳದ ಉಪ್ಪಳದಲ್ಲಿ ವಾಸವಾಗಿದ್ದ ಯುವತಿಯನ್ನು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅ*ತ್ಯಾ*ಚಾರ ಮಾಡಲಾಗಿದೆ. ಏಪ್ರಿಲ್ 16 ರ ರಾತ್ರಿ ಈ ಹೇಯ ಕೃತ್ಯ ನಡೆದಿದ್ದು, ಅಟೋ ಚಾಲಕನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಉಪ್ಪಳದಲ್ಲಿ ವಾಸವಾಗಿದ್ದ ಯುವತಿ ಸ್ನೇಹಿತನ ಜೊತೆಯಲ್ಲಿ ಮಂಗಳೂರಿಗೆ ಬಂದಿದ್ದು, ಇಲ್ಲಿ ಇಬ್ಬರಿಗೂ ಜಗಳವಾಗಿ ಬೇರೆ ಬೇರೆಯಾಗಿದ್ದಾರೆ. ರಾತ್ರಿವೇಳೆಯಲ್ಲಿ ದಾರಿ ಗೊತ್ತಿಲ್ಲದ ಯುವತಿ ಅದೇ ದಾರಿಯಲ್ಲಿ ಬಂದ ಬಗಂಬಿಲ ಮೂಲದ ಅಟೋ ಚಾಲಕನಲ್ಲಿ ಸಹಾಯ ಯಾಚಿಸಿದ್ದಾಳೆ. ಸಹಾಯ ಮಾಡುವ ನೆಪದಲ್ಲಿ ಅಟೋದಲ್ಲಿ ಕೂರಿಸಿದ ಚಾಲಕ ಆಕೆಗೆ ಅ*ಮಲು ಪದಾರ್ಥ ನೀಡಿ ಮುನ್ನೂರು ಗ್ರಾಮ ಮತ್ತು ಉಳ್ಳಾಲ ನಗರಸಭೆ ಗಡಿಯಲ್ಲಿನ ಬೊಳ್ಳ ಹೌಸ್ ಎಂಬಲ್ಲಿಗೆ ಕರೆದುಕೊಂಡು ಹೋಗಿದ್ದಾನೆ. ನೇತ್ರವಾದಿ ನದಿ ಸಮೀಪದ ನಿರ್ಜನ ಪ್ರದೇಶವಾಗಿರುವ ಬೊಳ್ಳ ಹೌಸ್ ಬಳಿ ತನ್ನ ಸ್ನೇಹಿತರ ಜೊತೆ ಸೇರಿ ಆಕೆಯನ್ನು ಅ*ತ್ಯಾ*ಚಾರ ಮಾಡಿದ್ದಾನೆ. ಅತ್ಯಾಚಾರಿಗಳ ಕೈನಿಂದ ತಪ್ಪಿಸಿಕೊಂಡು ಬಂದ ಯುವತಿ ಮನೆಯೊಂದರ ಬಾಗಿಲು ತಟ್ಟಿ ನೀರು ಕೇಳಿ ಅಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ತಕ್ಷಣ ಮನೆಯವರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದು, ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಗಂಬಿಲದ ಅಟೋ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದು, ಇತರ ಆರೋಪಿಗಳನ್ನು ತಕ್ಷಣ ಪತ್ತೆಹಚ್ಚಿ ಬಂಧಿಸಲು ಪೊಲೀಸರಿಗೆ ಸೂಚಿಸಿದ್ದಾರೆ.

Continue Reading

LATEST NEWS

ಪಾಕಿಸ್ತಾನಿಯರು ಹಿಂದೂ-ಮುಸ್ಲಿಮರ ನಡುವಿನ ವ್ಯತ್ಯಾಸಗಳನ್ನು ತಮ್ಮ ಮಕ್ಕಳಿಗೆ ಹೇಳಿಕೊಡಬೇಕು: ಪಾಕ್ ಸೇನಾ ಮುಖ್ಯಸ್ಥ

Published

on

ಮಂಗಳೂರು/ನವದೆಹಲಿ: ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಮತ್ತೊಮ್ಮೆ ಭಾರತ ಮತ್ತು ಹಿಂದೂ ಧರ್ಮವನ್ನು ಗುರಿಯಾಗಿಸಿಕೊಂಡು ಹಲವು ಹೇಳಿಕೆಗಳನ್ನು ನೀಡಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಮೊದಲ ಸಾಗರೋತ್ತರ ಪಾಕಿಸ್ತಾನಿ ಸಮ್ಮೇಳನದಲ್ಲಿ, ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಗಳನ್ನು ಉದ್ದೇಶಿಸಿ ಮಾತನಾಡುವ ಬದಲು.. ಸೇನಾ ಮುಖ್ಯಸ್ಥರು ಧರ್ಮೋಪದೇಶಗಳು, ಎರಡು ರಾಷ್ಟ್ರದ ಸಿದ್ದಾಂತಗಳನ್ನು ಪ್ರತಿಪಾದಿಸಿ ಭಾರತದ ವಿರುದ್ದ ಮತ್ತೆ ಕ್ಯಾತೆ ತೆಗೆದಿದ್ದಾರೆ.

ಈ ಸಮ್ಮೇಳನದಲ್ಲಿ ಪ್ರಧಾನಿ ಶಹಬಾಜ್ ಷರೀಫ್ ಸೆರಿದಂತೆ ಪಾಕಿಸ್ತಾನದ ಎಲ್ಲಾ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಪಾಕಿಸ್ಥಾನದ ಕಥೆಯನ್ನು ಹೇಳಬೇಕು
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ‘ನೀವು ಖಂಡಿತವಾಗಿಯೂ ನಿಮ್ಮ ಮಕ್ಕಳಿಗೆ ಪಾಕಿಸ್ತಾನದ ಕಥೆಯನ್ನು ಹೇಳಬೇಕು. ನಮ್ಮ ಪೂರ್ವಜರು ಜೀವನದ ಪ್ರತಿಯೊಂದು ಅಂಶದಲ್ಲೂ ನಾವು ಹಿಂದೂಗಳಿಗಿಂತ ಭಿನ್ನರು ಎಂದು ಭಾವಿಸಿದ್ದರು. ನಮ್ಮ ಧರ್ಮಗಳು, ನಮ್ಮ ಪದ್ದತಿಗಳು, ಸಂಪ್ರದಾಯಗಳು, ಆಲೋಚನೆಗಳು ಮತ್ತು ಮಹತ್ವಾಕಾಂಕ್ಷೆಗಳು ವಿಭಿನ್ನವಾಗಿವೆ. ಅದು ಎರಡು ರಾಷ್ಟ್ರಗಳ ಸಿದ್ದಾಂತದ ಅಡಿಪಾಯವಾಗಿತ್ತು’ಎಂದು ಹೇಳಿದ್ದಾರೆ.

ಪಾಕಿಸ್ತಾನಿಯರು ಹಿಂದೂ-ಮುಸ್ಲಿಮರ ನಡುವಿನ ವ್ಯತ್ಯಾಸ ಹೇಳಿಕೊಡಿ
ನಮ್ಮ ಪೂರ್ವಜರು ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಹಿಂದೂಗಳಿಗಿಂತ ಭಿನ್ನರು ಎಂದೇ ಭಾವಿಸಿದ್ದರು. ನಮ್ಮ ಧರ್ಮ, ಆಚರಣೆ, ಸಂಪ್ರದಾಯ, ಆಲೋಚನೆ ಮತ್ತು ಗುರಿಗಳು ಬೇರೆ ಆದ್ದರಿಂದಲೇ, ದ್ವಿರಾಷ್ಟ್ರ ಪರಿಕಲ್ಪನೆ ಮೊಳಕೆಯೊಡೆಯಿತು. ಈಗಲೂ ಪಾಕಿಸ್ತಾನವು ದ್ವಿರಾಷ್ಟ್ರ ಸಿದ್ಧಾಂತದ ತಳಹದಿಯ ಮೇಲೆ ನಿಂತಿದೆ. ಇದರ ಮಹತ್ವ ಎಂದಿಗೂ ಕಡಿಮೆಯಾಗಬಾರದು. ಇದಕ್ಕಾಗಿ ನಾವು ನಮ್ಮ ಮಕ್ಕಳಿಗೆ ಹಿಂದೂ-ಮುಸ್ಲಿಂ ನಡುವಿನ ವ್ಯತ್ಯಾಸವನ್ನು ಹೇಳಿಕೊಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮತ್ತೆ ಚೀನಾದ ಮೇಲೆ ಮುನಿದ ಅಮೆರಿಕ..!

ಭಯೋತ್ಪಾದಕರಿಗೆ ಎಚ್ಚರಿಕೆ
ಭಯೋತ್ಪಾದಕರಿಗೆ ಎಚ್ಚರಿಕೆ ನೀಡಿದ ಅಸಿಮ್ ಮುನೀರ್, ‘ಕೇವಲ 1500 ಭಯೋತ್ಪಾದಕರು ದೇಶದ ಭವಿಷ್ಯವನ್ನು ಬದಲಾಯಿಸುತ್ತಾರೆ ಎಂದು ಪಾಕಿಸ್ತಾನದ ಶತ್ರುಗಳು ಭಾವಿಸುತ್ತಾರಾ? ನಾವು ಶೀಘ್ರದಲ್ಲೇ ಈ ಭಯೋತ್ಪಾದಕರ ಬೆನ್ನು ಮುರಿಯುತ್ತೇವೆ. 13 ಲಕ್ಷ ಜನರ ಭಾರತೀಯ ಸೇನೆಗೆ ನಮ್ಮನ್ನು ಹೆದರಿಸಲು ಸಾಧ್ಯವಾಗಲಿಲ್ಲ, ಈ ಭಯೋತ್ಪಾದಕರು ಏನು ಮಾಡುತ್ತಾರೆ?’’ ಎಂದು ಕುಹಕ ನಗೆ ಬೀರಿದರು.

ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ), ಬಲೂಚ್ ಲಿಬರೇಶನ್ ಫ್ರಂಟ್ (ಬಿಎಲ್‌ಎಫ್) ಮತ್ತು ಬಲೂಚ್ ರಿಪಬ್ಲಿಕನ್ ಆರ್ಮಿ (ಬಿಆರ್‌ಎ) ನಂತಹ ಸಂಘಟನೆಗಳನ್ನು ದೇಶಕ್ಕೆ ಬೆದರಿಕೆ ಎಂದು ಒಪ್ಪಿಕೊಳ್ಳಲು ಅವರು ನಿರಾಕರಿಸಿದರು ಮತ್ತು ಈ ಸಂಘಟನೆಗಳಿಗೆ ಶೀಘ್ರದಲ್ಲೇ ಸೂಕ್ತ ಉತ್ತರ ನೀಡಲಾಗುವುದು ಎಂದು ಹೇಳಿದರು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ.

Continue Reading

DAKSHINA KANNADA

WATCH : ವೇದಿಕೆಗೆ ನುಗ್ಗಿ ವೇಷಧಾರಿಯ ಮೈಮೇಲೆ ಎರಗಿದ ವ್ಯಕ್ತಿ, ವೀಡಿಯೋ ವೈರಲ್

Published

on

ಕಡಬ : ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ  ವ್ಯಕ್ತಿಯೊಬ್ಬರು ವೇದಿಕೆಗೆ ನುಗ್ಗಿ ವೇಷಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.

ಕಡಬದ ನಂದುಗುರಿ ಎಂಬಲ್ಲಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಎಂಬವರ ಮನೆಯಲ್ಲಿ  ಸೇವಾರ್ಥವಾಗಿ ಕಟೀಲು ಮೇಳದವರಿಂದ ಶ್ರೀ ದೇವಿ ಮಹಾತ್ಮೆ ಎಂಬ ಯಕ್ಷಗಾನ ಪ್ರದರ್ಶನ ನಡೆಯುತ್ತಿತ್ತು. ವಿದ್ಯುನ್ಮಾಲಿ ಹಾಗೂ ಅದಿತಿ ಸಂಭಾಷಣೆ ನಡೆಯುತ್ತಿದ್ದ ವೇಳೆ  ಸಭೆಯಿಂದ ಏಕಾಏಕಿ ಓಡೋಡಿ ಬಂದ ವ್ಯಕ್ತಿಯೊಬ್ಬರು ವೇಷಧಾರಿಯ ಮೇಲೆ ಎರಗಿದ್ದಾರೆ.

ಇದನ್ನೂ ಓದಿ : ಕಾಡು ಹಂದಿ ಮಾಂಸದ ಆಮಿಷವೊಡ್ಡಿ ವಂಚನೆ; ಖದೀಮನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

ಏಕಾಏಕಿ ವೇದಿಕೆ ಮೇಲೆ ಹಾರಿ ಬಂದ ವ್ಯಕ್ತಿಯ ವರ್ತನೆಯಿಂದ   ಕಲಾವಿದರು, ಪ್ರೇಕ್ಷಕರು ದಿಗ್ಬ್ರಮೆಗೊಳಗಾಗಿ ಗಲಿಬಿಲಿಗೊಂಡಿದ್ದಾರೆ.  ಕೂಡಲೇ ಆತನನ್ನು ತಡೆದು ಇತರರ ಸಹಕಾರದಿಂದ ಎಳೆದುಕೊಂಡು ದೂರ ಹೋಗಿರುವುದು ವೀಡಿಯೋದಲ್ಲಿದೆ. ವೇದಿಕೆಗೆ ನುಗ್ಗಿದ ವ್ಯಕ್ತಿ ಸ್ಥಳೀಯ ನಿವಾಸಿ ರಾಧಾಕೃಷ್ಣ ಎಂದು ಗುರುತಿಸಲಾಗಿದ್ದು,  ಮೈಮೇಲೆ ಆವೇಶ ಬಂದ ರೀತಿಯಲ್ಲಿ ವರ್ತಿಸಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ.

Continue Reading
Advertisement

Trending

Copyright © 2025 Namma Kudla News

You cannot copy content of this page