Connect with us

LATEST NEWS

ಹೆಂಗಸರ ಬಾಯಲ್ಲಿ ಗುಟ್ಟು ಯಾಕೆ ನಿಲ್ಲೋದಿಲ್ಲ ಗೊತ್ತಾ!?

Published

on

ಓ ದೇವರೇ ಈ ಹೆಂಗಸರು ಯಾಕೆ ಹೀಗೆ, ಎಲ್ಲಾ ವಿಷಯನ್ನು ಬೇಗನೇ ಯಾರಲ್ಲಾದರೂ ಹೇಳಿ ಬಿಡುತ್ತಾರೆ. ಯಾರ ಬಳಿ ಬೇಕಾದರೂ ಗುಟ್ಟಿನ ವಿಚಾರವನ್ನು ಹೇಳಿಕೊಳ್ಳಬಹುದು ಆದರೆ ಈ ಹೆಂಗಸರ ಬಳಿ ಮಾತ್ರ ಯಾವುದೇ ಸೀಕ್ರೆಟ್ ವಿಷಯವನ್ನು ಹಂಚಿಕೊಳ್ಳಬಾರದು. ಅವರು ಗುಟ್ಟಿನ ವಿಚಾರಗಳನ್ನೆಲ್ಲಾ ಊರಿಡಿ ಪ್ರಚಾರ ಮಾಡಿ ಬಿಡುತ್ತಾರೆ ಎಂದು ಹೇಳುವ ಮಾತನ್ನು ನಾವೆಲ್ಲರೂ ಕೇಳಿರಬಹುದು. ಒಂದು ಲೆಕ್ಕದಲ್ಲಿ ಅದು ನಿಜಾನೇ ಅಲ್ವಾ…?

ಅಷ್ಟಕ್ಕೂ ಈ ಮಹಿಳೆಯರ ಬಾಯಲ್ಲಿ ಗುಟ್ಟುಗಳು ಯಾಕೆ ನಿಲ್ಲೋದಿಲ್ಲ ಎಂದು ನಿಮಗೆ ಗೊತ್ತಾ? ಇದರ ಹಿಂದೆಯೂ ಒಂದು ಕಾರಣವಿದೆ. ಈ ಕುರಿತ ಕುತೂಹಲಕಾರಿಯಾದ ಕಥೆಯೊಂದಿದೆ. ಹೆಂಗಸರ ಬಾಯಲ್ಲಿ ಗುಟ್ಟು ನಿಲ್ಲದೇ ಇರೋದಕ್ಕೂ ಮಹಾಭಾರತಕ್ಕೂ ಸಂಬಂಧವಿದೆಯಂತೆ. ಈ ರಹಸ್ಯ ಏನು ಎಂಬುದನ್ನು ನೋಡೋಣ.

ಯುಧಿಷ್ಟಿರನ ಶಾಪ!

ಹೆಂಗಸರ ಬಾಯಲ್ಲಿ ಗುಟ್ಟು ಯಾಕೆ ನಿಲ್ಲಲ್ಲ ಎಂದರೆ ಇದು ಮಹಿಳೆಯರಿಗೆ ಯುಧಿಷ್ಟಿರ ಕೊಟ್ಟಂತಹ ಶಾಪವಂತೆ. ಈ ಶಾಪದ ಕಾರಣವೆಂದರೆ ಮಹಾಭಾರತ ಯುದ್ಧ ಕೊನೆಗೊಂಡ ನಂತರ ಪಾಂಡವರು ಧೃತರಾಷ್ಟನ ಬಳಿ ಬರುತ್ತಾರೆ. ಬಳಿಕ ಯುಧಿಷ್ಟಿರ ಯುದ್ಧದಲ್ಲಿ ಮಡಿದವರ ಮತ್ತು ಕಾಣೆಯಾದವರ ಸಂಖ್ಯೆಯನ್ನು ಪಡೆದುಕೊಂಡು ಯುದ್ಧದಲ್ಲಿ ಸಾವನ್ನಪ್ಪಿದವರನ್ನೆಲ್ಲಾ ಶಾಸ್ತ್ರ ಸಂಪ್ರದಾಯದ ಪ್ರಕಾರ ಸುಟ್ಟು, ಗಂಗೆಯಲ್ಲಿ ಅವರ ಶ್ರಾದ್ಧ ಕಾರ್ಯ ಮಾಡಿ ತರ್ಪಣ ಬಿಡುತ್ತಾನೆ.

ಆ ಸಂದರ್ಭದಲ್ಲಿ ಕೌರವ ಸ್ತ್ರೀಯರು ತಮ್ಮ ತಮ್ಮ ಪತಿಯರಿಗೆ ಕೊನೆಯ ಬಾರಿ ಬಾಯಿಗೆ ನೀರು ಬಿಡುತ್ತಾರೆ. ಆದರೆ ಕರ್ಣನಿಗೆ ಯಾರು ತರ್ಪಣ ಬಿಡದಂತಾದಾಗ ಕುಂತಿ ಪಾಂಡವರಿಗೆ ಮೆಲ್ಲನೆ ಹೇಳುತ್ತಾಳೆ, ʼಕರ್ಣ ನಿಮ್ಮ ಜೇಷ್ಠ ಸಹೋದರ. ಅವನಿಗೂ ಒಂದು ತರ್ಪಣ ಬಿಡಿ ಎಂದು. ಮೊದಲೇ ಪುತ್ರರು ಮತ್ತು ಹಿತೈಷಿಗಳನ್ನು ಕಳೆದುಕೊಂಡು ದುಃಖದಲ್ಲಿದ್ದ ಪಾಂಡವರಿಗೆ ಕುಂತಿಯ ಈ ಮಾತು ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಕರ್ಣ ನಮ್ಮ ಸಹೋದರ ಹೇಗಾಗುತ್ತಾನೆ ಎಂದು ಪಾಂಡವರು ಕುಂತಿಯ ಬಳಿ ಪ್ರಶ್ನೆ ಮಾಡುತ್ತಾರೆ. ಆಗ ಕುಂತಿ ತನ್ನ ಹಿಂದಿನ ಕಥೆಯನ್ನು ಹೇಳುತ್ತಾಳೆ. ಈ ಕಥೆಯನ್ನು ಕೇಳಿ ತೀವ್ರ ಆಘಾತಕ್ಕೊಳಗಾದ ಯುಧಿಷ್ಠಿರ, ಅಮ್ಮ ನೀವು ಈ ಸತ್ಯವನ್ನು ಮೊದಲೇ ಹೇಳಿದ್ದರೆ, ಈ ಮಹಾನ್ ಯುದ್ಧ ನಡೆಯುವುದೇ ತಪ್ಪಿ ಹೋಗುತ್ತಿತ್ತು. ಇದನ್ನು ಏಕೆ ಮುಚ್ಚಿಟ್ಟೆ ಎಂದು ತಾಯಿಯ ಬಳಿ ಯುಧಿಷ್ಠಿರ ದುಃಖದಿಂದ ಹೇಳುತ್ತಾನೆ.

ಹೀಗೆ ಕೊನೆಯಲ್ಲಿ ಯುಧಿಷ್ಠಿರ ಸೋದರ ತರ್ಪಣ ಬಿಟ್ಟ ಮೇಲೆ ‘ಇನ್ನು ಮುಂದೆ ಹೆಂಗಸರ ಬಾಯಲ್ಲಿ ಯಾವುದೇ ಗುಟ್ಟುಗಳು ನಿಲ್ಲೋದು ಬೇಡʼ ಎಂದು ಕೋಪದಿಂದ ಹೆಣ್ಣು ಕುಲಕ್ಕೆ ಶಾಪ ನೀಡುತ್ತಾನೆ. ಈ ಕಾರಣದಿಂದಲೇ ಮಹಿಳೆಯರ ಬಾಯಲ್ಲಿ ಯಾವುದೇ ಗುಟ್ಟುಗಳು ನಿಲ್ಲುವುದಿಲ್ಲವಂತೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಏರ್‌ ಇಂಡಿಯಾ ವಿಮಾನ ದುರಂತ: ಸಹೋದರನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ವಿಶ್ವಾಸ್ ರಮೇಶ್‌

Published

on

ಮಂಗಳೂರು/ಅಹಮದಾಬಾದ್: ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬ್ರಿಟನ್ ಪ್ರಜೆ ವಿಶ್ವಾಸ್ ಕುಮಾರ್ ರಮೇಶ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಅದೇ ದುರಂತದಲ್ಲಿ ಮೃತಪಟ್ಟ ಸಹೋದರ ಅಜಯ್ ರಮೇಶ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.


ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಲು ಬ್ರಿಟನ್‌ನಿಂದ ದಿಯುಗೆ ಬಂದಿದ್ದ ಸಹೋದರರು ಜೂನ್ 12ರಂದು ಮರಳಿ ಲಂಡನ್‌ಗೆ ಹೊರಟಿದ್ದರು. ಈ ವೇಳೆ ವಿಮಾನ ಅಪಘಾತ ಸಂಭವಿಸಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಮಾನದಲ್ಲಿ ರಮೇಶ್ ತುರ್ತು ನಿರ್ಗಮನ ದ್ವಾರದ ಪಕ್ಕದಲ್ಲಿ 11A ನಲ್ಲಿ ಕುಳಿತಿದ್ದರು. ಅಪಘಾತದ ಸಂದರ್ಭದಲ್ಲಿ ಅವರ ಸೀಟು ಬೇರ್ಪಟ್ಟು ದೂರ ಹಾರಿತ್ತು. ಹೀಗಾಗಿ ಬೆಂಕಿಯಿಂದ ಪಾರಾಗಿದ್ದರು. ಸೀಟಿನ ಸಮೇತ ಕೆಳಗೆ ಹಾರಿದ್ದರು. ವಿಮಾನ ತುಂಡಾಗಿ ಸೀಟು ಕೂಡ ಕಳಚಿಬಂದಿತ್ತು ಎಂದು ವೈದ್ಯರಿಗೆ ರಮೇಶ್​ ತಿಳಿಸಿದ್ದರು.

ಇದನ್ನೂ ಓದಿ: ಅಹಮದಾಬಾದ್ ವಿಮಾನ ದುರಂತ; ಕೊನೆಗೂ ಎರಡನೇ ಬ್ಲ್ಯಾಕ್​ಬಾಕ್ಸ್​ ಪತ್ತೆ

ತಾನು ಇಳಿದ ಸ್ಥಳ ತಗ್ಗಾಗಿತ್ತು, ಸೀಟ್ ಬೆಲ್ಟ್​ ತೆಗೆದೆ ಒಂದು ಕ್ಷಣ ಮೈಯೆಲ್ಲಾ ಕಂಪಿಸಿತ್ತು, ಆದರೆ ನಾನು ಭೂಮಿಗೆ ತುಂಬಾ ಹತ್ತಿರವಾಗಿದ್ದೆ, ಹಾಗಾಗಿ ಹೊರಬರಲು ಪ್ರಯತ್ನಿಸಿದೆ ಎಂದು ತಿಳಿಸಿದ್ದಾರೆ. ವಿಮಾನ ಅಪಘಾತದ ಸ್ವಲ್ಪ ಸಮಯದ ನಂತರ ಅವರು ಬಿಜೆ ವೈದ್ಯಕೀಯ ಕ್ಯಾಂಪಸ್‌ನಿಂದ ಹೊರಬರುತ್ತಿರುವ ವಿಡಿಯೋ ಈ ಹಿಂದೆ ವೈರಲ್ ಆಗಿತ್ತು.

ವಿಪರ್ಯಾಸವೆಂದರೆ ವಿಶ್ವಾಸ್ ಅವರ ಸಹೋದರ ಅಜಯ್ ರಮೇಶ್ ಸಾವನ್ನಪ್ಪಿದ್ದರು. ಹೀಗಾಗಿ ಅವರ ಡಿಎನ್‌ಎ ಗುರುತಿಸಲಾಗಿದ್ದು, ಇಂದು ದಿಯುವಿನಲ್ಲಿ ಬೆಳಿಗ್ಗೆ ಅಜಯ್ ಅವರ ಅಂತ್ಯಕ್ರಿಯೆ ನಡೆದಿದ್ದು, ವಿಶ್ವಾಸ್ ಕೂಡ ಅಲ್ಲಿ ಹಾಜರಿದ್ದರು ಎಂದು ವರದಿಯಾಗಿದೆ.

Continue Reading

LATEST NEWS

ಇನ್ನು ಮುಂದೆ 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

Published

on

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದೆ ಪಯಾಣಕ್ಕೆ ಅನುಕೂಲವಾಗುವಂತೆ ಫಾಸ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ.

3 ಸಾವಿರ ರೂಪಾಯಿಗೆ ವಾರ್ಷಿಕ ಟೋಲ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.

READ IN ENGLISH : https://www.nammakudlaenglish.com/annual-toll-pass-for-%e2%82%b93000-from-now-on/

ಇದನ್ನೂ ಓದಿ: 6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆ ಯಾಗಲಿದೆ.

Continue Reading

LATEST NEWS

ಉಡುಪಿ: ಶಾಲಾ ಬಸ್ ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

Published

on

ಉಡುಪಿ: ಖಾಸಗಿ ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ನಡೆದಿದೆ.


ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವಾಗ ಹಿಂದಿನಿಂದ ಬಂದ ಲಾರಿ ಡಿ*ಕ್ಕಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

READ IN ENGLISH : https://www.nammakudlaenglish.com/udupi-lorry-rams-into-school-bus-students-sustain-minor-injuries/

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಅಪಘಾತದ ಸಂದರ್ಭದಲ್ಲಿ ವ್ಯಾನ್‌ನಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page