Connect with us

LATEST NEWS

ಈ ನಂಬರ್‌ನಿಂದ ಫೋನ್ ಬಂದ್ರೆ ರಿಸೀವ್ ಮಾಡಬೇಡಿ.. ನಿಮ್ಮ ಹಣ ಮಂಗಮಾಯ

Published

on

ಮಂಗಳೂರು: ಫೋನ್‌ನಲ್ಲಿ ಕರೆ ಮಾಡಿ ಹಣ ಕಳೆದುಕೊಂಡ ಅದೆಷ್ಟೋ ಸೈಬರ್ ಅಪರಾಧಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಮೋಸ ಮಾಡುವ ವಂಚಕರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದಾರೆ. ಕೇವಲ ಫೋನ್ ಕಾಲ್ ಮೂಲಕ ಮಂಗ ಮಾಡುವ ವಿಧಾನವನ್ನು ಕಂಡುಕೊಂಡಿದ್ದಾರೆ.

+29 ನಿಂದ ಆರಂಭವಾಗುವ ಸಂಖ್ಯೆ:

ನಿಮಗೆ +29 ರಿಂದ ಆರಂಭವಾಗುವ ಸಂಖ್ಯೆಗಳಿಂದ ಫೋನ್ ಕಾಲ್ ಬಂದರೆ ಎಚ್ಚರದಿಂದಿರಿ. ಈ ಸಂಖ್ಯೆಯಿಂದ ಬರುವ ಫೋನ್ ಕಾಲ್‌ನಲ್ಲಿ ನಿಮ್ಮದೇ ಕುಟುಂಬದ ಸದಸ್ಯರು ಅಥವಾ ಸಂಬಂಧಿ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿಕೊಂಡು ಹಣಕ್ಕಾಗಿ ಬೇಡಿಕೆ ಇಡುವ ಬೆದರಿಕೆ ಹಾಕಲಾಗುತ್ತಿದೆ. ಪೊಲೀಸ್ ಕೇಸ್‌ನ ಹೆಸರು ಕೇಳಿದ ತಕ್ಷಣ ಜನರು ಅವರನ್ನು ನಂಬಿ ಕೇಳಿದಷ್ಟು ಹಣ ಕಳುಹಿಸಿ ಮೋಸ ಹೋದ ಉದಾಹರಣೆಗಳಿವೆ.

ಆದರೆ ಫೋನ್ ಇಟ್ಟ ಮೇಲೆ ನಿಮ್ಮ ಕುಟುಂಬದ ವ್ಯಕ್ತಿ ಅಥವಾ ಸಂಬಂಧಿಕರಿಗೆ ಹಾಗೆ ಏನೂ ಆಗೇ ಇರುವುದಿಲ್ಲ ಎನ್ನುವ ವಿಚಾರ ತಿಳಿಯುತ್ತದೆ. ಆದರೆ ಅಷ್ಟರೊಳಗೆ ಸೈಬರ್ ವಂಚನೆಗೆ ಬಲಿಯಾಗಿರುತ್ತಾರೆ. ಇದರಿಂದ ತಪ್ಪಿಸಿಕೊಳ್ಳಲು ಇಂತಹ ಫೋನ್ ನಂಬರ್‌ನಿಂದ ಕಾಲ್ ಬಂದರೆ ಅದನ್ನು ರೀಸಿವ್ ಮಾಡಬಾರದು.

ಸೈಬರ್ ವಂಚನೆ ಪ್ರಕರಣದಲ್ಲಿ ಪೊಲೀಸರು ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಯ ವಿಷಯದಲ್ಲಿ ಹೊಸ ಟ್ರೆಂಡ್ಗಳು ಬರುತ್ತಿವೆ. ಪ್ರಸ್ತುತ ಭಾರತೀಯ ಸಂಖ್ಯೆಗಳಲ್ಲದ +29 ಶ್ರೇಣಿಯ ಸಂಖ್ಯೆಗಳಿಂದ ಕರೆಗಳು ಬರುತ್ತಿವೆ.

ಹೀಗೆ ಬಂದ ಫೋನ್‌ನಲ್ಲಿ ನಿಮ್ಮ ಮಗ/ಮಗಳು ಅಥವಾ ನಿಮ್ಮ ಸಂಬಂಧಿ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗುತ್ತದೆ. ಕರೆ ಮಾಡುವವರು ತಮ್ಮ ಸಂಖ್ಯೆಯಲ್ಲಿ ಪೊಲೀಸ್ ಅಥವಾ ಅಪರಾಧ ವಿಭಾಗದ ಹೆಸರುಗಳನ್ನು ಬಳಸುತ್ತಾರೆ. ಅಂತಹ ಪರಿಸ್ಥಿತಿಯಲ್ಲಿ, ಜನರು ತಕ್ಷಣ ಭಯಭೀತರಾಗುತ್ತಾರೆ.

ಅದರ ನಂತರ ಕರೆ ಮಾಡುವವರು ವ್ಯಕ್ತಿಗೆ ಬದಲಾಗಿ ಹಣವನ್ನು ಕೇಳುತ್ತಾರೆ. ಹಾಗಾಗಿ ನಿಮ್ಮ ಮಗ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದರೆ ಅಥವಾ ನಿಮ್ಮ ಸಂಬಂಧಿ ಪ್ರಕರಣದಲ್ಲಿ ಭಾಗಿಯಾಗಿದ್ದರೆ ತಕ್ಷಣ ಹಣ ಕಳುಹಿಸಿ ಎಂಬ ಕರೆಗಳನ್ನು ನಂಬಬೇಡಿ.

ಪೊಲೀಸರ ಪ್ರಕಾರ ಯಾವುದೇ ಕಾನೂನು ಜಾರಿ ಸಂಸ್ಥೆ ಇಂತಹ ಫೋನ್ ಕರೆಗಳನ್ನು ಮಾಡುವುದಿಲ್ಲ. ಯಾರಾದರೂ ಈ ರೀತಿಯ ಕರೆಯನ್ನು ಸ್ವೀಕರಿಸಿದರೆ ಮೊದಲು ನಿಮ್ಮ ಪರಿಚಯಸ್ಥರಿಗೆ ಕರೆ ಮಾಡಿ. ಅವರ ಯೋಗಕ್ಷೇಮವನ್ನು ತಿಳಿದುಕೊಂಡು ನಂತರ ಸುಲಭವಾಗಿ ಸಂಖ್ಯೆ 1930, ಸೈಬರ್ ಸೆಲ್ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ಮತ್ತು ವರದಿಯನ್ನು ಸಲ್ಲಿಸಿ.

ಯಾವುದೇ ಕಾನೂನು ಜಾರಿ ಸಂಸ್ಥೆಯು ಇಂತಹ ಕರೆಗಳನ್ನು ಮಾಡುವುದಿಲ್ಲ ಅಥವಾ ಯಾವುದೇ ವ್ಯಕ್ತಿಗೆ ಹಣವನ್ನು ಬೇಡಿಕೆ ಮಾಡುವುದಿಲ್ಲ. ಹಣ ಕೇಳುವ ಈ ರೀತಿಯ ಫೋನ್ ಕರೆಗಳು ಬಂದರೆ ವಂಚಕರ ಫೋನ್ ಎಂದೇ ಭಾವಿಸಿ ಕರೆಯನ್ನು ಸ್ವೀಕರಿಸಬೇಡಿ.

LATEST NEWS

ಬೆಂಗಳೂರಿನಲ್ಲಿ ಕೋವಿಡ್‌ನಿಂದ ವ್ಯಕ್ತಿ ಸಾವು

Published

on

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆಯೂ ದ್ವಿಗುಣಗೊಳ್ಳುತ್ತಿದೆ.

ಇದೀಗ ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಕೊರೋನಾ ಬುಲೆಟಿನ್‌ನಲ್ಲಿ ಬೆಂಗಳೂರಿನಲ್ಲಿ ಕೋವಿಡ್-19ಗೆ ಒಬ್ಬ ಬಲಿಯಾಗಿದ್ದು, ರಾಜ್ಯದಲ್ಲಿ ಇಂದು 5 ಹೊಸ ಕೇಸ್‌ಗಳು ದಾಖಲಾಗಿವೆ. ಇದರ ಬೆನ್ನಲ್ಲ ಸರ್ಕಾರ ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಜನರಿಗೆ ಒತ್ತಾಯಿಸುತ್ತಿದೆ.

ಇದನ್ನೂ ಓದಿ: ಮಳೆ ತಂದ ಆವಾಂತರ; ರಸ್ತೆ ಕಾಣದೆ ಮೀನಿನ ಲಾರಿ ಪಲ್ಟಿ

ಹೌದು, ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಇಂದು ಒಂದೇ ದಿನ 5 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿವೆ ಹಾಗೂ ಬೆಂಗಳೂರಿನಲ್ಲಿ ಕೋವಿಡ್ 19 ಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಸದ್ಯ ರಾಜ್ಯದಲ್ಲಿ ಒಟ್ಟು 38 ಸಕ್ರೀಯ ಪ್ರಕರಣಳಿದ್ದು, ಇದರಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 32 ಕೇಸ್‌ಗಳು ದಾಖಲಾಗಿವೆ.

Continue Reading

DAKSHINA KANNADA

ಪ್ರಚೋದನಕಾರಿ ಪೋಸ್ಟ್: 4 ಇನ್ಸ್ಟಾಗ್ರಾಂ, 1 ಪೇಸ್ಬುಕ್ ಪೇಜ್ ರದ್ದು

Published

on

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 4 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜ್‌ಗಳ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಈ ಪೇಜ್‌ಗಳನ್ನು ಡಿಆ್ಯಕ್ಟಿವೇಟ್ ಮಾಡಲಾಗಿದೆ.

“ವಿಎಚ್‌ಪಿ ಬಜರಂಗದಳ ಅಶೋಕನಗರ’ ಮತ್ತು “ಶಂಖನಾದ’ ಇನ್‌ ಸ್ಟಾಗ್ರಾಂ ಪೇಜ್ ವಿರುದ್ಧ ಉರ್ವ ಪೊಲೀಸ್ ಠಾಣೆ, “ಡಿಜೆ ಭರತ್ 2008” ಇನ್‌ಸ್ಟಾಗ್ರಾಂ ಪೇಜ್ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ, “ಕರಾವಳಿ ಅಫೀಶಿಯಲ್ ಇನ್‌ಸ್ಟಾಗ್ರಾಂ ಪೇಜ್” ವಿರುದ್ಧ ಪಾಂಡೇಶ್ವರ ಠಾಣೆ ಮತ್ತು “ಆಶಿಕ್ ಮೈಕಾಲ’ ಫೇಸ್‌ಬುಕ್ ಪೇಜ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: WATCH : ಸಿನಿಮೀಯ ರೀತಿಯಲ್ಲಿ ನಡೆದಿತ್ತು ಕಾರ್ ಚೇಸಿಂಗ್! ಸುಹಾಸ್ ಹ*ತ್ಯೆಯ ಮತ್ತೊಂದು ಸಿಸಿ ಟಿವಿ ವೀಡಿಯೋ ವೈರಲ್

ಈ ಪ್ರಕರಣಗಳ ತನಿಖೆಯನ್ನು ಸೆನ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಉದ್ರೇಕಕಾರಿ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿದ್ದ 6 ಇನ್‌ಸ್ಟಾಗ್ರಾಂ ಹಾಗೂ 1 ಪೇಸ್‌ಬುಕ್ ಪೇಜನ್ನು ರದ್ದುಗೊಳಿಸಲಾಗಿದೆ.

Continue Reading

LATEST NEWS

ಮಳೆ ತಂದ ಆವಾಂತರ; ರಸ್ತೆ ಕಾಣದೆ ಮೀನಿನ ಲಾರಿ ಪಲ್ಟಿ

Published

on

ಹಾಸನ: ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಮೀನು ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ರಾಟೆ ಮನೆ ಬಳಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ಮೀನುಗಳನ್ನು ಸಾಗಿಸುತ್ತಿದ್ದ KA-02-AB-479 ನಂಬರ್‌ನ ಲಾರಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾಗಿದೆ.

ಇದನ್ನೂ ಓದಿ: ಮಂಗಳೂರು: ಬೈಕ್ ಸ್ಕಿಡ್ ಆಗಿ ಸವಾರ ಸಾ*ವು

ಇದರಿಂದಾಗಿ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸಕಲೇಶಪುರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page