Connect with us

BANTWAL

ಬಂಟ್ವಾಳ: ಕಲ್ಲಡ್ಕದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ

Published

on

ಬಂಟ್ವಾಳ: ತಾಲೂಕಿನ ಕಲ್ಲಡ್ಕದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ.
ದೇವಸ್ಥಾನ ಪ್ರವೇಶಿಸುವ ಮುಖ್ಯದ್ವಾರದಲ್ಲಿ ‘ಹಿಂದೂ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನದ ಒಳಗೆ ಪ್ರವೇಶಿಸಬೇಕಾಗಿ ವಿನಂತಿ’ ಎಂಬ ಫಲಕವನ್ನು ವಿಶ್ವಹಿಂದು ಪರಿಷದ್, ಬಜರಂಗದಳ ಕಲ್ಲಡ್ಕ ವಲಯದ ವತಿಯಿಂದ ಅಳವಡಿಸಲಾಯಿತು.


ಜೊತೆಗೆ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನ ಪ್ರವೇಶಿಸುವಂತೆ ಭಕ್ತಾಧಿಗಳಿಗೆ ಸೂಚನೆ ನೀಡಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಲಡ್ಕ ವಲಯದ ವತಿಯಿಂದ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ ನಿಟಿಲಾಪುರ ದೇವಾಲಯದ ಅಧ್ಯಕ್ಷರು ಮತ್ತು ವ್ಯವಸ್ಥಾಪನ ಸಮಿತಿಗೆ ಮನವಿ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ಬಜರಂಗದಳ ವಿಟ್ಲ ಪ್ರಖಂಡ ಸಹಗೋರಕ್ಷ ಪ್ರಮುಖ್ ಅಮಿತ್ ಕಲ್ಲಡ್ಕ, ವಿಶ್ವ ಹಿಂದೂ ಪರಿಷದ್ ಕಲ್ಲಡ್ಕ ವಲಯದ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿಗಾರ್, ಕಾರ್ಯದರ್ಶಿ ನವೀನ್ ಮಾಡಲ, ಬಜರಂಗದಳ ಕಲ್ಲಡ್ಕ ವಲಯದ ಸಂಚಾಲಕ ಮೋಹನದಾಸ್ ಕಲ್ಲಡ್ಕ ಹಾಗೂ ವಲಯದ ಬಜರಂಗದಳದ ಕಾರ್ಯಕರ್ತರು ಉಪಸ್ಥಿತರಿದ್ದರು.

BANTWAL

ಬಂಟ್ವಾಳ: ಅಕ್ರಮ ಗೋಹತ್ಯೆ; ಓರ್ವನ ಬಂಧನ

Published

on

ಮಂಗಳೂರು/ಬಂಟ್ವಾಳ: ಅಕ್ರಮವಾಗಿ ಜಾನುವಾರು ವಧೆ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ ಘಟನೆ ರವಿವಾರ(ನ.16) ಬಂಟ್ವಾಳ ತಾಲೂಕು ಅರಳ ಗ್ರಾಮದಲ್ಲಿ ನಡೆದಿದೆ.


ಅರಳ ಗ್ರಾಮದ ನಿವಾಸಿ ಮಯ್ಯದ್ದಿ (57) ಬಂಧಿತ ಆರೋಪಿ. ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.

ಮನೆಯ ಆವರಣದಲ್ಲಿರುವ ಶೆಡ್ ಬಳಿ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಮಾಂಸ ಮಾಡುತ್ತಿರುವುದು ಕಂಡುಬಂದಿದೆ.

ಶೆಡ್‌ನಲ್ಲಿದ್ದ ಮೂರು ಹಸುಗಳನ್ನು ಮತ್ತು ಒಂದು ಕರುವನ್ನು ರಕ್ಷಿಸಲಾಗಿದೆ. ಸ್ಥಳದಿಂದ ಸುಮಾರು 150 ಕೆ.ಜಿ. ಮಾಂಸ ವನ್ನು ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ತಲೆಮರೆಸಿಕೊಂಡ ಆರೋಪಿಗಳ ಪತ್ತೆಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ತಂದೆಯ ಕಾರಿನಡಿ ಸಿಲುಕಿ ಸಾ*ವನ್ನಪ್ಪಿದ ಮಗು

ಆರೋಪಿಗಳು ಪರವಾನಿಗೆ ಇಲ್ಲದೇ ಮನೆಯ ಶೆಡ್ನಲ್ಲಿ ಜಾನುವಾರುಗಳನ್ನು ವಧೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ಈತನ ಮನೆ ಹಾಗೂ ಶೆಡ್‌ನ ಆವರಣವನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಜಪ್ತಿ ಮಾಡಿ, ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗೆ ಮುಟ್ಟುಗೋಲು ಹಾಕುವಂತೆ ವರದಿ ಸಲ್ಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Continue Reading

BANTWAL

ಬಿ.ಸಿ.ರೋಡ್‌ ಸರ್ಕಲ್ ನಲ್ಲಿ ಭೀ*ಕರ ಕಾರು ಅಪ*ಘಾತ; ಮೂವರು ಸಾ*ವು, ಆರು ಮಂದಿಗೆ ಗಂ*ಭೀರ ಗಾಯ

Published

on

ಬಂಟ್ವಾಳ: ಬಿಸಿರೋಡ್‌ ಸರ್ಕಲ್ ನಲ್ಲಿ ಇಂದು ಮುಂಜಾನೆ ವೇಳೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ.


ಬೆಂಗಳೂರಿನ 64 ವರ್ಷ ಪ್ರಾಯದ ರವಿ, 74 ವರ್ಷ ಪ್ರಾಯದ ನಂಜಮ್ಮ ಮತ್ತು 23 ವರ್ಷ ಪ್ರಾಯದ ರಮ್ಯ ಮೃತ ಪಟ್ಟವರು. ಕೀರ್ತಿ, ಸುಶೀಲ, ಬಿಂದು ಮತ್ತು ಪ್ರಶಾಂತ್‌ ಎಂಬ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ಸುಬ್ರಹ್ಮಣ್ಯ ಮತ್ತು ಕಿರಣ್ ಎಂಬಿಬ್ಬರು ಸಾಮಾನ್ಯ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಇನ್ನೋವಾ ಕಾರಿನಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕೃಷ್ಣನ ದರ್ಶನಕ್ಕೆಂದು ಹೊರಟಿದ್ದರು ಎಂದು ಹೇಳಲಾಗಿದೆ. ಒಂಬತ್ತು ಮಂದಿಯಲ್ಲಿ ರಮ್ಯಾ ಅವರು ಪೋಲೀಸ್ ಅಧಿಕಾರಿಯೊಬ್ಬರ ಪತ್ನಿ ಎಂದು ಹೇಳಲಾಗಿದೆಯಾದರೂ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.

ಮುಂಜಾನೆ ಸುಮಾರು 4.40 ರ ಸಮಯದಲ್ಲಿ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ಬಿಸಿರೋಡಿನ ಎನ್.ಜಿ.ಸರ್ಕಲ್ ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಓರ್ವ ಸ್ಥಳದಲ್ಲಿಯೇ ಮೃತಪಟ್ಟ್ಟಿದ್ದು ಉಳಿದಂತೆ ಇಬ್ಬರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಕೆಲಸ ಮಾಡುತ್ತಿದ್ದ ಹೋಟೆಲ್‌ನಲ್ಲಿಯೇ ನಡೆಯಿತು ಯುವಕನ ಭೀಕರ ಹ*ತ್ಯೆ

ಅವೈಜ್ಞಾನಿಕ ಮಾದರಿಯ ಸರ್ಕಲ್ ಅಪಘಾತಕ್ಕೆ ಕಾರಣ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದ್ದು, ಬಿ.ಸಿ.ರೋಡು – ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೇಳೆ ನಿರ್ಮಾಣವಾದ ನೂತನ‌ ಸರ್ಕಲ್ ಗೆ ಪ್ರಥಮ ಬಲಿಯಾಗಿದೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಸುತೇಶ್ ಹಾಗೂ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

BANTWAL

ಬಂಟ್ವಾಳ: ಅಶಕ್ತ ಕುಟುಂಬಕ್ಕೆ ಯುವವಾಹಿನಿ ಸಂಸ್ಥೆಯಿಂದ ಮನೆ ಹಸ್ತಾಂತರ

Published

on

ಬಂಟ್ವಾಳ: ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ ಮಾಣಿ ಘಟಕದ ಆತಿಥ್ಯದಲ್ಲಿ  ಅನಂತಾಡಿ ಗ್ರಾಮದ ಪೆಲತ್ತಡಿ ಕಮಲ ಪೂಜಾರ್ತಿ‌ಯವರಿಗೆ “ಯುವಾಶ್ರಯ, ”  ಮನೆ ಹಸ್ತಾಂತರ ಹಾಗೂ ತುಳಸಿ ಪೂಜೆ ಕಾರ್ಯಕ್ರಮ ಬುಧವಾರ ನಡೆಯಿತು. ಅಖಿಲ ಭಾರತ ಬಿಲ್ಲವ ಯೂನಿಯನ್ (ರಿ.) ಅಧ್ಯಕ್ಷ ಅಧ್ಯಕ್ಷ ನವೀನ್ ಚಂದ್ರ ಡಿ ಸುವರ್ಣ ಸಮಾರಂಭ ಉದ್ಘಾಟಿಸಿ ಶುಭ ಹಾರೈಕೆ ಮಾಡಿದರು.

ನೂತನ ಮನೆಯ ಕೀ ಹಸ್ತಾಂತರ ಮಾಡಿ ಮಾತನಾಡಿದ ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿ ಒಂದು ಬಡ ಕುಟುಂಬಕ್ಕೆ ಆಶ್ರಯವೆಂದರೆ ಅವರ ಬದುಕಿನ ಅತ್ಯಂತ ದೊಡ್ಡ ಕನಸು. ಆ ಕನಸನ್ನು ನಿಜಗೊಳಿಸುವ ಮೂಲಕ ಯುವವಾಹಿನಿಯ  ಯುವಕರು ಸಾಮಾಜಿಕ ಜವಾಬ್ದಾರಿ ಪ್ರದರ್ಶಿಸಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಮಾತನಾಡಿ ಯುವವಾಹಿನಿಯ ಪ್ರತಿಷ್ಠಿತ ಘಟಕವಾದ ಮಾಣಿ ಘಟಕದ ಸಾಧನೆ ಶ್ಲಾಘನೀಯ ಎಂದು ಹೇಳಿದರು. ಆಶ್ರಯ ಮನೆಯ ಫಲಾನುಭವಿಗಳ ಪರವಾಗಿ ಸತೀಶ್ ಪೂಜಾರಿ ಕೃತಜ್ಞತೆ ಸಲ್ಲಿಸಿದರು. ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ಶಿವರಾಜ್ ಪಿ ಆರ್  ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕ ರವಿಚಂದ್ರರವರನ್ನು ಫಲಾನುಭವಿಗಳ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮನೆ ನಿರ್ಮಿಸಲು ಸಹಕಾರ ನೀಡಿದ ದಾನಿಗಳನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ, ಮಾಣಿ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ಸುರೇಶ್ ಪೂಜಾರಿ ಸೂರ್ಯ, ವಕೀಲ ರಂಜಿತ್ ಪೂಜಾರಿ ಮೈರ ಸೇರಿದಂತೆ ಮಾಣಿ ಘಟಕದ ಸಮಾಜ ಸೇವಾ ನಿರ್ದೇಶಕ ಕಿರಣ್ ಗೋಳಿಕಟ್ಟೆ ಉಪಸ್ಥಿತರಿದ್ದರು.

 

 

 

Continue Reading
Advertisement

Trending

Copyright © 2025 Namma Kudla News

You cannot copy content of this page