Connect with us

STATE

ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಓರ್ವ ಬಲಿ

Published

on

ಕೆಂಭಾವಿ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಪುರಸಭೆ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿರುವ ದುರಂತವೊಂದು ಯಾದಗಿರಿ ಜಿಲ್ಲೆಯ ಕೆಂಭಾವಿಯಲ್ಲಿ ನಡೆದಿದೆ.


ಪರಸನಹಳ್ಳಿ ನಿವಾಸಿ, ಹಣಮಂತ ಛಲವಾದಿ(45) ಮೃತರು.

ಕೆಂಭಾವಿ ಪರಸಭೆಯಲ್ಲಿ ವಾಲ್‌ ಮ್ಯಾನ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಇವರು ಎಂದಿನಂತೆ ಬೆಳಿಗ್ಗೆ ಪರಸನಹಳ್ಳಿ ಗ್ರಾಮದಿಂದ ಕೆಂಭಾವಿ ಪುರಸಭೆಗೆ ಹಾಜರಾಗಲು ಕೆಂಭಾವಿಗೆ ಬರುತ್ತಿರುವಾಗ ಈ ದುರಂತ ನಡೆದಿದೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದ ಚಾಲಕ; ಓರ್ವ ವ್ಯಕ್ತಿಗೆ ಗಂಭೀರ ಗಾಯ

ಘಟನೆಯ ಕುರಿತು ಕೆಂಭಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS

ಸಾರಿಗೆ ಬಸ್ ಪ*ಲ್ಟಿಯಾಗಿ ಕಂಡಕ್ಟರ್ ಸಾ*ವು; ಹಲವು ಪ್ರಯಾಣಿಕರಿಗೆ ಗಾ*ಯ

Published

on

ಮಂಗಳೂರು/ರಾಯಚೂರು : ಸಾರಿಗೆ ಬಸ್ ಪ*ಲ್ಟಿಯಾಗಿ ನಿರ್ವಾಹಕ ಮೃ*ತಪಟ್ಟ ಘಟನೆ ಇಂದು(ಡಿ.09) ಬೆಳಗ್ಗೆ ರಾಯಚೂರಿನ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ. ಬಸವರಾಜ್  ಮೃತ ಕಂಡಕ್ಟರ್.

ಕೆಎಸ್‌ಆರ್‌ಟಿಸಿ ಬಸ್ ಅಂಜಳ ಗ್ರಾಮದಿಂದ ದೇವದುರ್ಗಕ್ಕೆ ಸಾಗುತ್ತಿತ್ತು. ಈ ವೇಳೆ ಅಂಚೇಸುಗೂರು ಕಾಲುವೆಯ ಸೇತುವೆ ದಾಟುವಾಗ ಈ ದುರಂ*ತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪ*ಲ್ಟಿಯಾಗಿದ್ದು, ಪರಿಣಾಮ ಬಸ್‌ ನಲ್ಲಿದ್ದ 40 ಜನರ ಪೈಕಿ 38 ಪ್ರಯಾಣಿಕರು ಗಾ*ಯಗೊಂಡಿದ್ದಾರೆ.

ಇದನ್ನೂ ಓದಿ : ಬಾರ್ಡರ್ 2 : ಅಹಾನ್ ಶೆಟ್ಟಿ ಫಸ್ಟ್ ಲುಕ್ ಪೋಸ್ಟರ್ ರಿಲೀಸ್

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಡಲೇ ಧಾವಿಸಿ, ಸಲಾಕೆಗಳಿಂದ ಬಸ್‌ ನ ಗಾಜು ಒಡೆದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಟಂಟಂ, ಬೈಕ್‌ ಗಳಲ್ಲಿ ಗಾಯಾಳುಗಳನ್ನ ರವಾನೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾ*ಯಗೊಂಡಿದ್ದ ಕಂಡಕ್ಟರ್ ಚಿಕಿತ್ಸೆ ಫಲಕಾರಿಯಾಗದೇ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾರೆ. ಅಪಘಾ*ತದ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಗ್ಯಾಸ್ ಗೀಸರ್ ಸೋರಿಕೆ; ತಾಯಿ, ಮಗು ಸಾ*ವು

Published

on

ಮಂಗಳೂರು/ಬೆಂಗಳೂರು : ಇತ್ತೀಚಿಗೆ ಗ್ಯಾಸ್ ಗೀಸರ್‌ ದುರಂ*ತಗಳು ಹೆಚ್ಚಾಗಿದ್ದು, ಇದೀಗ ತಾಯಿ ಹಾಗೂ ಪುಟ್ಟ ಕಂದಮ್ಮ ಪ್ರಾ*ಣ ಕಳೆದುಕೊಂಡಿದ್ದಾರೆ. ಬೆಂಗಳೂರಿನ ಗೋವಿಂದರಾಜ ನಗರದಲ್ಲಿ  ಈ ದುರ್ಘ*ಟನೆ ನಡೆದಿದೆ. 26 ವರ್ಷದ ಚಾಂದಿನಿ,  4 ವರ್ಷದ ಯುವಿ ಮೃ*ತಪಟ್ಟವರು.

ಸ್ನಾನಕ್ಕೆಂದು ತೆರಳಿದ್ದಾಗ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥರಾಗಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾರೆ.

ಘಟನೆ ಬೆಳಕಿಗೆ ಬಂದಿದ್ದು ಹೇಗೆ…

ಪ್ರತಿದಿನ ದೊಡ್ಡ ಮಗಳನ್ನು ಶಾಲೆಯಿಂದ 4 ಗಂಟೆಗೆ ಕರೆದುಕೊಂಡು ಬರಲು ಚಾಂದಿನಿ ಹೋಗುತ್ತಿದ್ದರು. ಆದರೆ ಸೋಮವಾರ ಮಗಳನ್ನು  ಕರೆದುಕೊಂಡು ಬರಲು ಶಾಲೆಗೆ ಹೋಗದ ಕಾರಣ ಶಾಲೆಯವರು ಚಾಂದಿನಿ ಪತಿ ಕಿರಣ್‌ಗೆ ಫೋನ್ ಮಾಡಿದ್ದರು. ಬಳಿಕ ಚಾಂದಿನಿಗೆ ಕರೆ ಮಾಡಿದರೆ ರಿಸೀವ್ ಮಾಡಿರಲಿಲ್ಲ. ಇದರಿಂದ ಕಿರಣ್ ತಮ್ಮನಿಗೆ ಕರೆ ಮಾಡಿ ನೋಡುವಂತೆ ತಿಳಿಸಿದ್ದರು.

ಇದನ್ನೂ ಓದಿ : ಲಾರಿ ಡಿ*ಕ್ಕಿಯಾಗಿ ಮೊಟ್ಟೆ ಸಾಗಾಟದ ವಾಹನ ಪ*ಲ್ಟಿ

ಕಿರಣ್ ತಮ್ಮ ಪ್ರವೀಣ್ ಮನೆಗೆ ಬಂದು ನೋಡಿದಾಗ ಬಾತ್ ರೂಮ್‌ನಲ್ಲಿ ತಾಯಿ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದೆ. ಗ್ಯಾಸ್ ಗೀಸರ್ ಸೋರಿಕೆಯಿಂದ ದು*ರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಲವ್, ಸೆ*ಕ್ಸ್, ದೋಖಾ… ಪ್ರೀತಿಸಿದ ಯುವಕನ ಮೋಸದಾಟಕ್ಕೆ ಯುವತಿ ಬ*ಲಿ

Published

on

ಮಂಗಳೂರು/ರಾಮನಗರ : ಪ್ರೀತಿಸಿದ ಯುವಕ  ಮೋಸ ಮಾಡಿದ  ಎಂಬ ಕಾರಣಕ್ಕೆ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ನಡೆದಿದೆ.  22 ವರ್ಷದ ವರ್ಷಿಣಿ ಆ*ತ್ಮಹ*ತ್ಯೆ ಮಾಡಿಕೊಂಡ ಯುವತಿ. ಯುವತಿ ಡೆತ್ ನೋಟ್ ನಲ್ಲಿ ಪ್ರಿಯಕರನ ಮೋಸದಾಟದ ಬಗ್ಗೆ ಬಿಚ್ಚಿಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಲವ್…ಸೆಕ್ಸ್…ದೋಖಾ!

ಕಳೆದ ಎರಡು ವರ್ಷಗಳಿಂದ ವರ್ಷಿಣಿ ಹಾಗೂ  ಅಭಿ ಪರಸ್ಪರ ಪ್ರೀತಿಸುತ್ತಿದ್ದರಂತೆ. ಬ್ಲ್ಯಾಕ್ ಮೇಲ್ ಮಾಡಿ ಅಭಿ ರಿಂಗ್ ಹಾಗೂ ಎಲ್ಲಾ ಹಣ ತೆಗೆದುಕೊಂಡಿದ್ದನಂತೆ.  ಖಾಸಗಿ ಫೋಟೋಗಳನ್ನು ಇಟ್ಟುಕೊಂಡು  ಬೆ*ದರಿಕೆ ಹಾಕುತ್ತಿದ್ದನಂತೆ. ಅಷ್ಟೇ ಅಲ್ಲ, ಲೈಂ*ಗಿಕವಾಗಿ ಸಹಕರಿಸಿದರೆ ಮಾತ್ರ ಫೋಟೋ ಡಿಲೀಟ್‌ ಮಾಡುತ್ತೇನೆ ಎನ್ನುತ್ತಿದ್ದನಂತೆ.  ಈ ನಡುವೆ ವರ್ಷಿಣಿ ಗರ್ಭಿಣಿಯಾಗಿದ್ದು, ಅಭಿ ಗರ್ಭಪಾತ ಮಾಡಿಸಿದ್ದ ಎಂದು ವರ್ಷಿಣಿ ಡೆತ್ ನೋಟ್ ನಲ್ಲಿ ಬರೆದಿದ್ದಾಳೆ.

ಕ್ಷಮಿಸು ಅಮ್ಮ…

ತನ್ನ ತಾಯಿಯ ಬಳಿ ಕ್ಷಮೆ ಕೇಳಿರುವ ವರ್ಷಿಣಿ, ನಿನ್ನ ನಂಬಿಕೆಗೆ ನಾನು ಮೋಸ ಮಾಡಿದ್ದೇನೆ ಅಂತ ನನಗೆ ಗೊತ್ತು ಅಮ್ಮ. ಸಾಧ್ಯವಾದ್ರೆ ನನ್ನನ್ನು ಕ್ಷಮಿಸು ಅಮ್ಮ. ಸಾ*ಯೋದಕ್ಕೆ ಭಯ ಆಗ್ತಿದೆ ಅಮ್ಮಾ. ಸಾರಿ… ಸಾಯೋದನ್ನು ಬಿಟ್ಟು ಬೇರೆ ಯಾವ ದಾರಿಯೂ ಗೊತ್ತಾಗುತ್ತಿಲ್ಲ. ನಾನು ಅಭಿಯನ್ನು ನಂಬಬಾರದಿತ್ತು. ನೀವು ನನ್ನನ್ನು ತುಂಬಾ ನಂಬಿದ್ರಿ. ಆದ್ರೆ ಇದೊಂದು ತಪ್ಪಿಂದ ಅದನ್ನೆಲ್ಲಾ ಹಾಳು ಮಾಡಿಬಿಟ್ಟೆ. ಅವನನ್ನು ಮಾತ್ರ ಸುಮ್ಮನೇ ಬಿಡಬೇಡಿ. ದಯವಿಟ್ಟು ಯಾರೂ ನನ್ನ ಹಾಗೆ ಮಾಡಿಕೊಳ್ಳಬೇಡಿ ಎಂಬುದಾಗಿ ವರ್ಷಿಣಿ ಬರೆದಿದ್ದಾಳೆ ಎಂದು ತಿಳಿದುಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page