Connect with us

LATEST NEWS

“ದುಬೈ ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ

Published

on

ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ಪ್ರಸ್ತುತಪಡಿಸಿದ “ದುಬೈ  ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ ರಕ್ಷಾ ಗೌರವ 2024” ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 09,2024ರ ಆದಿತ್ಯವಾರದಂದು ದುಬೈಯ  ಶೇಖ್ ರಶೀದ್ ಅಡಿಟೋರಿಯಂನಲ್ಲಿ ಈ ಕಾರ್ಯಕ್ರಮ ಸಂಪನ್ನಗೊಂಡಿತು.
ಶ್ರೀ ರಾಮಾಯಣ ಕಥಾ ಆಧಾರಿತ “ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಅಪಾರ ಜನಮೆಚ್ಚುಗೆಗೆ ಪಾತ್ರವಾಗಿ- ಮುಖತಃ ನೋಡಿದ ಹಾಗೂ ಜಾಲತಾಣಗಳ ಮೂಲಕವಾಗಿ ನೋಡಿದ ದೇಶ ವಿದೇಶದ ಕಲಾಭಿಮಾನಿಗಳ ಮುಕ್ತ ಕಂಠದ ಪ್ರಶಂಸೆಗೆ ಪಾತ್ರವಾಗಿ  ಮಾದರಿ ದುಬೈ  ಯಕ್ಷಗಾನ ಪ್ರದರ್ಶನದ ತನ್ನದೇ ದಾಖಲೆಯನ್ನು ಮತ್ತೆ ತಿದ್ದಿ ಬರೆಯುವಂತೆ ಮಾಡಿತು.
ಧಾರ್ಮಿಕ ಮತ್ತು ಸಾಂಪ್ರದಾಯಿಕ ರೀತಿಯ ವೈಭವದ  ಶುಭಾರಂಭ ಶ್ರೀ ರಾಮರಕ್ಷಾ ಸ್ತೋತ್ರ  ಪಠಣ, ಭಜನೆ ಮತ್ತು ಚೌಕಿ ಪೂಜೆಯಿಂದ ಆರಂಭಗೊಂಡ ಕಾರ್ಯಕ್ರಮ ಪೂರ್ವರಂಗ ಪ್ರದರ್ಶನದ ಮೂಲಕ ರಂಗಚಾಲನೆ ಪಡೆಯಿತು. ಪೂರ್ವರಂಗದಲ್ಲಿ ಕಾಣಿಸಿಕೊಂಡ ಯಕ್ಷಗಾನದ ಪ್ರಾಚೀನ ಪರಂಪರೆಯ ಗಣಪತಿ ಕೌತುಕ ಸರ್ವರ ಮೆಚ್ಚುಗೆಗೆ ಪಾತ್ರವಾಯಿತು. ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ, ಮತ್ತು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಇದರ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ ಶೆಟ್ಟಿ, ಸಂಚಾಲಕರೂ ಗೌರವಾಧ್ಯಕ್ಷರಾದ ಶ್ರೀಯುತ ಶಶಿಧರ ಶೆಟ್ಟಿ ಬರೋಡ, ಮತ್ತು ದುಬೈ ಯು ಎ ಇ ಘಟಕಗಳ ಸದಸ್ಯರುಗಳ  ಸಹಿತ ಎಲ್ಲ ಗಣ್ಯಾತಿಗಣ್ಯರನ್ನು ವೈಭವದ ಪೂರ್ಣಕುಂಭ ಕಲಶದಿಂದ ಸ್ವಾಗತಿಸಲಾಯಿತು. ಗಣ್ಯರು ಮತ್ತು ಸುಮಂಗಲೆಯರು ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ದೀಪ ಪ್ರಜಲ್ವನೆ ಮಾಡುವ ಮೂಲಕ ಶುಭಾರಂಭ ಒದಗಿಸಿದರು.

ದುಬಾಯಿ ಯಕ್ಷಗಾನ ಅಭ್ಯಾಸ ಕೇಂದ್ರ ಪ್ರಾಯೋಜಿತ ಯಕ್ಷಶ್ರೀ ರಕ್ಷಾ ಗೌರವ‌ ವಾರ್ಷಿಕ ವಿಶೇ‍ಷ ಪ್ರಶಸ್ತಿ -2024

ಪ್ರಸಂಗ ಪ್ರದರ್ಶನದ ಮಧ್ಯಾವಧಿಯಲ್ಲಿ, ದುಬಾಯಿ ಯಕ್ಷಗಾನ ಅಭ್ಯಾಸ ತರಗತಿ (YAKU) ಪ್ರಾಯೋಜಕತ್ವದಲ್ಲಿ ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ವಿಶೇಷವಾಗಿ ವಾರ್ಷಿಕ  ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ ನೀಡಲು  ಉದ್ದೇಶಿಸಿದಂತೆ, 2023-2024 ನೇ ಸಾಲಿನ ಪ್ರಶಸ್ತಿಗೆ, ಸ್ಥಳೀಯ ಯಕ್ಷಗಾನ ಹಿಮ್ಮೇಳ ಕಲಾವಿದರೂ, ನಮ್ಮ ಯಕ್ಷಗಾನ ಅಭ್ಯಾಸ ಕೇಂದ್ರದ ಹಿರಿಯ ಸದಸ್ಯರೂ ಆದ ಶ್ರೀಯುತ ವೆಂಕಟೇಶ ಶಾಸ್ತ್ರಿ ಪುತ್ತಿಗೆಯವರಿಗೆ ನೀಡಿ  ಸನ್ಮಾನಿಸಲಾಯಿತು.
ಕಾರ್ಯಕ್ರಮದ ವಿಶೇಷ ಅಭ್ಯಾಗತರಾದ  ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಂಚಾಲಕರು , ಮಹಾದಾನಿಗಳಾದ ಶ್ರೀ ಶಶಿಧರ್ ಶೆಟ್ಟಿ ಬರೋಡ ,  ಪ್ರಮುಖ ಪ್ರಾಯೋಜಕತ್ವದ ಮೂಲಕ ಪ್ರೋತ್ಸಾಹಿಸಿದ ಸಂಸ್ಥೆ ಭೀಮ ಜ್ಯುವೆಲ್ಲರಿಯ ಶ್ರೀಯುತ ನಾಗರಾಜ ರಾವ್,  ಅಲ್ ಫರ್ದಾನ್ ಎಕ್ಸ್ಚೇಂಜ್ ನ ಅಧಿಕಾರಿಗಳು, ಕಾರ್ಯಕ್ರಮದಲ್ಲಿ  ಭಾಗವಹಿಸಿ- ಪ್ರಾಯೋಜಕತ್ವ ವಹಿಸಿಕೊಂಡು ಕಾರ್ಯಕ್ರಮದ ಶೋಭೆ ಹೆಚ್ಚಿಸಿದರು.
ದುಬಾಯಿಯ ಗಣ್ಯಾತಿಗಣ್ಯರ ನೆಲೆಯಲ್ಲಿ ಶ್ರೀಯುತ ಸರ್ವೋತ್ತಮ ಶೆಟ್ಟಿ,  ಪುತ್ತಿಗೆ ವಾಸುದೇವ ಭಟ್, ಸತೀಶ್ ಪೂಜಾರಿ , ಹರೀಶ್ ಶೇರಿಗಾರ್, ಹರೀಶ್ ಬಂಗೇರ , ರಮಾನಂದ್ ಶೆಟ್ಟಿ , ಸಂದೀಪ್ ರೈ ನಂಜೆ, ದಿವಾಕರ ಶೆಟ್ಟಿ, ಆತ್ಮಾನಂದ ರೈ , ಸುಧಾಕರ್ ರಾವ್ ಪೇಜಾವರ , ಗುಣಶೀಲ ಶೆಟ್ಟಿ ಜಯರಾಮ್ ರೈ ಸುಂದರ್ ಶೆಟ್ಟಿ , ವಿಶೇಷ ಅತಿಥಿಯಾಗಿ ಪರಿಸರ ಪ್ರೇಮಿ ಆರ್ . ಕೆ ನಾಯರ್  ಉಪಸ್ಥಿತರಿದ್ದರು.

ದುಬಾಯಿ ಯಕ್ಷಗಾನ ಅಭ್ಯಾಸ ಕೇಂದ್ರದ ಹಿರಿಯರು, ಕಿರಿಯರು ಮತ್ತು ಬಾಲ ಬಾಲೆಯರ ಸಮತೂಕದ ಸ್ಪರ್ಧಾತ್ಮಕ ಯಕ್ಷಾಭಿನಯ-ನೃತ್ಯಗಳ ಮೇಲಾಟ

ಯಕ್ಷಗಾನ ಅಭ್ಯಾಸ ಕೇಂದ್ರ, ಯುಎಇಯ ಬಾಲ-ಯುವ- ಪರಿಣತ-ಪ್ರೌಢ ಕಲಾವಿದರ ಸಹಿತ ಅಪಾರ ಜನಮನ್ನಣೆ – ಯುವಜನಾಂಗದ ಆಕರ್ಷಣೆಯ ಕೇಂದ್ರಬಿಂದುವೆನಿಸಿದ ಯಕ್ಷಧ್ರುವ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಸಿರಿಕಂಠದ ಗಾನಸಾರಥ್ಯ, ಮಹಿಳಾ ಭಾಗವತರಲ್ಲಿ ಅಗ್ರಶ್ರೇಣಿಯಲ್ಲಿರುವ ಶ್ರೀಮತಿ ಭವ್ಯಶ್ರೀ ಹರೀಶ್ ಕುಲ್ಕುಂದರವರ ಗಾನಸುಧೆ, ಜೊತೆಗೆ ತಂಡದ ಯುವ ಭಾಗವತ ಕೃಷ್ಣ ಪ್ರಸಾದ್ ರಾವ್ ಸುರತ್ಕಲ್, ಯುವ ಪ್ರಖ್ಯಾತ ಮದ್ದಳೆಗಾರರಾದ ಶ್ರೀ ಮಯೂರ ನಾಯ್ಗ, ಶ್ರೀ ಸವಿನಯ ನೆಲ್ಲಿತೀರ್ಥರ ಸಾಂಗತ್ಯದೊಂದಿಗೆ ಅಭೂತಪೂರ್ವ ಪ್ರದರ್ಶನಕ್ಕೆ ನಾಂದಿಯಾಯಿತು .  ಶ್ರೀಮತಿ ಭವ್ಯಶ್ರೀಯವರ ಸುಕುಮಾರ ಅಗಸ್ತ್ಯ ಕುಲ್ಕುಂದ ಚಕ್ರತಾಳದಲ್ಲಿ ಮೇಳೈಸಿದರು.
ಅಲ್ಲದೆ ಆಕರ್ಷಕ ವರ್ಣ – ವಸ್ತ್ರಾಲಂಕಾರ, ಝಗಮಗಿಸುವ ವೇಷಭೂಷಣಗಳೊಂದಿಗೆ ಪ್ರಸಾಧನ ಕಲೆಯಲ್ಲಿ ಸಿದ್ಧಹಸ್ತರಾದ, ಕಿನ್ನಿಗೋಳಿ ಮೋಹಿನೀ ಕಲಾ ಸಂಪದದ ಕಲಾವಿದರಾದ ಗಂಗಾಧರ ಡಿ. ಶೆಟ್ಟಿಗಾರ್ ಕಿನ್ನಿಗೋಳಿ, ನಿತಿನ್ ಕುಂಪಲ, ಮನೋಜ್ ಶೆಟ್ಟಿಗಾರ್ ಹಳೆಯಂಗಡಿ ಮೊದಲಾದವರು ತಮ್ಮ ವರ್ಣ-ವಸ್ತ್ರಾಲಂಕಾರದ ಮೂಲಕ ಮನಸೂರೆಗೊಂಡರು.
ದಾಶರಥಿ ದರ್ಶನ ಯಕ್ಷಗಾನ ಪ್ರದರ್ಶನವು “ಯಕ್ಷಮಯೂರ”, “ದ.ರಾ.ಬೇಂದ್ರೆ ಪ್ರಶಸ್ತಿ” ಪುರಸ್ಕೃತ ದುಬಾಯಿಯ ಯಕ್ಷಗುರು ಶ್ರೀಯುತ ಶೇಖರ್ ಡಿ. ಶೆಟ್ಟಿಗಾರರ ದಕ್ಷ ನಿರ್ದೇಶನ ಜೊತೆಗೆ ಯುವ ಕಲಾವಿದ ಕೇಂದ್ರದ ನಾಟ್ಯಗುರು ಶ್ರೀಯುತ ಶರತ್ ಕುಡ್ಲರ ಸಹನಿರ್ದೇಶನದಲ್ಲಿ –ದುಬಾಯಿ ಯಕ್ಷಗಾನ ಅಭ್ಯಾಸ ಕೇಂದ್ರದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟು, ನೆರೆದ ಯಕ್ಷಪ್ರೇಮಿಗಳ ಮುಕ್ತಕಂಠದ ಪ್ರಶಂಸೆಗೆ ಪಾತ್ರವಾಯಿತು, ಮಾತ್ರವಲ್ಲದೆ ದೇಶ ವಿದೇಶದ ಯಕ್ಷಾಭಿಮಾನಿಗಳ ಶ್ಲಾಘನೆಗೂ ಪಾತ್ರವಾಯಿತು.
ವಿಶೇಷವಾಗಿ ವೇದಿಕೆಯಲ್ಲಿ ಕಾಣಿಸಿಕೊಂಡ ಪಾತ್ರಗಳ  ಸಂಖ್ಯೆ ಸರಿಯಾಗಿ ಒಟ್ಟು 127 .  ಕೈಲಾಸ, ವೈಕುಂಠ, ಸತ್ಯಲೋಕ ಹೀಗೆ ಒಮ್ಮೆಲೇ ಮೂರು ರಂಗಸ್ಥಳಗಳಲ್ಲಿ ಪ್ರಸಂಗಾರಂಭ, ಮತ್ತು ಮುಕ್ತಾಯಕ್ಕೆ ಮತ್ತೆ ಕೈಲಾಸ -ವೈಕುಂಠ ದರ್ಶನ, ಒಟ್ಟು 7 ಜೋಡಿ ರಾಮ-ಲಕ್ಷ್ಮಣರಿಂದ ಭಿನ್ನ ಭಿನ್ನ ಆಯಾಮದ ಕಲಾ ಪ್ರಸ್ತುತಿ. ವಿಶೇಷ ದೃಶ್ಯ ಸಂಯೋಜನೆ – ನಾಟ್ಯ ಸಂಯೋಜನೆಗಳ ಮೂಲಕ ಮೂಡಿಬಂದ ಸೇತುಬಂಧನದ ದೃಶ್ಯ ವೈಭವ, ನೂತನ ಕಥಾನಿರೂಪಣಾ ವಿಧಾನ, ತಂಡ ನೃತ್ಯ ವಿಧಾನಗಳಿಂದ ರಾಮಾಯಣದ ಮುಖ್ಯ ಕಥಾ ಖಂಡಗಳನ್ನು ಜೋಡಿಸಿ- ಆದಿಯಿಂದ ಅಂತ್ಯದವರೆಗೆ ನೈಯ್ದ ಬಗೆ, ಏಕಕಾಲದಲ್ಲಿ ಹತ್ತು ಹಲವು ವೇ‍ಷವೈಭವದಿಂದ ತುಂಬಿ ನಿಂತ ರಂಗಸ್ಥಳ. ವೈವಿಧ್ಯಮಯ ವೇಷಭೂಷಣ, ನಾಟ್ಯಗಳ ಸಮ್ಮಿಲನ. ನೃತ್ಯನಾಟಕವೆಂಬ ನೂತನ ಪರಿಕಲ್ಪನೆಯಲ್ಲಿ ಅಲ್ಲಲ್ಲಿ ಚುಟುಕಾಗಿ ಸಾಗುವ ಕಥಾಗುಚ್ಛಗಳ ಪ್ರಸ್ತುತಿ ನೋಡುಗರನ್ನು ನಿಜಕ್ಕೂ ವಿಸ್ಮಯಗೊಳಿಸಿತು.
ಪುಟ್ಟ ಮಕ್ಕಳು- ಹಿರಿಯರೊಡನೆ ಸ್ಪರ್ಧೆಗೆ ಇಳಿದವರಂತೆ ರಂಗದಲ್ಲಿ ವಿಜೃಂಭಿಸಿ ಪ್ರಸಂಗ ಕಳೆಕಟ್ಟುವಂತೆ ಮಾಡಿದರು ಮಾತ್ರವಲ್ಲದೆ ಯಕ್ಷಾಭಿಮಾನಿಗಳ ವಿಶೇಷ ಮೆಚ್ಚುಗೆಗೆ ಪಾತ್ರರಾದರು. ಕರಾವಳಿ ಪ್ರದೇಶದ ಅವಿಭಜಿತ ದಕ್ಷಿಣಕನ್ನಡ-ಉತ್ತರಕನ್ನಡದ ಮಂದಿ, ಬೆಂಗಳೂರಿಗರು, ಮುಂಬಾಯಿ ಮಾತ್ರವಲ್ಲದೆ ವಿದೇಶಗಳ ಕಲಾಪ್ರೇಮಿಗಳು ತಮ್ಮ ಸಂದೇಶ, ಕರೆಗಳಿಂದ ಕಾರ್ಯಕ್ರಮವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.ಒಟ್ಟಿನಲ್ಲಿ ದಾಶರಥಿ ದರ್ಶನ  ಯಕ್ಷಗಾನ ಪ್ರದರ್ಶನ ದುಬಾಯಿಯ ಯಕ್ಷಗಾನ ಚರಿತ್ರೆಯಲ್ಲಿ ಒಂದು ನೂತನ ದಾಖಲೆಯನ್ನು ನಿರ್ಮಿಸಿತು.

ಮಾದರಿ ಸಂಘಟನೆಯ ಬೆನ್ನೆಲುಬಾಗಿ ನಿಂತ ಮಾದರಿ ಕಾರ್ಯಕರ್ತರ ಪಡೆ

ಸ್ವಾಗತ ದ್ವಾರ, ದೇವರ ಮಂಟಪ, ವಿಶೇಷ ದೃಶ್ಯ ಸಂಯೋಜನೆ, ರಂಗಸ್ಥಳ, ಚೌಕಿ, ವೇ‍ಷಭೂಷಣ ಪರಿಕರಗಳ ಸಂಯೋಜನೆ, ಅತಿಥಿಗಳ ಸ್ವಾಗತ, ಸಭಾ ಕಾರ್ಯಕ್ರಮಗಳ ನಿರ್ವಹಣೆ, ಫ್ರಥಮ ಚಿಕಿತ್ಸಾ ಘಟಕ, ವಿಶೇಷವಾಗಿ ಮುದ್ರಣ, ಮಾಧ್ಯಮಗಳಲ್ಲಿ ನಿರಂತರ ಪ್ರಚಾರಕ್ಕಾಗಿ ಬಹುಸಂಖ್ಯೆಯ ಕಾರ್ಯಕರ್ತರು ಟೊಂಕಕಟ್ಟಿ, ಶಿಸ್ತಿನಿಂದ ದುಡಿದ ಕಾರ್ಯಕರ್ತರ ಪರಿಶ್ರಮ ಈ ಯಶಸ್ವಿ ಸಮಾರಂಭದ ಮೂಲದ್ರವ್ಯ ಎನ್ನುವುದನ್ನು ಯಾವತ್ತೂ ಮರೆಯುವಂತಿಲ್ಲ. ಈ ತಂಡಗಳ ಸರ್ವಸದಸ್ಯರು ಎಲ್ಲರ ಅಭಿನಂದನೆಗೆ ಪಾತ್ರರಾಗಿದ್ದಾರೆ. ತಮ್ಮ ಮಾದರಿ ನಾಯಕತ್ವದ ಮೂಲಕ ದುಬಾಯಿಯ ಯಕ್ಷಗಾನ ಅಭ್ಯಾಸ ಕೇಂದ್ರದನ್ನು ಮುನ್ನಡೆಸುತ್ತಿರುವ – ಕಾರ್ಯಕ್ರಮವನ್ನು ಸಂಘಟಿಸಿದ ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು ಎ ಇ ಸಂಚಾಲಕರಾದ  ಶ್ರೀಯುತ ಕೊಟ್ಟಿಂಜ ದಿನೇಶ ಶೆಟ್ಟಿಯವರ ಪರಿಶ್ರಮ ಬಹುಜನ ವಂದನೀಯವೆನಿಸಿತು.
ಕಾರ್ಯಕ್ರಮವನ್ನು ಶ್ರೀಯುತ ರಾಜೇಶ್ ಕುತ್ತಾರು ನಿರ್ವಹಿಸಿದರೆ, ಕೇಂದ್ರದ ಸಂಚಾಲಕರಾದ ಶ್ರೀಯುತ ದಿನೇಶ ಶೆಟ್ಟಿ ಕೊಟ್ಟಿಂಜ ರವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ವಂದನಾರ್ಪಣೆ  ಸಲ್ಲಿಸಿದರು.
ಈ ಕಾರ್ಯಕ್ರಮ ವರದಿಯನ್ನು ಮಾಧ್ಯಮಗಳಿಗೆ ಬಿಡುಗಡೆಗೊಳಿಸಿ ಮಾತನಾಡಿದ ಶ್ರೀಯುತ ಗಿರೀಶ್ ನಾರಾಯಣ ಕಾಟಿಪಳ್ಳ, ಕಾರ್ಯಕ್ರಮದ ಯಶಸ್ಸಿನಲ್ಲಿ ಪ್ರಧಾನ ಪಾತ್ರವಹಿಸಿದ ಸರ್ವ ಮಾಧ್ಯಮ ಮಿತ್ರರ ಸಹಕಾರಕ್ಕೆ ವಂದನೆ ಸಲ್ಲಿಸಿದರು

LATEST NEWS

ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಗೆ ಹಾಡಿನ ಮೂಲಕ ಜನ್ಮದಿನದ ಶುಭಾಶಯ ಕೋರಿದ ಅಂಧ ಮಕ್ಕಳು

Published

on

ಮಂಗಳೂರು/ಡೆಹಾರಡೂನ್: 67ನೇ ಜನ್ಮದಿನದ ಸಂಭ್ರಮದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಂಧ ಮಕ್ಕಳು ಹಾಡಿನ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಈ ವೇಳೆ ರಾಷ್ಟ್ರಪತಿ ಮುರ್ಮು ಭಾವುಕರಾಗಿದ್ದಾರೆ.


ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿ ನೀಡಿರುವ ರಾಷ್ಟ್ರಪತಿ ದೌಪದಿ ಮುರ್ಮು ಅವರ 67ನೇ ಜನ್ಮದಿನ ಅತ್ಯಂತ ಸ್ಮರಣೀಯವಾಗಿತ್ತು.

ಅಂಧ ವ್ಯಕ್ತಿಗಳ ಸಬಲೀಕರಣದ ರಾಷ್ಟ್ರೀಯ ಸಂಸ್ಥೆಗೆ ರಾಷ್ಟ್ರಪತಿ ಮುರ್ಮು ಅವರು ಶುಕ್ರವಾರ ಭೇಟಿ ನೀಡಿದರು. ವೇದಿಕೆ ಕಾರ್ಯಕ್ರಮದಲ್ಲಿ ಅಲ್ಲಿನ ವಿದ್ಯಾರ್ಥಿಗಳು ‘ಹ್ಯಾಪಿ ಬರ್ತ್ ಡೇ ಟು ಯೂ’ ಎಂಬ ಹಾಡನ್ನು ಹಾಡಿದರು. ಮಕ್ಕಳ ಹಾಡು ಕೇಳಿ ಭಾವುಕರಾದ ಅವರು, ಗಳಗಳನೆ ಅತ್ತರು.

‘ಮಕ್ಕಳು ಎಷ್ಟು ಸುಂದರವಾಗಿ ಹಾಡಿದರೆಂದರೆ ನನಗೆ ಕಣ್ಣೀರು ತಡೆಯಲೇ ಆಗಲಿಲ್ಲ. ಹೃದಯಾಳದ ಆ ಹಾಡು ಕೇಳಿ ಭಾವುಕಳಾದೆ’ ಎಂದು ದ್ರೌಪದಿ ಮುರ್ಮು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್‌ ಪಂದ್ಯಕ್ಕೆ ಪ್ಲೇಯಿಂಗ್ 11 ಪ್ರಕಟ

‘ಅಂಗವೈಕಲ್ಯತೆಯೊಂದಿಗೆ ಹುಟ್ಟಿದ ಮಕ್ಕಳಿಗೆ ವಿಶೇಷವಾದ ಶಕ್ತಿಯೊಂದು ಇದ್ದೇ ಇರುತ್ತದೆ. ಹೀಗಾಗಿ ಆತ್ಮವಿಶ್ವಾಸದಿಂದ ಮುನ್ನುಡಿ ಇಟ್ಟಲ್ಲಿ ಯಶಸ್ಸು ಸಿಕ್ಕೇ ಸಿಗುತ್ತದೆ. ಈ ನಿಟ್ಟಿನಲ್ಲಿ ಅಂಗವಿಕಲರಿಗೂ ಸಮಾನ ಅವಕಾಶ ಸಿಗಬೇಕು ಎಂಬ ಕಾರಣದಿಂದ ಸರ್ಕಾರವು ಹಲವು ನೀತಿಗಳನ್ನು ರೂಪಿಸಿದೆ’ ಎಂದರು.

Watch video

Continue Reading

FILM

ಲಕ್ಷ್ಮೀ ನಿವಾಸ ಧಾರಾವಾಹಿಯಿಂದ ಹೊರ ನಡೆದ ನಟಿ ಶ್ವೇತಾ; ಕಾರಣವೇನು?

Published

on

ಬೆಂಗಳೂರು/ಮಂಗಳೂರು : ಕೌಟುಂಬಿಕ ಕಥಾಹಂದರ ಹೊಂದಿರುವ ಧಾರಾವಾಹಿ ‘ಲಕ್ಷ್ಮೀ ನಿವಾಸ’. ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿರುವ ಈ ಧಾರಾವಾಹಿಯಿಂದ ಇತ್ತೀಚೆಗಷ್ಟೇ ತನು ಪಾತ್ರಧಾರಿ ಯುಕ್ತಾ ಹೊರ ನಡೆದಿದ್ದರು. ಇದೀಗ ಹಿರಿಯ ನಟಿ ಶ್ವೇತಾ ಧಾರಾವಾಹಿ ತೊರೆದಿದ್ದಾರೆ ಎಂದು ತಿಳಿದುಬಂದಿದೆ.

ಶ್ವೇತಾ ಈ ಧಾರಾವಾಹಿಯಲ್ಲಿ ಲಕ್ಷ್ಮೀಯಾಗಿ ಕಾಣಿಸಿಕೊಂಡಿದ್ದರು. ಗಂಡನಿಗೆ ಸದಾ ಜೊತೆಯಾಗಿ ನಿಲ್ಲುವ ಪತ್ನಿಯಾಗಿ, ಮಕ್ಕಳ ಹಿತ ಬಯಸುವ ತಾಯಿಯಾಗಿ ಮನೋಜ್ಞ ಅಭಿನಯ ನೀಡುತ್ತಿದ್ದರು. ಆದರೆ, ಇದೀಗ ದಿಢೀರಾಗಿ ಧಾರಾವಾಹಿಯಿಂದ ಹೊರ ಬಂದಿರುವುದು ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿದೆ.

ಕಾರಣವೇನು ?

ಧಾರಾವಾಹಿಯಿಂದ ಹೊರಬಂದಿರುವ ವಿಚಾರದ ಬಗ್ಗೆ ನಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ವೈಯಕ್ತಿಕ ಕಾರಣ ಹಾಗೂ ತಾಯಿಯ ಅನಾರೋಗ್ಯದಿಂದ ಲಕ್ಷ್ಮೀ ನಿವಾಸದಿಂದ ವಿರಾಮ ತೆಗೆದುಕೊಳ್ಳುತ್ತಿದ್ದೇನೆ.  ಬಹಳ ದಯೆಯಿಂದ ವರ್ತಿಸಿ ಮತ್ತು ನನ್ನನ್ನು ಸಂಪೂರ್ಣವಾಗಿ ಸ್ವೀಕರಿಸಿದ್ದಕ್ಕಾಗಿ ಕರ್ನಾಟಕಕ್ಕೆ ಧನ್ಯವಾದಗಳು.  ಸೆಟ್‌ನ ಕೆಲವರನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ನನ್ನನ್ನು ಮತ್ತೆ ಕನ್ನಡ ಪ್ರೇಕ್ಷಕರಿಗೆ ಪರಿಚಯಿಸಿದಕ್ಕಾಗಿ ಝೀ ಕನ್ನಡ ವಾಹಿನಿಗೆ ಧನ್ಯವಾದಗಳು. ನೀವೆಲ್ಲ  ಅದ್ಭುತ ಮಂದಿ. ಶೀಘ್ರದಲ್ಲೇ ಮತ್ತೆ ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಒಂದೇ ಧಾರಾವಾಹಿಯಲ್ಲಿ ತಾಯಿ, ಮಗ, ಮಗಳು; ಲಕ್ಷ್ಮೀ ನಿವಾಸಕ್ಕೆ ಬಂದ ಹೊಸ ನಟಿ ಯಾರು ಗೊತ್ತಾ?

ಲಕ್ಷ್ಮೀಯಾಗಿ ಮಾಧುರಿ ಎಂಟ್ರಿ :

ಶ್ವೇತಾ ಜಾಗಕ್ಕೆ ಮತ್ತೊಬ್ಬ ಹಿರಿಯ ನಟಿಯ ಪ್ರವೇಶವಾಗಿದೆ. ಅನೇಕ ಧಾರಾವಾಹಿ, ಸಿನಿಮಾಗಳಲ್ಲಿ ನಟಿಸಿ ಜನಮನಸೂರೆಗೊಳಿಸಿದ್ದ ಮಾಧುರಿ, ಲಕ್ಷ್ಮೀಯಾಗಿ ಎಂಟ್ರಿ ಕೊಟ್ಟಿದ್ದಾರೆ . ಜಗ್ಗೇಶ್, ಪ್ರಭಾಕರ್, ದೇವರಾಜ್ ಮೊದಲಾದವರ ಜೊತೆ ನಟಿಸಿರುವ ಮಾಧುರಿ ಕನ್ನಡ ಮಾತ್ರವಲ್ಲದೇ ಹಿಂದಿ ಧಾರಾವಾಹಿಗಳಿಗೂ ಬಣ್ಣ ಹಚ್ಚಿಸಿದ್ದಾರೆ.

Continue Reading

LATEST NEWS

ಕೆನಡಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿನಿ ನಿಗೂಢ ಸಾವು!

Published

on

ಕೆನಡಾದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿನಿ ನಿಗೂಢ ಸಾವನ್ನಪ್ಪಿದ್ದಾಳೆ. ಕೆನಡಾದ ಕ್ಯಾಲ್ಗರಿ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಭಾರತೀಯ ವಿದ್ಯಾರ್ಥಿನಿ ತಾನ್ಯ ತ್ಯಾಗಿ ಮೃತಪಟ್ಟಿದ್ದು, ಈವರೆಗೂ ಆಕೆಯ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಇನ್ನೂ ವಕೀಲರೊಬ್ಬರು ಆಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ. ಅವರ ಮೃತದೇಹವನ್ನು ಭಾರತಕ್ಕೆ ತರಲು ಕುಟುಂಬವು ಪ್ರಧಾನಿ ಮೋದಿಯವರ ಸಹಾಯವನ್ನು ಕೋರಿದೆ.

ಲಿಂಕ್ಡ್‌ಇನ್ ಪ್ರಕಾರ, ತಾನ್ಯಾ ಅವರು ಕೆನಡಾದ ಆಲ್ಬರ್ಟಾ ವಿಶ್ವವಿದ್ಯಾಲಯದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಅವರು ಜಯಪೀ ಇನ್‌ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿಯನ್ನು ಸಹ ಪೂರ್ಣಗೊಳಿಸಿದ್ದಾರೆ. ಈ ಹಿಂದೆ ಡೆಲ್ಲಿಯ ಮೆಟ್ರೋ ಮಾರ್ಟ್ ಸ್ಟೋರ್‌ನಲ್ಲಿ ರಿಟೇಲ್ ಸೇಲ್ಸ್ ಮ್ಯಾನೇಜರ್ ಆಗಿ ತಾನ್ಯ ಕೆಲಸ ಮಾಡುತ್ತಿದ್ದರು. ತಾನ್ಯ ತ್ಯಾಗಿ ಅವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಕಾಪು: ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

ತಾನ್ಯ ತ್ಯಾಗಿ, ಈಶಾನ್ಯ ದೆಹಲಿಯ ವಿಜಯ್ ಪಾರ್ಕ್‌ನ ನಿವಾಸಿ. ಅವರು ಕೆನಡಾಕ್ಕೆ ವಿದ್ಯಾಭ್ಯಾಸಕ್ಕಾಗಿ ಹೋಗಿದ್ದರು. ಜೂನ್ 17, 2025 ರಂದು ಹೃದಯಾಘಾತದಿಂದ ನಿಧನರಾದರು. ವಿದ್ಯಾರ್ಥಿನಿಯ ಮೃತದೇಹವನ್ನು ಭಾರತಕ್ಕೆ ತರಲು ಪ್ರಧಾನಿ ಮೋದಿಯವರ ಸಹಾಯವನ್ನು ಕುಟುಂಬ ಕೋರಿದೆ ಎಂದು ಇಶು ತ್ಯಾಗಿ ಹೆಸರಿನ ವಕೀಲರೊಬ್ಬರು ಎಕ್ಸ್‌ನಲ್ಲಿ ಟ್ವೀಟ್‌ಮಾಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page