Connect with us

DAKSHINA KANNADA

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಜಾಲ್ ಶಾಖೆಯಲ್ಲಿ ಗ್ರಾಹಕರ ಕೆಲಸದ ನಿರ್ಲಕ್ಷ್ಯ, ಲೋಪಗಳ ಸರಿಪಡಿಸಲು ಡಿವೈಎಫ್ಐ ಒತ್ತಾಯ.

Published

on

ಮಂಗಳೂರು : ನಗರ ಹೊರವಲಯ ಬಜಾಲ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರಿಗೆ ಅಗತ್ಯ ಸೇವೆ ನೀಡುವಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯತನ ಹಾಗೂ ವಿಳಂಬ ನೀತಿ ಅನುಸರಿಸುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಇದರಿಂದ ಸ್ಥಳೀಯ ಜನಸಾಮಾನ್ಯರು , ವಿದ್ಯಾರ್ಥಿ, ಯುವಜನರು ಉಳಿತಾಯ ಖಾತೆ ತೆರೆಯುವಲ್ಲಿ ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿರುವ ದೂರುಗಳು ಕೇಳಿ ಬರುತ್ತಿದ್ದು ಇಂತಹ ಹಲವು ಸಮಸ್ಯೆಗಳನ್ನು ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳು ಕೂಡಲೇ ಸರಿಪಡಿಸಬೇಕೆಂದು ಡಿವೈಎಫ್ಐ ಪಕ್ಕಲಡ್ಕ ಘಟಕ ಒತ್ತಾಯಿಸಿದೆ.

ಯಾವುದೇ ಬ್ಯಾಂಕಾಗಲಿ, ಅದರ ಪ್ರಮುಖ ಗುರಿ ಗ್ರಾಹಕನಿಗೆ ಸೇವೆ ಸಲ್ಲಿಸುವುದೇ ಆಗಿದೆ. ಗ್ರಾಹಕನೇ ಬ್ಯಾಂಕಿನ ಬಂಡವಾಳ ಆದರೆ ಬಜಾಲ್ ಪ್ರದೇಶದ ಭಾರತೀಯ ಸ್ಟೇಟ್ ಬ್ಯಾಂಕ್ ಈ ಭಾಗದ ಸುತ್ತಮುತ್ತಲಿನ ಗ್ರಾಹಕರಿಗೆ ಸರಿಯಾದ ಸೇವೆಯನ್ನು ನೀಡದೆ ವಿನಾ ಕಾರಣ ಸತಾಯಿಸುವಂತಹ ಘಟನೆಗಳು ದಿನ ನಿತ್ಯ ನಡೆಯುತ್ತಿದೆ.

ಕನಿಷ್ಟ ಹೊಸ ಖಾತೆ ತೆರೆಯುವ ಕೆಲಸಗಳಿಗೂ ತಿಂಗಳುಗಳ ಕಾಲ ವಿಳಂಬಿಸುವಂತಹ ದೂರುಗಳು ಜನ ಸಾಮಾನ್ಯರಿಂದ ಕೇಳಿಬರುತ್ತಿದೆ. ಇತ್ತೀಚೆಗೆ ಬಹಳಷ್ಟು ವಿದ್ಯಾರ್ಥಿಗಳು ತಮ್ಮ ಶಾಲೆ ವಿಚಾರಗಳಿಗೆ ಸಂಬಂಧಿಸಿ ಹೊಸ ಉಳಿತಾಯ ಖಾತೆ ತೆರೆಯಲು, ಮತ್ತು ಇತರೆ ಸಣ್ಣ ಪುಟ್ಟ ಕೆಲಸಗಳಿಗೆ ಸ್ಥಳೀಯ ಬ್ಯಾಂಕ್ ಮೊರೆ ಹೋದರೆ ಅಂತಹ ವಿದ್ಯಾರ್ಥಿಗಳನ್ನು ಮತ್ತವರ ಪೋಷಕರನ್ನು ವಿನಾಕಾರಣ ಸತಾಯಿಸುವುದು ಮತ್ತವರ ಖಾತೆ ತೆರೆಯುವ ಕೆಲಸದಲ್ಲಿ  ಸಿಬ್ಬಂದಿಗಳ ನಿರ್ಲಕ್ಷ್ಯತನ ಹಾಗೂ ವಿಳಂಬ ನೀತಿಯಿಂದಾಗಿ ಜನಸಾಮಾನ್ಯರು, ವಿದ್ಯಾರ್ಥಿಗಳು ಬಹಳಷ್ಟು ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ.

ಒಂದೇ ಒಂದು ದಿನದಲ್ಲಾಗುವ ಉಳಿತಾಯ ಖಾತೆ ತೆರೆಯುವ ಕ್ರಮಗಳಿಗೂ ಸುಮಾರು ನಾಲಕ್ಕು ತಿಂಗಳುಗಳವರೆಗೂ ನೀಡದೆ ಸತಾಯಿಸುತ್ತಿರುವುದು ಖಂಡನೀಯ. ಈ ಬಗ್ಗೆ ಡಿವೈಎಫ್ಐ ಸಂಘಟನೆ ಈಗಾಗಲೇ ಭಾರತೀಯ ಸ್ಟೇಟ್ ಬ್ಯಾಂಕಿನ ಮೇಲಾಧಿಕಾರಿಯವರ ಗಮನಕ್ಕೆ ತರಲಾಗಿದೆ.

ಇಂತಹ ಹಲವು ಗಂಭೀರ ಸಮಸ್ಯೆಗಳನ್ನು ಸರಿಪಡಿಸಲು, ಬ್ಯಾಂಕ್ ಸಿಬ್ಬಂದಿಗಳು ಗ್ರಾಹಕರಲ್ಲಿ ಸೇವಾ ಮನೋಭಾವದಿಂದ ವರ್ತಿಸುವಂತೆ ಮತ್ತು ಗ್ರಾಹಕರ ಕೆಲಸಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥಗೊಳಿಸುವಂತೆ  ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಘಟಕವು  ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದೆ ಎಂದು ಡಿವೈಎಫ್ಐ ಬಜಾಲ್ ಪಕ್ಕಲಡ್ಕ ಕಾರ್ಯದರ್ಶಿ ಧೀರಾಜ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

DAKSHINA KANNADA

ಪ್ರಿಯಾಂಕ್ ಖರ್ಗೆ ಅವರಿಗೆ ಸರ್ವಜ್ಙ ಸಿಂಡ್ರೋಮ್ ಇದೆ: ಶಾಸಕ ಭರತ್ ಶೆಟ್ಟಿ

Published

on

ಮಂಗಳೂರು: ಗೃಹಸಚಿವರು ಮಂಗಳೂರನ್ನು ಉಡ್ತಾ ಪಂಜಾಬ್ ಆಗ್ಲಿಕ್ಕೆ ಬಿಡೋದಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದರು. ವಿಧಾನಸಭೆಯಲ್ಲಿ ಪ್ರತೀ ಬಾರಿ ನಮ್ಮ ಕೋರಿಕೆ ಇದ್ದದ್ದು ಕೂಡಾ ಅದೇ. ಜಿಲ್ಲೆಯಲ್ಲಿ ಡ್ರಗ್ಸ್ ಪೂರೈಕೆಗೆ ಕಡಿವಾಣ ಹಾಕಬೇಕು ಅಂತ. ಪೊಲೀಸರು ಡ್ರಗ್ಸ್ ಸೀಜ್ ಮಾಡ್ತಾರೆ. ಆರೋಪಿಗಳನ್ನು ಅರೆಸ್ಟ್ ಮಾಡ್ತೀರಿ. ಆದರೆ 6 ತಿಂಗಳ ಬಳಿಕ ಮತ್ತೆ ಸೀಜ್ ಬಗ್ಗೆ ಸುದ್ದಿ ಇರೋದಿಲ್ಲ. ಡ್ರಗ್ಸ್ ಸಪ್ಲೈ ನಿರಂತರವಾಗಿ ಆಗ್ತಾನೇ ಇದೆ ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು ವಾಗ್ದಾಳಿಯನ್ನು ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗೆದ್ದ ಕೂಡಲೇ ಬಿಜೆಪಿಗರಿಗೆ, ಆರೆಸ್ಸೆಸ್ ನವರಿಗೆ ಬೈಯ್ಯೋದನ್ನು ಪ್ರಿಯಾಂಕ್ ಖರ್ಗೆ ಅವರು ಅಭ್ಯಾಸ ಮಾಡಿಕೊಂಡಿದ್ದಾರೆ. ಅವರಿಗೆ ಸ್ವಲ್ಪ ಸರ್ವಜ್ಞ ಸಿಂಡ್ರೋಮ್ ಇದೆ. ಅಂದ್ರೆ ಎಲ್ಲಾ ತಿಳಿದವರು ಅನ್ನೋ ಭಾವನೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಲಿಂಗರಾಜು ಕಣ್ಣಿ ಅವರನ್ನು ಡ್ರಗ್ಸ್ ವ್ಯವಹಾರದ ಆರೋಪದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ಡ್ರಗ್ಸ್ ಕೇಸನ್ನು ಡೈವರ್ಟ್ ಮಾಡಲು ಕಾಂಗ್ರೆಸ್ ಸರ್ಕಾರದಿಂದ ವಿವಿಧ ರೀತಿಯ ಪ್ರಯತ್ನ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ ಅವರು ಸಾಧ್ಯವಾದರೆ ತನಿಖೆಗೆ ಸಹಕರಿಸಲಿ ಇಲ್ಲವಾದಲ್ಲಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಪ್ರಕರಣದ ಹಿಂದೆ ಸ್ಥಾಪಿತ ಹಿತಾಸಕ್ತಿಗಳು, ದೊಡ್ಡವರ ಕೈವಾಡವಿದೆ. ಪ್ರಕರಣವನ್ನು ಸರಕಾರ ಲಘುವಾಗಿ ಪರಿಗಣಿಸಿದೆ. ಇಷ್ಟು ದೊಡ್ಡ ಪ್ರಕರಣವನ್ನು ವಿಷಯಾಂತರ ಮಾಡಲು ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನು ಪ್ರಕರಣವೊಂದರಲ್ಲಿ ಫಿಕ್ಸ್ ಮಾಡಲಾಗಿದೆ ಎಂದು ಆರೋಪಿಸಿದರು. ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪಿಸುತ್ತೇವೆ ಎಂದು ಭರವಸೆ ನೀಡಿದ ಪ್ರಿಯಾಂಕ್ ಖರ್ಗೆ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮುಖಂಡ ವಿಕಾಸ್ ಪುತ್ತೂರು, ಜಿಲ್ಲಾ ವಕ್ತಾರ ರಾಜಗೋಪಾಲ ರೈ, ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್ ಉಪಸ್ಥಿತರಿದ್ದರು.

Continue Reading

DAKSHINA KANNADA

ಉಪ್ಪಿನಂಗಡಿ: ಪತ್ನಿಯನ್ನು ಚೂ*ರಿಯಿಂದ ಇ*ರಿದು ಕೊಂ*ದ ಪತಿ

Published

on

ಉಪ್ಪಿನಂಗಡಿ: ಮಗ ಮತ್ತು ಮಗಳ ಮುಂದೆಯೇ ಪತ್ನಿಯ ಎದೆಗೆ ಚಾಕುವಿನಿಂದ ಇ*ರಿದು ಅಮಾನವೀಯವಾಗಿ ಹತ್ಯೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ತೆಕ್ಕಾರು ಗ್ರಾಮದ ಬಾಜಾರು ಎಂಬಲ್ಲಿ ನಡೆದಿದೆ. ಝೀನತ್ (40) ಕೊಲೆಗೀಡಾದ ಮಹಿಳೆಯಾಗಿದ್ದು ಪತಿ ರಫೀಕ್ (47) ಹತ್ಯೆಯ ಆರೋಪಿಯಾಗಿದ್ದಾನೆ.


ರಫೀಕ್‌ ಮತ್ತು ಝೀನತ್ ಅವರ ಮದುವೆ 18 ವರ್ಷದ ಹಿಂದೆ ನೆರವೇರಿತ್ತು. ವಿದೇಶದಲ್ಲಿ ಉದ್ಯೋಗದಲ್ಲಿದ್ದ ರಫೀಕ್ ಎರಡು ವರ್ಷಗಳ ಹಿಂದೆ ಅಲ್ಲಿನ ಉದ್ಯೋಗ ತ್ಯಜಿಸಿ ಊರಿಗೆ ಬಂದು ತೆಕ್ಕಾರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿಯ ಮಧ್ಯೆ ಕಳೆದ ಕೆಲವು ತಿಂಗಳಿಂದ ಮನಸ್ತಾಪ ಉಂಟಾಗಿತ್ತು. ಇಂದು ಬೆಳಗ್ಗೆ ಇಬ್ಬರ ಮಧ್ಯೆ ನಡೆದ ಜಗಳ ವಿಕೋಪಕ್ಕೆ ಹೋಗಿ ರಫೀಕ್‌ ಪತ್ನಿ ಝೀನತ್‌ ಳನ್ನು ಚಾಕುವಿನಿಂದ ಇರಿದಿದ್ದಾನೆ.

ಇದನ್ನೂ ಓದಿ: ಮಂಗಳೂರು: ಹೃದಯಾಘಾತದಿಂದ ಯುವಕ ಸಾವು

ಹಲ್ಲೆಯಿಂದ ತೀವ್ರ ಗಾಯಗೊಂಡಿದ್ದ ಝೀನತ್‌ ಳನ್ನು ಸ್ಥಳೀಯರು ಮತ್ತು ಸಂಬಂಧಿಕರು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಝೀನತ್‌ ಮೃ*ತ ಪಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮಂಗಳೂರು: ಹೃದಯಾಘಾತದಿಂದ ಯುವಕ ಸಾವು

Published

on

ಮಂಗಳೂರು: ಟಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಉಳ್ಳಾಲದ ಪಂಡಿತ್ ಹೌಸ್ ನಿವಾಸಿಯೋರ್ವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಂಗಳೂರು ಪದವಿನಂಗಡಿ ಅಜ್ಜನಕಟ್ಟೆ ಸಮೀಪದ ಟಯರ್ ಅಂಗಡಿಯಲ್ಲಿ ನಡೆದಿದೆ.

ವಿಜೇತ ನಗರ ಗಂಡಿ ನಿವಾಸಿ ವೇಣುಗೋಪಾಲ ಅವರು ಮೃತಪಟ್ಟ ಅವಿವಾಹಿತರಾಗಿದ್ದಾರೆ.

ಇದನ್ನೂ ಓದಿ: ಇರಾಕ್‌ನ ಶಾಪಿಂಗ್ ಮಾಲ್‌ನಲ್ಲಿ ಏಕಾಏಕಿ ಬೆಂಕಿ – 50 ಮಂದಿ ಸಾವು

ಇವರು ಹಲವು ವರ್ಷಗಳಿಂದ ಟಯರ್ ಅಂಗಡಿಯಲ್ಲಿ ಟೆಕ್ನಿಷಿಯನ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಇವರು ತಾಯಿ, ಸೋದರಿ ಮತ್ತು ಸಹೋದರನನ್ನು ಅಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page